Homeಮುಖಪುಟಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ ಎಂದು ನೆಹರು ಮನಗಂಡಿದ್ದರು..

- Advertisement -
- Advertisement -

| ಸಂಗ್ರಹ ಮತ್ತು ಅನುವಾದ: ಬಿ.ಶ್ರೀಪಾದ್ ಭಟ್ |

2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕ್ಷಣದಿಂದ ಇಂಡಿಯಾ ದೇಶ ಹಿಂದುತ್ವ ಮೂಲಭೂತವಾದಿಗಳ ದೌರ್ಜನ್ಯದಿಂದ ನಲಗುತ್ತಿದೆ. ಹಿಂದೂ ಧರ್ಮದಲ್ಲಿ ಜಾತೀಯತೆಯ ಕ್ರೌರ್ಯದಿಂದ ಉಸಿರುಗಟ್ಟುತ್ತಿದ್ದರೂ ಅಲ್ಲೇ ಸಾಯಬೇಕೇ ಹೊರತು ಯಾವುದೇ ಮತಕ್ಕೆ ಹೋಗುವಂತಿಲ್ಲ, ಬೇರೆ ಧರ್ಮದವರು ಸಾರ್ವಜನಿಕವಾಗಿ ಬದುಕುವಂತಿಲ್ಲ, ದನ ತಿನ್ನುವಂತಿಲ್ಲ, ಮಹಿಳೆ ಮಂಗಳಸೂತ್ರ, ಕಾಲುಂಗರ ಧರಿಸಲೇಬೇಕು.

ಹೀಗೆ ಸಂಘ ಪರಿವಾರದ ಎಣೆಯಿಲ್ಲದಷ್ಟು ಹಿಂದೂಯಿಸಂನ ಮತೀಯ ಮೂಲಭೂತವಾದ ಇಂದು ಪ್ರಜ್ಞಾವಂತರನ್ನು ಉಸಿರುಗಟ್ಟಿಸುತ್ತಿದೆ. ಸಂಘ ಪರಿವಾರದ ಈ ಪ್ರಜಾಪ್ರಭುತ್ವ ವಿರೋಧಿ ಫೆನಟಿಸಂ ಅನ್ನು ಆಗಿನ ಪ್ರಧಾನಿ ನೆಹರೂ ಅವರು ನಲವತ್ತರ ದಶಕದಲ್ಲೇ ಮನಗಂಡಿದ್ದರು. ಆರೆಸ್ಸೆಸ್ ಅನ್ನು ಒಂದು ಅಪಾಯಕಾರಿ ಸೀಕ್ರೆಟ್ ಸೊಸೈಟಿ ಎಂದು ಎಚ್ಚರಿಸಿದ್ದರು. ಈ ಕೋಮುವಾದಿ ದುಷ್ಟ ಶಕ್ತಿಗಳು ದೇಶಕ್ಕೆ ಸದಾ ಕಂಟಕಪ್ರಾಯರಾಗಿರುತ್ತಾರೆ ಎಂದು ನಿರ್ದಾಕ್ಷಿಣ್ಯವಾಗಿ ಬರೆದಿದ್ದರು. ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲಾ ಮುಖ್ಯಮಂತ್ರಿಗಳಿಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ತಪ್ಪದೆ ನಿಯಮಿತವಾಗಿ ಪತ್ರ ಬರೆಯುತ್ತಿದ್ದರು. ಅವುಗಳಲ್ಲಿ ಆಯ್ದ ಕೋಮುವಾದಕ್ಕೆ ಸಂಬಂಧಿಸಿದ ಕೆಲವು ಪತ್ರಗಳನ್ನು ಇಲ್ಲಿ ಅನುವಾದಿಸಲಾಗಿದೆ.

ಪತ್ರ 1

ಕೇಂದ್ರ ಅಥವಾ ಪ್ರಾದೇಶಿಕ ಯಾವುದೇ ಸರ್ಕಾರವಾಗಿರಲಿ ಒಂದು ಸರ್ಕಾರವಾಗಿ ನಾವು ಯಾವುದೇ ಗುಂಪು ಅಥವ ಪಕ್ಷದ ಪರವಾಗಿ ಪಕ್ಷಪಾತಿಯಾಗಿ ವರ್ತಿಸಬಾರದು. ಒಂದು ಸರ್ಕಾರವಾಗಿ ನಾವು ಕೇವಲ ಕೆಲವೇ ಜನರ ಗುಂಪು ಮಾತ್ರ ಎಂದು ಪರಿಗಣಿಸಬಾರದು ಏಕೆಂದರೆ ನಮಗೆ ಆದರ್ಶಗಳಿವೆ, ಸಿದ್ಧಾಂತಗಳಿವೆ. ಯಾವುದೇ ವ್ಯಕ್ತಿ ಅಥವಾ ಗುಂಪು ಆ ಅದರ್ಶಗಳನ್ನು,
ಸಿದ್ಧಾಂತಗಳನ್ನು ವಿರೋಧಿಸಿದರೆ ನಮ್ಮ ಸಂಪೂರ್ಣ ಸಾಮಥ್ರ್ಯ ಬಲದಿಂದ ನಾವು ಆ ಸವಾಲನ್ನು ಸ್ವೀಕರಿಸಬೇಕು ಮತ್ತು ಅದನ್ನು ಸ್ವೀಕರಿಸಲು ಪ್ರಸ್ತಾವಿಸುತ್ತೇವೆ.

ಕಳೆದ ಕೆಲವು ವರ್ಷಗಳಿಂದ ಮುಸ್ಲಿಂ ಲೀಗ್ ಮತ್ತು ಪಾಕಿಸ್ತಾನ ದೇಶವು ಪ್ರಾರಂಭಿಸಿದ ಕೆಲವು ದುಷ್ಟ ನೀತಿಗಳಿಂದಾಗಿ ಉಂಟಾದ ಘೋರವಾದ ಪರಿಣಾಮಗಳ ಕುರಿತಾಗಿ ನಾನು ನಿಮಗೆಲ್ಲ ಬರೆಯುವ ಅವಶ್ಯಕತೆ ಇಲ್ಲವೆಂದೇ ಭಾವಿಸುತ್ತೇನೆ. ಇದರ ಕುರಿತಾಗಿ ನಮಗೆಲ್ಲ ಮಾಹಿತಿ ಇದೆ ಮತ್ತು ಅದರಿಂದುಂಟಾದ ಪರಿಣಾಮಗಳು ನಮಗೆಲ್ಲ ಗೊತ್ತಿದೆ. ಈ ದುಷ್ಟ ನೀತಿಗಳಿಂದ ಉಂಟಾದ
ಪರಿಣಾಮಗಳು ಸಂಪೂರ್ಣವಾಗಿ ಕೊನೆಯಾಗದೆ ಇನ್ನೂ ಸಶಕ್ತವಾಗಿವೆ ಮತ್ತು ಈ ಕಾರಣಕ್ಕಾಗಿ ನಾವೆಲ್ಲ ಇನ್ನು ಮುಂದೆಯೂ ಜಾಗರೂಕರಾಗಿ ಇರಬೇಕಾಗುತ್ತದೆ. ಈಗ ಇಲ್ಲಿ ಒಂದು ಬಗೆಯ ಅಪಾಯ ಮತ್ತು ಆತಂಕದ ವಾತಾವರಣವಿದೆ ಮತ್ತು ನಾವು ವಿಶ್ರಮಿಸಿಕೊಳ್ಳಲು ಸಾಧ್ಯವಿಲ್ಲ.

ಕೆಲ ಜನರು ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ. ಇಂತಹ ಮಾತುಕತೆಗಳನ್ನು ನಾವು ಪುರಸ್ಕರಿಸಬಾರದು. ಆದರೆ ಅಪಾಯಕಾರಿಯಾದ ಸಾಧ್ಯತೆಗಳನ್ನು ಒಳಗೊಂಡಿರುವ ಪ್ರಸ್ತುತ ಸಂದರ್ಭದಲ್ಲಿ ನಾವು ಆಕಸ್ಮಿಕ ಘಟನೆಗಳಿಗೆ ತಯಾರಾಗಿರಬೇಕಾಗಿದೆ ಮತ್ತು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ.

ಇಲ್ಲಿ ನಮಗೆ ಒಳಗಿನಿಂದಾಗಲಿ ಅಥವ ಹೊರಗಿನಿಂದ ಉಂಟಾಗುವ ಅಪಾಯಗಳ ಸಾಧ್ಯತೆ ಕಡಿಮೆ ಮಟ್ಟದಲ್ಲಿದೆ. ಆದರೆ ನಮ್ಮೊಳಗಿನ ಕೋಮುವಾದಿ ಸಂಘಟನೆಗಳು ಮತ್ತು ಪ್ರತಿಗಾಮಿ ಶಕ್ತಿಗಳು ಸ್ವತಂತ್ರ ಇಂಡಿಯಾದ ಭಾವೈಕ್ಯತೆಯನ್ನು ಒಡೆಯಲು ಪ್ರಯತ್ನಿಸುತ್ತಿವೆ. ಆದರೆ ಈ ನಾಶವೇನಾದರು ಸಂಭವಿಸಿದರೆ ಅದರಿಂದುಂಟಾಗುವ ಕ್ರಿಯೆ ಪ್ರತಿಕ್ರಿಯೆಗಳಲ್ಲಿ ನಾವೆಲ್ಲರೂ ಕೊಚ್ಚಿಹೋಗುತ್ತೇವೆಂದು ಈ ಕೋಮುವಾದಿ ಸಂಘಟನೆಗಳಿಗೆ ಅರಿವಿಲ್ಲ. ಆದರೂ ಈ ನಾಶವು ಸಂಭವಿಸುವುದಿಲ್ಲ ಮತ್ತು ನಾವು ಸಧೃಡವಾಗಿ ಮತ್ತು ಪರಿಪೂರ್ಣವಾಗಿ ಈ ಪ್ರತಿಗಾಮಿ ಶಕ್ತಿಗಳೊಂದಿಗೆ ಮುಖಾಮುಖಿಯಾಗಬೇಕಾಗಿದೆ.
– 22, ನವೆಂಬರ್, 1947


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...