Homeಮುಖಪುಟದಲಿತ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸಿ: ನಟ ದಿಲ್ಜಿತ್, ನಟಿ ರಮ್ಯಾ ಒತ್ತಾಯ

ದಲಿತ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸಿ: ನಟ ದಿಲ್ಜಿತ್, ನಟಿ ರಮ್ಯಾ ಒತ್ತಾಯ

ರೈತರು ಮತ್ತು ಕಾರ್ಮಿಕರು ಬೇರ್ಪಡಿಸಲಾಗದವರು. ಕಾರ್ಖಾನೆಗಳಲ್ಲಿ ಕಾರ್ಮಿಕರು ಉತ್ಪಾದಿಸುತ್ತಾರೆ ಮತ್ತು ರೈತರು ಹೊಲಗಳಲ್ಲಿ ಉತ್ಪಾದಿಸುತ್ತಾರೆ - ನೊದೀಪ್ ಕೌರ್

- Advertisement -
- Advertisement -

ಒಂದು ತಿಂಗಳಿನಿಂದ ಬಂಧನದಲ್ಲಿರುವ ದಲಿತ, ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸುವಂತೆ ಪಂಜಾಬ್‌ನ ನಟ ದಿಲ್ಜಿತ್ ದೋಸಾಂಜ್, ನಟಿ ರಮ್ಯಾ, ಅಮೆರಿಕದ ವಕೀಲೆ ಮೀನಾ ಹ್ಯಾರಿಸ್ ಸೇರಿದಂತೆ ನೂರಾರು ಜನ ದನಿಯೆತ್ತಿದ್ದಾರೆ.

23 ವರ್ಷದ ಪಂಜಾಬ್ ಮೂಲದ ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್ ಅವರನ್ನು ರೈತರ ಪರವಾಗಿ ದೆಹಲಿಯ ಸಿಂಘು ಗಡಿಯಲ್ಲಿ ಹೋರಾಡುತ್ತಿದ್ದಾಗ ಹರಿಯಾಣ ಪೊಲೀಸರು ಬಂಧಿಸಿದ್ದರು. ಅವರಿಗೆ ಫೆಬ್ರವರಿ 2 ರಂದು ಹರಿಯಾಣದ ಸೋನೆಪತ್‌ನ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಪ್ರಸ್ತುತ ಹರಿಯಾಣದ ಕರ್ನಾಲ್ ಜೈಲಿನಲ್ಲಿರುವ ಅವರನ್ನು ಹಿಂಸಿಸಲಾಗುತ್ತಿದೆ ಮತ್ತು ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ದಿ ವೈರ್ ಪತ್ರಿಕೆಯ ಲೇಖನವನ್ನು ಟ್ವೀಟ್ ಮಾಡಿರುವ ಪಂಜಾಬ್‌ನ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ #ReleaseNodeepKaur ಎಂಬ ಹ್ಯಾಷ್‌ಟ್ಯಾಗ್ ಬಳಸಿ ಅವರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ.

ಕನ್ನಡದ ಚಿತ್ರನಟಿ ರಮ್ಯಾ ದಿವ್ಯಸ್ಪಂದನರವರು ನೊದೀಪ್ ಕೌರ್‌ರವರ ಸಹೋದರಿ ರಾಜ್‌ವಿರ್ ಕೌರ್‌ರವರ ಟ್ವೀಟ್ ಅನ್ನು ಹಂಚಿಕೊಂಡು ನೊದೀಪ್ ಕೌರ್ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಟ್ವೀಟ್‌ನಲ್ಲಿ “ನನ್ನ ಸಹೋದರಿ ನೊದೀಪ್ ಕೌರ್ ಅವರನ್ನು ಜನವರಿ 12 ರಿಂದ ಮತ್ತು ಶಿವ ಕುಮಾರ್ ಅವರನ್ನು ಜನವರಿ 23 ರಿಂದ ಜೈಲಿನಲ್ಲಿರಿಸಲಾಗಿದೆ. ನೊದೀಪ್ ಕೌರ್ ಮತ್ತು ಶಿವ ಕುಮಾರ್‌ರವರ ಸಂಘಟನೆಯು ರೈತರು ಮತ್ತು ಕಾರ್ಮಿಕರಿಗಾಗುತ್ತಿರುವ ಲೂಟಿ ಮತ್ತು ಅನ್ಯಾಯವನ್ನು ಬಹಿರಂಗಪಡಿಸುವ ಧೈರ್ಯ ತೋರಿಸಿತು. ಹಾಗಾಗಿ ಅವರನ್ನು ಹಿಂಸಿಸಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಇನ್ನು ಅಮೆರಿಕ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ರವರ ಸೊಸೆ ಮತ್ತು ವಕೀಲೆ ಮೀನಾ ಹ್ಯಾರಿಸ್ ಟ್ವೀಟ್ ಮಾಡಿ “ಉಗ್ರಗಾಮಿ ಗುಂಪೊಂದು ನಿಮ್ಮ ಫೋಟೊ ಸುಟ್ಟು ಹಾಕುವುದನ್ನು ನೋಡಲು ದುಃಖವಾಗುವುದಾದರೆ, ನಾವು ಭಾರತದಲ್ಲಿದ್ದರೆ ಏನಾಗುತ್ತಿತ್ತು ಊಹಿಸಿ. ಹೇಳುತ್ತೇನೆ ಕೇಳಿ, ಕಾರ್ಮಿಕ ಹಕ್ಕುಗಳ ಕಾರ್ಯಕರ್ತೆ ನೊದೀಪ್ ಕೌರ್ ಬಂಧನದಲ್ಲಿದ್ದಾಳೆ, ಹಿಂಸೆಗೊಳಗಾಗಿದ್ದಾಳೆ ಮತ್ತು ಪೊಲೀಸ್ ಕಸ್ಟಡಿಯಲ್ಲಿಯೇ ಆಕೆಗೆ ಲೈಂಗಿಕ ಹಿಂಸೆ ನೀಡಲಾಗಿದೆ. ಕಳೆದ 20 ಕ್ಕೂ ಹೆಚ್ಚು ದಿನಗಳಿಂದ ಜಾಮೀನು ನೀಡದೇ ಆಕೆಯನ್ನು ಬಂಧನದಲ್ಲಿಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೊದೀಪ್ ಕೌರ್ ಯಾರು?

ಪಂಜಾಬ್‌ ಮೂಲದ ಮಜ್ದೂರ್ ಅಧಿಕಾರ ಸಂಘಟನ್ (ಎಂಎಎಸ್) ಕಾರ್ಮಿಕ ಸಂಘದ ಕಾರ್ಯಕರ್ತೆಯಾಗಿರುವ ದಲಿತ ಸಮುದಾಯದ ನೊದೀಪ್ ಕೌರ್ ಡಿಸೆಂಬರ್ 2020 ರಿಂದ ಸಿಂಘು ಗಡಿಯಲ್ಲಿ ರೈತರ ಆಂದೋಲನದಲ್ಲಿ ಭಾಗವಹಿಸುತ್ತಿದ್ದರು.

ರೈತ ಪ್ರತಿಭಟನೆಯನ್ನು ಬೆಂಬಲಿಸಿ ಕುಂಡ್ಲಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಕಾರ್ಮಿಕರ ಗುಂಪಿನೊಂದಿಗೆ ನೊದೀಪ್ ಕೌರ್ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಅವರು, ಕಾರ್ಮಿಕರು ಸಹ ರೈತರಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾರ್ಮಿಕರು ಕಾರ್ಖಾನೆಯ ಮಾಲಿಕರಿಂದ ಶೋಷಣೆಗೆ ಒಳಗಾಗಿದ್ದಾರೆ, ಅವರ ವೇತನವನ್ನು ತಡೆಹಿಡಿಯಲಾಗಿದೆ ಮತ್ತು ಅವರನ್ನು ಉದ್ಯೋಗಗಳಿಂದ ಕಿತ್ತು ಎಸೆಯಲಾಗಿದೆ ಎಂದು ಆರೋಪಿಸಿದ್ದರು.

ಸಿಂಘು ಗಡಿಯಲ್ಲಿ ಈ ಪ್ರದೇಶದ ಕಾರ್ಮಿಕರು ಮತ್ತು ರೈತರನ್ನು ಒಟ್ಟುಗೂಡಿಸಿ ನೊದೀಪ್ ಹೋರಾಟ ಮುನ್ನಡೆಸಿದ್ದರು. ಸಿಂಘು ಮತ್ತು ಕುಂಡ್ಲಿ ಗಡಿಯಲ್ಲಿ, ‘ಕಿಸಾನ್ ಮಜ್ದೂರ್ ಏಕ್ತಾ ಜಿಂದಾಬಾದ್’ ಘೋಷಣೆಗಳು ಪ್ರತಿಧ್ವನಿಸುತ್ತಿದ್ದವು. ಎಂಎಎಸ್ ಮತ್ತು ಇತರ ಕಾರ್ಮಿಕ ಸಂಘಗಳು ರೈತರ ಹೋರಾಟಕ್ಕೆ ಕೈಜೋಡಿಸಿದ್ದವು.

“ರೈತರು ಮತ್ತು ಕಾರ್ಮಿಕರು ಬೇರ್ಪಡಿಸಲಾಗದವರು. ಕಾರ್ಖಾನೆಗಳಲ್ಲಿ ಕಾರ್ಮಿಕರು ಉತ್ಪಾದಿಸುತ್ತಾರೆ ಮತ್ತು ರೈತರು ಹೊಲಗಳಲ್ಲಿ ಉತ್ಪಾದಿಸುತ್ತಾರೆ” ಎಂದು ಕೌರ್ ಸಂದರ್ಶನವೊಂದರಲ್ಲಿ ಹೇಳಿದ್ದರು. “ಸರ್ಕಾರವು ನಮ್ಮನ್ನು, ನಮ್ಮ ಕೆಲಸವನ್ನು ತಮಗಾಗಿ ಹಣ ಸಂಪಾದಿಸಲು ಮಾರುತ್ತಿದೆ” ಎಂದು ಅವರು ಒತ್ತಿ ಹೇಳಿದ್ದರು.

ಕಾರ್ಮಿಕರ ಮೇಲಿನ ದೌರ್ಜನ್ಯವು ಹೆಚ್ಚಾದರಿಂದ ಅವರು ರೈತ ಆಂದೋಲನವನ್ನು ಬೆಂಬಲಿಸಲು ಪ್ರಾರಂಭಿಸಿದರು. ಪ್ರತಿದಿನ 300ಕ್ಕೂ ಹೆಚ್ಚು ಕಾರ್ಮಿಕರು ರೈತ ಹೋರಾಟದಲ್ಲಿ ಭಾಗವಹಿಸುತ್ತಿದ್ದರು. ಹಾಗಾಗಿ ಕಾರ್ಮಿಕ ಮುಖಂಡೆಯಾದ ನೊದೀಪ್ ಕೌರ್‌ರವರನ್ನು ಕುಂಡ್ಲಿ ಕೈಗಾರಿಕಾ ಸಂಘ ಮತ್ತು ಹರಿಯಾಣ ಪೊಲೀಸರ ಸಶಸ್ತ್ರ ಕಾವಲುಗಾರರು ಅವರನ್ನು ಗುರಿಯಾಗಿಸಿ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಆಕೆಯ ಸಹೋದರಿ ಆರೋಪಿಸಿದ್ದಾರೆ.

“ನಾನು ಆಕೆಯನ್ನು ಬಂಧನವಾದ ಮಾರನೇ‌ ದಿನವೇ ಕರ್ನಲ್ ಜೈಲಿನಲ್ಲಿ ಭೇಟಿಯಾದೆ. ಆಕೆ ತನ್ನ ಮೇಲೆ ನಡೆದ ದೌರ್ಜನ್ಯದ ಕುರಿತು ಹೇಳಿದಳು. ಪುರುಷ ಪೊಲೀಸರು ಭೀಕರವಾಗಿ ಥಳಿಸಿದ್ದರು. ಆಕೆಯ ಗುಪ್ತಾಂಗಗಳ ಮೇಲೂ ಗಾಯದ ಗುರುತುಗಳಿವೆ. ಅವಳಿಗೆ ನಾವು ನೀಡಿರುವ ಔಷಧಿಗಳನ್ನು ಸಹ ಪೊಲೀಸರು ನೀಡಲಿಲ್ಲ. ಠಾಣೆಯ ಎಸ್‌ಎಚ್‌ಒ ಅವಳನ್ನು ಗ್ಯಾಂಗ್ ಲೀಡರ್ ಆಗಿ ತೋರಿಸಲು ಬಯಸಿದ್ದಾರೆ” ಎಂದು ರಾಜ್‌ವೀರ್‌ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸಬ್‌ರಂಗ್ ವರದಿ ಮಾಡಿದೆ.

ಹರಿಯಾಣ ಪೊಲೀಸರು ನೊದೀಪ್ ವಿರುದ್ದ ಗಲಭೆ, ಕಾನೂನುಬಾಹಿರ ಸಭೆ, ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸದಂತೆ ತೊಂದರೆ ನೀಡುವುದು, ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ, ಸುಲಿಗೆ, ಕೊಲೆ ಯತ್ನ ಸೇರಿದಂತೆ ಭಾರತೀಯ ದಂಡ ಸಂಹಿತೆ ಹಲವು ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯ ಎಸ್‌ಎಚ್ಒ ಇನ್ಸ್‌ಪೆಕ್ಟರ್ ರವಿ ಕುಮಾರ್ ಹೇಳಿಕೆಯ ಆಧಾರದ ಮೇಲೆ ಈ ಪ್ರಕರಣವನ್ನು ದಾಖಲಿಸಲಾಗಿದೆ.

ಆದರೆ ನೊದೀಪ್ ಅವರ ವಕೀಲರು, ಯಾವುದೇ ಪ್ರಚೋದನೆ ಇಲ್ಲದೆ ಕಾರ್ಖಾನೆಯ ಬಳಿ ನಿಂತಿರುವಾಗ ಪೊಲೀಸರು, ನೊದೀಪ್ ಸೇರಿದಂತೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿತ್ತು ಎಂದು ವಾದಿಸಿದ್ದಾರೆ.

ನೋದೀಪ್ ಕೌರ್ ಬಿಡುಗಡೆಗೆ ಆಗ್ರಹ

ನೋದೀಪ್ ಕೌರ್ ಬಿಡುಗಡೆಗೆ ಆಗ್ರಹಿಸಿ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (ಸಿಜೆಪಿ) ಆನ್‌ಲೈನ್ ಅರ್ಜಿಯನ್ನು ಪ್ರಾರಂಭಿಸಿದೆ. ಸಿಜೆಪಿಯು ತನ್ನ ಅರ್ಜಿಯಲ್ಲಿ ನೊದೀಪ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸುವುದಲ್ಲದೆ, ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದೆ.

ಅರ್ಜಿಗೆ ಸಹಿ ಹಾಕುವವರು, ಕರ್ನಾಲ್ ಜೈಲು ಅಧಿಕಾರಿಗಳಿಗೆ ಪತ್ರ ಬರೆದು ನೊದೀಪ್ ವಿರುದ್ಧದ ದೌರ್ಜನ್ಯವನ್ನು ಪ್ರತಿಭಟಿಸುವಂತೆ ಸಿಜೆಪಿ ಒತ್ತಾಯಿಸಿದೆ. ಚೇಂಜ್.ಆರ್ಗ್‌ನಲ್ಲಿರುವ ಅರ್ಜಿಯನ್ನು ಇಲ್ಲಿ ಸಹಿ ಮಾಡಬಹುದು.


ಇದನ್ನೂ ಓದಿ: ಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...