Homeಕರ್ನಾಟಕಯೋಜನೆಗಳ ಜಾರಿಗೆ ನಿಯಮ ಸಡಿಲಿಸಿ - ಕೇಂದ್ರಕ್ಕೆ ರಾಜ್ಯ ಮನವಿ

ಯೋಜನೆಗಳ ಜಾರಿಗೆ ನಿಯಮ ಸಡಿಲಿಸಿ – ಕೇಂದ್ರಕ್ಕೆ ರಾಜ್ಯ ಮನವಿ

- Advertisement -
- Advertisement -

ರಾಜ್ಯದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಜಾರಿಗಾಗಿ ಕೆಲವೊಂದು ಸಡಿಲಿಕೆ ಹಾಗೂ ಮಾರ್ಗಸೂಚಿಗಳಲ್ಲಿ ಮಾರ್ಪಡು ಮಾಡುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಕೇಂದ್ರಕ್ಕೆ ಮನವಿ. ಈ ಬಗ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಯೋಜನೆಗಳ ಜಾರಿಗೆ

ಇದೇ ವೇಳೆ ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದಂತೆ ವಿಷಯಗಳ ಕುರಿತು ಜನವರಿ 3 ರಂದು ಚರ್ಚಿಸಲು ಅನುಕೂಲ ಮಾಡಿಕೊಟ್ಟಿರುವುದಕ್ಕೆ ಸಚಿವ ಖರ್ಗೆ ಅವರು ಚೌಹಾಣ್ ಅವರಿಗೆ ಧನ್ಯವಾದ ತಿಳಿಸಿದ್ದು, ರಾಜ್ಯದಲ್ಲಿ ಕೇಂದ್ರ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ನಿಯಮಾವಳಿಗಳಲ್ಲಿ ಕಲವೊಂದು ಮಾರ್ಪಡು ಮಾಡುವಂತೆ ಕೋರಿದ್ದಾರೆ. ಯೋಜನೆಗಳ ಜಾರಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಹಾತ್ಮಾಗಾಂಧಿ ಗ್ರಾಮೀಣ‌ ಉದ್ಯೋಗ ಖಾತ್ರಿ ಯೋಜನೆಗಳಲ್ಲಿಯೂ ಕೂಡಾ ಕೆಲ ಸಡಿಲಿಕೆಗಳನ್ನು ನೀಡುವಂತೆ ಮನವಿ ಮಾಡಿರುವ ಖರ್ಗೆ, ಹೊಸ ಕೆಲಸಗಳು, ಅಂಗನವಾಡಿ ಕಟ್ಟಡಗಳಿಗೆ ಕಾಂಪೌಂಡ್ ನಿರ್ಮಾಣಕ್ಕೆ, ಎಲ್ಲಾ ಸರ್ಕಾರಿ ಕಟ್ಟಡಗಳಿಗೆ ಕಾಂಪೌಂಡ್ ಗೋಡೆ ನಿರ್ಮಾಣಕ್ಕೆ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯ ನಿರ್ಮಾಣಕ್ಕೆ ಅವಕಾಶ, ವ್ಯಕ್ತಿಗಳಿಗೆ ಕೃಷಿ ನಂತರದ ಕೊಯ್ಲು ಶೇಖರಣಾ ಘಟಕಗಳ ನಿರ್ಮಾಣಕ್ಕೆ ಅವಕಾಶ, ವ್ಯಕ್ತಿಗಳಿಗೆ ರೇಷ್ಮೆ ಕೃಷಿ ಘಟಕದ ನಿರ್ಮಾಣಕ್ಕೆ ಅವಕಾಶ ನೀಡುವಂತೆ ಖರ್ಗೆ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕಳೆದ ಕೆಲವು ವರ್ಷಗಳಿಂದ ನಮ್ಮ ಸ್ಥಳೀಯ ಅವಶ್ಯಕತೆಗಳಿಗೆ ಅನುಗುಣವಾಗಿ ರಾಜ್ಯ ಮಟ್ಟದಲ್ಲಿ ಅನುಮೋದಿಸಲಾದ ಮಾದರಿ ವೆಚ್ಚದ ಅಂದಾಜಿನ ಪ್ರಕಾರ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಆದರೆ 2024-25ನೇ ಸಾಲಿನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM) (ಎನ್‌ಆರ್‌ಎಲ್‌ಎಂ )ವರ್ಕ್ ಶೆಡ್‌ಗಳು, ಡ್ರೈನ್ ಕಾಮಗಾರಿಗಳು, ಶಾಲಾ ಶೌಚಾಲಯಗಳು ಮುಂತಾದ ಕೆಲವು ಸಮುದಾಯದ ಕಾಮಗಾರಿಗಳಿಗೆ ಸಚಿವಾಲಯ ಗರಿಷ್ಠ ಮಿತಿಯನ್ನು ಹಾಕಿದೆ.

ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವಾಲಯ ನಿಗದಿಪಡಿಸಿದ ಗರಿಷ್ಠ ಮಿತಿಯನ್ನು ಹಿಂಪಡೆಯಲು ಮತ್ತು ಸ್ಥಳೀಯ ಪರಿಸ್ಥಿತಿಗಳು/ಅವಶ್ಯಕತೆಗಳ ಆಧಾರದ ಮೇಲೆ ಮಾದರಿ ವೆಚ್ಚಗಳನ್ನು ನಿರ್ಧರಿಸಲು ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಬೇಕು ಎಂದು ಅವರು ಕೋರಿದ್ದಾರೆ.

ಇದನ್ನೂಓದಿ:  ವಕ್ಫ್ ಮಸೂದೆ ಕುರಿತು ಸಮಗ್ರ ವರದಿಗೆ ಇಂದು ಬಿಹಾರದಲ್ಲಿ ಸಂಚಾರ: ಲೋಕ ಜನಶಕ್ತಿ ಪಕ್ಷದ ಅರುಣ್ ಭಾರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...