Homeಮುಖಪುಟಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ ಎಂದು ನೆಹರು ಮನಗಂಡಿದ್ದರು..

- Advertisement -
- Advertisement -

| ಸಂಗ್ರಹ ಮತ್ತು ಅನುವಾದ: ಬಿ.ಶ್ರೀಪಾದ್ ಭಟ್ |

2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕ್ಷಣದಿಂದ ಇಂಡಿಯಾ ದೇಶ ಹಿಂದುತ್ವ ಮೂಲಭೂತವಾದಿಗಳ ದೌರ್ಜನ್ಯದಿಂದ ನಲಗುತ್ತಿದೆ. ಹಿಂದೂ ಧರ್ಮದಲ್ಲಿ ಜಾತೀಯತೆಯ ಕ್ರೌರ್ಯದಿಂದ ಉಸಿರುಗಟ್ಟುತ್ತಿದ್ದರೂ ಅಲ್ಲೇ ಸಾಯಬೇಕೇ ಹೊರತು ಯಾವುದೇ ಮತಕ್ಕೆ ಹೋಗುವಂತಿಲ್ಲ, ಬೇರೆ ಧರ್ಮದವರು ಸಾರ್ವಜನಿಕವಾಗಿ ಬದುಕುವಂತಿಲ್ಲ, ದನ ತಿನ್ನುವಂತಿಲ್ಲ, ಮಹಿಳೆ ಮಂಗಳಸೂತ್ರ, ಕಾಲುಂಗರ ಧರಿಸಲೇಬೇಕು.

ಹೀಗೆ ಸಂಘ ಪರಿವಾರದ ಎಣೆಯಿಲ್ಲದಷ್ಟು ಹಿಂದೂಯಿಸಂನ ಮತೀಯ ಮೂಲಭೂತವಾದ ಇಂದು ಪ್ರಜ್ಞಾವಂತರನ್ನು ಉಸಿರುಗಟ್ಟಿಸುತ್ತಿದೆ. ಸಂಘ ಪರಿವಾರದ ಈ ಪ್ರಜಾಪ್ರಭುತ್ವ ವಿರೋಧಿ ಫೆನಟಿಸಂ ಅನ್ನು ಆಗಿನ ಪ್ರಧಾನಿ ನೆಹರೂ ಅವರು ನಲವತ್ತರ ದಶಕದಲ್ಲೇ ಮನಗಂಡಿದ್ದರು. ಆರೆಸ್ಸೆಸ್ ಅನ್ನು ಒಂದು ಅಪಾಯಕಾರಿ ಸೀಕ್ರೆಟ್ ಸೊಸೈಟಿ ಎಂದು ಎಚ್ಚರಿಸಿದ್ದರು. ಈ ಕೋಮುವಾದಿ ದುಷ್ಟ ಶಕ್ತಿಗಳು ದೇಶಕ್ಕೆ ಸದಾ ಕಂಟಕಪ್ರಾಯರಾಗಿರುತ್ತಾರೆ ಎಂದು ನಿರ್ದಾಕ್ಷಿಣ್ಯವಾಗಿ ಬರೆದಿದ್ದರು. ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲಾ ಮುಖ್ಯಮಂತ್ರಿಗಳಿಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ತಪ್ಪದೆ ನಿಯಮಿತವಾಗಿ ಪತ್ರ ಬರೆಯುತ್ತಿದ್ದರು. ಅವುಗಳಲ್ಲಿ ಆಯ್ದ ಕೋಮುವಾದಕ್ಕೆ ಸಂಬಂಧಿಸಿದ ಕೆಲವು ಪತ್ರಗಳನ್ನು ಇಲ್ಲಿ ಅನುವಾದಿಸಲಾಗಿದೆ.

ಪತ್ರ 1

ಕೇಂದ್ರ ಅಥವಾ ಪ್ರಾದೇಶಿಕ ಯಾವುದೇ ಸರ್ಕಾರವಾಗಿರಲಿ ಒಂದು ಸರ್ಕಾರವಾಗಿ ನಾವು ಯಾವುದೇ ಗುಂಪು ಅಥವ ಪಕ್ಷದ ಪರವಾಗಿ ಪಕ್ಷಪಾತಿಯಾಗಿ ವರ್ತಿಸಬಾರದು. ಒಂದು ಸರ್ಕಾರವಾಗಿ ನಾವು ಕೇವಲ ಕೆಲವೇ ಜನರ ಗುಂಪು ಮಾತ್ರ ಎಂದು ಪರಿಗಣಿಸಬಾರದು ಏಕೆಂದರೆ ನಮಗೆ ಆದರ್ಶಗಳಿವೆ, ಸಿದ್ಧಾಂತಗಳಿವೆ. ಯಾವುದೇ ವ್ಯಕ್ತಿ ಅಥವಾ ಗುಂಪು ಆ ಅದರ್ಶಗಳನ್ನು,
ಸಿದ್ಧಾಂತಗಳನ್ನು ವಿರೋಧಿಸಿದರೆ ನಮ್ಮ ಸಂಪೂರ್ಣ ಸಾಮಥ್ರ್ಯ ಬಲದಿಂದ ನಾವು ಆ ಸವಾಲನ್ನು ಸ್ವೀಕರಿಸಬೇಕು ಮತ್ತು ಅದನ್ನು ಸ್ವೀಕರಿಸಲು ಪ್ರಸ್ತಾವಿಸುತ್ತೇವೆ.

ಕಳೆದ ಕೆಲವು ವರ್ಷಗಳಿಂದ ಮುಸ್ಲಿಂ ಲೀಗ್ ಮತ್ತು ಪಾಕಿಸ್ತಾನ ದೇಶವು ಪ್ರಾರಂಭಿಸಿದ ಕೆಲವು ದುಷ್ಟ ನೀತಿಗಳಿಂದಾಗಿ ಉಂಟಾದ ಘೋರವಾದ ಪರಿಣಾಮಗಳ ಕುರಿತಾಗಿ ನಾನು ನಿಮಗೆಲ್ಲ ಬರೆಯುವ ಅವಶ್ಯಕತೆ ಇಲ್ಲವೆಂದೇ ಭಾವಿಸುತ್ತೇನೆ. ಇದರ ಕುರಿತಾಗಿ ನಮಗೆಲ್ಲ ಮಾಹಿತಿ ಇದೆ ಮತ್ತು ಅದರಿಂದುಂಟಾದ ಪರಿಣಾಮಗಳು ನಮಗೆಲ್ಲ ಗೊತ್ತಿದೆ. ಈ ದುಷ್ಟ ನೀತಿಗಳಿಂದ ಉಂಟಾದ
ಪರಿಣಾಮಗಳು ಸಂಪೂರ್ಣವಾಗಿ ಕೊನೆಯಾಗದೆ ಇನ್ನೂ ಸಶಕ್ತವಾಗಿವೆ ಮತ್ತು ಈ ಕಾರಣಕ್ಕಾಗಿ ನಾವೆಲ್ಲ ಇನ್ನು ಮುಂದೆಯೂ ಜಾಗರೂಕರಾಗಿ ಇರಬೇಕಾಗುತ್ತದೆ. ಈಗ ಇಲ್ಲಿ ಒಂದು ಬಗೆಯ ಅಪಾಯ ಮತ್ತು ಆತಂಕದ ವಾತಾವರಣವಿದೆ ಮತ್ತು ನಾವು ವಿಶ್ರಮಿಸಿಕೊಳ್ಳಲು ಸಾಧ್ಯವಿಲ್ಲ.

ಕೆಲ ಜನರು ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ. ಇಂತಹ ಮಾತುಕತೆಗಳನ್ನು ನಾವು ಪುರಸ್ಕರಿಸಬಾರದು. ಆದರೆ ಅಪಾಯಕಾರಿಯಾದ ಸಾಧ್ಯತೆಗಳನ್ನು ಒಳಗೊಂಡಿರುವ ಪ್ರಸ್ತುತ ಸಂದರ್ಭದಲ್ಲಿ ನಾವು ಆಕಸ್ಮಿಕ ಘಟನೆಗಳಿಗೆ ತಯಾರಾಗಿರಬೇಕಾಗಿದೆ ಮತ್ತು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ.

ಇಲ್ಲಿ ನಮಗೆ ಒಳಗಿನಿಂದಾಗಲಿ ಅಥವ ಹೊರಗಿನಿಂದ ಉಂಟಾಗುವ ಅಪಾಯಗಳ ಸಾಧ್ಯತೆ ಕಡಿಮೆ ಮಟ್ಟದಲ್ಲಿದೆ. ಆದರೆ ನಮ್ಮೊಳಗಿನ ಕೋಮುವಾದಿ ಸಂಘಟನೆಗಳು ಮತ್ತು ಪ್ರತಿಗಾಮಿ ಶಕ್ತಿಗಳು ಸ್ವತಂತ್ರ ಇಂಡಿಯಾದ ಭಾವೈಕ್ಯತೆಯನ್ನು ಒಡೆಯಲು ಪ್ರಯತ್ನಿಸುತ್ತಿವೆ. ಆದರೆ ಈ ನಾಶವೇನಾದರು ಸಂಭವಿಸಿದರೆ ಅದರಿಂದುಂಟಾಗುವ ಕ್ರಿಯೆ ಪ್ರತಿಕ್ರಿಯೆಗಳಲ್ಲಿ ನಾವೆಲ್ಲರೂ ಕೊಚ್ಚಿಹೋಗುತ್ತೇವೆಂದು ಈ ಕೋಮುವಾದಿ ಸಂಘಟನೆಗಳಿಗೆ ಅರಿವಿಲ್ಲ. ಆದರೂ ಈ ನಾಶವು ಸಂಭವಿಸುವುದಿಲ್ಲ ಮತ್ತು ನಾವು ಸಧೃಡವಾಗಿ ಮತ್ತು ಪರಿಪೂರ್ಣವಾಗಿ ಈ ಪ್ರತಿಗಾಮಿ ಶಕ್ತಿಗಳೊಂದಿಗೆ ಮುಖಾಮುಖಿಯಾಗಬೇಕಾಗಿದೆ.
– 22, ನವೆಂಬರ್, 1947


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...