Homeಮುಖಪುಟಅಪೂರ್ಣ ಅಂಕಿಅಂಶ ಬಿಡುಗಡೆ : ವಲಸೆ ಕಾರ್ಮಿಕರ ವಿಚಾರದಲ್ಲಿ ಸುಳ್ಳು ಹೇಳಿತೆ ಕೇಂದ್ರ ಸರ್ಕಾರ?

ಅಪೂರ್ಣ ಅಂಕಿಅಂಶ ಬಿಡುಗಡೆ : ವಲಸೆ ಕಾರ್ಮಿಕರ ವಿಚಾರದಲ್ಲಿ ಸುಳ್ಳು ಹೇಳಿತೆ ಕೇಂದ್ರ ಸರ್ಕಾರ?

ಅಂದರೆ 8 ಕೋಟಿ ವಲಸೆ ಕಾರ್ಮಿಕರಲ್ಲಿ ಸುಮಾರು ಒಂದು ಕೋಟಿ ಜನರನ್ನು ಕೇಂದ್ರ ಸರ್ಕಾರ ಸಾಗಿಸಿರುವುದಾಗಿ ತಿಳಿಸಿದೆ. 26 ಲಕ್ಷ ಕಾರ್ಮಿಕರು ಉಳಿದುಕೊಂಡಿದ್ದಾರೆ ಎಂದು ಹೇಳಿದೆ. ಹಾಗಾದರೆ ಉಳಿದ 6.74 ಕೋಟಿ ಕಾರ್ಮಿಕರು ಎಲ್ಲಿ ಹೋದರು?

- Advertisement -
- Advertisement -

ಲಾಕ್‌ಡೌನ್‌ ಸಂದರ್ಭದಲ್ಲಿ ಸಿಕ್ಕಿಹಾಖಿಕೊಂಡಿರುವ ವಲಸೆ ಕಾರ್ಮಿಕರ ವಿಚಾರದಲ್ಲಿ ನಿನ್ನೆ ಕಾರ್ಮಿಕ ಆಯುಕ್ತರ ಕಚೇರಿ ಬಿಡುಗಡೆ ಮಾಡಿರುವ ಅಂಕಿ ಅಂಶಗಳು ಅಪೂರ್ಣ ವಾಗಿದ್ದು ಸಾಕಷ್ಟು ಅನುಮಾನಗಳಿಗೆ ಆಸ್ಪದ ನಿಡಿದ್ದು, ಈ ಕುರಿತು ದೂರು ನೀಡಿಲು ಸಾಮಾಜಿಕ ಕಾರ್ಯಕರ್ತರೊಬ್ಬರು ಮುಂದಾಗಿರುವ ಘಟನೆ ನಡೆದಿದೆ.

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಕೇವಲ 26 ಲಕ್ಷ ವಲಸೆ ಕಾರ್ಮಿಕರು ಮಾತ್ರ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಹೇಳಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ. ಈ ಕಾರಣ ದೂರು ನೀಡಲು ಮುಂದಾಗಿರುವ ವೆಂಕಟೇಶ್ ನಾಯಕ್ ಎಂಬುವವರನ್ನು ಹಫ್‌ಪೋಸ್ಟ್‌ ಮಾತನಾಡಿಸಿ ಸಂಪೂರ್ಣ ವರದಿ ನೀಡಿದೆ. ಅದರ ಸಾರಂಶ ಕೆಳಗಿನಂತಿದೆ.

ಭಾರತದಾದ್ಯಂತ ಸಿಕ್ಕಿಕೊಂಡಿರುವ ವಲಸೆ ಕಾರ್ಮಿಕರೆಷ್ಟು ಎಂಬ ಪ್ರಶ್ನೆಯಡಿ ಹಲವರು ಕಾರ್ಮಿಕ ಇಲಾಖೆಗೆ ಆರ್‌ಟಿಐ ಅರ್ಜಿ ದಾಖಲಿಸಿದ್ದಾರೆ. ಈ ಕುರಿತು ಇಲಾಕೆಯು ಜೂನ್ 2 ರಂದು ಹಲವು ದತ್ತಾಂಶಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ದತ್ತಾಂಶವನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಮೇಲ್ನೋಟಕ್ಕೆ ಅಲ್ಲಿರುವ ಸಂಖ್ಯೆಗಳನ್ನು ಕೆಳ ಅಂದಾಜು ಮಾಡಲಾಗಿದೆ, ಅಪೂರ್ಣ ವಾಗಿದೆ ಮತ್ತು ಸೂಕ್ತ ಸ್ವರೂಪದಲ್ಲಿ ಒದಗಿಸಲಾಗಿಲ್ಲ ಮತ್ತು ಆ ಮೂಲಕ ವಿವರಗಳನ್ನು ಮರೆಮಾಡುತ್ತದೆ ಎಂದು ಆರ್‌ಟಿಐ ಕಾರ್ಯಕರ್ತರು ಆರೋಪಿಸಿದ್ದಾರೆ.

ಆರ್‌ಟಿಐ ನಲ್ಲಿ ಬಂದ ಉತ್ತರಗಳಿಗೂ, ವೆಬ್‌ಸೈಟ್‌ನಲ್ಲಿರುವ ಅಂಕಿ ಅಂಶಗಳಿಗೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ಇದರ ವಿರುದ್ಧ ದೂರು ನೀಡುತ್ತೇನೆ. ತಳಮಟ್ಟದಲ್ಲಿ ಪಡೆದ ಪಡೆದ ಮಾಹಿತಿಯ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಲು ನಾನು ಕೇಳಲು ಯೋಜಿಸುತ್ತಿದ್ದೇನೆ. ಏಕೆಂದರೆ ಈಗಿರುವ ಈ ಡೇಟಾವು ವಲಸೆ ಕಾರ್ಮಿಕರಿಗೆ ನಾಗರಿಕ ಸಮಾಜದ ಆಸಕ್ತ ಸದಸ್ಯರಿಂದ ಯಾವುದೇ ಸಹಾಯ ಮಾಡುವುದಿಲ್ಲ ಎಂದು ವೆಂಕಟೇಶ್‌ ನಾಯಕ್‌ ಅಭಿಪ್ರಾಯಪಟ್ಟಿದ್ದಾರೆ.

ಮೇ ಮಧ್ಯಭಾಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಭಾರತದಾದ್ಯಂತ ಸಿಕ್ಕಿಬಿದ್ದ ವಲಸೆ ಕಾರ್ಮಿಕರ ಸಂಖ್ಯೆ 8 ಕೋಟಿ ಎಂದು ಹೇಳಿದ್ದರು. ನಂತರ ಮೇ 1 ಮತ್ತು 27 ರ ನಡುವೆ ಕೇಂದ್ರ ಸರ್ಕಾರವು 97 ಲಕ್ಷ ವಲಸೆ ಕಾರ್ಮಿಕರನ್ನು ಮನೆಗೆ ಕಳುಹಿಸಿದೆ ಎಂದು ಮೋದಿ ಸರ್ಕಾರದ ವಕೀಲರು ಮೇ ಕೊನೆಯ ವಾರದಲ್ಲಿ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದರು. 50 ಲಕ್ಷ ವಲಸೆ ಕಾರ್ಮಿಕರನ್ನು ಶ್ರಮಿಕ್ ವಿಶೇಷ ರೈಲುಗಳ ಮೂಲಕ ಮನೆಗೆ ಕಳುಹಿಸಲಾಗಿದ್ದರೆ, ಉಳಿದ 41 ಲಕ್ಷ ಕಾರ್ಮಿಕರನ್ನು ರಸ್ತೆ ಸಾರಿಗೆಯ ಮೂಲಕ ಕಳುಹಿಸಲಾಗಿದೆ ಎಂದು ತಿಳಿಸಿದ್ದರು.

ಅಂದರೆ 8 ಕೋಟಿ ವಲಸೆ ಕಾರ್ಮಿಕರಲ್ಲಿ ಸುಮಾರು ಒಂದು ಕೋಟಿ ಜನರನ್ನು ಕೇಂದ್ರ ಸರ್ಕಾರ ಸಾಗಿಸಿರುವುದಾಗಿ ತಿಳಿಸಿದೆ. 26 ಲಕ್ಷ ಕಾರ್ಮಿಕರು ಉಳಿದುಕೊಂಡಿದ್ದಾರೆ ಎಂದು ಹೇಳಿದೆ. ಹಾಗಾದರೆ ಉಳಿದ 6.74 ಕೋಟಿ ಕಾರ್ಮಿಕರು ಎಲ್ಲಿ ಹೋದರು? ಅವರೆಲ್ಲರೂ ತಮ್ಮ ರಾಜ್ಯಗಳಿಗೆ ನಡೆದುಕೊಂಡೇ ಹೋಗಿದ್ದಾರೆ ಎಂದು ನಾವು ಭಾವಿಸಬೇಕೆ?

ನಾಯಕ್, ತಮ್ಮ ಆರ್‌ಟಿಐ ಅರ್ಜಿಯಲ್ಲಿ, ಲಿಂಗ, ಉದ್ಯೋಗ ಮತ್ತು ಕ್ಷೇತ್ರಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಕೋರಿದ್ದಾರೆ. ಈ ಎಲ್ಲ ಅವಶ್ಯಕತೆಗಳನ್ನು ನಿರ್ಲಕ್ಷಿಸಿ, ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಕೇವಲ ವಲಸೆ ಕಾರ್ಮಿಕರ ಸಂಖ್ಯೆಯನ್ನು ಮತ್ತು ಅವರು ಸಿಕ್ಕಿಹಾಕಿಕೊಂಡಿರುವ ರಾಜ್ಯಗಳನ್ನು ಸರಳವಾಗಿ ಹಂಚಿಕೊಂಡಿದೆ. ಆದರೆ ಈ ಡೇಟಾವನ್ನು ಯಾವಾಗ ಸಂಗ್ರಹಿಸಲಾಗಿದೆ? ಮತ್ತು ಅದು ಸಮಂಜಸವಾಗಿ ಪೂರ್ಣಗೊಂಡಿದೆಯೆ ಎಂಬ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ.

ಅಪೂರ್ಣ ಅಂಕಿ ಅಂಶಗಳು

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಬಹಿರಂಗಪಡಿಸಿದ ದತ್ತಾಂಶ ಮತ್ತು ಸಾರ್ವಜನಿಕವಾಗಿ ಲಭ್ಯವಿರುವ ದತ್ತಾಂಶಗಳಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ. ಉದಾಹರಣೆಗೆ, ಕರ್ನಾಟಕದಲ್ಲಿ ಸಿಕ್ಕಿಕೊಂಡ 88,852 ವಲಸೆ ಕಾರ್ಮಿಕರಿದ್ದಾರೆ ಎಂದು ಕಾರ್ಮಿಕ ಕಚೇರಿ ಹೇಳಿಕೊಂಡಿದೆ. ಆದಾಗ್ಯೂ, ರಾಜ್ಯ ಸರ್ಕಾರದೊಂದಿಗೆ ಲಭ್ಯವಿರುವ ಅಧಿಕೃತ ಮಾಹಿತಿಯು ಕರ್ನಾಟಕ ಹೈಕೋರ್ಟ್‌ಗೆ ಬಹಿರಂಗಪಡಿಸಿದ್ದು, ರಾಜ್ಯದಲ್ಲಿ ಸಿಕ್ಕಿಬಿದ್ದ 11.6 ಲಕ್ಷ ಜನರಲ್ಲಿ 9.1 ಲಕ್ಷ ಜನರು ವಲಸೆ ಕಾರ್ಮಿಕರಾಗಿದ್ದಾರೆ ಎಂದು ತೋರಿಸುತ್ತದೆ. ಇವೆರಡರಲ್ಲಿ ನಾವು ಯಾವುದನ್ನು ನಂಬಬೇಕು ಎಂದು ವೆಂಕಟೇಶ್‌ ನಾಯಕ್ ಪ್ರಶ್ನಿಸುತ್ತಾರೆ.

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, ಅತಿ ಹೆಚ್ಚು ವಲಸೆ ಕಾರ್ಮಿಕರು ಸಿಕ್ಕಿಹಾಕಿಕೊಂಡಿರುವ ಮೊದಲ ಮೂರು ರಾಜ್ಯಗಳು ಚತ್ತೀಸ್‌ಗಡ (10,85,828), ಕೇರಳ (2,86,846) ಮತ್ತು ತೆಲಂಗಾಣ (1,84,006) ಆಗಿದೆ. ಸಿಕ್ಕಿಕೊಂಡ ವಲಸೆ ಕಾರ್ಮಿಕರ ಒಟ್ಟು ಸಂಖ್ಯೆ 26,17,218 ಮತ್ತು ಅವರಲ್ಲಿ ಹೆಚ್ಚಿನವರು (46%) ಅವರು ಸಾಮಾನ್ಯವಾಗಿ ತಾವು ವಾಸಿಸುವ ಸ್ಥಳಗಳಲ್ಲಿದ್ದಾರೆ. 43% ಜನರು ತಮ್ಮ ಕೆಲಸದ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ಕೇವಲ 10% ರಷ್ಟು ಕಡಿಮೆ ಜನರು ನಿಜವಾದ ಪರಿಹಾರ ಶಿಬಿರಗಳಲ್ಲಿ ಅಥವಾ ಆಶ್ರಯ ಮನೆಗಳಲ್ಲಿ ವಾಸಿಸುತ್ತಿದ್ದಾರೆ.

ಈ ಮಾಹಿತಿಯು ಪ್ರಸ್ತುತ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರ ಸಂಖ್ಯೆಯೋ ಅಥವಾ ಏಪ್ರಿಲ್‌ನಲ್ಲಿ ಸಿಕ್ಕಿಕೊಂಡಿದ್ದವರ ಬಗ್ಗೆ ಸಂಬಂಧಪಟ್ಟಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಮುಖ್ಯ ಮಾಹಿತಿ ಆಯುಕ್ತರ ವೆಬ್‌ಸೈಟ್‌ನಲ್ಲಿ ನಿಯತಕಾಲಿಕವಾಗಿ ಇತ್ತೀಚಿನ ಅಪೂರ್ಣ ವಾಗಿರುವ ಡೇಟಾವನ್ನು ಪೂರ್ಣ ಅಪ್‌ಲೋಡ್ ಮಾಡಲು ಮತ್ತು ನವೀಕರಿಸಲು ಕೇಂದ್ರ ಮಾಹಿತಿ ಆಯೋಗ ಕೇಳಿದೆ.

ಒಟ್ಟಾರೆಯಾಗಿ ವಲಸೆ ಕಾರ್ಮಿಕರ ವಿಚಾರದಲ್ಲಿ ಕೇಂದ್ರ ಸರ್ಕಾರ ಪಾರದರ್ಶಕವಾಗಿ ನಡೆದುಕೊಳ್ಳುತ್ತಿಲ್ಲ. ಸಂಪೂರ್ಣ ಮಾಹಿತಿಯನ್ನು ಬಿಚ್ಚಿಟ್ಟರೆ ಮಾತ್ರ ವಾಸ್ತವ ಸನ್ನಿವೇಶ ಅರಿತುಕೊಳ್ಳಲು ಸಾಧ್ಯವಾಗುತ್ತದೆ.


ಇದನ್ನೂ ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...