Homeಮುಖಪುಟಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ ಎಂದು ನೆಹರು ಮನಗಂಡಿದ್ದರು..

- Advertisement -
- Advertisement -

| ಸಂಗ್ರಹ ಮತ್ತು ಅನುವಾದ: ಬಿ.ಶ್ರೀಪಾದ್ ಭಟ್ |

2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕ್ಷಣದಿಂದ ಇಂಡಿಯಾ ದೇಶ ಹಿಂದುತ್ವ ಮೂಲಭೂತವಾದಿಗಳ ದೌರ್ಜನ್ಯದಿಂದ ನಲಗುತ್ತಿದೆ. ಹಿಂದೂ ಧರ್ಮದಲ್ಲಿ ಜಾತೀಯತೆಯ ಕ್ರೌರ್ಯದಿಂದ ಉಸಿರುಗಟ್ಟುತ್ತಿದ್ದರೂ ಅಲ್ಲೇ ಸಾಯಬೇಕೇ ಹೊರತು ಯಾವುದೇ ಮತಕ್ಕೆ ಹೋಗುವಂತಿಲ್ಲ, ಬೇರೆ ಧರ್ಮದವರು ಸಾರ್ವಜನಿಕವಾಗಿ ಬದುಕುವಂತಿಲ್ಲ, ದನ ತಿನ್ನುವಂತಿಲ್ಲ, ಮಹಿಳೆ ಮಂಗಳಸೂತ್ರ, ಕಾಲುಂಗರ ಧರಿಸಲೇಬೇಕು.

ಹೀಗೆ ಸಂಘ ಪರಿವಾರದ ಎಣೆಯಿಲ್ಲದಷ್ಟು ಹಿಂದೂಯಿಸಂನ ಮತೀಯ ಮೂಲಭೂತವಾದ ಇಂದು ಪ್ರಜ್ಞಾವಂತರನ್ನು ಉಸಿರುಗಟ್ಟಿಸುತ್ತಿದೆ. ಸಂಘ ಪರಿವಾರದ ಈ ಪ್ರಜಾಪ್ರಭುತ್ವ ವಿರೋಧಿ ಫೆನಟಿಸಂ ಅನ್ನು ಆಗಿನ ಪ್ರಧಾನಿ ನೆಹರೂ ಅವರು ನಲವತ್ತರ ದಶಕದಲ್ಲೇ ಮನಗಂಡಿದ್ದರು. ಆರೆಸ್ಸೆಸ್ ಅನ್ನು ಒಂದು ಅಪಾಯಕಾರಿ ಸೀಕ್ರೆಟ್ ಸೊಸೈಟಿ ಎಂದು ಎಚ್ಚರಿಸಿದ್ದರು. ಈ ಕೋಮುವಾದಿ ದುಷ್ಟ ಶಕ್ತಿಗಳು ದೇಶಕ್ಕೆ ಸದಾ ಕಂಟಕಪ್ರಾಯರಾಗಿರುತ್ತಾರೆ ಎಂದು ನಿರ್ದಾಕ್ಷಿಣ್ಯವಾಗಿ ಬರೆದಿದ್ದರು. ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲಾ ಮುಖ್ಯಮಂತ್ರಿಗಳಿಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ತಪ್ಪದೆ ನಿಯಮಿತವಾಗಿ ಪತ್ರ ಬರೆಯುತ್ತಿದ್ದರು. ಅವುಗಳಲ್ಲಿ ಆಯ್ದ ಕೋಮುವಾದಕ್ಕೆ ಸಂಬಂಧಿಸಿದ ಕೆಲವು ಪತ್ರಗಳನ್ನು ಇಲ್ಲಿ ಅನುವಾದಿಸಲಾಗಿದೆ.

ಪತ್ರ 1

ಕೇಂದ್ರ ಅಥವಾ ಪ್ರಾದೇಶಿಕ ಯಾವುದೇ ಸರ್ಕಾರವಾಗಿರಲಿ ಒಂದು ಸರ್ಕಾರವಾಗಿ ನಾವು ಯಾವುದೇ ಗುಂಪು ಅಥವ ಪಕ್ಷದ ಪರವಾಗಿ ಪಕ್ಷಪಾತಿಯಾಗಿ ವರ್ತಿಸಬಾರದು. ಒಂದು ಸರ್ಕಾರವಾಗಿ ನಾವು ಕೇವಲ ಕೆಲವೇ ಜನರ ಗುಂಪು ಮಾತ್ರ ಎಂದು ಪರಿಗಣಿಸಬಾರದು ಏಕೆಂದರೆ ನಮಗೆ ಆದರ್ಶಗಳಿವೆ, ಸಿದ್ಧಾಂತಗಳಿವೆ. ಯಾವುದೇ ವ್ಯಕ್ತಿ ಅಥವಾ ಗುಂಪು ಆ ಅದರ್ಶಗಳನ್ನು,
ಸಿದ್ಧಾಂತಗಳನ್ನು ವಿರೋಧಿಸಿದರೆ ನಮ್ಮ ಸಂಪೂರ್ಣ ಸಾಮಥ್ರ್ಯ ಬಲದಿಂದ ನಾವು ಆ ಸವಾಲನ್ನು ಸ್ವೀಕರಿಸಬೇಕು ಮತ್ತು ಅದನ್ನು ಸ್ವೀಕರಿಸಲು ಪ್ರಸ್ತಾವಿಸುತ್ತೇವೆ.

ಕಳೆದ ಕೆಲವು ವರ್ಷಗಳಿಂದ ಮುಸ್ಲಿಂ ಲೀಗ್ ಮತ್ತು ಪಾಕಿಸ್ತಾನ ದೇಶವು ಪ್ರಾರಂಭಿಸಿದ ಕೆಲವು ದುಷ್ಟ ನೀತಿಗಳಿಂದಾಗಿ ಉಂಟಾದ ಘೋರವಾದ ಪರಿಣಾಮಗಳ ಕುರಿತಾಗಿ ನಾನು ನಿಮಗೆಲ್ಲ ಬರೆಯುವ ಅವಶ್ಯಕತೆ ಇಲ್ಲವೆಂದೇ ಭಾವಿಸುತ್ತೇನೆ. ಇದರ ಕುರಿತಾಗಿ ನಮಗೆಲ್ಲ ಮಾಹಿತಿ ಇದೆ ಮತ್ತು ಅದರಿಂದುಂಟಾದ ಪರಿಣಾಮಗಳು ನಮಗೆಲ್ಲ ಗೊತ್ತಿದೆ. ಈ ದುಷ್ಟ ನೀತಿಗಳಿಂದ ಉಂಟಾದ
ಪರಿಣಾಮಗಳು ಸಂಪೂರ್ಣವಾಗಿ ಕೊನೆಯಾಗದೆ ಇನ್ನೂ ಸಶಕ್ತವಾಗಿವೆ ಮತ್ತು ಈ ಕಾರಣಕ್ಕಾಗಿ ನಾವೆಲ್ಲ ಇನ್ನು ಮುಂದೆಯೂ ಜಾಗರೂಕರಾಗಿ ಇರಬೇಕಾಗುತ್ತದೆ. ಈಗ ಇಲ್ಲಿ ಒಂದು ಬಗೆಯ ಅಪಾಯ ಮತ್ತು ಆತಂಕದ ವಾತಾವರಣವಿದೆ ಮತ್ತು ನಾವು ವಿಶ್ರಮಿಸಿಕೊಳ್ಳಲು ಸಾಧ್ಯವಿಲ್ಲ.

ಕೆಲ ಜನರು ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ. ಇಂತಹ ಮಾತುಕತೆಗಳನ್ನು ನಾವು ಪುರಸ್ಕರಿಸಬಾರದು. ಆದರೆ ಅಪಾಯಕಾರಿಯಾದ ಸಾಧ್ಯತೆಗಳನ್ನು ಒಳಗೊಂಡಿರುವ ಪ್ರಸ್ತುತ ಸಂದರ್ಭದಲ್ಲಿ ನಾವು ಆಕಸ್ಮಿಕ ಘಟನೆಗಳಿಗೆ ತಯಾರಾಗಿರಬೇಕಾಗಿದೆ ಮತ್ತು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ.

ಇಲ್ಲಿ ನಮಗೆ ಒಳಗಿನಿಂದಾಗಲಿ ಅಥವ ಹೊರಗಿನಿಂದ ಉಂಟಾಗುವ ಅಪಾಯಗಳ ಸಾಧ್ಯತೆ ಕಡಿಮೆ ಮಟ್ಟದಲ್ಲಿದೆ. ಆದರೆ ನಮ್ಮೊಳಗಿನ ಕೋಮುವಾದಿ ಸಂಘಟನೆಗಳು ಮತ್ತು ಪ್ರತಿಗಾಮಿ ಶಕ್ತಿಗಳು ಸ್ವತಂತ್ರ ಇಂಡಿಯಾದ ಭಾವೈಕ್ಯತೆಯನ್ನು ಒಡೆಯಲು ಪ್ರಯತ್ನಿಸುತ್ತಿವೆ. ಆದರೆ ಈ ನಾಶವೇನಾದರು ಸಂಭವಿಸಿದರೆ ಅದರಿಂದುಂಟಾಗುವ ಕ್ರಿಯೆ ಪ್ರತಿಕ್ರಿಯೆಗಳಲ್ಲಿ ನಾವೆಲ್ಲರೂ ಕೊಚ್ಚಿಹೋಗುತ್ತೇವೆಂದು ಈ ಕೋಮುವಾದಿ ಸಂಘಟನೆಗಳಿಗೆ ಅರಿವಿಲ್ಲ. ಆದರೂ ಈ ನಾಶವು ಸಂಭವಿಸುವುದಿಲ್ಲ ಮತ್ತು ನಾವು ಸಧೃಡವಾಗಿ ಮತ್ತು ಪರಿಪೂರ್ಣವಾಗಿ ಈ ಪ್ರತಿಗಾಮಿ ಶಕ್ತಿಗಳೊಂದಿಗೆ ಮುಖಾಮುಖಿಯಾಗಬೇಕಾಗಿದೆ.
– 22, ನವೆಂಬರ್, 1947


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...