Homeಮುಖಪುಟಅಪೂರ್ಣ ಅಂಕಿಅಂಶ ಬಿಡುಗಡೆ : ವಲಸೆ ಕಾರ್ಮಿಕರ ವಿಚಾರದಲ್ಲಿ ಸುಳ್ಳು ಹೇಳಿತೆ ಕೇಂದ್ರ ಸರ್ಕಾರ?

ಅಪೂರ್ಣ ಅಂಕಿಅಂಶ ಬಿಡುಗಡೆ : ವಲಸೆ ಕಾರ್ಮಿಕರ ವಿಚಾರದಲ್ಲಿ ಸುಳ್ಳು ಹೇಳಿತೆ ಕೇಂದ್ರ ಸರ್ಕಾರ?

ಅಂದರೆ 8 ಕೋಟಿ ವಲಸೆ ಕಾರ್ಮಿಕರಲ್ಲಿ ಸುಮಾರು ಒಂದು ಕೋಟಿ ಜನರನ್ನು ಕೇಂದ್ರ ಸರ್ಕಾರ ಸಾಗಿಸಿರುವುದಾಗಿ ತಿಳಿಸಿದೆ. 26 ಲಕ್ಷ ಕಾರ್ಮಿಕರು ಉಳಿದುಕೊಂಡಿದ್ದಾರೆ ಎಂದು ಹೇಳಿದೆ. ಹಾಗಾದರೆ ಉಳಿದ 6.74 ಕೋಟಿ ಕಾರ್ಮಿಕರು ಎಲ್ಲಿ ಹೋದರು?

- Advertisement -
- Advertisement -

ಲಾಕ್‌ಡೌನ್‌ ಸಂದರ್ಭದಲ್ಲಿ ಸಿಕ್ಕಿಹಾಖಿಕೊಂಡಿರುವ ವಲಸೆ ಕಾರ್ಮಿಕರ ವಿಚಾರದಲ್ಲಿ ನಿನ್ನೆ ಕಾರ್ಮಿಕ ಆಯುಕ್ತರ ಕಚೇರಿ ಬಿಡುಗಡೆ ಮಾಡಿರುವ ಅಂಕಿ ಅಂಶಗಳು ಅಪೂರ್ಣ ವಾಗಿದ್ದು ಸಾಕಷ್ಟು ಅನುಮಾನಗಳಿಗೆ ಆಸ್ಪದ ನಿಡಿದ್ದು, ಈ ಕುರಿತು ದೂರು ನೀಡಿಲು ಸಾಮಾಜಿಕ ಕಾರ್ಯಕರ್ತರೊಬ್ಬರು ಮುಂದಾಗಿರುವ ಘಟನೆ ನಡೆದಿದೆ.

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಕೇವಲ 26 ಲಕ್ಷ ವಲಸೆ ಕಾರ್ಮಿಕರು ಮಾತ್ರ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಹೇಳಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ. ಈ ಕಾರಣ ದೂರು ನೀಡಲು ಮುಂದಾಗಿರುವ ವೆಂಕಟೇಶ್ ನಾಯಕ್ ಎಂಬುವವರನ್ನು ಹಫ್‌ಪೋಸ್ಟ್‌ ಮಾತನಾಡಿಸಿ ಸಂಪೂರ್ಣ ವರದಿ ನೀಡಿದೆ. ಅದರ ಸಾರಂಶ ಕೆಳಗಿನಂತಿದೆ.

ಭಾರತದಾದ್ಯಂತ ಸಿಕ್ಕಿಕೊಂಡಿರುವ ವಲಸೆ ಕಾರ್ಮಿಕರೆಷ್ಟು ಎಂಬ ಪ್ರಶ್ನೆಯಡಿ ಹಲವರು ಕಾರ್ಮಿಕ ಇಲಾಖೆಗೆ ಆರ್‌ಟಿಐ ಅರ್ಜಿ ದಾಖಲಿಸಿದ್ದಾರೆ. ಈ ಕುರಿತು ಇಲಾಕೆಯು ಜೂನ್ 2 ರಂದು ಹಲವು ದತ್ತಾಂಶಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ದತ್ತಾಂಶವನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಮೇಲ್ನೋಟಕ್ಕೆ ಅಲ್ಲಿರುವ ಸಂಖ್ಯೆಗಳನ್ನು ಕೆಳ ಅಂದಾಜು ಮಾಡಲಾಗಿದೆ, ಅಪೂರ್ಣ ವಾಗಿದೆ ಮತ್ತು ಸೂಕ್ತ ಸ್ವರೂಪದಲ್ಲಿ ಒದಗಿಸಲಾಗಿಲ್ಲ ಮತ್ತು ಆ ಮೂಲಕ ವಿವರಗಳನ್ನು ಮರೆಮಾಡುತ್ತದೆ ಎಂದು ಆರ್‌ಟಿಐ ಕಾರ್ಯಕರ್ತರು ಆರೋಪಿಸಿದ್ದಾರೆ.

ಆರ್‌ಟಿಐ ನಲ್ಲಿ ಬಂದ ಉತ್ತರಗಳಿಗೂ, ವೆಬ್‌ಸೈಟ್‌ನಲ್ಲಿರುವ ಅಂಕಿ ಅಂಶಗಳಿಗೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ಇದರ ವಿರುದ್ಧ ದೂರು ನೀಡುತ್ತೇನೆ. ತಳಮಟ್ಟದಲ್ಲಿ ಪಡೆದ ಪಡೆದ ಮಾಹಿತಿಯ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಲು ನಾನು ಕೇಳಲು ಯೋಜಿಸುತ್ತಿದ್ದೇನೆ. ಏಕೆಂದರೆ ಈಗಿರುವ ಈ ಡೇಟಾವು ವಲಸೆ ಕಾರ್ಮಿಕರಿಗೆ ನಾಗರಿಕ ಸಮಾಜದ ಆಸಕ್ತ ಸದಸ್ಯರಿಂದ ಯಾವುದೇ ಸಹಾಯ ಮಾಡುವುದಿಲ್ಲ ಎಂದು ವೆಂಕಟೇಶ್‌ ನಾಯಕ್‌ ಅಭಿಪ್ರಾಯಪಟ್ಟಿದ್ದಾರೆ.

ಮೇ ಮಧ್ಯಭಾಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಭಾರತದಾದ್ಯಂತ ಸಿಕ್ಕಿಬಿದ್ದ ವಲಸೆ ಕಾರ್ಮಿಕರ ಸಂಖ್ಯೆ 8 ಕೋಟಿ ಎಂದು ಹೇಳಿದ್ದರು. ನಂತರ ಮೇ 1 ಮತ್ತು 27 ರ ನಡುವೆ ಕೇಂದ್ರ ಸರ್ಕಾರವು 97 ಲಕ್ಷ ವಲಸೆ ಕಾರ್ಮಿಕರನ್ನು ಮನೆಗೆ ಕಳುಹಿಸಿದೆ ಎಂದು ಮೋದಿ ಸರ್ಕಾರದ ವಕೀಲರು ಮೇ ಕೊನೆಯ ವಾರದಲ್ಲಿ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದರು. 50 ಲಕ್ಷ ವಲಸೆ ಕಾರ್ಮಿಕರನ್ನು ಶ್ರಮಿಕ್ ವಿಶೇಷ ರೈಲುಗಳ ಮೂಲಕ ಮನೆಗೆ ಕಳುಹಿಸಲಾಗಿದ್ದರೆ, ಉಳಿದ 41 ಲಕ್ಷ ಕಾರ್ಮಿಕರನ್ನು ರಸ್ತೆ ಸಾರಿಗೆಯ ಮೂಲಕ ಕಳುಹಿಸಲಾಗಿದೆ ಎಂದು ತಿಳಿಸಿದ್ದರು.

ಅಂದರೆ 8 ಕೋಟಿ ವಲಸೆ ಕಾರ್ಮಿಕರಲ್ಲಿ ಸುಮಾರು ಒಂದು ಕೋಟಿ ಜನರನ್ನು ಕೇಂದ್ರ ಸರ್ಕಾರ ಸಾಗಿಸಿರುವುದಾಗಿ ತಿಳಿಸಿದೆ. 26 ಲಕ್ಷ ಕಾರ್ಮಿಕರು ಉಳಿದುಕೊಂಡಿದ್ದಾರೆ ಎಂದು ಹೇಳಿದೆ. ಹಾಗಾದರೆ ಉಳಿದ 6.74 ಕೋಟಿ ಕಾರ್ಮಿಕರು ಎಲ್ಲಿ ಹೋದರು? ಅವರೆಲ್ಲರೂ ತಮ್ಮ ರಾಜ್ಯಗಳಿಗೆ ನಡೆದುಕೊಂಡೇ ಹೋಗಿದ್ದಾರೆ ಎಂದು ನಾವು ಭಾವಿಸಬೇಕೆ?

ನಾಯಕ್, ತಮ್ಮ ಆರ್‌ಟಿಐ ಅರ್ಜಿಯಲ್ಲಿ, ಲಿಂಗ, ಉದ್ಯೋಗ ಮತ್ತು ಕ್ಷೇತ್ರಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಕೋರಿದ್ದಾರೆ. ಈ ಎಲ್ಲ ಅವಶ್ಯಕತೆಗಳನ್ನು ನಿರ್ಲಕ್ಷಿಸಿ, ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಕೇವಲ ವಲಸೆ ಕಾರ್ಮಿಕರ ಸಂಖ್ಯೆಯನ್ನು ಮತ್ತು ಅವರು ಸಿಕ್ಕಿಹಾಕಿಕೊಂಡಿರುವ ರಾಜ್ಯಗಳನ್ನು ಸರಳವಾಗಿ ಹಂಚಿಕೊಂಡಿದೆ. ಆದರೆ ಈ ಡೇಟಾವನ್ನು ಯಾವಾಗ ಸಂಗ್ರಹಿಸಲಾಗಿದೆ? ಮತ್ತು ಅದು ಸಮಂಜಸವಾಗಿ ಪೂರ್ಣಗೊಂಡಿದೆಯೆ ಎಂಬ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ.

ಅಪೂರ್ಣ ಅಂಕಿ ಅಂಶಗಳು

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಬಹಿರಂಗಪಡಿಸಿದ ದತ್ತಾಂಶ ಮತ್ತು ಸಾರ್ವಜನಿಕವಾಗಿ ಲಭ್ಯವಿರುವ ದತ್ತಾಂಶಗಳಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ. ಉದಾಹರಣೆಗೆ, ಕರ್ನಾಟಕದಲ್ಲಿ ಸಿಕ್ಕಿಕೊಂಡ 88,852 ವಲಸೆ ಕಾರ್ಮಿಕರಿದ್ದಾರೆ ಎಂದು ಕಾರ್ಮಿಕ ಕಚೇರಿ ಹೇಳಿಕೊಂಡಿದೆ. ಆದಾಗ್ಯೂ, ರಾಜ್ಯ ಸರ್ಕಾರದೊಂದಿಗೆ ಲಭ್ಯವಿರುವ ಅಧಿಕೃತ ಮಾಹಿತಿಯು ಕರ್ನಾಟಕ ಹೈಕೋರ್ಟ್‌ಗೆ ಬಹಿರಂಗಪಡಿಸಿದ್ದು, ರಾಜ್ಯದಲ್ಲಿ ಸಿಕ್ಕಿಬಿದ್ದ 11.6 ಲಕ್ಷ ಜನರಲ್ಲಿ 9.1 ಲಕ್ಷ ಜನರು ವಲಸೆ ಕಾರ್ಮಿಕರಾಗಿದ್ದಾರೆ ಎಂದು ತೋರಿಸುತ್ತದೆ. ಇವೆರಡರಲ್ಲಿ ನಾವು ಯಾವುದನ್ನು ನಂಬಬೇಕು ಎಂದು ವೆಂಕಟೇಶ್‌ ನಾಯಕ್ ಪ್ರಶ್ನಿಸುತ್ತಾರೆ.

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, ಅತಿ ಹೆಚ್ಚು ವಲಸೆ ಕಾರ್ಮಿಕರು ಸಿಕ್ಕಿಹಾಕಿಕೊಂಡಿರುವ ಮೊದಲ ಮೂರು ರಾಜ್ಯಗಳು ಚತ್ತೀಸ್‌ಗಡ (10,85,828), ಕೇರಳ (2,86,846) ಮತ್ತು ತೆಲಂಗಾಣ (1,84,006) ಆಗಿದೆ. ಸಿಕ್ಕಿಕೊಂಡ ವಲಸೆ ಕಾರ್ಮಿಕರ ಒಟ್ಟು ಸಂಖ್ಯೆ 26,17,218 ಮತ್ತು ಅವರಲ್ಲಿ ಹೆಚ್ಚಿನವರು (46%) ಅವರು ಸಾಮಾನ್ಯವಾಗಿ ತಾವು ವಾಸಿಸುವ ಸ್ಥಳಗಳಲ್ಲಿದ್ದಾರೆ. 43% ಜನರು ತಮ್ಮ ಕೆಲಸದ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ಕೇವಲ 10% ರಷ್ಟು ಕಡಿಮೆ ಜನರು ನಿಜವಾದ ಪರಿಹಾರ ಶಿಬಿರಗಳಲ್ಲಿ ಅಥವಾ ಆಶ್ರಯ ಮನೆಗಳಲ್ಲಿ ವಾಸಿಸುತ್ತಿದ್ದಾರೆ.

ಈ ಮಾಹಿತಿಯು ಪ್ರಸ್ತುತ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರ ಸಂಖ್ಯೆಯೋ ಅಥವಾ ಏಪ್ರಿಲ್‌ನಲ್ಲಿ ಸಿಕ್ಕಿಕೊಂಡಿದ್ದವರ ಬಗ್ಗೆ ಸಂಬಂಧಪಟ್ಟಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಮುಖ್ಯ ಮಾಹಿತಿ ಆಯುಕ್ತರ ವೆಬ್‌ಸೈಟ್‌ನಲ್ಲಿ ನಿಯತಕಾಲಿಕವಾಗಿ ಇತ್ತೀಚಿನ ಅಪೂರ್ಣ ವಾಗಿರುವ ಡೇಟಾವನ್ನು ಪೂರ್ಣ ಅಪ್‌ಲೋಡ್ ಮಾಡಲು ಮತ್ತು ನವೀಕರಿಸಲು ಕೇಂದ್ರ ಮಾಹಿತಿ ಆಯೋಗ ಕೇಳಿದೆ.

ಒಟ್ಟಾರೆಯಾಗಿ ವಲಸೆ ಕಾರ್ಮಿಕರ ವಿಚಾರದಲ್ಲಿ ಕೇಂದ್ರ ಸರ್ಕಾರ ಪಾರದರ್ಶಕವಾಗಿ ನಡೆದುಕೊಳ್ಳುತ್ತಿಲ್ಲ. ಸಂಪೂರ್ಣ ಮಾಹಿತಿಯನ್ನು ಬಿಚ್ಚಿಟ್ಟರೆ ಮಾತ್ರ ವಾಸ್ತವ ಸನ್ನಿವೇಶ ಅರಿತುಕೊಳ್ಳಲು ಸಾಧ್ಯವಾಗುತ್ತದೆ.


ಇದನ್ನೂ ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...