Homeಮುಖಪುಟ220 ರೂ ಇದ್ದ ಕೇಬಲ್ ಬಿಲ್ 400 ರೂ ದಾಟುತ್ತಿರುವುದೇಕೆ? ಇದರ ಲಾಭ ಯಾರಿಗೆ?

220 ರೂ ಇದ್ದ ಕೇಬಲ್ ಬಿಲ್ 400 ರೂ ದಾಟುತ್ತಿರುವುದೇಕೆ? ಇದರ ಲಾಭ ಯಾರಿಗೆ?

- Advertisement -
- Advertisement -

220 ರೂ ಇದ್ದ ಕೇಬಲ್ ಬಿಲ್ 400 ರೂ ದಾಟುತ್ತಿರುವುದೇಕೆ? ಇದರ ಲಾಭ ಯಾರಿಗೆ? ಹಿಂದಿರುವವರು ಯಾರು?

ಚಾನೆಲ್‍ಗಳು ಮಾತ್ರ ಅಂಬಾನಿಯದ್ದಲ್ಲ; ಕೇಬಲ್ ಸಹಾ ರಿಲೆಯನ್ಸ್‍ ದೇ. ಅಪಾಯಕಾರಿ ಬೆಳವಣಿಗೆಗೆ ನಾಂದಿ

ಮಂಡ್ಯದಲ್ಲಿ ಸುಮಲತಾ ನಾಮಪತ್ರ ಸಲ್ಲಿಸಿದ ದಿನ ಸ್ಥಳೀಯವಾಗಿ ಜೆಡಿಎಸ್‍ನ ಪ್ರಭಾವದಿಂದಾಗಿ ಕೇಬಲ್ ಟಿವಿ ಕೆಲಸ ಮಾಡದಂತೆ ಮಾಡಲಾಯಿತು ಎಂಬ ಒಂದು ಆರೋಪವಿದೆ. ಆದರೆ, ಮುಖೇಶ್ ಅಂಬಾನಿಯ ಬೆಂಬಲಕ್ಕೆ ನಿಂತಿರುವ ಬಿಜೆಪಿ ಪಕ್ಷದ ವಿರುದ್ಧ ಯಾವುದಾದರೂ ಚಾನೆಲ್ ಸುದ್ದಿ ಮಾಡಿದರೆ, ಆ ಚಾನೆಲ್ಲೇ ಬರದಂತೆ ನೋಡಿಕೊಳ್ಳುವ ಸಂಭವ ತೆರೆದುಕೊಂಡಿದೆ. ಅದು ಹೇಗೆಂಬುದನ್ನು ನೋಡೋಣ.

200 ರೂ. ಆಸುಪಾಸಿನಷ್ಟು ಖರ್ಚು ಮಾಡಿ ನೂರಾರು ಚಾನೆಲ್‍ಗಳನ್ನು ಪಡೆದುಕೊಳ್ಳುತ್ತಿದ್ದ ದಿನಗಳು ಈಗ ಇಲ್ಲ. ಕೆಲವು ಕಾಲದ ನಂತರ ಇದು ಯಾವ ಸ್ವರೂಪ ತೆಗೆದುಕೊಳ್ಳಲಿದೆ ಎಂಬುದನ್ನೂ ಹೇಳಲಾಗದು. ಹಿಂದೆಯೂ ಉಚಿತ ಚಾನೆಲ್‍ಗಳು ಮತ್ತು ಹಣ ಕೊಟ್ಟು ಕೊಳ್ಳಬೇಕಾದ ಚಾನೆಲ್‍ಗಳಿದ್ದವು. ಆದರೆ, ಅವೆಲ್ಲಾ ಸಾಮಾನ್ಯ ಗ್ರಾಹಕರ ಗಮನಕ್ಕೆ ಬರುತ್ತಿರಲಿಲ್ಲ. ಏಕೆಂದರೆ, ಕೇಬಲ್ ಮೂಲಕ ಸೇವೆ ಒದಗಿಸುತ್ತಿದ್ದ ಆಪರೇಟರ್‍ಗಳು ಅವನ್ನೆಲ್ಲಾ ಮಾಡಿ, ಇಂತಿಷ್ಟು ಹಣಕ್ಕೆ ಇಷ್ಟು ಚಾನೆಲ್ ಎಂಬ ಪ್ಯಾಕೇಜ್‍ನೊಂದಿಗೆ ಒದಗಿಸುತ್ತಿದ್ದರು.
ಆದರೆ, ಈಗೆರಡು ತಿಂಗಳ ಹಿಂದೆ ಕೆಲವು ಉಚಿತ ಚಾನೆಲ್‍ಗಳನ್ನು ಬಿಟ್ಟರೆ ತಮಗೆ ಬೇಕಾದ ಮನರಂಜನೆ ಅಥವಾ ಸುದ್ದಿ ಚಾನೆಲ್‍ಗಳಿಗೆ ಪ್ರತ್ಯೇಕವಾಗಿ ಇಂತಿಷ್ಟು ಶುಲ್ಕವೆಂದು ಪಾವತಿಸಬೇಕೆಂದು ಸೂಚಿಸಲಾಗಿತ್ತು. ಇದರಿಂದ ಬಹುತೇಕ ಎಲ್ಲಾ ಚಾನೆಲ್‍ಗಳನ್ನು ನೋಡುತ್ತಿದ್ದ ಗ್ರಾಹಕರಿಗೆ ಗೊಂದಲವುಂಟಾಯಿತು. ಪ್ರತೀ ಮನೆಯಲ್ಲೂ ಬೇರೆ ಬೇರೆ ಆಸಕ್ತಿಗಳ ಸದಸ್ಯರಿರುತ್ತಾರಾದ್ದರಿಂದ, ಎಲ್ಲರಿಗೂ ಬೇಕಾದ ಸೀಮಿತ ಚಾನೆಲ್‍ಗಳಿಗೂ ಹಿಂದಿಗಿಂತ 150 ರೂ ಹೆಚ್ಚು ಕೊಡಬೇಕು. ಇದು ಇನ್ನೂ ಹೆಚ್ಚಾಗಬಹುದೇ ಹೊರತು ಕಡಿಮೆಯಾಗದು. ಇನ್ನು ಸ್ವಲ್ಪ ಹೆಚ್ಚು ಚಾನೆಲ್‍ಗಳು ಬೇಕೆಂದರೆ, ದುಪ್ಪಟ್ಟು ಬೆಲೆ ನೀಡಬೇಕಾದಂತಹ ಪರಿಸ್ಥಿತಿ ಏಕೆ ತಲೆದೋರಿತು? ಇದರ ಲಾಭ ಯಾರಿಗೆ ಆಗಬಹುದು ಎಂಬುದನ್ನು ನೋಡೋಣ.

ಎಲ್ಲರಿಗೂ ತಿಳಿದಿರುವಂತೆ ಬಹಳ ಹಿಂದೆ ಮನೆ ಮನೆಗೆ ಕೇಬಲ್ ಎಳೆದು ವಿವಿಧ ಚಾನೆಲ್‍ಗಳಲ್ಲದೇ, ಕೇಬಲ್‍ನವರೇ ಸಿನೆಮಾ ಸಹಾ ತೋರಿಸುತ್ತಿದ್ದರು. ಈ ರೀತಿ ಕೇಬಲ್ ಜಾಲ ವಿಸ್ತರಿಸಲು ಬಹಳ ದೊಡ್ಡ ಪೈಪೋಟಿಯೇ ನಡೆದಿದೆ. ಕೇಬಲ್ ಮಾಫಿಯಾ ಎಂದೆಲ್ಲಾ ಅದನ್ನು ಕರೆಯಲಾಗುತ್ತಿತ್ತು. ಆದರೆ, ಕಂಬ, ಮರಗಳು, ಮನೆಯ ಮೇಲಿನ ಕೊಕ್ಕೆಗಳು ಎಲ್ಲಕ್ಕೂ ಸಿಕ್ಕಿಸಿ ಮನೆಯಿಂದ ಮನೆಗೆ ತೆಗೆದುಕೊಂಡು ಹೋಗಿ ಎಲ್ಲಾ ಕಡೆ ಈ ಮಾರುಕಟ್ಟೆ ಸೃಷ್ಟಿ ಮಾಡಿದ್ದರಲ್ಲಿ ಸಣ್ಣ ಆಪರೇಟರ್‍ಗಳ ಪಾಲು ದೊಡ್ಡದು. ನಂತರ ಅವು ‘ಮಾಫಿಯಾ’ಗಳ ಹಿಡಿತಕ್ಕೆ, ರಾಜಕಾರಣಿಗಳ ಹಿಡಿತಕ್ಕೆ ಹೋಯಿತು.

ಆ ನಂತರ ಸಿಟಿ ಕೇಬಲ್, ಹಾಥ್‍ವೇ ಮತ್ತು ಡೆನ್‍ಗಳೆಂಬ ಎಂಎಸ್‍ಓ (ಮಲ್ಟಿ ಸರ್ವೀಸ್ ಆಪರೇಟರ್)ಗಳು ತಲೆಯೆತ್ತಿದವು. ಇವು ಸ್ಥಳೀಯ ಅಗತ್ಯಗಳೂ ಇದ್ದುದರಿಂದ ಲೋಕಲ್ ಆಪರೇಟರ್‍ಗಳನ್ನೂ ಸಣ್ಣ ಪಾಲುದಾರರನ್ನಾಗಿ ಉಳಿಸಿಕೊಂಡು, ಬೃಹತ್ತಾಗಿ ಬೆಳೆದವು. ಶೇ.10ರಿಂದ ಶೇ.50ರವರೆಗೆ ತಮ್ಮ ಷೇರುಗಳನ್ನು ಉಳಿಸಿಕೊಂಡ ಲಕ್ಷಾಂತರ ಸಣ್ಣ ಆಪರೇಟರ್‍ಗಳು ಒಂದಲ್ಲಾ ಒಂದು ಎಂಎಸ್‍ಓ ಜೊತೆಗೆ ಸೇರಲೇಬೇಕಾಯಿತು.

ಅಂದ ಹಾಗೆ ಈ ಡೆನ್ ಯಾರದ್ದು?
ಸಮೀರ್ ಮಂಚಂಡ ಮತ್ತು ರಾಘವ್ ಬೆಹ್ಲ್ ಇಬ್ಬರೂ ಪಾಲುದಾರರಾಗಿದ್ದ ಕಾಲದಿಂದಲೂ ಡೆನ್ ಬೆಳೆಯುತ್ತಾ, ಹಿಂದಿ ರಾಜ್ಯಗಳಲ್ಲೆಲ್ಲಾ ವ್ಯಾಪಿಸಿತು. ಸಿಎನ್‍ಎನ್ ಐಬಿಎನ್ ಹುಟ್ಟಿ ಹಾಕಿದ್ದ ರಾಘವ್ ಬೆಹ್ಲ್ ನಂತರ ಅದನ್ನು ಅಂಬಾನಿಗೆ ಮಾರಿದರು. ಅದರ ಜೊತೆಗೆ ಕೇಬಲ್ ಜಾಲದ ತಮ್ಮ ಷೇರುಗಳನ್ನೂ. ಇನ್ನು ಮಂಚಂಡ, ರಿಪಬ್ಲಿಕ್ ಟಿವಿಯಲ್ಲೂ ಪಾಲುದಾರಿಕೆ ಹೊಂದಿದ್ದ. ಅರ್ನಬ್ ಗೋಸ್ವಾಮಿ ರಿಪಬ್ಲಿಕ್ ಶುರು ಮಾಡಿದಾಗ ಕೇಬಲ್ ಜಾಲವನ್ನೂ ಹಿಡಿತಕ್ಕೆ ತೆಗೆದುಕೊಳ್ಳುವ ಯೋಜನೆಯೊಂದಿಗೇ ಹೊರಟಿದ್ದು.

ಆದರೆ, ಈಗಿನ ಪರಿಸ್ಥಿತಿ ಬೇರೆಯೇ ಆಗಿದೆ. ಡೆನ್ ಮತ್ತು ಹಾಥ್‍ವೇ ಎರಡರ ಮೇಲೂ ಸಂಪೂರ್ಣ ಹಿಡಿತ ಸಾಧಿಸಿರುವುದು ಆರ್‍ಐಜಿ – ಅಂದರೆ ರಿಲೆಯನ್ಸ್ ಇಂಡಸ್ಟ್ರೀಸ್ ಗ್ರೂಪ್.
ಟಿವಿ – 18 ಕೊಂಡ ನಂತರ, ಈ ಟಿವಿ ಸಮೂಹದ ಬಹುತೇಕ ಚಾನೆಲ್‍ಗಳನ್ನು ಮುಖೇಶ್ ಅಂಬಾನಿ ಒಡೆತನದ ರಿಲೆಯನ್ಸ್ ಕಂಪೆನಿಯೇ ಕೊಂಡಿತ್ತು. ಇಷ್ಟಲ್ಲದೇ ನಷ್ಟದಲ್ಲಿರುವ ಝೀ ಟಿವಿ ಸಮೂಹವನ್ನು ಕೊಳ್ಳಲೂ ಸಹಾ ಅಂಬಾನಿ ಹಾಗೂ ಭಾರ್ತಿ ಮಿತ್ತಲ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಟಿವಿ ಚಾನೆಲ್ಲೂ ಅಂಬಾನಿಯದ್ದೇ, ಕೇಬಲ್ ನೆಟ್‍ವರ್ಕ್ ಸಹಾ ಅವರದ್ದೇ ಆದರೆ ಏನಾಗಬಹುದು?

ಮೋದಿ ಸರ್ಕಾರದ ತಪ್ಪುಗಳು/ಹಗರಣಗಳನ್ನು ಬಯಲಿಗೆಳೆಯುತ್ತಿದ್ದ ಎಬಿಪಿ ಚಾನೆಲ್‍ಅನ್ನು ಮಣಿಸಲು ಸರ್ಕಾರ ಏನು ಮಾಡಿತೆಂಬುದನ್ನು ನಾವು ನೋಡಿದ್ದೇವೆ. ಸರ್ಕಾರೀ ಜಾಹೀರಾತುಗಳನ್ನು ನಿಲ್ಲಿಸುವುದು, ಸಿಗ್ನಲ್ ಸಹಾ ಇಲ್ಲದಂತೆ ಮಾಡುವುದು ಇತ್ಯಾದಿಗಳ ಮೂಲಕ ಎಬಿಪಿ ನ್ಯೂಸ್ ಶರಣಾಗಿ ಬಿಜೆಪಿಯ ಮುಂದೆ ಮಂಡಿಯೂರಬೇಕಾಯಿತು. ಅದರ ಪ್ರಸಿದ್ಧ ಸಂಪಾದಕ ಪುಣ್ಯಪ್ರಸೂನ್ ವಾಜಪೇಯಿ ಅವರನ್ನು ಕಿತ್ತೊಗೆಯಬೇಕಾಯಿತು. ಕಿತ್ತೊಗೆದ ಮರುದಿನದಿಂದಲೇ ‘ಎಲ್ಲವೂ ಸರಿಹೋಯಿತು’.

ಹೀಗಿದ್ದ ಮೇಲೆ ಮುಂದೆ ಸರ್ಕಾರಗಳು ಅಂಬಾನಿಯ ಮುಂದೆ ಮಂಡಿಯೂರಬೇಕಾಗಬಹುದು. ಏಕೆಂದರೆ, ತಮ್ಮ ವಿರುದ್ಧ ಸುದ್ದಿ ಪ್ರಸರಣ ಮಾಡುವ ಇತರ ಮಾಧ್ಯಮಗಳ ಮೇಲೂ ಹಿಡಿತ ಹೊಂದುವ ಅಂಬಾನಿ, ಸರ್ಕಾರಕ್ಕೇ ಸವಾಲು ಹಾಕಬಹುದು. ಇವೆಲ್ಲದರ ಕುರಿತು ಟ್ರಾಯ್ 2008ರಲ್ಲೇ ಎಚ್ಚರಿಸಿತ್ತು. ಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮ ಮತ್ತು ಕೇಬಲ್ ನಿರ್ವಹಣೆಯಲ್ಲಿ ದೊಡ್ಡ ಕಾರ್ಪೋರೇಟ್ ಏಕಸ್ವಾಮ್ಯಕ್ಕೆ ದಾರಿ ಮಾಡಿಕೊಟ್ಟರೆ ಆಗುವ ದುಷ್ಟರಿಣಾಮಗಳು ಗಂಭೀರವಾಗಿರುತ್ತದೆ. ಜನರ ಮನೋಲೋಕವನ್ನು ಹಿಡಿದಿಡುವ, ನಿರ್ಬಂಧಿಸುವ ಕೆಲಸವನ್ನು ಈಗಾಗಲೇ ಮಾಡುತ್ತಿರುವ ದೃಶ್ಯ ಮಾಧ್ಯಮಗಳು ಈ ಚಾಲದ ಮಾಲೀಕರ ಹಿತಾಸಕ್ತಿಗೆ ತಕ್ಕಂತೆ ದುಡಿಯಲಾರಂಭಿಸುತ್ತದೆ.

ಏಕಸ್ವಾಮ್ಯ ಸಾಧಿಸಿದ ಮೇಲೆ ಜನರಿಗೆ ಉಚಿತವಾಗಿ ಚಾನೆಲ್ ನೀಡುವ ಅಗತ್ಯವಿಲ್ಲ. ಎಲ್ಲಕ್ಕೂ ಹಣ ನಿಗದಿ ಮಾಡಿ ಹೆಚ್ಚಿಸುತ್ತಾ ಹೋದರೆ ಸಾಕು. ಮನರಂಜನೆ ಮತ್ತು ಸುದ್ದಿಯೂ ಮಾರುವ ಸರಕಾಗಿರುವಾಗ ಇದೇನು ಮಹಾ ಅಲ್ಲವೇ? ಆ ಧೈರ್ಯದಿಂದಲೇ ಚುನಾವಣೆ 4-5 ತಿಂಗಳಿರುವಾಗಲೇ ಸರ್ಕಾರದ ಕುಮ್ಮಕ್ಕಿನೊಂದಿಗೆ ಕೇಬಲ್ ಚಾನೆಲ್‍ಗಳ ಬೆಲೆಯನ್ನು ವಿಪರೀತವಾಗಿ ಹೆಚ್ಚಿಸಲಾಯಿತು.
ಇದು ಪ್ರಜಾಪ್ರಭುತ್ವಕ್ಕೆ ಅತ್ಯಂತ ಅಪಾಯಕಾರಿಯಾದುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...