Homeಕರ್ನಾಟಕNEP ಜಾರಿ ಕರ್ನಾಟಕದಲ್ಲಿಯೇ ಮೊದಲು ಎಂದ ಡಿಸಿಎಂ: ಟ್ವಿಟ್ಟರ್‌ನಲ್ಲಿ '#RejectNEP2020' ಟ್ರೆಂಡ್‌

NEP ಜಾರಿ ಕರ್ನಾಟಕದಲ್ಲಿಯೇ ಮೊದಲು ಎಂದ ಡಿಸಿಎಂ: ಟ್ವಿಟ್ಟರ್‌ನಲ್ಲಿ ‘#RejectNEP2020’ ಟ್ರೆಂಡ್‌

ಒಕ್ಕೂಟ ವ್ಯವಸ್ಥೆಗೆ, ಸಂವಿಧಾನಕ್ಕೆ ವಿರುದ್ಧವಾಗಿ, ಶೈಕ್ಷಣಿಕ ವಲಯದ ಸರ್ವಾಧಿಕಾರಗಳನ್ನು ಕೇಂದ್ರ ಸರ್ಕಾರದ ಕೈಯಲ್ಲಿ ಇಟ್ಟ ಶಿಕ್ಷಣ ನೀತಿ ಇದಾಗಿದೆ. ವೈವಿದ್ಯತೆಯಲ್ಲಿ ಏಕತೆಯೆಂಬ ಅಂಶವನ್ನು ಕೈಬಿಟ್ಟು ಹಿಂದಿ ಹೇರಿಕೆ ಮತ್ತು ಸಂಸ್ಕೃತ ಹೇರಿಕೆಗೆ ಅವಕಾಶ ನೀಡಿದ ಶಿಕ್ಷಣ ನೀತಿ ಇದಾಗಿದೆ ಎಂದು ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಕರ್ನಾಟಕದಲ್ಲಿಯೇ ಮೊದಲು ಜಾರಿಗೊಳಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ನಿನ್ನೆ ಘೋಷಿಸಿದ್ದಾರೆ. ಆದರೆ ಅದೇ ದಿನ ಸಾವಿರಾರು ವಿದ್ಯಾರ್ಥಿಗಳು NEP ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಟ್ವಿಟ್ಟರ್‌ನಲ್ಲಿ #RejectNEP2020 ಟ್ರೆಂಡ್‌ ಆಗಿದೆ.

ಸದ್ಯದಲ್ಲೇ ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಕ್ಯಾಬಿನೆಟ್‌ನಲ್ಲಿ ಅನುಮೋದನೆ ಪಡೆದಿದೆ. ಅದರಲ್ಲೂ ಕರ್ನಾಟಕ ಸರ್ಕಾರ ತಾನೇ ಮೊದಲು ಹೊಸ ಶಿಕ್ಷಣ ನೀತಿ ಜಾರಿಗೆ ತರುವುದಾಗಿ ಘೋಷಿಸಿದೆ. ಆದರೆ ಹೊಸ ಶಿಕ್ಷಣ ನೀತಿಯ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಹೊಸ ಶಿಕ್ಷಣ ನೀತಿಯು ರಾಷ್ಟ್ರೀಕರಣವಲ್ಲ ಅದು ವ್ಯಾಪಾರೀಕರಣ ಎಂದು ಆರೋಪಿಸಿರುವ ಅವರು, ಉಚಿತ, ಸಮಾನ, ಗುಣಮಟ್ಟದ ಶಿಕ್ಷಣಕ್ಕಾಗಿ ಆಗ್ರಹಿಸಿದ್ದಾರೆ.

ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ, ಸಂವಿಧಾನಕ್ಕೆ ವಿರುದ್ಧವಾಗಿ, ಶೈಕ್ಷಣಿಕ ವಲಯದ ಸರ್ವಾಧಿಕಾರಗಳನ್ನು ಕೇಂದ್ರ ಸರ್ಕಾರದ ಕೈಯಲ್ಲಿ ಇಟ್ಟ ಶಿಕ್ಷಣ ನೀತಿ ಇದಾಗಿದೆ. ವೈವಿದ್ಯತೆಯಲ್ಲಿ ಏಕತೆಯೆಂಬ ಅಂಶವನ್ನು ಕೈಬಿಟ್ಟು ಹಿಂದಿ ಹೇರಿಕೆ ಮತ್ತು ಸಂಸ್ಕೃತ ಹೇರಿಕೆಗೆ ಅವಕಾಶ ನೀಡಿದ ಶಿಕ್ಷಣ ನೀತಿ ಇದಾಗಿದೆ ಎಂದು ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

ಮೇಲ್ಜಾತಿಯ, ಪುರುಷ ಪ್ರಧಾನವಾದ ಪುರುತನ ಸಿದ್ದಾಂತವನ್ನು ಗುರುಕುಲಗಳ ಹೆಸರಿನಲ್ಲಿ ಪದೇ ಪದೇ ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ. ರಾಷ್ಟ್ರೀಯ ಸಂಶೋಧನಾ ಫೌಂಡೇಷನ್ ಹೆಸರಿನಲ್ಲಿ ದೇಶದ್ಯಾಂತ ನಡೆಯುವ ಸಂಶೋಧನೆಗಳನ್ನು ನಿಯಂತ್ರಿಸುವ ದುರುದ್ಧೇಶ ಹೊಂದಿದೆ ಎಂದು ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

ವಿಶ್ವವಿದ್ಯಾಲಯಲಯಗಳಿಗೆ ಸ್ವಾತಂತ್ರ್ಯ ಇರಬೇಕೆಂದು ಹೇಳುತ್ತಲೇ ಹೊರಗಿನ ಖಾಸಗಿಯವರ ಹಿಡಿತಕ್ಕೆ ನೀಡುವ ಗೊಂದಲಕಾರಿ ಅಂಶಗಳನ್ನು ಒಳಗೊಂಡಿರುವ ಶಿಕ್ಷಣ ನೀತಿ ನಿಷ್ಪ್ರಯೋಜಕ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕ್ರಾಂತಿಕಾರಿ ಬದಲಾವಣೆಗಳ ಆಗಲಿದೆ ಎಂದು ತೋರಿಸುತ್ತೆ ಮತ್ತೆ ಶಿಕ್ಷಣದ ವ್ಯಾಪಾರವನ್ನು ಬೆಂಬಲಿಸುವ ಅಂಶಗಳನ್ನೇ ತುರುಕಲಾಗಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ತನ್ನ ಟ್ವೀಟ್‌ನಲ್ಲಿ ತಿಳಿಸಿದೆ.

ಇನ್ನು ನಿನ್ನೆಯಿಂದ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ #RejectNEP2020 ಎಂಬುದು ಟ್ರೇಂಡಿಂಗ್‌ನಲ್ಲಿದೆ. ಡಾ. ಬಿ.ಆರ್.ಅಂಬೇಡ್ಕರ್, ಮಹಾತ್ಮಾ ಜ್ಯೋತಿಬಾಪುಲೆ ಅವರ ನುಡಿಗಳನ್ನು ಆಧರಿಸಿ ಸಾವಿರಾರು ಮಂದಿ ಟ್ವೀಟ್‌ ಮಾಡಿದ್ದಾರೆ. ಚಿಂತಕರು, ಚಲನಚಿತ್ರ ನಟ, ನಟಿಯರು, ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು ಹೊಸ ಶಿಕ್ಷಣ ನೀತಿಯ ವಿರುದ್ಧ ದನಿ ಎತ್ತಿದ್ದಾರೆ.

ದುಡ್ಡಿದವರಿಗೆ ಮಾತ್ರ ಶಿಕ್ಷಣ ಎಂಬುದನ್ನು ಪರೋಕ್ಷವಾಗಿ ಬೆಂಬಲಿಸುವ ಹಣವಂತರಿಗೆ ಅನುಕೂಲವಾದ ಶಿಕ್ಷಣ ನೀತಿ ನಮಗೆ ಬೇಡ. ಉಚಿತ ಶಿಕ್ಷಣದ ಬಗ್ಗೆ ಉಸಿರೆತ್ತದ ರಾಷ್ಟ್ರೀಯ ಶಿಕ್ಷಣ ಕಾಯ್ದೆ 2020ನ್ನು ತಿರಸ್ಕರಿಸೋಣ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಶಿಕ್ಷಣದ ಕೇಂದ್ರಿಕರಣ, ಖಾಸಗೀಕರಣ ಮತ್ತು ಶಿಕ್ಷಣವನ್ನು ಕೇಸರೀಕರಣ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಕರ್ನಾಟಕದಲ್ಲಿ ಮೊದಲು ಜಾರಿಗೆ ತರುತ್ತೇವೆ ಎನ್ನುವುದಕ್ಕೆ ಮುಖ್ಯ ಕಾರಣ ನಮ್ಮ ಬೆಂಗಳೂರು ಬಹುದೊಡ್ಡ ಶಿಕ್ಷಣ ಕೇಂದ್ರವಾಗಿರುವುದು. ವಿದೇಶಿ ಮತ್ತು ಅಂತಾರಾಜ್ಯ ವಿದ್ಯಾರ್ಥಿಗಳಿಗಾಗಿ ಈ ನೀತಿ ಜಾರಿ ಮಾಡಲಾಗಿದೆ. ಶಿಕ್ಷಣದ ವ್ಯಾಪಾರೀಕರಣ ದೊಡ್ಡಮಟ್ಟದಲ್ಲಿದೆ. ಹಾಗಾಗಿ ನಾವು ಇದಕ್ಕೆ ಅವಕಾಶ ನೀಡುವುದಿಲ್ಲ. ತಕ್ಕ ಪ್ರತಿರೋಧ ನೀಡಿ ಹೋರಾಟ ಮಾಡುತ್ತೇವೆ ಎಂದು ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಾಸದೇವರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಇಷ್ಟೊಂದು ವಿರೋಧದ ನಡುವೆಯೂ ಕರ್ನಾಟಕದಲ್ಲಿ ನಾವೇ ಮೊದಲು NEP ಜಾರಿಗೆ ತರುತ್ತೇವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿಕೊಂಡಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಆಡಳಿತಾತ್ಮಕ ಸುಧಾರಣೆಗಳನ್ನು ತರಲು ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಉನ್ನತ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಈಗಾಗಲೇ ಹಲವು ಸಭೆಗಳನ್ನು ನಡೆಸಿದ್ದು, ಅದರ ಅಂತಿಮ ಸಲಹೆಗಳ ನಂತರ ಹೊಸ ನೀತಿಯನ್ನು ಅಳವಡಿಸಲಾಗುತ್ತದೆ. ಈ ಮೂಲಕ ದೇಶದಲ್ಲೇ ಎನ್‌ಇಪಿ 2020 ಅಳವಡಿಸಿಕೊಂಡ ಮೊದಲ ರಾಜ್ಯ ಕರ್ನಾಟಕವಾಗಲಿದೆ ಎಂದು ಬೆಂಗಳೂರಿನಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ನೂತನ ಶಿಕ್ಷಣ ನೀತಿಗೆ ಭಾರೀ ವಿರೋಧ : TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....