Homeಮುಖಪುಟದಲಿತ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸಿ: ನಟ ದಿಲ್ಜಿತ್, ನಟಿ ರಮ್ಯಾ ಒತ್ತಾಯ

ದಲಿತ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸಿ: ನಟ ದಿಲ್ಜಿತ್, ನಟಿ ರಮ್ಯಾ ಒತ್ತಾಯ

ರೈತರು ಮತ್ತು ಕಾರ್ಮಿಕರು ಬೇರ್ಪಡಿಸಲಾಗದವರು. ಕಾರ್ಖಾನೆಗಳಲ್ಲಿ ಕಾರ್ಮಿಕರು ಉತ್ಪಾದಿಸುತ್ತಾರೆ ಮತ್ತು ರೈತರು ಹೊಲಗಳಲ್ಲಿ ಉತ್ಪಾದಿಸುತ್ತಾರೆ - ನೊದೀಪ್ ಕೌರ್

- Advertisement -
- Advertisement -

ಒಂದು ತಿಂಗಳಿನಿಂದ ಬಂಧನದಲ್ಲಿರುವ ದಲಿತ, ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸುವಂತೆ ಪಂಜಾಬ್‌ನ ನಟ ದಿಲ್ಜಿತ್ ದೋಸಾಂಜ್, ನಟಿ ರಮ್ಯಾ, ಅಮೆರಿಕದ ವಕೀಲೆ ಮೀನಾ ಹ್ಯಾರಿಸ್ ಸೇರಿದಂತೆ ನೂರಾರು ಜನ ದನಿಯೆತ್ತಿದ್ದಾರೆ.

23 ವರ್ಷದ ಪಂಜಾಬ್ ಮೂಲದ ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್ ಅವರನ್ನು ರೈತರ ಪರವಾಗಿ ದೆಹಲಿಯ ಸಿಂಘು ಗಡಿಯಲ್ಲಿ ಹೋರಾಡುತ್ತಿದ್ದಾಗ ಹರಿಯಾಣ ಪೊಲೀಸರು ಬಂಧಿಸಿದ್ದರು. ಅವರಿಗೆ ಫೆಬ್ರವರಿ 2 ರಂದು ಹರಿಯಾಣದ ಸೋನೆಪತ್‌ನ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಪ್ರಸ್ತುತ ಹರಿಯಾಣದ ಕರ್ನಾಲ್ ಜೈಲಿನಲ್ಲಿರುವ ಅವರನ್ನು ಹಿಂಸಿಸಲಾಗುತ್ತಿದೆ ಮತ್ತು ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ದಿ ವೈರ್ ಪತ್ರಿಕೆಯ ಲೇಖನವನ್ನು ಟ್ವೀಟ್ ಮಾಡಿರುವ ಪಂಜಾಬ್‌ನ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ #ReleaseNodeepKaur ಎಂಬ ಹ್ಯಾಷ್‌ಟ್ಯಾಗ್ ಬಳಸಿ ಅವರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ.

ಕನ್ನಡದ ಚಿತ್ರನಟಿ ರಮ್ಯಾ ದಿವ್ಯಸ್ಪಂದನರವರು ನೊದೀಪ್ ಕೌರ್‌ರವರ ಸಹೋದರಿ ರಾಜ್‌ವಿರ್ ಕೌರ್‌ರವರ ಟ್ವೀಟ್ ಅನ್ನು ಹಂಚಿಕೊಂಡು ನೊದೀಪ್ ಕೌರ್ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಟ್ವೀಟ್‌ನಲ್ಲಿ “ನನ್ನ ಸಹೋದರಿ ನೊದೀಪ್ ಕೌರ್ ಅವರನ್ನು ಜನವರಿ 12 ರಿಂದ ಮತ್ತು ಶಿವ ಕುಮಾರ್ ಅವರನ್ನು ಜನವರಿ 23 ರಿಂದ ಜೈಲಿನಲ್ಲಿರಿಸಲಾಗಿದೆ. ನೊದೀಪ್ ಕೌರ್ ಮತ್ತು ಶಿವ ಕುಮಾರ್‌ರವರ ಸಂಘಟನೆಯು ರೈತರು ಮತ್ತು ಕಾರ್ಮಿಕರಿಗಾಗುತ್ತಿರುವ ಲೂಟಿ ಮತ್ತು ಅನ್ಯಾಯವನ್ನು ಬಹಿರಂಗಪಡಿಸುವ ಧೈರ್ಯ ತೋರಿಸಿತು. ಹಾಗಾಗಿ ಅವರನ್ನು ಹಿಂಸಿಸಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಇನ್ನು ಅಮೆರಿಕ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ರವರ ಸೊಸೆ ಮತ್ತು ವಕೀಲೆ ಮೀನಾ ಹ್ಯಾರಿಸ್ ಟ್ವೀಟ್ ಮಾಡಿ “ಉಗ್ರಗಾಮಿ ಗುಂಪೊಂದು ನಿಮ್ಮ ಫೋಟೊ ಸುಟ್ಟು ಹಾಕುವುದನ್ನು ನೋಡಲು ದುಃಖವಾಗುವುದಾದರೆ, ನಾವು ಭಾರತದಲ್ಲಿದ್ದರೆ ಏನಾಗುತ್ತಿತ್ತು ಊಹಿಸಿ. ಹೇಳುತ್ತೇನೆ ಕೇಳಿ, ಕಾರ್ಮಿಕ ಹಕ್ಕುಗಳ ಕಾರ್ಯಕರ್ತೆ ನೊದೀಪ್ ಕೌರ್ ಬಂಧನದಲ್ಲಿದ್ದಾಳೆ, ಹಿಂಸೆಗೊಳಗಾಗಿದ್ದಾಳೆ ಮತ್ತು ಪೊಲೀಸ್ ಕಸ್ಟಡಿಯಲ್ಲಿಯೇ ಆಕೆಗೆ ಲೈಂಗಿಕ ಹಿಂಸೆ ನೀಡಲಾಗಿದೆ. ಕಳೆದ 20 ಕ್ಕೂ ಹೆಚ್ಚು ದಿನಗಳಿಂದ ಜಾಮೀನು ನೀಡದೇ ಆಕೆಯನ್ನು ಬಂಧನದಲ್ಲಿಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೊದೀಪ್ ಕೌರ್ ಯಾರು?

ಪಂಜಾಬ್‌ ಮೂಲದ ಮಜ್ದೂರ್ ಅಧಿಕಾರ ಸಂಘಟನ್ (ಎಂಎಎಸ್) ಕಾರ್ಮಿಕ ಸಂಘದ ಕಾರ್ಯಕರ್ತೆಯಾಗಿರುವ ದಲಿತ ಸಮುದಾಯದ ನೊದೀಪ್ ಕೌರ್ ಡಿಸೆಂಬರ್ 2020 ರಿಂದ ಸಿಂಘು ಗಡಿಯಲ್ಲಿ ರೈತರ ಆಂದೋಲನದಲ್ಲಿ ಭಾಗವಹಿಸುತ್ತಿದ್ದರು.

ರೈತ ಪ್ರತಿಭಟನೆಯನ್ನು ಬೆಂಬಲಿಸಿ ಕುಂಡ್ಲಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಕಾರ್ಮಿಕರ ಗುಂಪಿನೊಂದಿಗೆ ನೊದೀಪ್ ಕೌರ್ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಅವರು, ಕಾರ್ಮಿಕರು ಸಹ ರೈತರಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾರ್ಮಿಕರು ಕಾರ್ಖಾನೆಯ ಮಾಲಿಕರಿಂದ ಶೋಷಣೆಗೆ ಒಳಗಾಗಿದ್ದಾರೆ, ಅವರ ವೇತನವನ್ನು ತಡೆಹಿಡಿಯಲಾಗಿದೆ ಮತ್ತು ಅವರನ್ನು ಉದ್ಯೋಗಗಳಿಂದ ಕಿತ್ತು ಎಸೆಯಲಾಗಿದೆ ಎಂದು ಆರೋಪಿಸಿದ್ದರು.

ಸಿಂಘು ಗಡಿಯಲ್ಲಿ ಈ ಪ್ರದೇಶದ ಕಾರ್ಮಿಕರು ಮತ್ತು ರೈತರನ್ನು ಒಟ್ಟುಗೂಡಿಸಿ ನೊದೀಪ್ ಹೋರಾಟ ಮುನ್ನಡೆಸಿದ್ದರು. ಸಿಂಘು ಮತ್ತು ಕುಂಡ್ಲಿ ಗಡಿಯಲ್ಲಿ, ‘ಕಿಸಾನ್ ಮಜ್ದೂರ್ ಏಕ್ತಾ ಜಿಂದಾಬಾದ್’ ಘೋಷಣೆಗಳು ಪ್ರತಿಧ್ವನಿಸುತ್ತಿದ್ದವು. ಎಂಎಎಸ್ ಮತ್ತು ಇತರ ಕಾರ್ಮಿಕ ಸಂಘಗಳು ರೈತರ ಹೋರಾಟಕ್ಕೆ ಕೈಜೋಡಿಸಿದ್ದವು.

“ರೈತರು ಮತ್ತು ಕಾರ್ಮಿಕರು ಬೇರ್ಪಡಿಸಲಾಗದವರು. ಕಾರ್ಖಾನೆಗಳಲ್ಲಿ ಕಾರ್ಮಿಕರು ಉತ್ಪಾದಿಸುತ್ತಾರೆ ಮತ್ತು ರೈತರು ಹೊಲಗಳಲ್ಲಿ ಉತ್ಪಾದಿಸುತ್ತಾರೆ” ಎಂದು ಕೌರ್ ಸಂದರ್ಶನವೊಂದರಲ್ಲಿ ಹೇಳಿದ್ದರು. “ಸರ್ಕಾರವು ನಮ್ಮನ್ನು, ನಮ್ಮ ಕೆಲಸವನ್ನು ತಮಗಾಗಿ ಹಣ ಸಂಪಾದಿಸಲು ಮಾರುತ್ತಿದೆ” ಎಂದು ಅವರು ಒತ್ತಿ ಹೇಳಿದ್ದರು.

ಕಾರ್ಮಿಕರ ಮೇಲಿನ ದೌರ್ಜನ್ಯವು ಹೆಚ್ಚಾದರಿಂದ ಅವರು ರೈತ ಆಂದೋಲನವನ್ನು ಬೆಂಬಲಿಸಲು ಪ್ರಾರಂಭಿಸಿದರು. ಪ್ರತಿದಿನ 300ಕ್ಕೂ ಹೆಚ್ಚು ಕಾರ್ಮಿಕರು ರೈತ ಹೋರಾಟದಲ್ಲಿ ಭಾಗವಹಿಸುತ್ತಿದ್ದರು. ಹಾಗಾಗಿ ಕಾರ್ಮಿಕ ಮುಖಂಡೆಯಾದ ನೊದೀಪ್ ಕೌರ್‌ರವರನ್ನು ಕುಂಡ್ಲಿ ಕೈಗಾರಿಕಾ ಸಂಘ ಮತ್ತು ಹರಿಯಾಣ ಪೊಲೀಸರ ಸಶಸ್ತ್ರ ಕಾವಲುಗಾರರು ಅವರನ್ನು ಗುರಿಯಾಗಿಸಿ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಆಕೆಯ ಸಹೋದರಿ ಆರೋಪಿಸಿದ್ದಾರೆ.

“ನಾನು ಆಕೆಯನ್ನು ಬಂಧನವಾದ ಮಾರನೇ‌ ದಿನವೇ ಕರ್ನಲ್ ಜೈಲಿನಲ್ಲಿ ಭೇಟಿಯಾದೆ. ಆಕೆ ತನ್ನ ಮೇಲೆ ನಡೆದ ದೌರ್ಜನ್ಯದ ಕುರಿತು ಹೇಳಿದಳು. ಪುರುಷ ಪೊಲೀಸರು ಭೀಕರವಾಗಿ ಥಳಿಸಿದ್ದರು. ಆಕೆಯ ಗುಪ್ತಾಂಗಗಳ ಮೇಲೂ ಗಾಯದ ಗುರುತುಗಳಿವೆ. ಅವಳಿಗೆ ನಾವು ನೀಡಿರುವ ಔಷಧಿಗಳನ್ನು ಸಹ ಪೊಲೀಸರು ನೀಡಲಿಲ್ಲ. ಠಾಣೆಯ ಎಸ್‌ಎಚ್‌ಒ ಅವಳನ್ನು ಗ್ಯಾಂಗ್ ಲೀಡರ್ ಆಗಿ ತೋರಿಸಲು ಬಯಸಿದ್ದಾರೆ” ಎಂದು ರಾಜ್‌ವೀರ್‌ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸಬ್‌ರಂಗ್ ವರದಿ ಮಾಡಿದೆ.

ಹರಿಯಾಣ ಪೊಲೀಸರು ನೊದೀಪ್ ವಿರುದ್ದ ಗಲಭೆ, ಕಾನೂನುಬಾಹಿರ ಸಭೆ, ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸದಂತೆ ತೊಂದರೆ ನೀಡುವುದು, ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ, ಸುಲಿಗೆ, ಕೊಲೆ ಯತ್ನ ಸೇರಿದಂತೆ ಭಾರತೀಯ ದಂಡ ಸಂಹಿತೆ ಹಲವು ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯ ಎಸ್‌ಎಚ್ಒ ಇನ್ಸ್‌ಪೆಕ್ಟರ್ ರವಿ ಕುಮಾರ್ ಹೇಳಿಕೆಯ ಆಧಾರದ ಮೇಲೆ ಈ ಪ್ರಕರಣವನ್ನು ದಾಖಲಿಸಲಾಗಿದೆ.

ಆದರೆ ನೊದೀಪ್ ಅವರ ವಕೀಲರು, ಯಾವುದೇ ಪ್ರಚೋದನೆ ಇಲ್ಲದೆ ಕಾರ್ಖಾನೆಯ ಬಳಿ ನಿಂತಿರುವಾಗ ಪೊಲೀಸರು, ನೊದೀಪ್ ಸೇರಿದಂತೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿತ್ತು ಎಂದು ವಾದಿಸಿದ್ದಾರೆ.

ನೋದೀಪ್ ಕೌರ್ ಬಿಡುಗಡೆಗೆ ಆಗ್ರಹ

ನೋದೀಪ್ ಕೌರ್ ಬಿಡುಗಡೆಗೆ ಆಗ್ರಹಿಸಿ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (ಸಿಜೆಪಿ) ಆನ್‌ಲೈನ್ ಅರ್ಜಿಯನ್ನು ಪ್ರಾರಂಭಿಸಿದೆ. ಸಿಜೆಪಿಯು ತನ್ನ ಅರ್ಜಿಯಲ್ಲಿ ನೊದೀಪ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸುವುದಲ್ಲದೆ, ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದೆ.

ಅರ್ಜಿಗೆ ಸಹಿ ಹಾಕುವವರು, ಕರ್ನಾಲ್ ಜೈಲು ಅಧಿಕಾರಿಗಳಿಗೆ ಪತ್ರ ಬರೆದು ನೊದೀಪ್ ವಿರುದ್ಧದ ದೌರ್ಜನ್ಯವನ್ನು ಪ್ರತಿಭಟಿಸುವಂತೆ ಸಿಜೆಪಿ ಒತ್ತಾಯಿಸಿದೆ. ಚೇಂಜ್.ಆರ್ಗ್‌ನಲ್ಲಿರುವ ಅರ್ಜಿಯನ್ನು ಇಲ್ಲಿ ಸಹಿ ಮಾಡಬಹುದು.


ಇದನ್ನೂ ಓದಿ: ಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...