Homeಮುಖಪುಟಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ ಎಂದು ನೆಹರು ಮನಗಂಡಿದ್ದರು..

- Advertisement -
- Advertisement -

| ಸಂಗ್ರಹ ಮತ್ತು ಅನುವಾದ: ಬಿ.ಶ್ರೀಪಾದ್ ಭಟ್ |

2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕ್ಷಣದಿಂದ ಇಂಡಿಯಾ ದೇಶ ಹಿಂದುತ್ವ ಮೂಲಭೂತವಾದಿಗಳ ದೌರ್ಜನ್ಯದಿಂದ ನಲಗುತ್ತಿದೆ. ಹಿಂದೂ ಧರ್ಮದಲ್ಲಿ ಜಾತೀಯತೆಯ ಕ್ರೌರ್ಯದಿಂದ ಉಸಿರುಗಟ್ಟುತ್ತಿದ್ದರೂ ಅಲ್ಲೇ ಸಾಯಬೇಕೇ ಹೊರತು ಯಾವುದೇ ಮತಕ್ಕೆ ಹೋಗುವಂತಿಲ್ಲ, ಬೇರೆ ಧರ್ಮದವರು ಸಾರ್ವಜನಿಕವಾಗಿ ಬದುಕುವಂತಿಲ್ಲ, ದನ ತಿನ್ನುವಂತಿಲ್ಲ, ಮಹಿಳೆ ಮಂಗಳಸೂತ್ರ, ಕಾಲುಂಗರ ಧರಿಸಲೇಬೇಕು.

ಹೀಗೆ ಸಂಘ ಪರಿವಾರದ ಎಣೆಯಿಲ್ಲದಷ್ಟು ಹಿಂದೂಯಿಸಂನ ಮತೀಯ ಮೂಲಭೂತವಾದ ಇಂದು ಪ್ರಜ್ಞಾವಂತರನ್ನು ಉಸಿರುಗಟ್ಟಿಸುತ್ತಿದೆ. ಸಂಘ ಪರಿವಾರದ ಈ ಪ್ರಜಾಪ್ರಭುತ್ವ ವಿರೋಧಿ ಫೆನಟಿಸಂ ಅನ್ನು ಆಗಿನ ಪ್ರಧಾನಿ ನೆಹರೂ ಅವರು ನಲವತ್ತರ ದಶಕದಲ್ಲೇ ಮನಗಂಡಿದ್ದರು. ಆರೆಸ್ಸೆಸ್ ಅನ್ನು ಒಂದು ಅಪಾಯಕಾರಿ ಸೀಕ್ರೆಟ್ ಸೊಸೈಟಿ ಎಂದು ಎಚ್ಚರಿಸಿದ್ದರು. ಈ ಕೋಮುವಾದಿ ದುಷ್ಟ ಶಕ್ತಿಗಳು ದೇಶಕ್ಕೆ ಸದಾ ಕಂಟಕಪ್ರಾಯರಾಗಿರುತ್ತಾರೆ ಎಂದು ನಿರ್ದಾಕ್ಷಿಣ್ಯವಾಗಿ ಬರೆದಿದ್ದರು. ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲಾ ಮುಖ್ಯಮಂತ್ರಿಗಳಿಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ತಪ್ಪದೆ ನಿಯಮಿತವಾಗಿ ಪತ್ರ ಬರೆಯುತ್ತಿದ್ದರು. ಅವುಗಳಲ್ಲಿ ಆಯ್ದ ಕೋಮುವಾದಕ್ಕೆ ಸಂಬಂಧಿಸಿದ ಕೆಲವು ಪತ್ರಗಳನ್ನು ಇಲ್ಲಿ ಅನುವಾದಿಸಲಾಗಿದೆ.

ಪತ್ರ 1

ಕೇಂದ್ರ ಅಥವಾ ಪ್ರಾದೇಶಿಕ ಯಾವುದೇ ಸರ್ಕಾರವಾಗಿರಲಿ ಒಂದು ಸರ್ಕಾರವಾಗಿ ನಾವು ಯಾವುದೇ ಗುಂಪು ಅಥವ ಪಕ್ಷದ ಪರವಾಗಿ ಪಕ್ಷಪಾತಿಯಾಗಿ ವರ್ತಿಸಬಾರದು. ಒಂದು ಸರ್ಕಾರವಾಗಿ ನಾವು ಕೇವಲ ಕೆಲವೇ ಜನರ ಗುಂಪು ಮಾತ್ರ ಎಂದು ಪರಿಗಣಿಸಬಾರದು ಏಕೆಂದರೆ ನಮಗೆ ಆದರ್ಶಗಳಿವೆ, ಸಿದ್ಧಾಂತಗಳಿವೆ. ಯಾವುದೇ ವ್ಯಕ್ತಿ ಅಥವಾ ಗುಂಪು ಆ ಅದರ್ಶಗಳನ್ನು,
ಸಿದ್ಧಾಂತಗಳನ್ನು ವಿರೋಧಿಸಿದರೆ ನಮ್ಮ ಸಂಪೂರ್ಣ ಸಾಮಥ್ರ್ಯ ಬಲದಿಂದ ನಾವು ಆ ಸವಾಲನ್ನು ಸ್ವೀಕರಿಸಬೇಕು ಮತ್ತು ಅದನ್ನು ಸ್ವೀಕರಿಸಲು ಪ್ರಸ್ತಾವಿಸುತ್ತೇವೆ.

ಕಳೆದ ಕೆಲವು ವರ್ಷಗಳಿಂದ ಮುಸ್ಲಿಂ ಲೀಗ್ ಮತ್ತು ಪಾಕಿಸ್ತಾನ ದೇಶವು ಪ್ರಾರಂಭಿಸಿದ ಕೆಲವು ದುಷ್ಟ ನೀತಿಗಳಿಂದಾಗಿ ಉಂಟಾದ ಘೋರವಾದ ಪರಿಣಾಮಗಳ ಕುರಿತಾಗಿ ನಾನು ನಿಮಗೆಲ್ಲ ಬರೆಯುವ ಅವಶ್ಯಕತೆ ಇಲ್ಲವೆಂದೇ ಭಾವಿಸುತ್ತೇನೆ. ಇದರ ಕುರಿತಾಗಿ ನಮಗೆಲ್ಲ ಮಾಹಿತಿ ಇದೆ ಮತ್ತು ಅದರಿಂದುಂಟಾದ ಪರಿಣಾಮಗಳು ನಮಗೆಲ್ಲ ಗೊತ್ತಿದೆ. ಈ ದುಷ್ಟ ನೀತಿಗಳಿಂದ ಉಂಟಾದ
ಪರಿಣಾಮಗಳು ಸಂಪೂರ್ಣವಾಗಿ ಕೊನೆಯಾಗದೆ ಇನ್ನೂ ಸಶಕ್ತವಾಗಿವೆ ಮತ್ತು ಈ ಕಾರಣಕ್ಕಾಗಿ ನಾವೆಲ್ಲ ಇನ್ನು ಮುಂದೆಯೂ ಜಾಗರೂಕರಾಗಿ ಇರಬೇಕಾಗುತ್ತದೆ. ಈಗ ಇಲ್ಲಿ ಒಂದು ಬಗೆಯ ಅಪಾಯ ಮತ್ತು ಆತಂಕದ ವಾತಾವರಣವಿದೆ ಮತ್ತು ನಾವು ವಿಶ್ರಮಿಸಿಕೊಳ್ಳಲು ಸಾಧ್ಯವಿಲ್ಲ.

ಕೆಲ ಜನರು ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ. ಇಂತಹ ಮಾತುಕತೆಗಳನ್ನು ನಾವು ಪುರಸ್ಕರಿಸಬಾರದು. ಆದರೆ ಅಪಾಯಕಾರಿಯಾದ ಸಾಧ್ಯತೆಗಳನ್ನು ಒಳಗೊಂಡಿರುವ ಪ್ರಸ್ತುತ ಸಂದರ್ಭದಲ್ಲಿ ನಾವು ಆಕಸ್ಮಿಕ ಘಟನೆಗಳಿಗೆ ತಯಾರಾಗಿರಬೇಕಾಗಿದೆ ಮತ್ತು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ.

ಇಲ್ಲಿ ನಮಗೆ ಒಳಗಿನಿಂದಾಗಲಿ ಅಥವ ಹೊರಗಿನಿಂದ ಉಂಟಾಗುವ ಅಪಾಯಗಳ ಸಾಧ್ಯತೆ ಕಡಿಮೆ ಮಟ್ಟದಲ್ಲಿದೆ. ಆದರೆ ನಮ್ಮೊಳಗಿನ ಕೋಮುವಾದಿ ಸಂಘಟನೆಗಳು ಮತ್ತು ಪ್ರತಿಗಾಮಿ ಶಕ್ತಿಗಳು ಸ್ವತಂತ್ರ ಇಂಡಿಯಾದ ಭಾವೈಕ್ಯತೆಯನ್ನು ಒಡೆಯಲು ಪ್ರಯತ್ನಿಸುತ್ತಿವೆ. ಆದರೆ ಈ ನಾಶವೇನಾದರು ಸಂಭವಿಸಿದರೆ ಅದರಿಂದುಂಟಾಗುವ ಕ್ರಿಯೆ ಪ್ರತಿಕ್ರಿಯೆಗಳಲ್ಲಿ ನಾವೆಲ್ಲರೂ ಕೊಚ್ಚಿಹೋಗುತ್ತೇವೆಂದು ಈ ಕೋಮುವಾದಿ ಸಂಘಟನೆಗಳಿಗೆ ಅರಿವಿಲ್ಲ. ಆದರೂ ಈ ನಾಶವು ಸಂಭವಿಸುವುದಿಲ್ಲ ಮತ್ತು ನಾವು ಸಧೃಡವಾಗಿ ಮತ್ತು ಪರಿಪೂರ್ಣವಾಗಿ ಈ ಪ್ರತಿಗಾಮಿ ಶಕ್ತಿಗಳೊಂದಿಗೆ ಮುಖಾಮುಖಿಯಾಗಬೇಕಾಗಿದೆ.
– 22, ನವೆಂಬರ್, 1947


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...