Homeಮುಖಪುಟದಲಿತ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸಿ: ನಟ ದಿಲ್ಜಿತ್, ನಟಿ ರಮ್ಯಾ ಒತ್ತಾಯ

ದಲಿತ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸಿ: ನಟ ದಿಲ್ಜಿತ್, ನಟಿ ರಮ್ಯಾ ಒತ್ತಾಯ

ರೈತರು ಮತ್ತು ಕಾರ್ಮಿಕರು ಬೇರ್ಪಡಿಸಲಾಗದವರು. ಕಾರ್ಖಾನೆಗಳಲ್ಲಿ ಕಾರ್ಮಿಕರು ಉತ್ಪಾದಿಸುತ್ತಾರೆ ಮತ್ತು ರೈತರು ಹೊಲಗಳಲ್ಲಿ ಉತ್ಪಾದಿಸುತ್ತಾರೆ - ನೊದೀಪ್ ಕೌರ್

- Advertisement -
- Advertisement -

ಒಂದು ತಿಂಗಳಿನಿಂದ ಬಂಧನದಲ್ಲಿರುವ ದಲಿತ, ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸುವಂತೆ ಪಂಜಾಬ್‌ನ ನಟ ದಿಲ್ಜಿತ್ ದೋಸಾಂಜ್, ನಟಿ ರಮ್ಯಾ, ಅಮೆರಿಕದ ವಕೀಲೆ ಮೀನಾ ಹ್ಯಾರಿಸ್ ಸೇರಿದಂತೆ ನೂರಾರು ಜನ ದನಿಯೆತ್ತಿದ್ದಾರೆ.

23 ವರ್ಷದ ಪಂಜಾಬ್ ಮೂಲದ ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್ ಅವರನ್ನು ರೈತರ ಪರವಾಗಿ ದೆಹಲಿಯ ಸಿಂಘು ಗಡಿಯಲ್ಲಿ ಹೋರಾಡುತ್ತಿದ್ದಾಗ ಹರಿಯಾಣ ಪೊಲೀಸರು ಬಂಧಿಸಿದ್ದರು. ಅವರಿಗೆ ಫೆಬ್ರವರಿ 2 ರಂದು ಹರಿಯಾಣದ ಸೋನೆಪತ್‌ನ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಪ್ರಸ್ತುತ ಹರಿಯಾಣದ ಕರ್ನಾಲ್ ಜೈಲಿನಲ್ಲಿರುವ ಅವರನ್ನು ಹಿಂಸಿಸಲಾಗುತ್ತಿದೆ ಮತ್ತು ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ದಿ ವೈರ್ ಪತ್ರಿಕೆಯ ಲೇಖನವನ್ನು ಟ್ವೀಟ್ ಮಾಡಿರುವ ಪಂಜಾಬ್‌ನ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ #ReleaseNodeepKaur ಎಂಬ ಹ್ಯಾಷ್‌ಟ್ಯಾಗ್ ಬಳಸಿ ಅವರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ.

ಕನ್ನಡದ ಚಿತ್ರನಟಿ ರಮ್ಯಾ ದಿವ್ಯಸ್ಪಂದನರವರು ನೊದೀಪ್ ಕೌರ್‌ರವರ ಸಹೋದರಿ ರಾಜ್‌ವಿರ್ ಕೌರ್‌ರವರ ಟ್ವೀಟ್ ಅನ್ನು ಹಂಚಿಕೊಂಡು ನೊದೀಪ್ ಕೌರ್ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಟ್ವೀಟ್‌ನಲ್ಲಿ “ನನ್ನ ಸಹೋದರಿ ನೊದೀಪ್ ಕೌರ್ ಅವರನ್ನು ಜನವರಿ 12 ರಿಂದ ಮತ್ತು ಶಿವ ಕುಮಾರ್ ಅವರನ್ನು ಜನವರಿ 23 ರಿಂದ ಜೈಲಿನಲ್ಲಿರಿಸಲಾಗಿದೆ. ನೊದೀಪ್ ಕೌರ್ ಮತ್ತು ಶಿವ ಕುಮಾರ್‌ರವರ ಸಂಘಟನೆಯು ರೈತರು ಮತ್ತು ಕಾರ್ಮಿಕರಿಗಾಗುತ್ತಿರುವ ಲೂಟಿ ಮತ್ತು ಅನ್ಯಾಯವನ್ನು ಬಹಿರಂಗಪಡಿಸುವ ಧೈರ್ಯ ತೋರಿಸಿತು. ಹಾಗಾಗಿ ಅವರನ್ನು ಹಿಂಸಿಸಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಇನ್ನು ಅಮೆರಿಕ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ರವರ ಸೊಸೆ ಮತ್ತು ವಕೀಲೆ ಮೀನಾ ಹ್ಯಾರಿಸ್ ಟ್ವೀಟ್ ಮಾಡಿ “ಉಗ್ರಗಾಮಿ ಗುಂಪೊಂದು ನಿಮ್ಮ ಫೋಟೊ ಸುಟ್ಟು ಹಾಕುವುದನ್ನು ನೋಡಲು ದುಃಖವಾಗುವುದಾದರೆ, ನಾವು ಭಾರತದಲ್ಲಿದ್ದರೆ ಏನಾಗುತ್ತಿತ್ತು ಊಹಿಸಿ. ಹೇಳುತ್ತೇನೆ ಕೇಳಿ, ಕಾರ್ಮಿಕ ಹಕ್ಕುಗಳ ಕಾರ್ಯಕರ್ತೆ ನೊದೀಪ್ ಕೌರ್ ಬಂಧನದಲ್ಲಿದ್ದಾಳೆ, ಹಿಂಸೆಗೊಳಗಾಗಿದ್ದಾಳೆ ಮತ್ತು ಪೊಲೀಸ್ ಕಸ್ಟಡಿಯಲ್ಲಿಯೇ ಆಕೆಗೆ ಲೈಂಗಿಕ ಹಿಂಸೆ ನೀಡಲಾಗಿದೆ. ಕಳೆದ 20 ಕ್ಕೂ ಹೆಚ್ಚು ದಿನಗಳಿಂದ ಜಾಮೀನು ನೀಡದೇ ಆಕೆಯನ್ನು ಬಂಧನದಲ್ಲಿಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೊದೀಪ್ ಕೌರ್ ಯಾರು?

ಪಂಜಾಬ್‌ ಮೂಲದ ಮಜ್ದೂರ್ ಅಧಿಕಾರ ಸಂಘಟನ್ (ಎಂಎಎಸ್) ಕಾರ್ಮಿಕ ಸಂಘದ ಕಾರ್ಯಕರ್ತೆಯಾಗಿರುವ ದಲಿತ ಸಮುದಾಯದ ನೊದೀಪ್ ಕೌರ್ ಡಿಸೆಂಬರ್ 2020 ರಿಂದ ಸಿಂಘು ಗಡಿಯಲ್ಲಿ ರೈತರ ಆಂದೋಲನದಲ್ಲಿ ಭಾಗವಹಿಸುತ್ತಿದ್ದರು.

ರೈತ ಪ್ರತಿಭಟನೆಯನ್ನು ಬೆಂಬಲಿಸಿ ಕುಂಡ್ಲಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಕಾರ್ಮಿಕರ ಗುಂಪಿನೊಂದಿಗೆ ನೊದೀಪ್ ಕೌರ್ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಅವರು, ಕಾರ್ಮಿಕರು ಸಹ ರೈತರಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾರ್ಮಿಕರು ಕಾರ್ಖಾನೆಯ ಮಾಲಿಕರಿಂದ ಶೋಷಣೆಗೆ ಒಳಗಾಗಿದ್ದಾರೆ, ಅವರ ವೇತನವನ್ನು ತಡೆಹಿಡಿಯಲಾಗಿದೆ ಮತ್ತು ಅವರನ್ನು ಉದ್ಯೋಗಗಳಿಂದ ಕಿತ್ತು ಎಸೆಯಲಾಗಿದೆ ಎಂದು ಆರೋಪಿಸಿದ್ದರು.

ಸಿಂಘು ಗಡಿಯಲ್ಲಿ ಈ ಪ್ರದೇಶದ ಕಾರ್ಮಿಕರು ಮತ್ತು ರೈತರನ್ನು ಒಟ್ಟುಗೂಡಿಸಿ ನೊದೀಪ್ ಹೋರಾಟ ಮುನ್ನಡೆಸಿದ್ದರು. ಸಿಂಘು ಮತ್ತು ಕುಂಡ್ಲಿ ಗಡಿಯಲ್ಲಿ, ‘ಕಿಸಾನ್ ಮಜ್ದೂರ್ ಏಕ್ತಾ ಜಿಂದಾಬಾದ್’ ಘೋಷಣೆಗಳು ಪ್ರತಿಧ್ವನಿಸುತ್ತಿದ್ದವು. ಎಂಎಎಸ್ ಮತ್ತು ಇತರ ಕಾರ್ಮಿಕ ಸಂಘಗಳು ರೈತರ ಹೋರಾಟಕ್ಕೆ ಕೈಜೋಡಿಸಿದ್ದವು.

“ರೈತರು ಮತ್ತು ಕಾರ್ಮಿಕರು ಬೇರ್ಪಡಿಸಲಾಗದವರು. ಕಾರ್ಖಾನೆಗಳಲ್ಲಿ ಕಾರ್ಮಿಕರು ಉತ್ಪಾದಿಸುತ್ತಾರೆ ಮತ್ತು ರೈತರು ಹೊಲಗಳಲ್ಲಿ ಉತ್ಪಾದಿಸುತ್ತಾರೆ” ಎಂದು ಕೌರ್ ಸಂದರ್ಶನವೊಂದರಲ್ಲಿ ಹೇಳಿದ್ದರು. “ಸರ್ಕಾರವು ನಮ್ಮನ್ನು, ನಮ್ಮ ಕೆಲಸವನ್ನು ತಮಗಾಗಿ ಹಣ ಸಂಪಾದಿಸಲು ಮಾರುತ್ತಿದೆ” ಎಂದು ಅವರು ಒತ್ತಿ ಹೇಳಿದ್ದರು.

ಕಾರ್ಮಿಕರ ಮೇಲಿನ ದೌರ್ಜನ್ಯವು ಹೆಚ್ಚಾದರಿಂದ ಅವರು ರೈತ ಆಂದೋಲನವನ್ನು ಬೆಂಬಲಿಸಲು ಪ್ರಾರಂಭಿಸಿದರು. ಪ್ರತಿದಿನ 300ಕ್ಕೂ ಹೆಚ್ಚು ಕಾರ್ಮಿಕರು ರೈತ ಹೋರಾಟದಲ್ಲಿ ಭಾಗವಹಿಸುತ್ತಿದ್ದರು. ಹಾಗಾಗಿ ಕಾರ್ಮಿಕ ಮುಖಂಡೆಯಾದ ನೊದೀಪ್ ಕೌರ್‌ರವರನ್ನು ಕುಂಡ್ಲಿ ಕೈಗಾರಿಕಾ ಸಂಘ ಮತ್ತು ಹರಿಯಾಣ ಪೊಲೀಸರ ಸಶಸ್ತ್ರ ಕಾವಲುಗಾರರು ಅವರನ್ನು ಗುರಿಯಾಗಿಸಿ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಆಕೆಯ ಸಹೋದರಿ ಆರೋಪಿಸಿದ್ದಾರೆ.

“ನಾನು ಆಕೆಯನ್ನು ಬಂಧನವಾದ ಮಾರನೇ‌ ದಿನವೇ ಕರ್ನಲ್ ಜೈಲಿನಲ್ಲಿ ಭೇಟಿಯಾದೆ. ಆಕೆ ತನ್ನ ಮೇಲೆ ನಡೆದ ದೌರ್ಜನ್ಯದ ಕುರಿತು ಹೇಳಿದಳು. ಪುರುಷ ಪೊಲೀಸರು ಭೀಕರವಾಗಿ ಥಳಿಸಿದ್ದರು. ಆಕೆಯ ಗುಪ್ತಾಂಗಗಳ ಮೇಲೂ ಗಾಯದ ಗುರುತುಗಳಿವೆ. ಅವಳಿಗೆ ನಾವು ನೀಡಿರುವ ಔಷಧಿಗಳನ್ನು ಸಹ ಪೊಲೀಸರು ನೀಡಲಿಲ್ಲ. ಠಾಣೆಯ ಎಸ್‌ಎಚ್‌ಒ ಅವಳನ್ನು ಗ್ಯಾಂಗ್ ಲೀಡರ್ ಆಗಿ ತೋರಿಸಲು ಬಯಸಿದ್ದಾರೆ” ಎಂದು ರಾಜ್‌ವೀರ್‌ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸಬ್‌ರಂಗ್ ವರದಿ ಮಾಡಿದೆ.

ಹರಿಯಾಣ ಪೊಲೀಸರು ನೊದೀಪ್ ವಿರುದ್ದ ಗಲಭೆ, ಕಾನೂನುಬಾಹಿರ ಸಭೆ, ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸದಂತೆ ತೊಂದರೆ ನೀಡುವುದು, ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ, ಸುಲಿಗೆ, ಕೊಲೆ ಯತ್ನ ಸೇರಿದಂತೆ ಭಾರತೀಯ ದಂಡ ಸಂಹಿತೆ ಹಲವು ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯ ಎಸ್‌ಎಚ್ಒ ಇನ್ಸ್‌ಪೆಕ್ಟರ್ ರವಿ ಕುಮಾರ್ ಹೇಳಿಕೆಯ ಆಧಾರದ ಮೇಲೆ ಈ ಪ್ರಕರಣವನ್ನು ದಾಖಲಿಸಲಾಗಿದೆ.

ಆದರೆ ನೊದೀಪ್ ಅವರ ವಕೀಲರು, ಯಾವುದೇ ಪ್ರಚೋದನೆ ಇಲ್ಲದೆ ಕಾರ್ಖಾನೆಯ ಬಳಿ ನಿಂತಿರುವಾಗ ಪೊಲೀಸರು, ನೊದೀಪ್ ಸೇರಿದಂತೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿತ್ತು ಎಂದು ವಾದಿಸಿದ್ದಾರೆ.

ನೋದೀಪ್ ಕೌರ್ ಬಿಡುಗಡೆಗೆ ಆಗ್ರಹ

ನೋದೀಪ್ ಕೌರ್ ಬಿಡುಗಡೆಗೆ ಆಗ್ರಹಿಸಿ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (ಸಿಜೆಪಿ) ಆನ್‌ಲೈನ್ ಅರ್ಜಿಯನ್ನು ಪ್ರಾರಂಭಿಸಿದೆ. ಸಿಜೆಪಿಯು ತನ್ನ ಅರ್ಜಿಯಲ್ಲಿ ನೊದೀಪ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸುವುದಲ್ಲದೆ, ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದೆ.

ಅರ್ಜಿಗೆ ಸಹಿ ಹಾಕುವವರು, ಕರ್ನಾಲ್ ಜೈಲು ಅಧಿಕಾರಿಗಳಿಗೆ ಪತ್ರ ಬರೆದು ನೊದೀಪ್ ವಿರುದ್ಧದ ದೌರ್ಜನ್ಯವನ್ನು ಪ್ರತಿಭಟಿಸುವಂತೆ ಸಿಜೆಪಿ ಒತ್ತಾಯಿಸಿದೆ. ಚೇಂಜ್.ಆರ್ಗ್‌ನಲ್ಲಿರುವ ಅರ್ಜಿಯನ್ನು ಇಲ್ಲಿ ಸಹಿ ಮಾಡಬಹುದು.


ಇದನ್ನೂ ಓದಿ: ಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...