Homeಮುಖಪುಟಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ ಎಂದು ನೆಹರು ಮನಗಂಡಿದ್ದರು..

- Advertisement -
- Advertisement -

| ಸಂಗ್ರಹ ಮತ್ತು ಅನುವಾದ: ಬಿ.ಶ್ರೀಪಾದ್ ಭಟ್ |

2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕ್ಷಣದಿಂದ ಇಂಡಿಯಾ ದೇಶ ಹಿಂದುತ್ವ ಮೂಲಭೂತವಾದಿಗಳ ದೌರ್ಜನ್ಯದಿಂದ ನಲಗುತ್ತಿದೆ. ಹಿಂದೂ ಧರ್ಮದಲ್ಲಿ ಜಾತೀಯತೆಯ ಕ್ರೌರ್ಯದಿಂದ ಉಸಿರುಗಟ್ಟುತ್ತಿದ್ದರೂ ಅಲ್ಲೇ ಸಾಯಬೇಕೇ ಹೊರತು ಯಾವುದೇ ಮತಕ್ಕೆ ಹೋಗುವಂತಿಲ್ಲ, ಬೇರೆ ಧರ್ಮದವರು ಸಾರ್ವಜನಿಕವಾಗಿ ಬದುಕುವಂತಿಲ್ಲ, ದನ ತಿನ್ನುವಂತಿಲ್ಲ, ಮಹಿಳೆ ಮಂಗಳಸೂತ್ರ, ಕಾಲುಂಗರ ಧರಿಸಲೇಬೇಕು.

ಹೀಗೆ ಸಂಘ ಪರಿವಾರದ ಎಣೆಯಿಲ್ಲದಷ್ಟು ಹಿಂದೂಯಿಸಂನ ಮತೀಯ ಮೂಲಭೂತವಾದ ಇಂದು ಪ್ರಜ್ಞಾವಂತರನ್ನು ಉಸಿರುಗಟ್ಟಿಸುತ್ತಿದೆ. ಸಂಘ ಪರಿವಾರದ ಈ ಪ್ರಜಾಪ್ರಭುತ್ವ ವಿರೋಧಿ ಫೆನಟಿಸಂ ಅನ್ನು ಆಗಿನ ಪ್ರಧಾನಿ ನೆಹರೂ ಅವರು ನಲವತ್ತರ ದಶಕದಲ್ಲೇ ಮನಗಂಡಿದ್ದರು. ಆರೆಸ್ಸೆಸ್ ಅನ್ನು ಒಂದು ಅಪಾಯಕಾರಿ ಸೀಕ್ರೆಟ್ ಸೊಸೈಟಿ ಎಂದು ಎಚ್ಚರಿಸಿದ್ದರು. ಈ ಕೋಮುವಾದಿ ದುಷ್ಟ ಶಕ್ತಿಗಳು ದೇಶಕ್ಕೆ ಸದಾ ಕಂಟಕಪ್ರಾಯರಾಗಿರುತ್ತಾರೆ ಎಂದು ನಿರ್ದಾಕ್ಷಿಣ್ಯವಾಗಿ ಬರೆದಿದ್ದರು. ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲಾ ಮುಖ್ಯಮಂತ್ರಿಗಳಿಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ತಪ್ಪದೆ ನಿಯಮಿತವಾಗಿ ಪತ್ರ ಬರೆಯುತ್ತಿದ್ದರು. ಅವುಗಳಲ್ಲಿ ಆಯ್ದ ಕೋಮುವಾದಕ್ಕೆ ಸಂಬಂಧಿಸಿದ ಕೆಲವು ಪತ್ರಗಳನ್ನು ಇಲ್ಲಿ ಅನುವಾದಿಸಲಾಗಿದೆ.

ಪತ್ರ 1

ಕೇಂದ್ರ ಅಥವಾ ಪ್ರಾದೇಶಿಕ ಯಾವುದೇ ಸರ್ಕಾರವಾಗಿರಲಿ ಒಂದು ಸರ್ಕಾರವಾಗಿ ನಾವು ಯಾವುದೇ ಗುಂಪು ಅಥವ ಪಕ್ಷದ ಪರವಾಗಿ ಪಕ್ಷಪಾತಿಯಾಗಿ ವರ್ತಿಸಬಾರದು. ಒಂದು ಸರ್ಕಾರವಾಗಿ ನಾವು ಕೇವಲ ಕೆಲವೇ ಜನರ ಗುಂಪು ಮಾತ್ರ ಎಂದು ಪರಿಗಣಿಸಬಾರದು ಏಕೆಂದರೆ ನಮಗೆ ಆದರ್ಶಗಳಿವೆ, ಸಿದ್ಧಾಂತಗಳಿವೆ. ಯಾವುದೇ ವ್ಯಕ್ತಿ ಅಥವಾ ಗುಂಪು ಆ ಅದರ್ಶಗಳನ್ನು,
ಸಿದ್ಧಾಂತಗಳನ್ನು ವಿರೋಧಿಸಿದರೆ ನಮ್ಮ ಸಂಪೂರ್ಣ ಸಾಮಥ್ರ್ಯ ಬಲದಿಂದ ನಾವು ಆ ಸವಾಲನ್ನು ಸ್ವೀಕರಿಸಬೇಕು ಮತ್ತು ಅದನ್ನು ಸ್ವೀಕರಿಸಲು ಪ್ರಸ್ತಾವಿಸುತ್ತೇವೆ.

ಕಳೆದ ಕೆಲವು ವರ್ಷಗಳಿಂದ ಮುಸ್ಲಿಂ ಲೀಗ್ ಮತ್ತು ಪಾಕಿಸ್ತಾನ ದೇಶವು ಪ್ರಾರಂಭಿಸಿದ ಕೆಲವು ದುಷ್ಟ ನೀತಿಗಳಿಂದಾಗಿ ಉಂಟಾದ ಘೋರವಾದ ಪರಿಣಾಮಗಳ ಕುರಿತಾಗಿ ನಾನು ನಿಮಗೆಲ್ಲ ಬರೆಯುವ ಅವಶ್ಯಕತೆ ಇಲ್ಲವೆಂದೇ ಭಾವಿಸುತ್ತೇನೆ. ಇದರ ಕುರಿತಾಗಿ ನಮಗೆಲ್ಲ ಮಾಹಿತಿ ಇದೆ ಮತ್ತು ಅದರಿಂದುಂಟಾದ ಪರಿಣಾಮಗಳು ನಮಗೆಲ್ಲ ಗೊತ್ತಿದೆ. ಈ ದುಷ್ಟ ನೀತಿಗಳಿಂದ ಉಂಟಾದ
ಪರಿಣಾಮಗಳು ಸಂಪೂರ್ಣವಾಗಿ ಕೊನೆಯಾಗದೆ ಇನ್ನೂ ಸಶಕ್ತವಾಗಿವೆ ಮತ್ತು ಈ ಕಾರಣಕ್ಕಾಗಿ ನಾವೆಲ್ಲ ಇನ್ನು ಮುಂದೆಯೂ ಜಾಗರೂಕರಾಗಿ ಇರಬೇಕಾಗುತ್ತದೆ. ಈಗ ಇಲ್ಲಿ ಒಂದು ಬಗೆಯ ಅಪಾಯ ಮತ್ತು ಆತಂಕದ ವಾತಾವರಣವಿದೆ ಮತ್ತು ನಾವು ವಿಶ್ರಮಿಸಿಕೊಳ್ಳಲು ಸಾಧ್ಯವಿಲ್ಲ.

ಕೆಲ ಜನರು ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ. ಇಂತಹ ಮಾತುಕತೆಗಳನ್ನು ನಾವು ಪುರಸ್ಕರಿಸಬಾರದು. ಆದರೆ ಅಪಾಯಕಾರಿಯಾದ ಸಾಧ್ಯತೆಗಳನ್ನು ಒಳಗೊಂಡಿರುವ ಪ್ರಸ್ತುತ ಸಂದರ್ಭದಲ್ಲಿ ನಾವು ಆಕಸ್ಮಿಕ ಘಟನೆಗಳಿಗೆ ತಯಾರಾಗಿರಬೇಕಾಗಿದೆ ಮತ್ತು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ.

ಇಲ್ಲಿ ನಮಗೆ ಒಳಗಿನಿಂದಾಗಲಿ ಅಥವ ಹೊರಗಿನಿಂದ ಉಂಟಾಗುವ ಅಪಾಯಗಳ ಸಾಧ್ಯತೆ ಕಡಿಮೆ ಮಟ್ಟದಲ್ಲಿದೆ. ಆದರೆ ನಮ್ಮೊಳಗಿನ ಕೋಮುವಾದಿ ಸಂಘಟನೆಗಳು ಮತ್ತು ಪ್ರತಿಗಾಮಿ ಶಕ್ತಿಗಳು ಸ್ವತಂತ್ರ ಇಂಡಿಯಾದ ಭಾವೈಕ್ಯತೆಯನ್ನು ಒಡೆಯಲು ಪ್ರಯತ್ನಿಸುತ್ತಿವೆ. ಆದರೆ ಈ ನಾಶವೇನಾದರು ಸಂಭವಿಸಿದರೆ ಅದರಿಂದುಂಟಾಗುವ ಕ್ರಿಯೆ ಪ್ರತಿಕ್ರಿಯೆಗಳಲ್ಲಿ ನಾವೆಲ್ಲರೂ ಕೊಚ್ಚಿಹೋಗುತ್ತೇವೆಂದು ಈ ಕೋಮುವಾದಿ ಸಂಘಟನೆಗಳಿಗೆ ಅರಿವಿಲ್ಲ. ಆದರೂ ಈ ನಾಶವು ಸಂಭವಿಸುವುದಿಲ್ಲ ಮತ್ತು ನಾವು ಸಧೃಡವಾಗಿ ಮತ್ತು ಪರಿಪೂರ್ಣವಾಗಿ ಈ ಪ್ರತಿಗಾಮಿ ಶಕ್ತಿಗಳೊಂದಿಗೆ ಮುಖಾಮುಖಿಯಾಗಬೇಕಾಗಿದೆ.
– 22, ನವೆಂಬರ್, 1947


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...