Homeಮುಖಪುಟಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ ಎಂದು ನೆಹರು ಮನಗಂಡಿದ್ದರು..

- Advertisement -
- Advertisement -

| ಸಂಗ್ರಹ ಮತ್ತು ಅನುವಾದ: ಬಿ.ಶ್ರೀಪಾದ್ ಭಟ್ |

2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕ್ಷಣದಿಂದ ಇಂಡಿಯಾ ದೇಶ ಹಿಂದುತ್ವ ಮೂಲಭೂತವಾದಿಗಳ ದೌರ್ಜನ್ಯದಿಂದ ನಲಗುತ್ತಿದೆ. ಹಿಂದೂ ಧರ್ಮದಲ್ಲಿ ಜಾತೀಯತೆಯ ಕ್ರೌರ್ಯದಿಂದ ಉಸಿರುಗಟ್ಟುತ್ತಿದ್ದರೂ ಅಲ್ಲೇ ಸಾಯಬೇಕೇ ಹೊರತು ಯಾವುದೇ ಮತಕ್ಕೆ ಹೋಗುವಂತಿಲ್ಲ, ಬೇರೆ ಧರ್ಮದವರು ಸಾರ್ವಜನಿಕವಾಗಿ ಬದುಕುವಂತಿಲ್ಲ, ದನ ತಿನ್ನುವಂತಿಲ್ಲ, ಮಹಿಳೆ ಮಂಗಳಸೂತ್ರ, ಕಾಲುಂಗರ ಧರಿಸಲೇಬೇಕು.

ಹೀಗೆ ಸಂಘ ಪರಿವಾರದ ಎಣೆಯಿಲ್ಲದಷ್ಟು ಹಿಂದೂಯಿಸಂನ ಮತೀಯ ಮೂಲಭೂತವಾದ ಇಂದು ಪ್ರಜ್ಞಾವಂತರನ್ನು ಉಸಿರುಗಟ್ಟಿಸುತ್ತಿದೆ. ಸಂಘ ಪರಿವಾರದ ಈ ಪ್ರಜಾಪ್ರಭುತ್ವ ವಿರೋಧಿ ಫೆನಟಿಸಂ ಅನ್ನು ಆಗಿನ ಪ್ರಧಾನಿ ನೆಹರೂ ಅವರು ನಲವತ್ತರ ದಶಕದಲ್ಲೇ ಮನಗಂಡಿದ್ದರು. ಆರೆಸ್ಸೆಸ್ ಅನ್ನು ಒಂದು ಅಪಾಯಕಾರಿ ಸೀಕ್ರೆಟ್ ಸೊಸೈಟಿ ಎಂದು ಎಚ್ಚರಿಸಿದ್ದರು. ಈ ಕೋಮುವಾದಿ ದುಷ್ಟ ಶಕ್ತಿಗಳು ದೇಶಕ್ಕೆ ಸದಾ ಕಂಟಕಪ್ರಾಯರಾಗಿರುತ್ತಾರೆ ಎಂದು ನಿರ್ದಾಕ್ಷಿಣ್ಯವಾಗಿ ಬರೆದಿದ್ದರು. ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲಾ ಮುಖ್ಯಮಂತ್ರಿಗಳಿಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ತಪ್ಪದೆ ನಿಯಮಿತವಾಗಿ ಪತ್ರ ಬರೆಯುತ್ತಿದ್ದರು. ಅವುಗಳಲ್ಲಿ ಆಯ್ದ ಕೋಮುವಾದಕ್ಕೆ ಸಂಬಂಧಿಸಿದ ಕೆಲವು ಪತ್ರಗಳನ್ನು ಇಲ್ಲಿ ಅನುವಾದಿಸಲಾಗಿದೆ.

ಪತ್ರ 1

ಕೇಂದ್ರ ಅಥವಾ ಪ್ರಾದೇಶಿಕ ಯಾವುದೇ ಸರ್ಕಾರವಾಗಿರಲಿ ಒಂದು ಸರ್ಕಾರವಾಗಿ ನಾವು ಯಾವುದೇ ಗುಂಪು ಅಥವ ಪಕ್ಷದ ಪರವಾಗಿ ಪಕ್ಷಪಾತಿಯಾಗಿ ವರ್ತಿಸಬಾರದು. ಒಂದು ಸರ್ಕಾರವಾಗಿ ನಾವು ಕೇವಲ ಕೆಲವೇ ಜನರ ಗುಂಪು ಮಾತ್ರ ಎಂದು ಪರಿಗಣಿಸಬಾರದು ಏಕೆಂದರೆ ನಮಗೆ ಆದರ್ಶಗಳಿವೆ, ಸಿದ್ಧಾಂತಗಳಿವೆ. ಯಾವುದೇ ವ್ಯಕ್ತಿ ಅಥವಾ ಗುಂಪು ಆ ಅದರ್ಶಗಳನ್ನು,
ಸಿದ್ಧಾಂತಗಳನ್ನು ವಿರೋಧಿಸಿದರೆ ನಮ್ಮ ಸಂಪೂರ್ಣ ಸಾಮಥ್ರ್ಯ ಬಲದಿಂದ ನಾವು ಆ ಸವಾಲನ್ನು ಸ್ವೀಕರಿಸಬೇಕು ಮತ್ತು ಅದನ್ನು ಸ್ವೀಕರಿಸಲು ಪ್ರಸ್ತಾವಿಸುತ್ತೇವೆ.

ಕಳೆದ ಕೆಲವು ವರ್ಷಗಳಿಂದ ಮುಸ್ಲಿಂ ಲೀಗ್ ಮತ್ತು ಪಾಕಿಸ್ತಾನ ದೇಶವು ಪ್ರಾರಂಭಿಸಿದ ಕೆಲವು ದುಷ್ಟ ನೀತಿಗಳಿಂದಾಗಿ ಉಂಟಾದ ಘೋರವಾದ ಪರಿಣಾಮಗಳ ಕುರಿತಾಗಿ ನಾನು ನಿಮಗೆಲ್ಲ ಬರೆಯುವ ಅವಶ್ಯಕತೆ ಇಲ್ಲವೆಂದೇ ಭಾವಿಸುತ್ತೇನೆ. ಇದರ ಕುರಿತಾಗಿ ನಮಗೆಲ್ಲ ಮಾಹಿತಿ ಇದೆ ಮತ್ತು ಅದರಿಂದುಂಟಾದ ಪರಿಣಾಮಗಳು ನಮಗೆಲ್ಲ ಗೊತ್ತಿದೆ. ಈ ದುಷ್ಟ ನೀತಿಗಳಿಂದ ಉಂಟಾದ
ಪರಿಣಾಮಗಳು ಸಂಪೂರ್ಣವಾಗಿ ಕೊನೆಯಾಗದೆ ಇನ್ನೂ ಸಶಕ್ತವಾಗಿವೆ ಮತ್ತು ಈ ಕಾರಣಕ್ಕಾಗಿ ನಾವೆಲ್ಲ ಇನ್ನು ಮುಂದೆಯೂ ಜಾಗರೂಕರಾಗಿ ಇರಬೇಕಾಗುತ್ತದೆ. ಈಗ ಇಲ್ಲಿ ಒಂದು ಬಗೆಯ ಅಪಾಯ ಮತ್ತು ಆತಂಕದ ವಾತಾವರಣವಿದೆ ಮತ್ತು ನಾವು ವಿಶ್ರಮಿಸಿಕೊಳ್ಳಲು ಸಾಧ್ಯವಿಲ್ಲ.

ಕೆಲ ಜನರು ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ. ಇಂತಹ ಮಾತುಕತೆಗಳನ್ನು ನಾವು ಪುರಸ್ಕರಿಸಬಾರದು. ಆದರೆ ಅಪಾಯಕಾರಿಯಾದ ಸಾಧ್ಯತೆಗಳನ್ನು ಒಳಗೊಂಡಿರುವ ಪ್ರಸ್ತುತ ಸಂದರ್ಭದಲ್ಲಿ ನಾವು ಆಕಸ್ಮಿಕ ಘಟನೆಗಳಿಗೆ ತಯಾರಾಗಿರಬೇಕಾಗಿದೆ ಮತ್ತು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ.

ಇಲ್ಲಿ ನಮಗೆ ಒಳಗಿನಿಂದಾಗಲಿ ಅಥವ ಹೊರಗಿನಿಂದ ಉಂಟಾಗುವ ಅಪಾಯಗಳ ಸಾಧ್ಯತೆ ಕಡಿಮೆ ಮಟ್ಟದಲ್ಲಿದೆ. ಆದರೆ ನಮ್ಮೊಳಗಿನ ಕೋಮುವಾದಿ ಸಂಘಟನೆಗಳು ಮತ್ತು ಪ್ರತಿಗಾಮಿ ಶಕ್ತಿಗಳು ಸ್ವತಂತ್ರ ಇಂಡಿಯಾದ ಭಾವೈಕ್ಯತೆಯನ್ನು ಒಡೆಯಲು ಪ್ರಯತ್ನಿಸುತ್ತಿವೆ. ಆದರೆ ಈ ನಾಶವೇನಾದರು ಸಂಭವಿಸಿದರೆ ಅದರಿಂದುಂಟಾಗುವ ಕ್ರಿಯೆ ಪ್ರತಿಕ್ರಿಯೆಗಳಲ್ಲಿ ನಾವೆಲ್ಲರೂ ಕೊಚ್ಚಿಹೋಗುತ್ತೇವೆಂದು ಈ ಕೋಮುವಾದಿ ಸಂಘಟನೆಗಳಿಗೆ ಅರಿವಿಲ್ಲ. ಆದರೂ ಈ ನಾಶವು ಸಂಭವಿಸುವುದಿಲ್ಲ ಮತ್ತು ನಾವು ಸಧೃಡವಾಗಿ ಮತ್ತು ಪರಿಪೂರ್ಣವಾಗಿ ಈ ಪ್ರತಿಗಾಮಿ ಶಕ್ತಿಗಳೊಂದಿಗೆ ಮುಖಾಮುಖಿಯಾಗಬೇಕಾಗಿದೆ.
– 22, ನವೆಂಬರ್, 1947


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...