Homeಮುಖಪುಟಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ ಎಂದು ನೆಹರು ಮನಗಂಡಿದ್ದರು..

- Advertisement -
- Advertisement -

| ಸಂಗ್ರಹ ಮತ್ತು ಅನುವಾದ: ಬಿ.ಶ್ರೀಪಾದ್ ಭಟ್ |

2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕ್ಷಣದಿಂದ ಇಂಡಿಯಾ ದೇಶ ಹಿಂದುತ್ವ ಮೂಲಭೂತವಾದಿಗಳ ದೌರ್ಜನ್ಯದಿಂದ ನಲಗುತ್ತಿದೆ. ಹಿಂದೂ ಧರ್ಮದಲ್ಲಿ ಜಾತೀಯತೆಯ ಕ್ರೌರ್ಯದಿಂದ ಉಸಿರುಗಟ್ಟುತ್ತಿದ್ದರೂ ಅಲ್ಲೇ ಸಾಯಬೇಕೇ ಹೊರತು ಯಾವುದೇ ಮತಕ್ಕೆ ಹೋಗುವಂತಿಲ್ಲ, ಬೇರೆ ಧರ್ಮದವರು ಸಾರ್ವಜನಿಕವಾಗಿ ಬದುಕುವಂತಿಲ್ಲ, ದನ ತಿನ್ನುವಂತಿಲ್ಲ, ಮಹಿಳೆ ಮಂಗಳಸೂತ್ರ, ಕಾಲುಂಗರ ಧರಿಸಲೇಬೇಕು.

ಹೀಗೆ ಸಂಘ ಪರಿವಾರದ ಎಣೆಯಿಲ್ಲದಷ್ಟು ಹಿಂದೂಯಿಸಂನ ಮತೀಯ ಮೂಲಭೂತವಾದ ಇಂದು ಪ್ರಜ್ಞಾವಂತರನ್ನು ಉಸಿರುಗಟ್ಟಿಸುತ್ತಿದೆ. ಸಂಘ ಪರಿವಾರದ ಈ ಪ್ರಜಾಪ್ರಭುತ್ವ ವಿರೋಧಿ ಫೆನಟಿಸಂ ಅನ್ನು ಆಗಿನ ಪ್ರಧಾನಿ ನೆಹರೂ ಅವರು ನಲವತ್ತರ ದಶಕದಲ್ಲೇ ಮನಗಂಡಿದ್ದರು. ಆರೆಸ್ಸೆಸ್ ಅನ್ನು ಒಂದು ಅಪಾಯಕಾರಿ ಸೀಕ್ರೆಟ್ ಸೊಸೈಟಿ ಎಂದು ಎಚ್ಚರಿಸಿದ್ದರು. ಈ ಕೋಮುವಾದಿ ದುಷ್ಟ ಶಕ್ತಿಗಳು ದೇಶಕ್ಕೆ ಸದಾ ಕಂಟಕಪ್ರಾಯರಾಗಿರುತ್ತಾರೆ ಎಂದು ನಿರ್ದಾಕ್ಷಿಣ್ಯವಾಗಿ ಬರೆದಿದ್ದರು. ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲಾ ಮುಖ್ಯಮಂತ್ರಿಗಳಿಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ತಪ್ಪದೆ ನಿಯಮಿತವಾಗಿ ಪತ್ರ ಬರೆಯುತ್ತಿದ್ದರು. ಅವುಗಳಲ್ಲಿ ಆಯ್ದ ಕೋಮುವಾದಕ್ಕೆ ಸಂಬಂಧಿಸಿದ ಕೆಲವು ಪತ್ರಗಳನ್ನು ಇಲ್ಲಿ ಅನುವಾದಿಸಲಾಗಿದೆ.

ಪತ್ರ 1

ಕೇಂದ್ರ ಅಥವಾ ಪ್ರಾದೇಶಿಕ ಯಾವುದೇ ಸರ್ಕಾರವಾಗಿರಲಿ ಒಂದು ಸರ್ಕಾರವಾಗಿ ನಾವು ಯಾವುದೇ ಗುಂಪು ಅಥವ ಪಕ್ಷದ ಪರವಾಗಿ ಪಕ್ಷಪಾತಿಯಾಗಿ ವರ್ತಿಸಬಾರದು. ಒಂದು ಸರ್ಕಾರವಾಗಿ ನಾವು ಕೇವಲ ಕೆಲವೇ ಜನರ ಗುಂಪು ಮಾತ್ರ ಎಂದು ಪರಿಗಣಿಸಬಾರದು ಏಕೆಂದರೆ ನಮಗೆ ಆದರ್ಶಗಳಿವೆ, ಸಿದ್ಧಾಂತಗಳಿವೆ. ಯಾವುದೇ ವ್ಯಕ್ತಿ ಅಥವಾ ಗುಂಪು ಆ ಅದರ್ಶಗಳನ್ನು,
ಸಿದ್ಧಾಂತಗಳನ್ನು ವಿರೋಧಿಸಿದರೆ ನಮ್ಮ ಸಂಪೂರ್ಣ ಸಾಮಥ್ರ್ಯ ಬಲದಿಂದ ನಾವು ಆ ಸವಾಲನ್ನು ಸ್ವೀಕರಿಸಬೇಕು ಮತ್ತು ಅದನ್ನು ಸ್ವೀಕರಿಸಲು ಪ್ರಸ್ತಾವಿಸುತ್ತೇವೆ.

ಕಳೆದ ಕೆಲವು ವರ್ಷಗಳಿಂದ ಮುಸ್ಲಿಂ ಲೀಗ್ ಮತ್ತು ಪಾಕಿಸ್ತಾನ ದೇಶವು ಪ್ರಾರಂಭಿಸಿದ ಕೆಲವು ದುಷ್ಟ ನೀತಿಗಳಿಂದಾಗಿ ಉಂಟಾದ ಘೋರವಾದ ಪರಿಣಾಮಗಳ ಕುರಿತಾಗಿ ನಾನು ನಿಮಗೆಲ್ಲ ಬರೆಯುವ ಅವಶ್ಯಕತೆ ಇಲ್ಲವೆಂದೇ ಭಾವಿಸುತ್ತೇನೆ. ಇದರ ಕುರಿತಾಗಿ ನಮಗೆಲ್ಲ ಮಾಹಿತಿ ಇದೆ ಮತ್ತು ಅದರಿಂದುಂಟಾದ ಪರಿಣಾಮಗಳು ನಮಗೆಲ್ಲ ಗೊತ್ತಿದೆ. ಈ ದುಷ್ಟ ನೀತಿಗಳಿಂದ ಉಂಟಾದ
ಪರಿಣಾಮಗಳು ಸಂಪೂರ್ಣವಾಗಿ ಕೊನೆಯಾಗದೆ ಇನ್ನೂ ಸಶಕ್ತವಾಗಿವೆ ಮತ್ತು ಈ ಕಾರಣಕ್ಕಾಗಿ ನಾವೆಲ್ಲ ಇನ್ನು ಮುಂದೆಯೂ ಜಾಗರೂಕರಾಗಿ ಇರಬೇಕಾಗುತ್ತದೆ. ಈಗ ಇಲ್ಲಿ ಒಂದು ಬಗೆಯ ಅಪಾಯ ಮತ್ತು ಆತಂಕದ ವಾತಾವರಣವಿದೆ ಮತ್ತು ನಾವು ವಿಶ್ರಮಿಸಿಕೊಳ್ಳಲು ಸಾಧ್ಯವಿಲ್ಲ.

ಕೆಲ ಜನರು ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ. ಇಂತಹ ಮಾತುಕತೆಗಳನ್ನು ನಾವು ಪುರಸ್ಕರಿಸಬಾರದು. ಆದರೆ ಅಪಾಯಕಾರಿಯಾದ ಸಾಧ್ಯತೆಗಳನ್ನು ಒಳಗೊಂಡಿರುವ ಪ್ರಸ್ತುತ ಸಂದರ್ಭದಲ್ಲಿ ನಾವು ಆಕಸ್ಮಿಕ ಘಟನೆಗಳಿಗೆ ತಯಾರಾಗಿರಬೇಕಾಗಿದೆ ಮತ್ತು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ.

ಇಲ್ಲಿ ನಮಗೆ ಒಳಗಿನಿಂದಾಗಲಿ ಅಥವ ಹೊರಗಿನಿಂದ ಉಂಟಾಗುವ ಅಪಾಯಗಳ ಸಾಧ್ಯತೆ ಕಡಿಮೆ ಮಟ್ಟದಲ್ಲಿದೆ. ಆದರೆ ನಮ್ಮೊಳಗಿನ ಕೋಮುವಾದಿ ಸಂಘಟನೆಗಳು ಮತ್ತು ಪ್ರತಿಗಾಮಿ ಶಕ್ತಿಗಳು ಸ್ವತಂತ್ರ ಇಂಡಿಯಾದ ಭಾವೈಕ್ಯತೆಯನ್ನು ಒಡೆಯಲು ಪ್ರಯತ್ನಿಸುತ್ತಿವೆ. ಆದರೆ ಈ ನಾಶವೇನಾದರು ಸಂಭವಿಸಿದರೆ ಅದರಿಂದುಂಟಾಗುವ ಕ್ರಿಯೆ ಪ್ರತಿಕ್ರಿಯೆಗಳಲ್ಲಿ ನಾವೆಲ್ಲರೂ ಕೊಚ್ಚಿಹೋಗುತ್ತೇವೆಂದು ಈ ಕೋಮುವಾದಿ ಸಂಘಟನೆಗಳಿಗೆ ಅರಿವಿಲ್ಲ. ಆದರೂ ಈ ನಾಶವು ಸಂಭವಿಸುವುದಿಲ್ಲ ಮತ್ತು ನಾವು ಸಧೃಡವಾಗಿ ಮತ್ತು ಪರಿಪೂರ್ಣವಾಗಿ ಈ ಪ್ರತಿಗಾಮಿ ಶಕ್ತಿಗಳೊಂದಿಗೆ ಮುಖಾಮುಖಿಯಾಗಬೇಕಾಗಿದೆ.
– 22, ನವೆಂಬರ್, 1947


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...