Homeಕರ್ನಾಟಕ'ಹಂಪಿ ವಿವಿಗೆ ಅನುದಾನ ಬಿಡುಗಡೆ ಮಾಡಿ' - ನಾಳೆ #ಕನ್ನಡವಿವಿಉಳಿಸಿ ಟ್ವಿಟರ್ ಅಭಿಯಾನ: ಕರವೇ

‘ಹಂಪಿ ವಿವಿಗೆ ಅನುದಾನ ಬಿಡುಗಡೆ ಮಾಡಿ’ – ನಾಳೆ #ಕನ್ನಡವಿವಿಉಳಿಸಿ ಟ್ವಿಟರ್ ಅಭಿಯಾನ: ಕರವೇ

"ವೋಟ್ ಬ್ಯಾಂಕ್ ರಾಜಕಾರಣ‌ ನಡೆಸುವ ಉದ್ದೇಶದಿಂದ ಹೊಸ ಹೊಸ ಪ್ರಾಧಿಕಾರ ಸ್ಥಾಪಿಸಲು ರಾಜ್ಯ ಸರ್ಕಾರದ ಬಳಿ ಹಣವಿದೆ. ಆದರೆ ಏಕೈಕ ಕನ್ನಡ ವಿವಿಗೆ ಕೊಡಲು ಹಣವಿಲ್ಲವೆಂದರೆ ಹೇಗೆ? ಇದನ್ನು ನಾವು ಒಕ್ಕೊರಲಿನಿಂದ ಖಂಡಿಸಬೇಕಿದೆ"

- Advertisement -
- Advertisement -

ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಾಳೆ ಸಂಜೆ 5 ಗಂಟೆಗೆ ಟ್ವಿಟರ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕನ್ನಡ ವಿವಿಯನ್ನು ಉಳಿಸುವ ಸಲುವಾಗಿ #ಕನ್ನಡವಿವಿಉಳಿಸಿ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುವಂತೆ ಮನವಿ ಮಾಡಿದೆ.

“ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಒದಗಿಸದೆ ರಾಜ್ಯ ಸರ್ಕಾರ ನಿಧಾನ ವಿಷವುಣಿಸಿ ಕೊಲ್ಲುತ್ತಿದೆ. ನಾವು ಒಟ್ಟಾಗಿ ನಿಂತು ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಬೇಕಿದೆ. ಹಾಗಾಗಿಯೇ ಈ ಟ್ವಿಟರ್ ಆಂದೋಲನವನ್ನು ಹಮ್ಮಿಕೊಂಡಿದ್ದೇವೆ” ಎಂದು ಸಂಘಟನೆಯ ಅಧ್ಯಕ್ಷರಾದ ನಾರಾಯಣ ಗೌಡ ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲಿ ಕಲಿಸಿದ ಶಿಕ್ಷಕ ರಂಜಿತ್‌ಸಿಂಹ ದಿಸಾಳೆಗೆ ‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’

#ಕನ್ನಡವಿವಿಉಳಿಸಿ ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ರಾಜ್ಯ ಸರ್ಕಾರದ ತಾತ್ಸಾರ ಧೋರಣೆಯನ್ನು ಖಂಡಿಸಿ ಎಲ್ಲ ಕನ್ನಡ ಮನಸುಗಳು ಸಂಜೆ 5 ಗಂಟೆಯಿಂದ ಟ್ವೀಟ್ ಮಾಡಬೇಕೆಂದು ಕರವೇ ಕೇಳಿಕೊಂಡಿದೆ.

ಇದನ್ನೂ ಓದಿ: ಸಿಬಿಸಿಎಸ್ ಪದ್ಧತಿ : ಉನ್ನತ ಶಿಕ್ಷಣದಲ್ಲಿ ಕನ್ನಡಕ್ಕೆ ಕುತ್ತು

“ಕನ್ನಡ ನುಡಿ, ಸಾಹಿತ್ಯ, ಪರಂಪರೆಗಾಗಿ ಮೀಸಲಾದ ಏಕೈಕ ವಿಶ್ವವಿದ್ಯಾಲಯ ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿರುವ ಹಂಪಿ ವಿಶ್ವವಿದ್ಯಾಲಯ. ವರ್ಷಕ್ಕೆ ಆರು ಕೋಟಿ ಅನುದಾನ ಬೇಡುವ ವಿಶ್ವವಿದ್ಯಾಲಯಕ್ಕೆ ರಾಜ್ಯ ಸರ್ಕಾರ ಈ ವರ್ಷ‌‌ ನೀಡಿರುವ ಅನುದಾನ ಕೇವಲ 50 ಲಕ್ಷ‌ ರುಪಾಯಿಗಳು. ಸಂಸ್ಥೆಯ‌ ಗುತ್ತಿಗೆ ನೌಕರರಿಗೆ ಸಂಬಳ ಕೊಡಲು ಹಣವಿಲ್ಲದಷ್ಟು ವಿವಿ ಬಡವಾಗಿದೆ. ಹೀಗಿರುವಾಗ ಸಂಶೋಧನೆಯಂಥ ಕೆಲಸಗಳಿಗೆ ಹಣವೆಲ್ಲಿರಲು ಸಾಧ್ಯ?” ಎಂದು ಕರವೇ ಪ್ರಶ್ನಿಸಿದೆ.

“ವೋಟ್ ಬ್ಯಾಂಕ್ ರಾಜಕಾರಣ‌ ನಡೆಸುವ ಉದ್ದೇಶದಿಂದ ಹೊಸ ಹೊಸ ಪ್ರಾಧಿಕಾರ ಸ್ಥಾಪಿಸಲು ರಾಜ್ಯ ಸರ್ಕಾರದ ಬಳಿ ಹಣವಿದೆ. ಆದರೆ ಏಕೈಕ ಕನ್ನಡ ವಿವಿಗೆ ಕೊಡಲು ಹಣವಿಲ್ಲವೆಂದರೆ ಹೇಗೆ? ಇದನ್ನು ನಾವು ಒಕ್ಕೊರಲಿನಿಂದ ಖಂಡಿಸಬೇಕಿದೆ. ನಾಳೆ (18-12-2020) ರಂದು ಸಂಜೆ ಕರ್ನಾಟಕ ರಕ್ಷಣಾ ವೇದಿಕೆ‌ ಟ್ವಿಟರ್ ಆಂದೋಲನ‌ ನಡೆಸುವುದರ ಜತೆಗೆ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸಲಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಹಿಂದುತ್ವದ ಬೀಜಗಳನ್ನು ತೊರೆದು ಬಹುತ್ವದ ಕನ್ನಡ ರಾಷ್ಟ್ರೀಯತೆ ಕಟ್ಟುವ ಸವಾಲುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...