Homeಮುಖಪುಟಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ ಎಂದು ನೆಹರು ಮನಗಂಡಿದ್ದರು..

- Advertisement -
- Advertisement -

| ಸಂಗ್ರಹ ಮತ್ತು ಅನುವಾದ: ಬಿ.ಶ್ರೀಪಾದ್ ಭಟ್ |

2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕ್ಷಣದಿಂದ ಇಂಡಿಯಾ ದೇಶ ಹಿಂದುತ್ವ ಮೂಲಭೂತವಾದಿಗಳ ದೌರ್ಜನ್ಯದಿಂದ ನಲಗುತ್ತಿದೆ. ಹಿಂದೂ ಧರ್ಮದಲ್ಲಿ ಜಾತೀಯತೆಯ ಕ್ರೌರ್ಯದಿಂದ ಉಸಿರುಗಟ್ಟುತ್ತಿದ್ದರೂ ಅಲ್ಲೇ ಸಾಯಬೇಕೇ ಹೊರತು ಯಾವುದೇ ಮತಕ್ಕೆ ಹೋಗುವಂತಿಲ್ಲ, ಬೇರೆ ಧರ್ಮದವರು ಸಾರ್ವಜನಿಕವಾಗಿ ಬದುಕುವಂತಿಲ್ಲ, ದನ ತಿನ್ನುವಂತಿಲ್ಲ, ಮಹಿಳೆ ಮಂಗಳಸೂತ್ರ, ಕಾಲುಂಗರ ಧರಿಸಲೇಬೇಕು.

ಹೀಗೆ ಸಂಘ ಪರಿವಾರದ ಎಣೆಯಿಲ್ಲದಷ್ಟು ಹಿಂದೂಯಿಸಂನ ಮತೀಯ ಮೂಲಭೂತವಾದ ಇಂದು ಪ್ರಜ್ಞಾವಂತರನ್ನು ಉಸಿರುಗಟ್ಟಿಸುತ್ತಿದೆ. ಸಂಘ ಪರಿವಾರದ ಈ ಪ್ರಜಾಪ್ರಭುತ್ವ ವಿರೋಧಿ ಫೆನಟಿಸಂ ಅನ್ನು ಆಗಿನ ಪ್ರಧಾನಿ ನೆಹರೂ ಅವರು ನಲವತ್ತರ ದಶಕದಲ್ಲೇ ಮನಗಂಡಿದ್ದರು. ಆರೆಸ್ಸೆಸ್ ಅನ್ನು ಒಂದು ಅಪಾಯಕಾರಿ ಸೀಕ್ರೆಟ್ ಸೊಸೈಟಿ ಎಂದು ಎಚ್ಚರಿಸಿದ್ದರು. ಈ ಕೋಮುವಾದಿ ದುಷ್ಟ ಶಕ್ತಿಗಳು ದೇಶಕ್ಕೆ ಸದಾ ಕಂಟಕಪ್ರಾಯರಾಗಿರುತ್ತಾರೆ ಎಂದು ನಿರ್ದಾಕ್ಷಿಣ್ಯವಾಗಿ ಬರೆದಿದ್ದರು. ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲಾ ಮುಖ್ಯಮಂತ್ರಿಗಳಿಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ತಪ್ಪದೆ ನಿಯಮಿತವಾಗಿ ಪತ್ರ ಬರೆಯುತ್ತಿದ್ದರು. ಅವುಗಳಲ್ಲಿ ಆಯ್ದ ಕೋಮುವಾದಕ್ಕೆ ಸಂಬಂಧಿಸಿದ ಕೆಲವು ಪತ್ರಗಳನ್ನು ಇಲ್ಲಿ ಅನುವಾದಿಸಲಾಗಿದೆ.

ಪತ್ರ 1

ಕೇಂದ್ರ ಅಥವಾ ಪ್ರಾದೇಶಿಕ ಯಾವುದೇ ಸರ್ಕಾರವಾಗಿರಲಿ ಒಂದು ಸರ್ಕಾರವಾಗಿ ನಾವು ಯಾವುದೇ ಗುಂಪು ಅಥವ ಪಕ್ಷದ ಪರವಾಗಿ ಪಕ್ಷಪಾತಿಯಾಗಿ ವರ್ತಿಸಬಾರದು. ಒಂದು ಸರ್ಕಾರವಾಗಿ ನಾವು ಕೇವಲ ಕೆಲವೇ ಜನರ ಗುಂಪು ಮಾತ್ರ ಎಂದು ಪರಿಗಣಿಸಬಾರದು ಏಕೆಂದರೆ ನಮಗೆ ಆದರ್ಶಗಳಿವೆ, ಸಿದ್ಧಾಂತಗಳಿವೆ. ಯಾವುದೇ ವ್ಯಕ್ತಿ ಅಥವಾ ಗುಂಪು ಆ ಅದರ್ಶಗಳನ್ನು,
ಸಿದ್ಧಾಂತಗಳನ್ನು ವಿರೋಧಿಸಿದರೆ ನಮ್ಮ ಸಂಪೂರ್ಣ ಸಾಮಥ್ರ್ಯ ಬಲದಿಂದ ನಾವು ಆ ಸವಾಲನ್ನು ಸ್ವೀಕರಿಸಬೇಕು ಮತ್ತು ಅದನ್ನು ಸ್ವೀಕರಿಸಲು ಪ್ರಸ್ತಾವಿಸುತ್ತೇವೆ.

ಕಳೆದ ಕೆಲವು ವರ್ಷಗಳಿಂದ ಮುಸ್ಲಿಂ ಲೀಗ್ ಮತ್ತು ಪಾಕಿಸ್ತಾನ ದೇಶವು ಪ್ರಾರಂಭಿಸಿದ ಕೆಲವು ದುಷ್ಟ ನೀತಿಗಳಿಂದಾಗಿ ಉಂಟಾದ ಘೋರವಾದ ಪರಿಣಾಮಗಳ ಕುರಿತಾಗಿ ನಾನು ನಿಮಗೆಲ್ಲ ಬರೆಯುವ ಅವಶ್ಯಕತೆ ಇಲ್ಲವೆಂದೇ ಭಾವಿಸುತ್ತೇನೆ. ಇದರ ಕುರಿತಾಗಿ ನಮಗೆಲ್ಲ ಮಾಹಿತಿ ಇದೆ ಮತ್ತು ಅದರಿಂದುಂಟಾದ ಪರಿಣಾಮಗಳು ನಮಗೆಲ್ಲ ಗೊತ್ತಿದೆ. ಈ ದುಷ್ಟ ನೀತಿಗಳಿಂದ ಉಂಟಾದ
ಪರಿಣಾಮಗಳು ಸಂಪೂರ್ಣವಾಗಿ ಕೊನೆಯಾಗದೆ ಇನ್ನೂ ಸಶಕ್ತವಾಗಿವೆ ಮತ್ತು ಈ ಕಾರಣಕ್ಕಾಗಿ ನಾವೆಲ್ಲ ಇನ್ನು ಮುಂದೆಯೂ ಜಾಗರೂಕರಾಗಿ ಇರಬೇಕಾಗುತ್ತದೆ. ಈಗ ಇಲ್ಲಿ ಒಂದು ಬಗೆಯ ಅಪಾಯ ಮತ್ತು ಆತಂಕದ ವಾತಾವರಣವಿದೆ ಮತ್ತು ನಾವು ವಿಶ್ರಮಿಸಿಕೊಳ್ಳಲು ಸಾಧ್ಯವಿಲ್ಲ.

ಕೆಲ ಜನರು ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ. ಇಂತಹ ಮಾತುಕತೆಗಳನ್ನು ನಾವು ಪುರಸ್ಕರಿಸಬಾರದು. ಆದರೆ ಅಪಾಯಕಾರಿಯಾದ ಸಾಧ್ಯತೆಗಳನ್ನು ಒಳಗೊಂಡಿರುವ ಪ್ರಸ್ತುತ ಸಂದರ್ಭದಲ್ಲಿ ನಾವು ಆಕಸ್ಮಿಕ ಘಟನೆಗಳಿಗೆ ತಯಾರಾಗಿರಬೇಕಾಗಿದೆ ಮತ್ತು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ.

ಇಲ್ಲಿ ನಮಗೆ ಒಳಗಿನಿಂದಾಗಲಿ ಅಥವ ಹೊರಗಿನಿಂದ ಉಂಟಾಗುವ ಅಪಾಯಗಳ ಸಾಧ್ಯತೆ ಕಡಿಮೆ ಮಟ್ಟದಲ್ಲಿದೆ. ಆದರೆ ನಮ್ಮೊಳಗಿನ ಕೋಮುವಾದಿ ಸಂಘಟನೆಗಳು ಮತ್ತು ಪ್ರತಿಗಾಮಿ ಶಕ್ತಿಗಳು ಸ್ವತಂತ್ರ ಇಂಡಿಯಾದ ಭಾವೈಕ್ಯತೆಯನ್ನು ಒಡೆಯಲು ಪ್ರಯತ್ನಿಸುತ್ತಿವೆ. ಆದರೆ ಈ ನಾಶವೇನಾದರು ಸಂಭವಿಸಿದರೆ ಅದರಿಂದುಂಟಾಗುವ ಕ್ರಿಯೆ ಪ್ರತಿಕ್ರಿಯೆಗಳಲ್ಲಿ ನಾವೆಲ್ಲರೂ ಕೊಚ್ಚಿಹೋಗುತ್ತೇವೆಂದು ಈ ಕೋಮುವಾದಿ ಸಂಘಟನೆಗಳಿಗೆ ಅರಿವಿಲ್ಲ. ಆದರೂ ಈ ನಾಶವು ಸಂಭವಿಸುವುದಿಲ್ಲ ಮತ್ತು ನಾವು ಸಧೃಡವಾಗಿ ಮತ್ತು ಪರಿಪೂರ್ಣವಾಗಿ ಈ ಪ್ರತಿಗಾಮಿ ಶಕ್ತಿಗಳೊಂದಿಗೆ ಮುಖಾಮುಖಿಯಾಗಬೇಕಾಗಿದೆ.
– 22, ನವೆಂಬರ್, 1947


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...