Homeಮುಖಪುಟ220 ರೂ ಇದ್ದ ಕೇಬಲ್ ಬಿಲ್ 400 ರೂ ದಾಟುತ್ತಿರುವುದೇಕೆ? ಇದರ ಲಾಭ ಯಾರಿಗೆ?

220 ರೂ ಇದ್ದ ಕೇಬಲ್ ಬಿಲ್ 400 ರೂ ದಾಟುತ್ತಿರುವುದೇಕೆ? ಇದರ ಲಾಭ ಯಾರಿಗೆ?

- Advertisement -
- Advertisement -

220 ರೂ ಇದ್ದ ಕೇಬಲ್ ಬಿಲ್ 400 ರೂ ದಾಟುತ್ತಿರುವುದೇಕೆ? ಇದರ ಲಾಭ ಯಾರಿಗೆ? ಹಿಂದಿರುವವರು ಯಾರು?

ಚಾನೆಲ್‍ಗಳು ಮಾತ್ರ ಅಂಬಾನಿಯದ್ದಲ್ಲ; ಕೇಬಲ್ ಸಹಾ ರಿಲೆಯನ್ಸ್‍ ದೇ. ಅಪಾಯಕಾರಿ ಬೆಳವಣಿಗೆಗೆ ನಾಂದಿ

ಮಂಡ್ಯದಲ್ಲಿ ಸುಮಲತಾ ನಾಮಪತ್ರ ಸಲ್ಲಿಸಿದ ದಿನ ಸ್ಥಳೀಯವಾಗಿ ಜೆಡಿಎಸ್‍ನ ಪ್ರಭಾವದಿಂದಾಗಿ ಕೇಬಲ್ ಟಿವಿ ಕೆಲಸ ಮಾಡದಂತೆ ಮಾಡಲಾಯಿತು ಎಂಬ ಒಂದು ಆರೋಪವಿದೆ. ಆದರೆ, ಮುಖೇಶ್ ಅಂಬಾನಿಯ ಬೆಂಬಲಕ್ಕೆ ನಿಂತಿರುವ ಬಿಜೆಪಿ ಪಕ್ಷದ ವಿರುದ್ಧ ಯಾವುದಾದರೂ ಚಾನೆಲ್ ಸುದ್ದಿ ಮಾಡಿದರೆ, ಆ ಚಾನೆಲ್ಲೇ ಬರದಂತೆ ನೋಡಿಕೊಳ್ಳುವ ಸಂಭವ ತೆರೆದುಕೊಂಡಿದೆ. ಅದು ಹೇಗೆಂಬುದನ್ನು ನೋಡೋಣ.

200 ರೂ. ಆಸುಪಾಸಿನಷ್ಟು ಖರ್ಚು ಮಾಡಿ ನೂರಾರು ಚಾನೆಲ್‍ಗಳನ್ನು ಪಡೆದುಕೊಳ್ಳುತ್ತಿದ್ದ ದಿನಗಳು ಈಗ ಇಲ್ಲ. ಕೆಲವು ಕಾಲದ ನಂತರ ಇದು ಯಾವ ಸ್ವರೂಪ ತೆಗೆದುಕೊಳ್ಳಲಿದೆ ಎಂಬುದನ್ನೂ ಹೇಳಲಾಗದು. ಹಿಂದೆಯೂ ಉಚಿತ ಚಾನೆಲ್‍ಗಳು ಮತ್ತು ಹಣ ಕೊಟ್ಟು ಕೊಳ್ಳಬೇಕಾದ ಚಾನೆಲ್‍ಗಳಿದ್ದವು. ಆದರೆ, ಅವೆಲ್ಲಾ ಸಾಮಾನ್ಯ ಗ್ರಾಹಕರ ಗಮನಕ್ಕೆ ಬರುತ್ತಿರಲಿಲ್ಲ. ಏಕೆಂದರೆ, ಕೇಬಲ್ ಮೂಲಕ ಸೇವೆ ಒದಗಿಸುತ್ತಿದ್ದ ಆಪರೇಟರ್‍ಗಳು ಅವನ್ನೆಲ್ಲಾ ಮಾಡಿ, ಇಂತಿಷ್ಟು ಹಣಕ್ಕೆ ಇಷ್ಟು ಚಾನೆಲ್ ಎಂಬ ಪ್ಯಾಕೇಜ್‍ನೊಂದಿಗೆ ಒದಗಿಸುತ್ತಿದ್ದರು.
ಆದರೆ, ಈಗೆರಡು ತಿಂಗಳ ಹಿಂದೆ ಕೆಲವು ಉಚಿತ ಚಾನೆಲ್‍ಗಳನ್ನು ಬಿಟ್ಟರೆ ತಮಗೆ ಬೇಕಾದ ಮನರಂಜನೆ ಅಥವಾ ಸುದ್ದಿ ಚಾನೆಲ್‍ಗಳಿಗೆ ಪ್ರತ್ಯೇಕವಾಗಿ ಇಂತಿಷ್ಟು ಶುಲ್ಕವೆಂದು ಪಾವತಿಸಬೇಕೆಂದು ಸೂಚಿಸಲಾಗಿತ್ತು. ಇದರಿಂದ ಬಹುತೇಕ ಎಲ್ಲಾ ಚಾನೆಲ್‍ಗಳನ್ನು ನೋಡುತ್ತಿದ್ದ ಗ್ರಾಹಕರಿಗೆ ಗೊಂದಲವುಂಟಾಯಿತು. ಪ್ರತೀ ಮನೆಯಲ್ಲೂ ಬೇರೆ ಬೇರೆ ಆಸಕ್ತಿಗಳ ಸದಸ್ಯರಿರುತ್ತಾರಾದ್ದರಿಂದ, ಎಲ್ಲರಿಗೂ ಬೇಕಾದ ಸೀಮಿತ ಚಾನೆಲ್‍ಗಳಿಗೂ ಹಿಂದಿಗಿಂತ 150 ರೂ ಹೆಚ್ಚು ಕೊಡಬೇಕು. ಇದು ಇನ್ನೂ ಹೆಚ್ಚಾಗಬಹುದೇ ಹೊರತು ಕಡಿಮೆಯಾಗದು. ಇನ್ನು ಸ್ವಲ್ಪ ಹೆಚ್ಚು ಚಾನೆಲ್‍ಗಳು ಬೇಕೆಂದರೆ, ದುಪ್ಪಟ್ಟು ಬೆಲೆ ನೀಡಬೇಕಾದಂತಹ ಪರಿಸ್ಥಿತಿ ಏಕೆ ತಲೆದೋರಿತು? ಇದರ ಲಾಭ ಯಾರಿಗೆ ಆಗಬಹುದು ಎಂಬುದನ್ನು ನೋಡೋಣ.

ಎಲ್ಲರಿಗೂ ತಿಳಿದಿರುವಂತೆ ಬಹಳ ಹಿಂದೆ ಮನೆ ಮನೆಗೆ ಕೇಬಲ್ ಎಳೆದು ವಿವಿಧ ಚಾನೆಲ್‍ಗಳಲ್ಲದೇ, ಕೇಬಲ್‍ನವರೇ ಸಿನೆಮಾ ಸಹಾ ತೋರಿಸುತ್ತಿದ್ದರು. ಈ ರೀತಿ ಕೇಬಲ್ ಜಾಲ ವಿಸ್ತರಿಸಲು ಬಹಳ ದೊಡ್ಡ ಪೈಪೋಟಿಯೇ ನಡೆದಿದೆ. ಕೇಬಲ್ ಮಾಫಿಯಾ ಎಂದೆಲ್ಲಾ ಅದನ್ನು ಕರೆಯಲಾಗುತ್ತಿತ್ತು. ಆದರೆ, ಕಂಬ, ಮರಗಳು, ಮನೆಯ ಮೇಲಿನ ಕೊಕ್ಕೆಗಳು ಎಲ್ಲಕ್ಕೂ ಸಿಕ್ಕಿಸಿ ಮನೆಯಿಂದ ಮನೆಗೆ ತೆಗೆದುಕೊಂಡು ಹೋಗಿ ಎಲ್ಲಾ ಕಡೆ ಈ ಮಾರುಕಟ್ಟೆ ಸೃಷ್ಟಿ ಮಾಡಿದ್ದರಲ್ಲಿ ಸಣ್ಣ ಆಪರೇಟರ್‍ಗಳ ಪಾಲು ದೊಡ್ಡದು. ನಂತರ ಅವು ‘ಮಾಫಿಯಾ’ಗಳ ಹಿಡಿತಕ್ಕೆ, ರಾಜಕಾರಣಿಗಳ ಹಿಡಿತಕ್ಕೆ ಹೋಯಿತು.

ಆ ನಂತರ ಸಿಟಿ ಕೇಬಲ್, ಹಾಥ್‍ವೇ ಮತ್ತು ಡೆನ್‍ಗಳೆಂಬ ಎಂಎಸ್‍ಓ (ಮಲ್ಟಿ ಸರ್ವೀಸ್ ಆಪರೇಟರ್)ಗಳು ತಲೆಯೆತ್ತಿದವು. ಇವು ಸ್ಥಳೀಯ ಅಗತ್ಯಗಳೂ ಇದ್ದುದರಿಂದ ಲೋಕಲ್ ಆಪರೇಟರ್‍ಗಳನ್ನೂ ಸಣ್ಣ ಪಾಲುದಾರರನ್ನಾಗಿ ಉಳಿಸಿಕೊಂಡು, ಬೃಹತ್ತಾಗಿ ಬೆಳೆದವು. ಶೇ.10ರಿಂದ ಶೇ.50ರವರೆಗೆ ತಮ್ಮ ಷೇರುಗಳನ್ನು ಉಳಿಸಿಕೊಂಡ ಲಕ್ಷಾಂತರ ಸಣ್ಣ ಆಪರೇಟರ್‍ಗಳು ಒಂದಲ್ಲಾ ಒಂದು ಎಂಎಸ್‍ಓ ಜೊತೆಗೆ ಸೇರಲೇಬೇಕಾಯಿತು.

ಅಂದ ಹಾಗೆ ಈ ಡೆನ್ ಯಾರದ್ದು?
ಸಮೀರ್ ಮಂಚಂಡ ಮತ್ತು ರಾಘವ್ ಬೆಹ್ಲ್ ಇಬ್ಬರೂ ಪಾಲುದಾರರಾಗಿದ್ದ ಕಾಲದಿಂದಲೂ ಡೆನ್ ಬೆಳೆಯುತ್ತಾ, ಹಿಂದಿ ರಾಜ್ಯಗಳಲ್ಲೆಲ್ಲಾ ವ್ಯಾಪಿಸಿತು. ಸಿಎನ್‍ಎನ್ ಐಬಿಎನ್ ಹುಟ್ಟಿ ಹಾಕಿದ್ದ ರಾಘವ್ ಬೆಹ್ಲ್ ನಂತರ ಅದನ್ನು ಅಂಬಾನಿಗೆ ಮಾರಿದರು. ಅದರ ಜೊತೆಗೆ ಕೇಬಲ್ ಜಾಲದ ತಮ್ಮ ಷೇರುಗಳನ್ನೂ. ಇನ್ನು ಮಂಚಂಡ, ರಿಪಬ್ಲಿಕ್ ಟಿವಿಯಲ್ಲೂ ಪಾಲುದಾರಿಕೆ ಹೊಂದಿದ್ದ. ಅರ್ನಬ್ ಗೋಸ್ವಾಮಿ ರಿಪಬ್ಲಿಕ್ ಶುರು ಮಾಡಿದಾಗ ಕೇಬಲ್ ಜಾಲವನ್ನೂ ಹಿಡಿತಕ್ಕೆ ತೆಗೆದುಕೊಳ್ಳುವ ಯೋಜನೆಯೊಂದಿಗೇ ಹೊರಟಿದ್ದು.

ಆದರೆ, ಈಗಿನ ಪರಿಸ್ಥಿತಿ ಬೇರೆಯೇ ಆಗಿದೆ. ಡೆನ್ ಮತ್ತು ಹಾಥ್‍ವೇ ಎರಡರ ಮೇಲೂ ಸಂಪೂರ್ಣ ಹಿಡಿತ ಸಾಧಿಸಿರುವುದು ಆರ್‍ಐಜಿ – ಅಂದರೆ ರಿಲೆಯನ್ಸ್ ಇಂಡಸ್ಟ್ರೀಸ್ ಗ್ರೂಪ್.
ಟಿವಿ – 18 ಕೊಂಡ ನಂತರ, ಈ ಟಿವಿ ಸಮೂಹದ ಬಹುತೇಕ ಚಾನೆಲ್‍ಗಳನ್ನು ಮುಖೇಶ್ ಅಂಬಾನಿ ಒಡೆತನದ ರಿಲೆಯನ್ಸ್ ಕಂಪೆನಿಯೇ ಕೊಂಡಿತ್ತು. ಇಷ್ಟಲ್ಲದೇ ನಷ್ಟದಲ್ಲಿರುವ ಝೀ ಟಿವಿ ಸಮೂಹವನ್ನು ಕೊಳ್ಳಲೂ ಸಹಾ ಅಂಬಾನಿ ಹಾಗೂ ಭಾರ್ತಿ ಮಿತ್ತಲ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಟಿವಿ ಚಾನೆಲ್ಲೂ ಅಂಬಾನಿಯದ್ದೇ, ಕೇಬಲ್ ನೆಟ್‍ವರ್ಕ್ ಸಹಾ ಅವರದ್ದೇ ಆದರೆ ಏನಾಗಬಹುದು?

ಮೋದಿ ಸರ್ಕಾರದ ತಪ್ಪುಗಳು/ಹಗರಣಗಳನ್ನು ಬಯಲಿಗೆಳೆಯುತ್ತಿದ್ದ ಎಬಿಪಿ ಚಾನೆಲ್‍ಅನ್ನು ಮಣಿಸಲು ಸರ್ಕಾರ ಏನು ಮಾಡಿತೆಂಬುದನ್ನು ನಾವು ನೋಡಿದ್ದೇವೆ. ಸರ್ಕಾರೀ ಜಾಹೀರಾತುಗಳನ್ನು ನಿಲ್ಲಿಸುವುದು, ಸಿಗ್ನಲ್ ಸಹಾ ಇಲ್ಲದಂತೆ ಮಾಡುವುದು ಇತ್ಯಾದಿಗಳ ಮೂಲಕ ಎಬಿಪಿ ನ್ಯೂಸ್ ಶರಣಾಗಿ ಬಿಜೆಪಿಯ ಮುಂದೆ ಮಂಡಿಯೂರಬೇಕಾಯಿತು. ಅದರ ಪ್ರಸಿದ್ಧ ಸಂಪಾದಕ ಪುಣ್ಯಪ್ರಸೂನ್ ವಾಜಪೇಯಿ ಅವರನ್ನು ಕಿತ್ತೊಗೆಯಬೇಕಾಯಿತು. ಕಿತ್ತೊಗೆದ ಮರುದಿನದಿಂದಲೇ ‘ಎಲ್ಲವೂ ಸರಿಹೋಯಿತು’.

ಹೀಗಿದ್ದ ಮೇಲೆ ಮುಂದೆ ಸರ್ಕಾರಗಳು ಅಂಬಾನಿಯ ಮುಂದೆ ಮಂಡಿಯೂರಬೇಕಾಗಬಹುದು. ಏಕೆಂದರೆ, ತಮ್ಮ ವಿರುದ್ಧ ಸುದ್ದಿ ಪ್ರಸರಣ ಮಾಡುವ ಇತರ ಮಾಧ್ಯಮಗಳ ಮೇಲೂ ಹಿಡಿತ ಹೊಂದುವ ಅಂಬಾನಿ, ಸರ್ಕಾರಕ್ಕೇ ಸವಾಲು ಹಾಕಬಹುದು. ಇವೆಲ್ಲದರ ಕುರಿತು ಟ್ರಾಯ್ 2008ರಲ್ಲೇ ಎಚ್ಚರಿಸಿತ್ತು. ಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮ ಮತ್ತು ಕೇಬಲ್ ನಿರ್ವಹಣೆಯಲ್ಲಿ ದೊಡ್ಡ ಕಾರ್ಪೋರೇಟ್ ಏಕಸ್ವಾಮ್ಯಕ್ಕೆ ದಾರಿ ಮಾಡಿಕೊಟ್ಟರೆ ಆಗುವ ದುಷ್ಟರಿಣಾಮಗಳು ಗಂಭೀರವಾಗಿರುತ್ತದೆ. ಜನರ ಮನೋಲೋಕವನ್ನು ಹಿಡಿದಿಡುವ, ನಿರ್ಬಂಧಿಸುವ ಕೆಲಸವನ್ನು ಈಗಾಗಲೇ ಮಾಡುತ್ತಿರುವ ದೃಶ್ಯ ಮಾಧ್ಯಮಗಳು ಈ ಚಾಲದ ಮಾಲೀಕರ ಹಿತಾಸಕ್ತಿಗೆ ತಕ್ಕಂತೆ ದುಡಿಯಲಾರಂಭಿಸುತ್ತದೆ.

ಏಕಸ್ವಾಮ್ಯ ಸಾಧಿಸಿದ ಮೇಲೆ ಜನರಿಗೆ ಉಚಿತವಾಗಿ ಚಾನೆಲ್ ನೀಡುವ ಅಗತ್ಯವಿಲ್ಲ. ಎಲ್ಲಕ್ಕೂ ಹಣ ನಿಗದಿ ಮಾಡಿ ಹೆಚ್ಚಿಸುತ್ತಾ ಹೋದರೆ ಸಾಕು. ಮನರಂಜನೆ ಮತ್ತು ಸುದ್ದಿಯೂ ಮಾರುವ ಸರಕಾಗಿರುವಾಗ ಇದೇನು ಮಹಾ ಅಲ್ಲವೇ? ಆ ಧೈರ್ಯದಿಂದಲೇ ಚುನಾವಣೆ 4-5 ತಿಂಗಳಿರುವಾಗಲೇ ಸರ್ಕಾರದ ಕುಮ್ಮಕ್ಕಿನೊಂದಿಗೆ ಕೇಬಲ್ ಚಾನೆಲ್‍ಗಳ ಬೆಲೆಯನ್ನು ವಿಪರೀತವಾಗಿ ಹೆಚ್ಚಿಸಲಾಯಿತು.
ಇದು ಪ್ರಜಾಪ್ರಭುತ್ವಕ್ಕೆ ಅತ್ಯಂತ ಅಪಾಯಕಾರಿಯಾದುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....