Homeಮುಖಪುಟಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ ಎಂದು ನೆಹರು ಮನಗಂಡಿದ್ದರು..

- Advertisement -
- Advertisement -

| ಸಂಗ್ರಹ ಮತ್ತು ಅನುವಾದ: ಬಿ.ಶ್ರೀಪಾದ್ ಭಟ್ |

2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕ್ಷಣದಿಂದ ಇಂಡಿಯಾ ದೇಶ ಹಿಂದುತ್ವ ಮೂಲಭೂತವಾದಿಗಳ ದೌರ್ಜನ್ಯದಿಂದ ನಲಗುತ್ತಿದೆ. ಹಿಂದೂ ಧರ್ಮದಲ್ಲಿ ಜಾತೀಯತೆಯ ಕ್ರೌರ್ಯದಿಂದ ಉಸಿರುಗಟ್ಟುತ್ತಿದ್ದರೂ ಅಲ್ಲೇ ಸಾಯಬೇಕೇ ಹೊರತು ಯಾವುದೇ ಮತಕ್ಕೆ ಹೋಗುವಂತಿಲ್ಲ, ಬೇರೆ ಧರ್ಮದವರು ಸಾರ್ವಜನಿಕವಾಗಿ ಬದುಕುವಂತಿಲ್ಲ, ದನ ತಿನ್ನುವಂತಿಲ್ಲ, ಮಹಿಳೆ ಮಂಗಳಸೂತ್ರ, ಕಾಲುಂಗರ ಧರಿಸಲೇಬೇಕು.

ಹೀಗೆ ಸಂಘ ಪರಿವಾರದ ಎಣೆಯಿಲ್ಲದಷ್ಟು ಹಿಂದೂಯಿಸಂನ ಮತೀಯ ಮೂಲಭೂತವಾದ ಇಂದು ಪ್ರಜ್ಞಾವಂತರನ್ನು ಉಸಿರುಗಟ್ಟಿಸುತ್ತಿದೆ. ಸಂಘ ಪರಿವಾರದ ಈ ಪ್ರಜಾಪ್ರಭುತ್ವ ವಿರೋಧಿ ಫೆನಟಿಸಂ ಅನ್ನು ಆಗಿನ ಪ್ರಧಾನಿ ನೆಹರೂ ಅವರು ನಲವತ್ತರ ದಶಕದಲ್ಲೇ ಮನಗಂಡಿದ್ದರು. ಆರೆಸ್ಸೆಸ್ ಅನ್ನು ಒಂದು ಅಪಾಯಕಾರಿ ಸೀಕ್ರೆಟ್ ಸೊಸೈಟಿ ಎಂದು ಎಚ್ಚರಿಸಿದ್ದರು. ಈ ಕೋಮುವಾದಿ ದುಷ್ಟ ಶಕ್ತಿಗಳು ದೇಶಕ್ಕೆ ಸದಾ ಕಂಟಕಪ್ರಾಯರಾಗಿರುತ್ತಾರೆ ಎಂದು ನಿರ್ದಾಕ್ಷಿಣ್ಯವಾಗಿ ಬರೆದಿದ್ದರು. ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲಾ ಮುಖ್ಯಮಂತ್ರಿಗಳಿಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ತಪ್ಪದೆ ನಿಯಮಿತವಾಗಿ ಪತ್ರ ಬರೆಯುತ್ತಿದ್ದರು. ಅವುಗಳಲ್ಲಿ ಆಯ್ದ ಕೋಮುವಾದಕ್ಕೆ ಸಂಬಂಧಿಸಿದ ಕೆಲವು ಪತ್ರಗಳನ್ನು ಇಲ್ಲಿ ಅನುವಾದಿಸಲಾಗಿದೆ.

ಪತ್ರ 1

ಕೇಂದ್ರ ಅಥವಾ ಪ್ರಾದೇಶಿಕ ಯಾವುದೇ ಸರ್ಕಾರವಾಗಿರಲಿ ಒಂದು ಸರ್ಕಾರವಾಗಿ ನಾವು ಯಾವುದೇ ಗುಂಪು ಅಥವ ಪಕ್ಷದ ಪರವಾಗಿ ಪಕ್ಷಪಾತಿಯಾಗಿ ವರ್ತಿಸಬಾರದು. ಒಂದು ಸರ್ಕಾರವಾಗಿ ನಾವು ಕೇವಲ ಕೆಲವೇ ಜನರ ಗುಂಪು ಮಾತ್ರ ಎಂದು ಪರಿಗಣಿಸಬಾರದು ಏಕೆಂದರೆ ನಮಗೆ ಆದರ್ಶಗಳಿವೆ, ಸಿದ್ಧಾಂತಗಳಿವೆ. ಯಾವುದೇ ವ್ಯಕ್ತಿ ಅಥವಾ ಗುಂಪು ಆ ಅದರ್ಶಗಳನ್ನು,
ಸಿದ್ಧಾಂತಗಳನ್ನು ವಿರೋಧಿಸಿದರೆ ನಮ್ಮ ಸಂಪೂರ್ಣ ಸಾಮಥ್ರ್ಯ ಬಲದಿಂದ ನಾವು ಆ ಸವಾಲನ್ನು ಸ್ವೀಕರಿಸಬೇಕು ಮತ್ತು ಅದನ್ನು ಸ್ವೀಕರಿಸಲು ಪ್ರಸ್ತಾವಿಸುತ್ತೇವೆ.

ಕಳೆದ ಕೆಲವು ವರ್ಷಗಳಿಂದ ಮುಸ್ಲಿಂ ಲೀಗ್ ಮತ್ತು ಪಾಕಿಸ್ತಾನ ದೇಶವು ಪ್ರಾರಂಭಿಸಿದ ಕೆಲವು ದುಷ್ಟ ನೀತಿಗಳಿಂದಾಗಿ ಉಂಟಾದ ಘೋರವಾದ ಪರಿಣಾಮಗಳ ಕುರಿತಾಗಿ ನಾನು ನಿಮಗೆಲ್ಲ ಬರೆಯುವ ಅವಶ್ಯಕತೆ ಇಲ್ಲವೆಂದೇ ಭಾವಿಸುತ್ತೇನೆ. ಇದರ ಕುರಿತಾಗಿ ನಮಗೆಲ್ಲ ಮಾಹಿತಿ ಇದೆ ಮತ್ತು ಅದರಿಂದುಂಟಾದ ಪರಿಣಾಮಗಳು ನಮಗೆಲ್ಲ ಗೊತ್ತಿದೆ. ಈ ದುಷ್ಟ ನೀತಿಗಳಿಂದ ಉಂಟಾದ
ಪರಿಣಾಮಗಳು ಸಂಪೂರ್ಣವಾಗಿ ಕೊನೆಯಾಗದೆ ಇನ್ನೂ ಸಶಕ್ತವಾಗಿವೆ ಮತ್ತು ಈ ಕಾರಣಕ್ಕಾಗಿ ನಾವೆಲ್ಲ ಇನ್ನು ಮುಂದೆಯೂ ಜಾಗರೂಕರಾಗಿ ಇರಬೇಕಾಗುತ್ತದೆ. ಈಗ ಇಲ್ಲಿ ಒಂದು ಬಗೆಯ ಅಪಾಯ ಮತ್ತು ಆತಂಕದ ವಾತಾವರಣವಿದೆ ಮತ್ತು ನಾವು ವಿಶ್ರಮಿಸಿಕೊಳ್ಳಲು ಸಾಧ್ಯವಿಲ್ಲ.

ಕೆಲ ಜನರು ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ. ಇಂತಹ ಮಾತುಕತೆಗಳನ್ನು ನಾವು ಪುರಸ್ಕರಿಸಬಾರದು. ಆದರೆ ಅಪಾಯಕಾರಿಯಾದ ಸಾಧ್ಯತೆಗಳನ್ನು ಒಳಗೊಂಡಿರುವ ಪ್ರಸ್ತುತ ಸಂದರ್ಭದಲ್ಲಿ ನಾವು ಆಕಸ್ಮಿಕ ಘಟನೆಗಳಿಗೆ ತಯಾರಾಗಿರಬೇಕಾಗಿದೆ ಮತ್ತು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ.

ಇಲ್ಲಿ ನಮಗೆ ಒಳಗಿನಿಂದಾಗಲಿ ಅಥವ ಹೊರಗಿನಿಂದ ಉಂಟಾಗುವ ಅಪಾಯಗಳ ಸಾಧ್ಯತೆ ಕಡಿಮೆ ಮಟ್ಟದಲ್ಲಿದೆ. ಆದರೆ ನಮ್ಮೊಳಗಿನ ಕೋಮುವಾದಿ ಸಂಘಟನೆಗಳು ಮತ್ತು ಪ್ರತಿಗಾಮಿ ಶಕ್ತಿಗಳು ಸ್ವತಂತ್ರ ಇಂಡಿಯಾದ ಭಾವೈಕ್ಯತೆಯನ್ನು ಒಡೆಯಲು ಪ್ರಯತ್ನಿಸುತ್ತಿವೆ. ಆದರೆ ಈ ನಾಶವೇನಾದರು ಸಂಭವಿಸಿದರೆ ಅದರಿಂದುಂಟಾಗುವ ಕ್ರಿಯೆ ಪ್ರತಿಕ್ರಿಯೆಗಳಲ್ಲಿ ನಾವೆಲ್ಲರೂ ಕೊಚ್ಚಿಹೋಗುತ್ತೇವೆಂದು ಈ ಕೋಮುವಾದಿ ಸಂಘಟನೆಗಳಿಗೆ ಅರಿವಿಲ್ಲ. ಆದರೂ ಈ ನಾಶವು ಸಂಭವಿಸುವುದಿಲ್ಲ ಮತ್ತು ನಾವು ಸಧೃಡವಾಗಿ ಮತ್ತು ಪರಿಪೂರ್ಣವಾಗಿ ಈ ಪ್ರತಿಗಾಮಿ ಶಕ್ತಿಗಳೊಂದಿಗೆ ಮುಖಾಮುಖಿಯಾಗಬೇಕಾಗಿದೆ.
– 22, ನವೆಂಬರ್, 1947


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...