Homeಮುಖಪುಟಓಟಿಟಿಯಲ್ಲಿ ಬಿಡುಗಡೆಯಾದ ‘ಲಾ’ ಸೃಷ್ಟಿಸಿದ ಚರ್ಚೆಗಳ ಸುತ್ತ...!

ಓಟಿಟಿಯಲ್ಲಿ ಬಿಡುಗಡೆಯಾದ ‘ಲಾ’ ಸೃಷ್ಟಿಸಿದ ಚರ್ಚೆಗಳ ಸುತ್ತ…!

- Advertisement -
- Advertisement -

ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ ನಿರ್ಮಾಣದ ‘ಲಾ’ ಸಿನಿಮಾ ಕಳೆದವಾರವಷ್ಟೇ ಓಟಿಟಿ (ಓವರ್ ದ ಟಾಪ್) ಪ್ಲಾಟ್‌ಫಾರ್ಮ್ನಲ್ಲಿ ರಿಲೀಸ್ ಅಗಿದೆ. ಓಟಿಟಿಯಲ್ಲಿ ಬಿಡುಗಡೆಯಾದ ಕನ್ನಡದ ಮೊದಲ ಸಿನಿಮಾಗಳಲ್ಲಿ ಇದೂ ಒಂದು ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. (ಹಿಂದೆ ಆದರ್ಶ್ ಈಶ್ವರಪ್ಪ ನಿರ್ದೇಶನದ ಭಿನ್ನ ಕೂಡ ಓಟಿಟಿಯಲ್ಲಿ ಬಿಡುಗಡೆಯಾಗಿ ಸದ್ದು ಮಾಡಿತ್ತು). ಈಗ ‘ಲಾ’ ಸಿನಿಮಾ ಅಮೆಜಾನ್  ಪ್ರೈಂನಲ್ಲಿ ಬಿಡುಗಡೆಯಾದ ಮೇಲೆ ಎರಡು ರೀತಿಯ ಚರ್ಚೆಯನ್ನು ಹುಟ್ಟುಹಾಕಿದೆ.

ಒಂದು, ಈ ಸಿನಿಮಾ ಚಿತ್ರಿಸಿರುವ ಕತೆಯ ಚಿತ್ರಣದ ಅಂಕುಡೊಂಕುಗಳಿಂದಾಗಿ, ಥಿಯೇಟರ್‌ಗಳಲ್ಲಿ ಹಣ ಮಾಡಲಾಗದ ಇಂತಹ ಸಿನಿಮಾಗಷ್ಟೇ ಓಟಿಟಿ ಪ್ಲಾಟ್‌ಫಾರ್ಮ್ನಲ್ಲಿ ರಿಲೀಸ್ ಆಗುತ್ತವೆ ಅನ್ನುವುದು.. ಮತ್ತೊಂದು, ಸಿನಿಮಾಗಳನ್ನು ಓಟಿಟಿಗಳಲ್ಲಿ ನೋಡುವುದು ನಿರ್ದೇಶಕರಿಗೆ ಮಾಡುವ ಅವಮಾನ ಎಂಬಂತಹ ಭ್ರಮೆ..

ಮೊನ್ನೆ ಮೊನ್ನೆಯಷ್ಟೇ ಆರಂಭಗೊಂಡ ಎಫ್‌ಯುಸಿ (ಫಿಲ್ಮ್ಮೇರ‍್ಸ್ ಯುನೈಟೆಡ್ ಕ್ಲಬ್) ಎಂಬ ತಂಡ ತಮ್ಮ ವೆಬ್‌ಸೈಟ್‌ನಲ್ಲಿ ಅಂಕಣವೊಂದನ್ನು ಪ್ರಕಟಿಸಿದೆ. ಜನರು ಓಟಿಟಿಗಳಲ್ಲಿ ಸಿನಿಮಾ ನೋಡುವುದರ ಬಗ್ಗೆ ಆ ಅಂಕಣ ಪ್ರಶ್ನೆ ಎತ್ತಿದೆ. ಮನೆಯಲ್ಲಿ ಕುಳಿತು ಸಿನಿಮಾ ನೋಡುವುದರಿಂದಾಗುವ ಸಮಸ್ಯೆಗಳ ಜೊತೆಗೆ, ಸಿನಿಮಾಗಳನ್ನು ಓಟಿಟಿಯಲ್ಲಿ ನೋಡುವುದೇ ನಿರ್ದೇಶಕರಿಗೆ ಮಾಡುವ ಅವಮಾನವೆಂದು ಹೇಳಿದೆ.

ಹಾಗೆ ನೋಡಿದರೆ, ವಿಶ್ವದ ಮೂಲೆಮೂಲೆಗೂ ಸಿನಿಮಾಗಳಿಗೆ ಹೆದ್ದಾರಿ ಮಾಡಿಕೊಡುವ ಓಟಿಟಿಯ ಹಾದಿಗೆ ಕನ್ನಡ ಚಿತ್ರರಂಗ ಈಗಷ್ಟೇ ಕಾಲ್ನಡಿಗೆಯ ಹಾದಿಯನ್ನು ಹುಡುಕುತ್ತಿದೆ. ಹಲವು ವರ್ಷಗಳಿಂದ ಚಾಲ್ತಿಯಲ್ಲಿರುವ ಓಟಿಟಿಗಳಲ್ಲಿ ಕನ್ನಡ ಚಿತ್ರಗಳಿಗೆ ಇತ್ತೀಚೆಗಷ್ಟೇ ಅವಕಾಶಗಳು ಸಿಗುತ್ತಿವೆ. ಆಗಲೇ ಅದರ ವಿರುದ್ಧ ಅಭಿಪ್ರಾಯ ಮೂಡಿಸುವ ಹೊಸ ತಂತ್ರವೂ ಹೆಣೆದುಕೊಳ್ಳುತ್ತಿದೆ.

ಇಡೀ ಜಗತ್ತೇ ಡಬ್ಬಿಂಗ್‌ಗೆ ಓಕೆ ಎಂದಿದ್ದ ಸಂದರ್ಭದಲ್ಲಿಯೂ ಸ್ಯಾಂಡಲ್‌ವುಡ್‌ನ ಕೆಲವರದ್ದು ಇಂತದ್ದೇ ತಗಾದೆ ಇತ್ತು. ಅದೆಲ್ಲವನ್ನು ಬದಿಗೊತ್ತಿ, ಈಗ ಡಬ್ಬಿಂಗ್ ದುನಿಯಾ ಕನ್ನಡ ಚಿತ್ರರಂಗದಲ್ಲಿ ಪಸರಿಸುತ್ತಿದೆ. ಅಂತೆಯೇ ಓಟಿಟಿಯೂ ಈಗಷ್ಟೇ ಕನ್ನಡದಲ್ಲಿ ಚಿಗುರೊಡೆಯಲಾರಂಭಿಸಿದೆ.

‘ಕನ್ನಡ ಚಿತ್ರರಂಗದಲ್ಲಿ ಓಟಿಟಿಗೆ ನೆಲೆಯಿಲ್ಲ – ಓಟಿಟಿಯಲ್ಲಿ ಕನ್ನಡ ಚಿತ್ರಗಳಿಗೂ ಸ್ಥಾನ ಉಳಿಯುವುದಿಲ್ಲ’ ಇದು ಸದ್ಯಕ್ಕೆ ಕನ್ನಡ ಚಿತ್ರರಂಗದ ಯಥಾಸ್ಥಿತಿವಾದಿಗಳ ಅಭಿಪ್ರಾಯ. ಇದಕ್ಕೆ ಹೌದು ಎಂಬಂತೆ, ಕನ್ನಡದಲ್ಲಷ್ಟೇ ಅಲ್ಲ, ಭಾರತೀಯ ಚಿತ್ರರಂಗದಲ್ಲಿಯೇ ಯಾವ ಸ್ಟಾರ್ ನಟನ ಸಿನಿಮಾಗಳನ್ನು ನೇರವಾಗಿ ಓಟಿಟಿಯಲ್ಲಿ ರಿಲೀಸ್ ಮಾಡಲು ಪ್ರೊಡ್ಯೂಸರ್‌ಗಳು, ಸ್ಟಾರ್ ಆಕ್ಟರ್‌ಗಳೂ ಮುಂದೆ ಬರುತ್ತಿಲ್ಲ. ಬಿಗ್ ಬಜೆಟ್‌ನ ಸಿನಿಮಾಗಳು ಓಟಿಟಿಯಲ್ಲಿ ಬಿಡುಗಡೆಯಾದರೆ ಹಾಕಿರುವ ಬಂಡವಾಳವನ್ನು ಲಾಭದ ಸಮೇತ ವಾಪಸ್ ಕೊಡುತ್ತವೆ ಎಂಬ ಭರವಸೆ ಯಾರಿಗೂ ಇಲ್ಲ. ಸದ್ಯಕ್ಕೆ ಅದು ಸತ್ಯವೂ ಹೌದು.

ಕಾರಣ, ಓಟಿಟಿ ವೇದಿಕೆಗಳು ಭಾರತೀಯರಿಗೆ ಹೆಚ್ಚಾಗಿ ಪರಿಚಿತವಾಗಿಲ್ಲ. ಬಹುಸಂಖ್ಯಾತ ಜನರನ್ನು ಓಟಿಟಿ ಇನ್ನೂ ರೀಚ್ ಆಗಿಲ್ಲ. ಅಲ್ಲದೆ, ಥಿಯೇಟರ್‌ಗಳಲ್ಲಿ ಸಿನಿಮಾ ನೋಡುವ ಜನರ  ಕ್ರೇಜ್ ಓಟಿಟಿ ಎಡೆಗೆ ಇನ್ನೂ ತಿರುಗಿದಂತೆ ಕಾಣುತ್ತಿಲ್ಲ. ಹಾಗೆಂದ ಮಾತ್ರಕ್ಕೆ ಓಟಿಟಿ ಕೇವಲ ಕಡಿಮೆ ಬಜೆಟ್‌ನ ಹಾಗೂ ಡಬ್ಬಾ ಸಿನಿಮಾಗಳಿಗಷ್ಟೇ ಸೀಮಿತವೂ ಆಗಿಲ್ಲ. ಹಾಲಿವುಡ್‌ನ ಜನಪ್ರಿಯ ಸಿನಿಮಾಗಳೂ ಕೂಡ ಓಟಿಟಿಯಲ್ಲಿ ರಿಲೀಸ್ ಆಗುತ್ತಿವೆ. ಅಂತಹ ಸಿನಿಮಾಗಳಲ್ಲಿ ಸ್ನೈಡರ್ ಕಟ್ ಕೂಡ ಒಂದು. ಈ ಸಿನಿಮಾದ  ಟ್ರೈಲರ್ ಯೂಟ್ಯೂಬ್ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದು, ಸದ್ಯದಲ್ಲೇ ಬಿಡುಗಡೆಗೆ
ರೆಡಿಯಾಗಿದೆ.

ಸಿನಿಮಾ ನೋಡುವಾಗ ಥಿಯೇಟರ್‌ಗಳಲ್ಲಿ ಸಿಗುವ ಮಜಾ ಓಟಿಟಿಯಲ್ಲಿ ಸಿಗುವುದಿಲ್ಲ ಎನ್ನುವ ಮಾತೂ ಇದೆ. ಜೋಷ್ ಇರುವುದಿಲ್ಲ. ಸಿನಿಮಾಗಳನ್ನು ಸಮೂಹದಲ್ಲಿ ನೋಡುವ ಆನಂದವೇ ಬೇರೆ ರೀತಿಯದ್ದು. ಸಿನಿಮಾ ಮುಗಿದು ಥಿಯೇಟರ್‌ನಿಂದ ಹೊರಬರುವಾಗ ಎಂಥದ್ದೂ ಒಂದು ಫೀಲ್ ಮನಸ್ಸಲ್ಲಿ ಮೂಡುತ್ತದೆ. ಅಂತಹ ಫೀಲ್ ಓಟಿಟಿಯಲ್ಲಿ ಹುಟ್ಟಲಾರದು ಎಂಬ ಮಾತುಗಳು. ಆದರೆ, ಸದ್ಯ ಓಟಿಟಿಯಲ್ಲಿ ಸಿಗುತ್ತಿರುವ ಕಂಟೆಂಟ್ (ಗುಣಮಟ್ಟ ಹಾಗೂ ಅದು ಲಭ್ಯವಿರುವ ಮಾದರಿ) ಥಿಯೇಟರ್‌ಗಳಲ್ಲಿ ಸಿಗುತ್ತಿಲ್ಲ ಎಂಬುದು ಅಷ್ಟೇ ಸತ್ಯ.

ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಂನಂತಹ ಜಗತ್ತಿನಾದ್ಯಂತ ಹರಡಿರುವ ಓಟಿಟಿ ಪ್ಲಾಟ್‌ಫಾರ್ಮ್ಗಳಲ್ಲಿ ಈಗಷ್ಟೆ ಕನ್ನಡ ಸಿನಿಮಾಗಳಿಗೆ ಸ್ಥಾನ ಸಿಗುತ್ತಿದೆ. ಕನ್ನಡ ಸಿನಿಮಾಗಳು ಎಲ್ಲೆಡೆ ಹರಡುವ ಅವಕಾಶವನ್ನೂ ಉಂಟು ಮಾಡಿದೆ. ಆದರೆ, ಕನ್ನಡ ಚಿತ್ರರಂಗವೇ ಇದಕ್ಕೆ ಇನ್ನೂ ಸಿದ್ದವಾಗಿಲ್ಲ.

ಇದೆಲ್ಲದರ ನಡುವೆ, ಓಕೆ (ಓನ್ಲೀ ಕನ್ನಡ) ಎಂಬ ಕನ್ನಡ ಸಿನಿಮಾಗಳಿಗಷ್ಟೇ ಸೀಮಿತವಾದ ಹೊಸ ಓಟಿಟಿ ಪ್ಲಾಟ್‌ಫಾರ್ಮ್ ಕೂಡ ಆರಂಭವಾಗುತ್ತಿದೆ. ಕನ್ನಡದ ನಾಟಕ, ಸಿನಿಮಾ, ವೆಬ್ ಸೀರಿಸ್‌ಗಳ ನಿರ್ಮಾಣ ಮತ್ತು ಬಿಡುಗಡೆಗಾಗಿ ಇದು ಆರಂಭಗೊಳ್ಳುತ್ತಿದೆ. ಕನ್ನಡದಲ್ಲಿ ಹೊಸದೊಂದು ಪ್ಲಾಟ್‌ಫಾರ್ಮ್ ಕ್ರಿಯೇಟ್ ಮಾಡುವ ಸದಭಿರುಚಿಯೊಂದಿಗೆ ಪ್ರಯೋಗ್ ಸ್ಟುಡಿಯೂ ಮತ್ತು ಮಯೂರ್ ಮೋಷನ್ ಪಿಕ್ರ‍್ಸ್ ಇದಕ್ಕೆ ಮುಂದಾಗಿವೆ.

ಸದ್ಯದ ಪರಿಸ್ಥಿತಿಯಲ್ಲಿ ಥಿಯೇಟರ್‌ಗಳು, ಮಲ್ಟಿಪ್ಲೆಕ್ಸ್ಗಳು, ಮಾಲ್‌ಗಳು ಮುಚ್ಚಿರುವುದರಿಂದಾಗಿ ಒಂದಷ್ಟು ಪ್ರಮಾಣದ ಜನರು ಓಟಿಟಿಗಳ ಮೊರೆ ಹೋಗಿದ್ದಾರೆ. ಅದು ಹೀಗೆಯೇ ಇರಲಾರದು. ಹೆಚ್ಚು ಬಂಡವಾಳ ಹಾಕಿ ನಿರ್ಮಾಣ ಮಾಡಿದ ಸಿನಿಮಾಗಳು ಥಿಯೇಟರ್‌ನಲ್ಲಿ ರಿಲೀಸ್ ಅಗಿಯೇ ಬಂಡವಾಳವನ್ನು ಮರಳಿ ತರುವಲ್ಲಿ ಪೈಪೋಟಿ ಎದುರಿಸುತ್ತಿವೆ. ಹೀಗಿರುವಾಗ ಓಟಿಟಿಗಳು ಸಿನಿಮಾಗೆ ಸುರಿದ ಬಂಡವಾಳವನ್ನು ವಾಪಸ್ ನೀಡಬಲ್ಲವೇ ಎಂಬ ಪ್ರಶ್ನೆಯೂ ಎದುರಾಗುತ್ತದೆ. ಈ ದೆಸೆಯಲ್ಲಿ ಓಟಿಟಿ ಕಂಪ್ಲೀಟ್ಲಿ ಕಡ್ಳೆಪುರಿ ವ್ಯಾಪಾರವಿದ್ದಂತೆ, ಅದಕ್ಕೆ ಎಂದೂ ಭವಿಷ್ಯವಿಲ್ಲ ಎಂಬುದು ಸದ್ಯಕ್ಕೆ ಕನ್ನಡ ಸಿನಿಮಾ ರಂಗದ ಅಭಿಪ್ರಾಯ.

ಆದರೆ, ಡಿಜಿಟೈಸ್ ಆಗುತ್ತಿರುವ ಜನರು ಓಟಿಟಿಗಳೆಡೆಗೆ ಮುಖ ಮಾಡಿದ್ದಾರೆ. ಮುಂದಿನ ಸಿನಿಮಾಗಳ ಭವಿಷ್ಯ ಓಟಿಟಿಯೇ ಎಂಬುದು ಡಿಜಿಟಲ್ ಕ್ಷೇತ್ರದವರ ಅಭಿಪ್ರಾಯ.
ಇದೆಲ್ಲದರ ನಡುವೆ, ಓಟಿಟಿಯಲ್ಲಿ ರಿಲೀಸ್ ಆದ ‘ಲಾ’ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಓಟಿಟಿ ಬಗೆಗೆ ಒಂದು ನೆಗೆಟಿವ್ ಅಪ್ರೋಚ್ ಕಟ್ಟಿಕೊಟ್ಟಿದೆ. ನಿರೀಕ್ಷಿತ ಗುಣಮಟ್ಟದಲ್ಲಿ ಸಿನಿಮಾ ಮೂಡದೆ ಇದ್ದದ್ದೂ ಕಾರಣ ಇರಬಹುದು. ಏನೇ ಇರಿಲಿ, ಕನ್ನಡದ ಮಟ್ಟಿಗೆ ಓಟಿಟಿ ಹವಾ ಈಗಷ್ಟೇ ಹಬ್ಬುತ್ತಿದೆ. ಕನ್ನಡ ಸಿನಿಮಾ ಮತ್ತು ಕನ್ನಡದಲ್ಲಿ ಓಟಿಟಿಯ ಭವಿಷ್ಯ ಏನಾಗಲಿದೆ ಎಂಬುದನ್ನು ಸಿನಿಪ್ರೇಮಿಗಳೇ ಮುಂದೆ ತೆರೆದಿಡಲಿದ್ದಾರೆ.

– ಸೋಮಶೇಖರ್ ಚಲ್ಯ


ಓದಿ:

ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...