Homeಮುಖಪುಟದಲಿತ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸಿ: ನಟ ದಿಲ್ಜಿತ್, ನಟಿ ರಮ್ಯಾ ಒತ್ತಾಯ

ದಲಿತ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸಿ: ನಟ ದಿಲ್ಜಿತ್, ನಟಿ ರಮ್ಯಾ ಒತ್ತಾಯ

ರೈತರು ಮತ್ತು ಕಾರ್ಮಿಕರು ಬೇರ್ಪಡಿಸಲಾಗದವರು. ಕಾರ್ಖಾನೆಗಳಲ್ಲಿ ಕಾರ್ಮಿಕರು ಉತ್ಪಾದಿಸುತ್ತಾರೆ ಮತ್ತು ರೈತರು ಹೊಲಗಳಲ್ಲಿ ಉತ್ಪಾದಿಸುತ್ತಾರೆ - ನೊದೀಪ್ ಕೌರ್

- Advertisement -
- Advertisement -

ಒಂದು ತಿಂಗಳಿನಿಂದ ಬಂಧನದಲ್ಲಿರುವ ದಲಿತ, ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸುವಂತೆ ಪಂಜಾಬ್‌ನ ನಟ ದಿಲ್ಜಿತ್ ದೋಸಾಂಜ್, ನಟಿ ರಮ್ಯಾ, ಅಮೆರಿಕದ ವಕೀಲೆ ಮೀನಾ ಹ್ಯಾರಿಸ್ ಸೇರಿದಂತೆ ನೂರಾರು ಜನ ದನಿಯೆತ್ತಿದ್ದಾರೆ.

23 ವರ್ಷದ ಪಂಜಾಬ್ ಮೂಲದ ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್ ಅವರನ್ನು ರೈತರ ಪರವಾಗಿ ದೆಹಲಿಯ ಸಿಂಘು ಗಡಿಯಲ್ಲಿ ಹೋರಾಡುತ್ತಿದ್ದಾಗ ಹರಿಯಾಣ ಪೊಲೀಸರು ಬಂಧಿಸಿದ್ದರು. ಅವರಿಗೆ ಫೆಬ್ರವರಿ 2 ರಂದು ಹರಿಯಾಣದ ಸೋನೆಪತ್‌ನ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಪ್ರಸ್ತುತ ಹರಿಯಾಣದ ಕರ್ನಾಲ್ ಜೈಲಿನಲ್ಲಿರುವ ಅವರನ್ನು ಹಿಂಸಿಸಲಾಗುತ್ತಿದೆ ಮತ್ತು ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ದಿ ವೈರ್ ಪತ್ರಿಕೆಯ ಲೇಖನವನ್ನು ಟ್ವೀಟ್ ಮಾಡಿರುವ ಪಂಜಾಬ್‌ನ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ #ReleaseNodeepKaur ಎಂಬ ಹ್ಯಾಷ್‌ಟ್ಯಾಗ್ ಬಳಸಿ ಅವರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ.

ಕನ್ನಡದ ಚಿತ್ರನಟಿ ರಮ್ಯಾ ದಿವ್ಯಸ್ಪಂದನರವರು ನೊದೀಪ್ ಕೌರ್‌ರವರ ಸಹೋದರಿ ರಾಜ್‌ವಿರ್ ಕೌರ್‌ರವರ ಟ್ವೀಟ್ ಅನ್ನು ಹಂಚಿಕೊಂಡು ನೊದೀಪ್ ಕೌರ್ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಟ್ವೀಟ್‌ನಲ್ಲಿ “ನನ್ನ ಸಹೋದರಿ ನೊದೀಪ್ ಕೌರ್ ಅವರನ್ನು ಜನವರಿ 12 ರಿಂದ ಮತ್ತು ಶಿವ ಕುಮಾರ್ ಅವರನ್ನು ಜನವರಿ 23 ರಿಂದ ಜೈಲಿನಲ್ಲಿರಿಸಲಾಗಿದೆ. ನೊದೀಪ್ ಕೌರ್ ಮತ್ತು ಶಿವ ಕುಮಾರ್‌ರವರ ಸಂಘಟನೆಯು ರೈತರು ಮತ್ತು ಕಾರ್ಮಿಕರಿಗಾಗುತ್ತಿರುವ ಲೂಟಿ ಮತ್ತು ಅನ್ಯಾಯವನ್ನು ಬಹಿರಂಗಪಡಿಸುವ ಧೈರ್ಯ ತೋರಿಸಿತು. ಹಾಗಾಗಿ ಅವರನ್ನು ಹಿಂಸಿಸಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಇನ್ನು ಅಮೆರಿಕ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ರವರ ಸೊಸೆ ಮತ್ತು ವಕೀಲೆ ಮೀನಾ ಹ್ಯಾರಿಸ್ ಟ್ವೀಟ್ ಮಾಡಿ “ಉಗ್ರಗಾಮಿ ಗುಂಪೊಂದು ನಿಮ್ಮ ಫೋಟೊ ಸುಟ್ಟು ಹಾಕುವುದನ್ನು ನೋಡಲು ದುಃಖವಾಗುವುದಾದರೆ, ನಾವು ಭಾರತದಲ್ಲಿದ್ದರೆ ಏನಾಗುತ್ತಿತ್ತು ಊಹಿಸಿ. ಹೇಳುತ್ತೇನೆ ಕೇಳಿ, ಕಾರ್ಮಿಕ ಹಕ್ಕುಗಳ ಕಾರ್ಯಕರ್ತೆ ನೊದೀಪ್ ಕೌರ್ ಬಂಧನದಲ್ಲಿದ್ದಾಳೆ, ಹಿಂಸೆಗೊಳಗಾಗಿದ್ದಾಳೆ ಮತ್ತು ಪೊಲೀಸ್ ಕಸ್ಟಡಿಯಲ್ಲಿಯೇ ಆಕೆಗೆ ಲೈಂಗಿಕ ಹಿಂಸೆ ನೀಡಲಾಗಿದೆ. ಕಳೆದ 20 ಕ್ಕೂ ಹೆಚ್ಚು ದಿನಗಳಿಂದ ಜಾಮೀನು ನೀಡದೇ ಆಕೆಯನ್ನು ಬಂಧನದಲ್ಲಿಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೊದೀಪ್ ಕೌರ್ ಯಾರು?

ಪಂಜಾಬ್‌ ಮೂಲದ ಮಜ್ದೂರ್ ಅಧಿಕಾರ ಸಂಘಟನ್ (ಎಂಎಎಸ್) ಕಾರ್ಮಿಕ ಸಂಘದ ಕಾರ್ಯಕರ್ತೆಯಾಗಿರುವ ದಲಿತ ಸಮುದಾಯದ ನೊದೀಪ್ ಕೌರ್ ಡಿಸೆಂಬರ್ 2020 ರಿಂದ ಸಿಂಘು ಗಡಿಯಲ್ಲಿ ರೈತರ ಆಂದೋಲನದಲ್ಲಿ ಭಾಗವಹಿಸುತ್ತಿದ್ದರು.

ರೈತ ಪ್ರತಿಭಟನೆಯನ್ನು ಬೆಂಬಲಿಸಿ ಕುಂಡ್ಲಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಕಾರ್ಮಿಕರ ಗುಂಪಿನೊಂದಿಗೆ ನೊದೀಪ್ ಕೌರ್ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಅವರು, ಕಾರ್ಮಿಕರು ಸಹ ರೈತರಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾರ್ಮಿಕರು ಕಾರ್ಖಾನೆಯ ಮಾಲಿಕರಿಂದ ಶೋಷಣೆಗೆ ಒಳಗಾಗಿದ್ದಾರೆ, ಅವರ ವೇತನವನ್ನು ತಡೆಹಿಡಿಯಲಾಗಿದೆ ಮತ್ತು ಅವರನ್ನು ಉದ್ಯೋಗಗಳಿಂದ ಕಿತ್ತು ಎಸೆಯಲಾಗಿದೆ ಎಂದು ಆರೋಪಿಸಿದ್ದರು.

ಸಿಂಘು ಗಡಿಯಲ್ಲಿ ಈ ಪ್ರದೇಶದ ಕಾರ್ಮಿಕರು ಮತ್ತು ರೈತರನ್ನು ಒಟ್ಟುಗೂಡಿಸಿ ನೊದೀಪ್ ಹೋರಾಟ ಮುನ್ನಡೆಸಿದ್ದರು. ಸಿಂಘು ಮತ್ತು ಕುಂಡ್ಲಿ ಗಡಿಯಲ್ಲಿ, ‘ಕಿಸಾನ್ ಮಜ್ದೂರ್ ಏಕ್ತಾ ಜಿಂದಾಬಾದ್’ ಘೋಷಣೆಗಳು ಪ್ರತಿಧ್ವನಿಸುತ್ತಿದ್ದವು. ಎಂಎಎಸ್ ಮತ್ತು ಇತರ ಕಾರ್ಮಿಕ ಸಂಘಗಳು ರೈತರ ಹೋರಾಟಕ್ಕೆ ಕೈಜೋಡಿಸಿದ್ದವು.

“ರೈತರು ಮತ್ತು ಕಾರ್ಮಿಕರು ಬೇರ್ಪಡಿಸಲಾಗದವರು. ಕಾರ್ಖಾನೆಗಳಲ್ಲಿ ಕಾರ್ಮಿಕರು ಉತ್ಪಾದಿಸುತ್ತಾರೆ ಮತ್ತು ರೈತರು ಹೊಲಗಳಲ್ಲಿ ಉತ್ಪಾದಿಸುತ್ತಾರೆ” ಎಂದು ಕೌರ್ ಸಂದರ್ಶನವೊಂದರಲ್ಲಿ ಹೇಳಿದ್ದರು. “ಸರ್ಕಾರವು ನಮ್ಮನ್ನು, ನಮ್ಮ ಕೆಲಸವನ್ನು ತಮಗಾಗಿ ಹಣ ಸಂಪಾದಿಸಲು ಮಾರುತ್ತಿದೆ” ಎಂದು ಅವರು ಒತ್ತಿ ಹೇಳಿದ್ದರು.

ಕಾರ್ಮಿಕರ ಮೇಲಿನ ದೌರ್ಜನ್ಯವು ಹೆಚ್ಚಾದರಿಂದ ಅವರು ರೈತ ಆಂದೋಲನವನ್ನು ಬೆಂಬಲಿಸಲು ಪ್ರಾರಂಭಿಸಿದರು. ಪ್ರತಿದಿನ 300ಕ್ಕೂ ಹೆಚ್ಚು ಕಾರ್ಮಿಕರು ರೈತ ಹೋರಾಟದಲ್ಲಿ ಭಾಗವಹಿಸುತ್ತಿದ್ದರು. ಹಾಗಾಗಿ ಕಾರ್ಮಿಕ ಮುಖಂಡೆಯಾದ ನೊದೀಪ್ ಕೌರ್‌ರವರನ್ನು ಕುಂಡ್ಲಿ ಕೈಗಾರಿಕಾ ಸಂಘ ಮತ್ತು ಹರಿಯಾಣ ಪೊಲೀಸರ ಸಶಸ್ತ್ರ ಕಾವಲುಗಾರರು ಅವರನ್ನು ಗುರಿಯಾಗಿಸಿ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಆಕೆಯ ಸಹೋದರಿ ಆರೋಪಿಸಿದ್ದಾರೆ.

“ನಾನು ಆಕೆಯನ್ನು ಬಂಧನವಾದ ಮಾರನೇ‌ ದಿನವೇ ಕರ್ನಲ್ ಜೈಲಿನಲ್ಲಿ ಭೇಟಿಯಾದೆ. ಆಕೆ ತನ್ನ ಮೇಲೆ ನಡೆದ ದೌರ್ಜನ್ಯದ ಕುರಿತು ಹೇಳಿದಳು. ಪುರುಷ ಪೊಲೀಸರು ಭೀಕರವಾಗಿ ಥಳಿಸಿದ್ದರು. ಆಕೆಯ ಗುಪ್ತಾಂಗಗಳ ಮೇಲೂ ಗಾಯದ ಗುರುತುಗಳಿವೆ. ಅವಳಿಗೆ ನಾವು ನೀಡಿರುವ ಔಷಧಿಗಳನ್ನು ಸಹ ಪೊಲೀಸರು ನೀಡಲಿಲ್ಲ. ಠಾಣೆಯ ಎಸ್‌ಎಚ್‌ಒ ಅವಳನ್ನು ಗ್ಯಾಂಗ್ ಲೀಡರ್ ಆಗಿ ತೋರಿಸಲು ಬಯಸಿದ್ದಾರೆ” ಎಂದು ರಾಜ್‌ವೀರ್‌ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸಬ್‌ರಂಗ್ ವರದಿ ಮಾಡಿದೆ.

ಹರಿಯಾಣ ಪೊಲೀಸರು ನೊದೀಪ್ ವಿರುದ್ದ ಗಲಭೆ, ಕಾನೂನುಬಾಹಿರ ಸಭೆ, ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸದಂತೆ ತೊಂದರೆ ನೀಡುವುದು, ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ, ಸುಲಿಗೆ, ಕೊಲೆ ಯತ್ನ ಸೇರಿದಂತೆ ಭಾರತೀಯ ದಂಡ ಸಂಹಿತೆ ಹಲವು ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯ ಎಸ್‌ಎಚ್ಒ ಇನ್ಸ್‌ಪೆಕ್ಟರ್ ರವಿ ಕುಮಾರ್ ಹೇಳಿಕೆಯ ಆಧಾರದ ಮೇಲೆ ಈ ಪ್ರಕರಣವನ್ನು ದಾಖಲಿಸಲಾಗಿದೆ.

ಆದರೆ ನೊದೀಪ್ ಅವರ ವಕೀಲರು, ಯಾವುದೇ ಪ್ರಚೋದನೆ ಇಲ್ಲದೆ ಕಾರ್ಖಾನೆಯ ಬಳಿ ನಿಂತಿರುವಾಗ ಪೊಲೀಸರು, ನೊದೀಪ್ ಸೇರಿದಂತೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿತ್ತು ಎಂದು ವಾದಿಸಿದ್ದಾರೆ.

ನೋದೀಪ್ ಕೌರ್ ಬಿಡುಗಡೆಗೆ ಆಗ್ರಹ

ನೋದೀಪ್ ಕೌರ್ ಬಿಡುಗಡೆಗೆ ಆಗ್ರಹಿಸಿ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (ಸಿಜೆಪಿ) ಆನ್‌ಲೈನ್ ಅರ್ಜಿಯನ್ನು ಪ್ರಾರಂಭಿಸಿದೆ. ಸಿಜೆಪಿಯು ತನ್ನ ಅರ್ಜಿಯಲ್ಲಿ ನೊದೀಪ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸುವುದಲ್ಲದೆ, ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದೆ.

ಅರ್ಜಿಗೆ ಸಹಿ ಹಾಕುವವರು, ಕರ್ನಾಲ್ ಜೈಲು ಅಧಿಕಾರಿಗಳಿಗೆ ಪತ್ರ ಬರೆದು ನೊದೀಪ್ ವಿರುದ್ಧದ ದೌರ್ಜನ್ಯವನ್ನು ಪ್ರತಿಭಟಿಸುವಂತೆ ಸಿಜೆಪಿ ಒತ್ತಾಯಿಸಿದೆ. ಚೇಂಜ್.ಆರ್ಗ್‌ನಲ್ಲಿರುವ ಅರ್ಜಿಯನ್ನು ಇಲ್ಲಿ ಸಹಿ ಮಾಡಬಹುದು.


ಇದನ್ನೂ ಓದಿ: ಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...