Homeಮುಖಪುಟಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ ಎಂದು ನೆಹರು ಮನಗಂಡಿದ್ದರು..

- Advertisement -
- Advertisement -

| ಸಂಗ್ರಹ ಮತ್ತು ಅನುವಾದ: ಬಿ.ಶ್ರೀಪಾದ್ ಭಟ್ |

2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕ್ಷಣದಿಂದ ಇಂಡಿಯಾ ದೇಶ ಹಿಂದುತ್ವ ಮೂಲಭೂತವಾದಿಗಳ ದೌರ್ಜನ್ಯದಿಂದ ನಲಗುತ್ತಿದೆ. ಹಿಂದೂ ಧರ್ಮದಲ್ಲಿ ಜಾತೀಯತೆಯ ಕ್ರೌರ್ಯದಿಂದ ಉಸಿರುಗಟ್ಟುತ್ತಿದ್ದರೂ ಅಲ್ಲೇ ಸಾಯಬೇಕೇ ಹೊರತು ಯಾವುದೇ ಮತಕ್ಕೆ ಹೋಗುವಂತಿಲ್ಲ, ಬೇರೆ ಧರ್ಮದವರು ಸಾರ್ವಜನಿಕವಾಗಿ ಬದುಕುವಂತಿಲ್ಲ, ದನ ತಿನ್ನುವಂತಿಲ್ಲ, ಮಹಿಳೆ ಮಂಗಳಸೂತ್ರ, ಕಾಲುಂಗರ ಧರಿಸಲೇಬೇಕು.

ಹೀಗೆ ಸಂಘ ಪರಿವಾರದ ಎಣೆಯಿಲ್ಲದಷ್ಟು ಹಿಂದೂಯಿಸಂನ ಮತೀಯ ಮೂಲಭೂತವಾದ ಇಂದು ಪ್ರಜ್ಞಾವಂತರನ್ನು ಉಸಿರುಗಟ್ಟಿಸುತ್ತಿದೆ. ಸಂಘ ಪರಿವಾರದ ಈ ಪ್ರಜಾಪ್ರಭುತ್ವ ವಿರೋಧಿ ಫೆನಟಿಸಂ ಅನ್ನು ಆಗಿನ ಪ್ರಧಾನಿ ನೆಹರೂ ಅವರು ನಲವತ್ತರ ದಶಕದಲ್ಲೇ ಮನಗಂಡಿದ್ದರು. ಆರೆಸ್ಸೆಸ್ ಅನ್ನು ಒಂದು ಅಪಾಯಕಾರಿ ಸೀಕ್ರೆಟ್ ಸೊಸೈಟಿ ಎಂದು ಎಚ್ಚರಿಸಿದ್ದರು. ಈ ಕೋಮುವಾದಿ ದುಷ್ಟ ಶಕ್ತಿಗಳು ದೇಶಕ್ಕೆ ಸದಾ ಕಂಟಕಪ್ರಾಯರಾಗಿರುತ್ತಾರೆ ಎಂದು ನಿರ್ದಾಕ್ಷಿಣ್ಯವಾಗಿ ಬರೆದಿದ್ದರು. ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲಾ ಮುಖ್ಯಮಂತ್ರಿಗಳಿಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ತಪ್ಪದೆ ನಿಯಮಿತವಾಗಿ ಪತ್ರ ಬರೆಯುತ್ತಿದ್ದರು. ಅವುಗಳಲ್ಲಿ ಆಯ್ದ ಕೋಮುವಾದಕ್ಕೆ ಸಂಬಂಧಿಸಿದ ಕೆಲವು ಪತ್ರಗಳನ್ನು ಇಲ್ಲಿ ಅನುವಾದಿಸಲಾಗಿದೆ.

ಪತ್ರ 1

ಕೇಂದ್ರ ಅಥವಾ ಪ್ರಾದೇಶಿಕ ಯಾವುದೇ ಸರ್ಕಾರವಾಗಿರಲಿ ಒಂದು ಸರ್ಕಾರವಾಗಿ ನಾವು ಯಾವುದೇ ಗುಂಪು ಅಥವ ಪಕ್ಷದ ಪರವಾಗಿ ಪಕ್ಷಪಾತಿಯಾಗಿ ವರ್ತಿಸಬಾರದು. ಒಂದು ಸರ್ಕಾರವಾಗಿ ನಾವು ಕೇವಲ ಕೆಲವೇ ಜನರ ಗುಂಪು ಮಾತ್ರ ಎಂದು ಪರಿಗಣಿಸಬಾರದು ಏಕೆಂದರೆ ನಮಗೆ ಆದರ್ಶಗಳಿವೆ, ಸಿದ್ಧಾಂತಗಳಿವೆ. ಯಾವುದೇ ವ್ಯಕ್ತಿ ಅಥವಾ ಗುಂಪು ಆ ಅದರ್ಶಗಳನ್ನು,
ಸಿದ್ಧಾಂತಗಳನ್ನು ವಿರೋಧಿಸಿದರೆ ನಮ್ಮ ಸಂಪೂರ್ಣ ಸಾಮಥ್ರ್ಯ ಬಲದಿಂದ ನಾವು ಆ ಸವಾಲನ್ನು ಸ್ವೀಕರಿಸಬೇಕು ಮತ್ತು ಅದನ್ನು ಸ್ವೀಕರಿಸಲು ಪ್ರಸ್ತಾವಿಸುತ್ತೇವೆ.

ಕಳೆದ ಕೆಲವು ವರ್ಷಗಳಿಂದ ಮುಸ್ಲಿಂ ಲೀಗ್ ಮತ್ತು ಪಾಕಿಸ್ತಾನ ದೇಶವು ಪ್ರಾರಂಭಿಸಿದ ಕೆಲವು ದುಷ್ಟ ನೀತಿಗಳಿಂದಾಗಿ ಉಂಟಾದ ಘೋರವಾದ ಪರಿಣಾಮಗಳ ಕುರಿತಾಗಿ ನಾನು ನಿಮಗೆಲ್ಲ ಬರೆಯುವ ಅವಶ್ಯಕತೆ ಇಲ್ಲವೆಂದೇ ಭಾವಿಸುತ್ತೇನೆ. ಇದರ ಕುರಿತಾಗಿ ನಮಗೆಲ್ಲ ಮಾಹಿತಿ ಇದೆ ಮತ್ತು ಅದರಿಂದುಂಟಾದ ಪರಿಣಾಮಗಳು ನಮಗೆಲ್ಲ ಗೊತ್ತಿದೆ. ಈ ದುಷ್ಟ ನೀತಿಗಳಿಂದ ಉಂಟಾದ
ಪರಿಣಾಮಗಳು ಸಂಪೂರ್ಣವಾಗಿ ಕೊನೆಯಾಗದೆ ಇನ್ನೂ ಸಶಕ್ತವಾಗಿವೆ ಮತ್ತು ಈ ಕಾರಣಕ್ಕಾಗಿ ನಾವೆಲ್ಲ ಇನ್ನು ಮುಂದೆಯೂ ಜಾಗರೂಕರಾಗಿ ಇರಬೇಕಾಗುತ್ತದೆ. ಈಗ ಇಲ್ಲಿ ಒಂದು ಬಗೆಯ ಅಪಾಯ ಮತ್ತು ಆತಂಕದ ವಾತಾವರಣವಿದೆ ಮತ್ತು ನಾವು ವಿಶ್ರಮಿಸಿಕೊಳ್ಳಲು ಸಾಧ್ಯವಿಲ್ಲ.

ಕೆಲ ಜನರು ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ. ಇಂತಹ ಮಾತುಕತೆಗಳನ್ನು ನಾವು ಪುರಸ್ಕರಿಸಬಾರದು. ಆದರೆ ಅಪಾಯಕಾರಿಯಾದ ಸಾಧ್ಯತೆಗಳನ್ನು ಒಳಗೊಂಡಿರುವ ಪ್ರಸ್ತುತ ಸಂದರ್ಭದಲ್ಲಿ ನಾವು ಆಕಸ್ಮಿಕ ಘಟನೆಗಳಿಗೆ ತಯಾರಾಗಿರಬೇಕಾಗಿದೆ ಮತ್ತು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ.

ಇಲ್ಲಿ ನಮಗೆ ಒಳಗಿನಿಂದಾಗಲಿ ಅಥವ ಹೊರಗಿನಿಂದ ಉಂಟಾಗುವ ಅಪಾಯಗಳ ಸಾಧ್ಯತೆ ಕಡಿಮೆ ಮಟ್ಟದಲ್ಲಿದೆ. ಆದರೆ ನಮ್ಮೊಳಗಿನ ಕೋಮುವಾದಿ ಸಂಘಟನೆಗಳು ಮತ್ತು ಪ್ರತಿಗಾಮಿ ಶಕ್ತಿಗಳು ಸ್ವತಂತ್ರ ಇಂಡಿಯಾದ ಭಾವೈಕ್ಯತೆಯನ್ನು ಒಡೆಯಲು ಪ್ರಯತ್ನಿಸುತ್ತಿವೆ. ಆದರೆ ಈ ನಾಶವೇನಾದರು ಸಂಭವಿಸಿದರೆ ಅದರಿಂದುಂಟಾಗುವ ಕ್ರಿಯೆ ಪ್ರತಿಕ್ರಿಯೆಗಳಲ್ಲಿ ನಾವೆಲ್ಲರೂ ಕೊಚ್ಚಿಹೋಗುತ್ತೇವೆಂದು ಈ ಕೋಮುವಾದಿ ಸಂಘಟನೆಗಳಿಗೆ ಅರಿವಿಲ್ಲ. ಆದರೂ ಈ ನಾಶವು ಸಂಭವಿಸುವುದಿಲ್ಲ ಮತ್ತು ನಾವು ಸಧೃಡವಾಗಿ ಮತ್ತು ಪರಿಪೂರ್ಣವಾಗಿ ಈ ಪ್ರತಿಗಾಮಿ ಶಕ್ತಿಗಳೊಂದಿಗೆ ಮುಖಾಮುಖಿಯಾಗಬೇಕಾಗಿದೆ.
– 22, ನವೆಂಬರ್, 1947


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...