Homeಮುಖಪುಟಓಟಿಟಿಯಲ್ಲಿ ಬಿಡುಗಡೆಯಾದ ‘ಲಾ’ ಸೃಷ್ಟಿಸಿದ ಚರ್ಚೆಗಳ ಸುತ್ತ...!

ಓಟಿಟಿಯಲ್ಲಿ ಬಿಡುಗಡೆಯಾದ ‘ಲಾ’ ಸೃಷ್ಟಿಸಿದ ಚರ್ಚೆಗಳ ಸುತ್ತ…!

- Advertisement -
- Advertisement -

ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ ನಿರ್ಮಾಣದ ‘ಲಾ’ ಸಿನಿಮಾ ಕಳೆದವಾರವಷ್ಟೇ ಓಟಿಟಿ (ಓವರ್ ದ ಟಾಪ್) ಪ್ಲಾಟ್‌ಫಾರ್ಮ್ನಲ್ಲಿ ರಿಲೀಸ್ ಅಗಿದೆ. ಓಟಿಟಿಯಲ್ಲಿ ಬಿಡುಗಡೆಯಾದ ಕನ್ನಡದ ಮೊದಲ ಸಿನಿಮಾಗಳಲ್ಲಿ ಇದೂ ಒಂದು ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. (ಹಿಂದೆ ಆದರ್ಶ್ ಈಶ್ವರಪ್ಪ ನಿರ್ದೇಶನದ ಭಿನ್ನ ಕೂಡ ಓಟಿಟಿಯಲ್ಲಿ ಬಿಡುಗಡೆಯಾಗಿ ಸದ್ದು ಮಾಡಿತ್ತು). ಈಗ ‘ಲಾ’ ಸಿನಿಮಾ ಅಮೆಜಾನ್  ಪ್ರೈಂನಲ್ಲಿ ಬಿಡುಗಡೆಯಾದ ಮೇಲೆ ಎರಡು ರೀತಿಯ ಚರ್ಚೆಯನ್ನು ಹುಟ್ಟುಹಾಕಿದೆ.

ಒಂದು, ಈ ಸಿನಿಮಾ ಚಿತ್ರಿಸಿರುವ ಕತೆಯ ಚಿತ್ರಣದ ಅಂಕುಡೊಂಕುಗಳಿಂದಾಗಿ, ಥಿಯೇಟರ್‌ಗಳಲ್ಲಿ ಹಣ ಮಾಡಲಾಗದ ಇಂತಹ ಸಿನಿಮಾಗಷ್ಟೇ ಓಟಿಟಿ ಪ್ಲಾಟ್‌ಫಾರ್ಮ್ನಲ್ಲಿ ರಿಲೀಸ್ ಆಗುತ್ತವೆ ಅನ್ನುವುದು.. ಮತ್ತೊಂದು, ಸಿನಿಮಾಗಳನ್ನು ಓಟಿಟಿಗಳಲ್ಲಿ ನೋಡುವುದು ನಿರ್ದೇಶಕರಿಗೆ ಮಾಡುವ ಅವಮಾನ ಎಂಬಂತಹ ಭ್ರಮೆ..

ಮೊನ್ನೆ ಮೊನ್ನೆಯಷ್ಟೇ ಆರಂಭಗೊಂಡ ಎಫ್‌ಯುಸಿ (ಫಿಲ್ಮ್ಮೇರ‍್ಸ್ ಯುನೈಟೆಡ್ ಕ್ಲಬ್) ಎಂಬ ತಂಡ ತಮ್ಮ ವೆಬ್‌ಸೈಟ್‌ನಲ್ಲಿ ಅಂಕಣವೊಂದನ್ನು ಪ್ರಕಟಿಸಿದೆ. ಜನರು ಓಟಿಟಿಗಳಲ್ಲಿ ಸಿನಿಮಾ ನೋಡುವುದರ ಬಗ್ಗೆ ಆ ಅಂಕಣ ಪ್ರಶ್ನೆ ಎತ್ತಿದೆ. ಮನೆಯಲ್ಲಿ ಕುಳಿತು ಸಿನಿಮಾ ನೋಡುವುದರಿಂದಾಗುವ ಸಮಸ್ಯೆಗಳ ಜೊತೆಗೆ, ಸಿನಿಮಾಗಳನ್ನು ಓಟಿಟಿಯಲ್ಲಿ ನೋಡುವುದೇ ನಿರ್ದೇಶಕರಿಗೆ ಮಾಡುವ ಅವಮಾನವೆಂದು ಹೇಳಿದೆ.

ಹಾಗೆ ನೋಡಿದರೆ, ವಿಶ್ವದ ಮೂಲೆಮೂಲೆಗೂ ಸಿನಿಮಾಗಳಿಗೆ ಹೆದ್ದಾರಿ ಮಾಡಿಕೊಡುವ ಓಟಿಟಿಯ ಹಾದಿಗೆ ಕನ್ನಡ ಚಿತ್ರರಂಗ ಈಗಷ್ಟೇ ಕಾಲ್ನಡಿಗೆಯ ಹಾದಿಯನ್ನು ಹುಡುಕುತ್ತಿದೆ. ಹಲವು ವರ್ಷಗಳಿಂದ ಚಾಲ್ತಿಯಲ್ಲಿರುವ ಓಟಿಟಿಗಳಲ್ಲಿ ಕನ್ನಡ ಚಿತ್ರಗಳಿಗೆ ಇತ್ತೀಚೆಗಷ್ಟೇ ಅವಕಾಶಗಳು ಸಿಗುತ್ತಿವೆ. ಆಗಲೇ ಅದರ ವಿರುದ್ಧ ಅಭಿಪ್ರಾಯ ಮೂಡಿಸುವ ಹೊಸ ತಂತ್ರವೂ ಹೆಣೆದುಕೊಳ್ಳುತ್ತಿದೆ.

ಇಡೀ ಜಗತ್ತೇ ಡಬ್ಬಿಂಗ್‌ಗೆ ಓಕೆ ಎಂದಿದ್ದ ಸಂದರ್ಭದಲ್ಲಿಯೂ ಸ್ಯಾಂಡಲ್‌ವುಡ್‌ನ ಕೆಲವರದ್ದು ಇಂತದ್ದೇ ತಗಾದೆ ಇತ್ತು. ಅದೆಲ್ಲವನ್ನು ಬದಿಗೊತ್ತಿ, ಈಗ ಡಬ್ಬಿಂಗ್ ದುನಿಯಾ ಕನ್ನಡ ಚಿತ್ರರಂಗದಲ್ಲಿ ಪಸರಿಸುತ್ತಿದೆ. ಅಂತೆಯೇ ಓಟಿಟಿಯೂ ಈಗಷ್ಟೇ ಕನ್ನಡದಲ್ಲಿ ಚಿಗುರೊಡೆಯಲಾರಂಭಿಸಿದೆ.

‘ಕನ್ನಡ ಚಿತ್ರರಂಗದಲ್ಲಿ ಓಟಿಟಿಗೆ ನೆಲೆಯಿಲ್ಲ – ಓಟಿಟಿಯಲ್ಲಿ ಕನ್ನಡ ಚಿತ್ರಗಳಿಗೂ ಸ್ಥಾನ ಉಳಿಯುವುದಿಲ್ಲ’ ಇದು ಸದ್ಯಕ್ಕೆ ಕನ್ನಡ ಚಿತ್ರರಂಗದ ಯಥಾಸ್ಥಿತಿವಾದಿಗಳ ಅಭಿಪ್ರಾಯ. ಇದಕ್ಕೆ ಹೌದು ಎಂಬಂತೆ, ಕನ್ನಡದಲ್ಲಷ್ಟೇ ಅಲ್ಲ, ಭಾರತೀಯ ಚಿತ್ರರಂಗದಲ್ಲಿಯೇ ಯಾವ ಸ್ಟಾರ್ ನಟನ ಸಿನಿಮಾಗಳನ್ನು ನೇರವಾಗಿ ಓಟಿಟಿಯಲ್ಲಿ ರಿಲೀಸ್ ಮಾಡಲು ಪ್ರೊಡ್ಯೂಸರ್‌ಗಳು, ಸ್ಟಾರ್ ಆಕ್ಟರ್‌ಗಳೂ ಮುಂದೆ ಬರುತ್ತಿಲ್ಲ. ಬಿಗ್ ಬಜೆಟ್‌ನ ಸಿನಿಮಾಗಳು ಓಟಿಟಿಯಲ್ಲಿ ಬಿಡುಗಡೆಯಾದರೆ ಹಾಕಿರುವ ಬಂಡವಾಳವನ್ನು ಲಾಭದ ಸಮೇತ ವಾಪಸ್ ಕೊಡುತ್ತವೆ ಎಂಬ ಭರವಸೆ ಯಾರಿಗೂ ಇಲ್ಲ. ಸದ್ಯಕ್ಕೆ ಅದು ಸತ್ಯವೂ ಹೌದು.

ಕಾರಣ, ಓಟಿಟಿ ವೇದಿಕೆಗಳು ಭಾರತೀಯರಿಗೆ ಹೆಚ್ಚಾಗಿ ಪರಿಚಿತವಾಗಿಲ್ಲ. ಬಹುಸಂಖ್ಯಾತ ಜನರನ್ನು ಓಟಿಟಿ ಇನ್ನೂ ರೀಚ್ ಆಗಿಲ್ಲ. ಅಲ್ಲದೆ, ಥಿಯೇಟರ್‌ಗಳಲ್ಲಿ ಸಿನಿಮಾ ನೋಡುವ ಜನರ  ಕ್ರೇಜ್ ಓಟಿಟಿ ಎಡೆಗೆ ಇನ್ನೂ ತಿರುಗಿದಂತೆ ಕಾಣುತ್ತಿಲ್ಲ. ಹಾಗೆಂದ ಮಾತ್ರಕ್ಕೆ ಓಟಿಟಿ ಕೇವಲ ಕಡಿಮೆ ಬಜೆಟ್‌ನ ಹಾಗೂ ಡಬ್ಬಾ ಸಿನಿಮಾಗಳಿಗಷ್ಟೇ ಸೀಮಿತವೂ ಆಗಿಲ್ಲ. ಹಾಲಿವುಡ್‌ನ ಜನಪ್ರಿಯ ಸಿನಿಮಾಗಳೂ ಕೂಡ ಓಟಿಟಿಯಲ್ಲಿ ರಿಲೀಸ್ ಆಗುತ್ತಿವೆ. ಅಂತಹ ಸಿನಿಮಾಗಳಲ್ಲಿ ಸ್ನೈಡರ್ ಕಟ್ ಕೂಡ ಒಂದು. ಈ ಸಿನಿಮಾದ  ಟ್ರೈಲರ್ ಯೂಟ್ಯೂಬ್ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದು, ಸದ್ಯದಲ್ಲೇ ಬಿಡುಗಡೆಗೆ
ರೆಡಿಯಾಗಿದೆ.

ಸಿನಿಮಾ ನೋಡುವಾಗ ಥಿಯೇಟರ್‌ಗಳಲ್ಲಿ ಸಿಗುವ ಮಜಾ ಓಟಿಟಿಯಲ್ಲಿ ಸಿಗುವುದಿಲ್ಲ ಎನ್ನುವ ಮಾತೂ ಇದೆ. ಜೋಷ್ ಇರುವುದಿಲ್ಲ. ಸಿನಿಮಾಗಳನ್ನು ಸಮೂಹದಲ್ಲಿ ನೋಡುವ ಆನಂದವೇ ಬೇರೆ ರೀತಿಯದ್ದು. ಸಿನಿಮಾ ಮುಗಿದು ಥಿಯೇಟರ್‌ನಿಂದ ಹೊರಬರುವಾಗ ಎಂಥದ್ದೂ ಒಂದು ಫೀಲ್ ಮನಸ್ಸಲ್ಲಿ ಮೂಡುತ್ತದೆ. ಅಂತಹ ಫೀಲ್ ಓಟಿಟಿಯಲ್ಲಿ ಹುಟ್ಟಲಾರದು ಎಂಬ ಮಾತುಗಳು. ಆದರೆ, ಸದ್ಯ ಓಟಿಟಿಯಲ್ಲಿ ಸಿಗುತ್ತಿರುವ ಕಂಟೆಂಟ್ (ಗುಣಮಟ್ಟ ಹಾಗೂ ಅದು ಲಭ್ಯವಿರುವ ಮಾದರಿ) ಥಿಯೇಟರ್‌ಗಳಲ್ಲಿ ಸಿಗುತ್ತಿಲ್ಲ ಎಂಬುದು ಅಷ್ಟೇ ಸತ್ಯ.

ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಂನಂತಹ ಜಗತ್ತಿನಾದ್ಯಂತ ಹರಡಿರುವ ಓಟಿಟಿ ಪ್ಲಾಟ್‌ಫಾರ್ಮ್ಗಳಲ್ಲಿ ಈಗಷ್ಟೆ ಕನ್ನಡ ಸಿನಿಮಾಗಳಿಗೆ ಸ್ಥಾನ ಸಿಗುತ್ತಿದೆ. ಕನ್ನಡ ಸಿನಿಮಾಗಳು ಎಲ್ಲೆಡೆ ಹರಡುವ ಅವಕಾಶವನ್ನೂ ಉಂಟು ಮಾಡಿದೆ. ಆದರೆ, ಕನ್ನಡ ಚಿತ್ರರಂಗವೇ ಇದಕ್ಕೆ ಇನ್ನೂ ಸಿದ್ದವಾಗಿಲ್ಲ.

ಇದೆಲ್ಲದರ ನಡುವೆ, ಓಕೆ (ಓನ್ಲೀ ಕನ್ನಡ) ಎಂಬ ಕನ್ನಡ ಸಿನಿಮಾಗಳಿಗಷ್ಟೇ ಸೀಮಿತವಾದ ಹೊಸ ಓಟಿಟಿ ಪ್ಲಾಟ್‌ಫಾರ್ಮ್ ಕೂಡ ಆರಂಭವಾಗುತ್ತಿದೆ. ಕನ್ನಡದ ನಾಟಕ, ಸಿನಿಮಾ, ವೆಬ್ ಸೀರಿಸ್‌ಗಳ ನಿರ್ಮಾಣ ಮತ್ತು ಬಿಡುಗಡೆಗಾಗಿ ಇದು ಆರಂಭಗೊಳ್ಳುತ್ತಿದೆ. ಕನ್ನಡದಲ್ಲಿ ಹೊಸದೊಂದು ಪ್ಲಾಟ್‌ಫಾರ್ಮ್ ಕ್ರಿಯೇಟ್ ಮಾಡುವ ಸದಭಿರುಚಿಯೊಂದಿಗೆ ಪ್ರಯೋಗ್ ಸ್ಟುಡಿಯೂ ಮತ್ತು ಮಯೂರ್ ಮೋಷನ್ ಪಿಕ್ರ‍್ಸ್ ಇದಕ್ಕೆ ಮುಂದಾಗಿವೆ.

ಸದ್ಯದ ಪರಿಸ್ಥಿತಿಯಲ್ಲಿ ಥಿಯೇಟರ್‌ಗಳು, ಮಲ್ಟಿಪ್ಲೆಕ್ಸ್ಗಳು, ಮಾಲ್‌ಗಳು ಮುಚ್ಚಿರುವುದರಿಂದಾಗಿ ಒಂದಷ್ಟು ಪ್ರಮಾಣದ ಜನರು ಓಟಿಟಿಗಳ ಮೊರೆ ಹೋಗಿದ್ದಾರೆ. ಅದು ಹೀಗೆಯೇ ಇರಲಾರದು. ಹೆಚ್ಚು ಬಂಡವಾಳ ಹಾಕಿ ನಿರ್ಮಾಣ ಮಾಡಿದ ಸಿನಿಮಾಗಳು ಥಿಯೇಟರ್‌ನಲ್ಲಿ ರಿಲೀಸ್ ಅಗಿಯೇ ಬಂಡವಾಳವನ್ನು ಮರಳಿ ತರುವಲ್ಲಿ ಪೈಪೋಟಿ ಎದುರಿಸುತ್ತಿವೆ. ಹೀಗಿರುವಾಗ ಓಟಿಟಿಗಳು ಸಿನಿಮಾಗೆ ಸುರಿದ ಬಂಡವಾಳವನ್ನು ವಾಪಸ್ ನೀಡಬಲ್ಲವೇ ಎಂಬ ಪ್ರಶ್ನೆಯೂ ಎದುರಾಗುತ್ತದೆ. ಈ ದೆಸೆಯಲ್ಲಿ ಓಟಿಟಿ ಕಂಪ್ಲೀಟ್ಲಿ ಕಡ್ಳೆಪುರಿ ವ್ಯಾಪಾರವಿದ್ದಂತೆ, ಅದಕ್ಕೆ ಎಂದೂ ಭವಿಷ್ಯವಿಲ್ಲ ಎಂಬುದು ಸದ್ಯಕ್ಕೆ ಕನ್ನಡ ಸಿನಿಮಾ ರಂಗದ ಅಭಿಪ್ರಾಯ.

ಆದರೆ, ಡಿಜಿಟೈಸ್ ಆಗುತ್ತಿರುವ ಜನರು ಓಟಿಟಿಗಳೆಡೆಗೆ ಮುಖ ಮಾಡಿದ್ದಾರೆ. ಮುಂದಿನ ಸಿನಿಮಾಗಳ ಭವಿಷ್ಯ ಓಟಿಟಿಯೇ ಎಂಬುದು ಡಿಜಿಟಲ್ ಕ್ಷೇತ್ರದವರ ಅಭಿಪ್ರಾಯ.
ಇದೆಲ್ಲದರ ನಡುವೆ, ಓಟಿಟಿಯಲ್ಲಿ ರಿಲೀಸ್ ಆದ ‘ಲಾ’ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಓಟಿಟಿ ಬಗೆಗೆ ಒಂದು ನೆಗೆಟಿವ್ ಅಪ್ರೋಚ್ ಕಟ್ಟಿಕೊಟ್ಟಿದೆ. ನಿರೀಕ್ಷಿತ ಗುಣಮಟ್ಟದಲ್ಲಿ ಸಿನಿಮಾ ಮೂಡದೆ ಇದ್ದದ್ದೂ ಕಾರಣ ಇರಬಹುದು. ಏನೇ ಇರಿಲಿ, ಕನ್ನಡದ ಮಟ್ಟಿಗೆ ಓಟಿಟಿ ಹವಾ ಈಗಷ್ಟೇ ಹಬ್ಬುತ್ತಿದೆ. ಕನ್ನಡ ಸಿನಿಮಾ ಮತ್ತು ಕನ್ನಡದಲ್ಲಿ ಓಟಿಟಿಯ ಭವಿಷ್ಯ ಏನಾಗಲಿದೆ ಎಂಬುದನ್ನು ಸಿನಿಪ್ರೇಮಿಗಳೇ ಮುಂದೆ ತೆರೆದಿಡಲಿದ್ದಾರೆ.

– ಸೋಮಶೇಖರ್ ಚಲ್ಯ


ಓದಿ:

ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...