Homeಮುಖಪುಟ220 ರೂ ಇದ್ದ ಕೇಬಲ್ ಬಿಲ್ 400 ರೂ ದಾಟುತ್ತಿರುವುದೇಕೆ? ಇದರ ಲಾಭ ಯಾರಿಗೆ?

220 ರೂ ಇದ್ದ ಕೇಬಲ್ ಬಿಲ್ 400 ರೂ ದಾಟುತ್ತಿರುವುದೇಕೆ? ಇದರ ಲಾಭ ಯಾರಿಗೆ?

- Advertisement -
- Advertisement -

220 ರೂ ಇದ್ದ ಕೇಬಲ್ ಬಿಲ್ 400 ರೂ ದಾಟುತ್ತಿರುವುದೇಕೆ? ಇದರ ಲಾಭ ಯಾರಿಗೆ? ಹಿಂದಿರುವವರು ಯಾರು?

ಚಾನೆಲ್‍ಗಳು ಮಾತ್ರ ಅಂಬಾನಿಯದ್ದಲ್ಲ; ಕೇಬಲ್ ಸಹಾ ರಿಲೆಯನ್ಸ್‍ ದೇ. ಅಪಾಯಕಾರಿ ಬೆಳವಣಿಗೆಗೆ ನಾಂದಿ

ಮಂಡ್ಯದಲ್ಲಿ ಸುಮಲತಾ ನಾಮಪತ್ರ ಸಲ್ಲಿಸಿದ ದಿನ ಸ್ಥಳೀಯವಾಗಿ ಜೆಡಿಎಸ್‍ನ ಪ್ರಭಾವದಿಂದಾಗಿ ಕೇಬಲ್ ಟಿವಿ ಕೆಲಸ ಮಾಡದಂತೆ ಮಾಡಲಾಯಿತು ಎಂಬ ಒಂದು ಆರೋಪವಿದೆ. ಆದರೆ, ಮುಖೇಶ್ ಅಂಬಾನಿಯ ಬೆಂಬಲಕ್ಕೆ ನಿಂತಿರುವ ಬಿಜೆಪಿ ಪಕ್ಷದ ವಿರುದ್ಧ ಯಾವುದಾದರೂ ಚಾನೆಲ್ ಸುದ್ದಿ ಮಾಡಿದರೆ, ಆ ಚಾನೆಲ್ಲೇ ಬರದಂತೆ ನೋಡಿಕೊಳ್ಳುವ ಸಂಭವ ತೆರೆದುಕೊಂಡಿದೆ. ಅದು ಹೇಗೆಂಬುದನ್ನು ನೋಡೋಣ.

200 ರೂ. ಆಸುಪಾಸಿನಷ್ಟು ಖರ್ಚು ಮಾಡಿ ನೂರಾರು ಚಾನೆಲ್‍ಗಳನ್ನು ಪಡೆದುಕೊಳ್ಳುತ್ತಿದ್ದ ದಿನಗಳು ಈಗ ಇಲ್ಲ. ಕೆಲವು ಕಾಲದ ನಂತರ ಇದು ಯಾವ ಸ್ವರೂಪ ತೆಗೆದುಕೊಳ್ಳಲಿದೆ ಎಂಬುದನ್ನೂ ಹೇಳಲಾಗದು. ಹಿಂದೆಯೂ ಉಚಿತ ಚಾನೆಲ್‍ಗಳು ಮತ್ತು ಹಣ ಕೊಟ್ಟು ಕೊಳ್ಳಬೇಕಾದ ಚಾನೆಲ್‍ಗಳಿದ್ದವು. ಆದರೆ, ಅವೆಲ್ಲಾ ಸಾಮಾನ್ಯ ಗ್ರಾಹಕರ ಗಮನಕ್ಕೆ ಬರುತ್ತಿರಲಿಲ್ಲ. ಏಕೆಂದರೆ, ಕೇಬಲ್ ಮೂಲಕ ಸೇವೆ ಒದಗಿಸುತ್ತಿದ್ದ ಆಪರೇಟರ್‍ಗಳು ಅವನ್ನೆಲ್ಲಾ ಮಾಡಿ, ಇಂತಿಷ್ಟು ಹಣಕ್ಕೆ ಇಷ್ಟು ಚಾನೆಲ್ ಎಂಬ ಪ್ಯಾಕೇಜ್‍ನೊಂದಿಗೆ ಒದಗಿಸುತ್ತಿದ್ದರು.
ಆದರೆ, ಈಗೆರಡು ತಿಂಗಳ ಹಿಂದೆ ಕೆಲವು ಉಚಿತ ಚಾನೆಲ್‍ಗಳನ್ನು ಬಿಟ್ಟರೆ ತಮಗೆ ಬೇಕಾದ ಮನರಂಜನೆ ಅಥವಾ ಸುದ್ದಿ ಚಾನೆಲ್‍ಗಳಿಗೆ ಪ್ರತ್ಯೇಕವಾಗಿ ಇಂತಿಷ್ಟು ಶುಲ್ಕವೆಂದು ಪಾವತಿಸಬೇಕೆಂದು ಸೂಚಿಸಲಾಗಿತ್ತು. ಇದರಿಂದ ಬಹುತೇಕ ಎಲ್ಲಾ ಚಾನೆಲ್‍ಗಳನ್ನು ನೋಡುತ್ತಿದ್ದ ಗ್ರಾಹಕರಿಗೆ ಗೊಂದಲವುಂಟಾಯಿತು. ಪ್ರತೀ ಮನೆಯಲ್ಲೂ ಬೇರೆ ಬೇರೆ ಆಸಕ್ತಿಗಳ ಸದಸ್ಯರಿರುತ್ತಾರಾದ್ದರಿಂದ, ಎಲ್ಲರಿಗೂ ಬೇಕಾದ ಸೀಮಿತ ಚಾನೆಲ್‍ಗಳಿಗೂ ಹಿಂದಿಗಿಂತ 150 ರೂ ಹೆಚ್ಚು ಕೊಡಬೇಕು. ಇದು ಇನ್ನೂ ಹೆಚ್ಚಾಗಬಹುದೇ ಹೊರತು ಕಡಿಮೆಯಾಗದು. ಇನ್ನು ಸ್ವಲ್ಪ ಹೆಚ್ಚು ಚಾನೆಲ್‍ಗಳು ಬೇಕೆಂದರೆ, ದುಪ್ಪಟ್ಟು ಬೆಲೆ ನೀಡಬೇಕಾದಂತಹ ಪರಿಸ್ಥಿತಿ ಏಕೆ ತಲೆದೋರಿತು? ಇದರ ಲಾಭ ಯಾರಿಗೆ ಆಗಬಹುದು ಎಂಬುದನ್ನು ನೋಡೋಣ.

ಎಲ್ಲರಿಗೂ ತಿಳಿದಿರುವಂತೆ ಬಹಳ ಹಿಂದೆ ಮನೆ ಮನೆಗೆ ಕೇಬಲ್ ಎಳೆದು ವಿವಿಧ ಚಾನೆಲ್‍ಗಳಲ್ಲದೇ, ಕೇಬಲ್‍ನವರೇ ಸಿನೆಮಾ ಸಹಾ ತೋರಿಸುತ್ತಿದ್ದರು. ಈ ರೀತಿ ಕೇಬಲ್ ಜಾಲ ವಿಸ್ತರಿಸಲು ಬಹಳ ದೊಡ್ಡ ಪೈಪೋಟಿಯೇ ನಡೆದಿದೆ. ಕೇಬಲ್ ಮಾಫಿಯಾ ಎಂದೆಲ್ಲಾ ಅದನ್ನು ಕರೆಯಲಾಗುತ್ತಿತ್ತು. ಆದರೆ, ಕಂಬ, ಮರಗಳು, ಮನೆಯ ಮೇಲಿನ ಕೊಕ್ಕೆಗಳು ಎಲ್ಲಕ್ಕೂ ಸಿಕ್ಕಿಸಿ ಮನೆಯಿಂದ ಮನೆಗೆ ತೆಗೆದುಕೊಂಡು ಹೋಗಿ ಎಲ್ಲಾ ಕಡೆ ಈ ಮಾರುಕಟ್ಟೆ ಸೃಷ್ಟಿ ಮಾಡಿದ್ದರಲ್ಲಿ ಸಣ್ಣ ಆಪರೇಟರ್‍ಗಳ ಪಾಲು ದೊಡ್ಡದು. ನಂತರ ಅವು ‘ಮಾಫಿಯಾ’ಗಳ ಹಿಡಿತಕ್ಕೆ, ರಾಜಕಾರಣಿಗಳ ಹಿಡಿತಕ್ಕೆ ಹೋಯಿತು.

ಆ ನಂತರ ಸಿಟಿ ಕೇಬಲ್, ಹಾಥ್‍ವೇ ಮತ್ತು ಡೆನ್‍ಗಳೆಂಬ ಎಂಎಸ್‍ಓ (ಮಲ್ಟಿ ಸರ್ವೀಸ್ ಆಪರೇಟರ್)ಗಳು ತಲೆಯೆತ್ತಿದವು. ಇವು ಸ್ಥಳೀಯ ಅಗತ್ಯಗಳೂ ಇದ್ದುದರಿಂದ ಲೋಕಲ್ ಆಪರೇಟರ್‍ಗಳನ್ನೂ ಸಣ್ಣ ಪಾಲುದಾರರನ್ನಾಗಿ ಉಳಿಸಿಕೊಂಡು, ಬೃಹತ್ತಾಗಿ ಬೆಳೆದವು. ಶೇ.10ರಿಂದ ಶೇ.50ರವರೆಗೆ ತಮ್ಮ ಷೇರುಗಳನ್ನು ಉಳಿಸಿಕೊಂಡ ಲಕ್ಷಾಂತರ ಸಣ್ಣ ಆಪರೇಟರ್‍ಗಳು ಒಂದಲ್ಲಾ ಒಂದು ಎಂಎಸ್‍ಓ ಜೊತೆಗೆ ಸೇರಲೇಬೇಕಾಯಿತು.

ಅಂದ ಹಾಗೆ ಈ ಡೆನ್ ಯಾರದ್ದು?
ಸಮೀರ್ ಮಂಚಂಡ ಮತ್ತು ರಾಘವ್ ಬೆಹ್ಲ್ ಇಬ್ಬರೂ ಪಾಲುದಾರರಾಗಿದ್ದ ಕಾಲದಿಂದಲೂ ಡೆನ್ ಬೆಳೆಯುತ್ತಾ, ಹಿಂದಿ ರಾಜ್ಯಗಳಲ್ಲೆಲ್ಲಾ ವ್ಯಾಪಿಸಿತು. ಸಿಎನ್‍ಎನ್ ಐಬಿಎನ್ ಹುಟ್ಟಿ ಹಾಕಿದ್ದ ರಾಘವ್ ಬೆಹ್ಲ್ ನಂತರ ಅದನ್ನು ಅಂಬಾನಿಗೆ ಮಾರಿದರು. ಅದರ ಜೊತೆಗೆ ಕೇಬಲ್ ಜಾಲದ ತಮ್ಮ ಷೇರುಗಳನ್ನೂ. ಇನ್ನು ಮಂಚಂಡ, ರಿಪಬ್ಲಿಕ್ ಟಿವಿಯಲ್ಲೂ ಪಾಲುದಾರಿಕೆ ಹೊಂದಿದ್ದ. ಅರ್ನಬ್ ಗೋಸ್ವಾಮಿ ರಿಪಬ್ಲಿಕ್ ಶುರು ಮಾಡಿದಾಗ ಕೇಬಲ್ ಜಾಲವನ್ನೂ ಹಿಡಿತಕ್ಕೆ ತೆಗೆದುಕೊಳ್ಳುವ ಯೋಜನೆಯೊಂದಿಗೇ ಹೊರಟಿದ್ದು.

ಆದರೆ, ಈಗಿನ ಪರಿಸ್ಥಿತಿ ಬೇರೆಯೇ ಆಗಿದೆ. ಡೆನ್ ಮತ್ತು ಹಾಥ್‍ವೇ ಎರಡರ ಮೇಲೂ ಸಂಪೂರ್ಣ ಹಿಡಿತ ಸಾಧಿಸಿರುವುದು ಆರ್‍ಐಜಿ – ಅಂದರೆ ರಿಲೆಯನ್ಸ್ ಇಂಡಸ್ಟ್ರೀಸ್ ಗ್ರೂಪ್.
ಟಿವಿ – 18 ಕೊಂಡ ನಂತರ, ಈ ಟಿವಿ ಸಮೂಹದ ಬಹುತೇಕ ಚಾನೆಲ್‍ಗಳನ್ನು ಮುಖೇಶ್ ಅಂಬಾನಿ ಒಡೆತನದ ರಿಲೆಯನ್ಸ್ ಕಂಪೆನಿಯೇ ಕೊಂಡಿತ್ತು. ಇಷ್ಟಲ್ಲದೇ ನಷ್ಟದಲ್ಲಿರುವ ಝೀ ಟಿವಿ ಸಮೂಹವನ್ನು ಕೊಳ್ಳಲೂ ಸಹಾ ಅಂಬಾನಿ ಹಾಗೂ ಭಾರ್ತಿ ಮಿತ್ತಲ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಟಿವಿ ಚಾನೆಲ್ಲೂ ಅಂಬಾನಿಯದ್ದೇ, ಕೇಬಲ್ ನೆಟ್‍ವರ್ಕ್ ಸಹಾ ಅವರದ್ದೇ ಆದರೆ ಏನಾಗಬಹುದು?

ಮೋದಿ ಸರ್ಕಾರದ ತಪ್ಪುಗಳು/ಹಗರಣಗಳನ್ನು ಬಯಲಿಗೆಳೆಯುತ್ತಿದ್ದ ಎಬಿಪಿ ಚಾನೆಲ್‍ಅನ್ನು ಮಣಿಸಲು ಸರ್ಕಾರ ಏನು ಮಾಡಿತೆಂಬುದನ್ನು ನಾವು ನೋಡಿದ್ದೇವೆ. ಸರ್ಕಾರೀ ಜಾಹೀರಾತುಗಳನ್ನು ನಿಲ್ಲಿಸುವುದು, ಸಿಗ್ನಲ್ ಸಹಾ ಇಲ್ಲದಂತೆ ಮಾಡುವುದು ಇತ್ಯಾದಿಗಳ ಮೂಲಕ ಎಬಿಪಿ ನ್ಯೂಸ್ ಶರಣಾಗಿ ಬಿಜೆಪಿಯ ಮುಂದೆ ಮಂಡಿಯೂರಬೇಕಾಯಿತು. ಅದರ ಪ್ರಸಿದ್ಧ ಸಂಪಾದಕ ಪುಣ್ಯಪ್ರಸೂನ್ ವಾಜಪೇಯಿ ಅವರನ್ನು ಕಿತ್ತೊಗೆಯಬೇಕಾಯಿತು. ಕಿತ್ತೊಗೆದ ಮರುದಿನದಿಂದಲೇ ‘ಎಲ್ಲವೂ ಸರಿಹೋಯಿತು’.

ಹೀಗಿದ್ದ ಮೇಲೆ ಮುಂದೆ ಸರ್ಕಾರಗಳು ಅಂಬಾನಿಯ ಮುಂದೆ ಮಂಡಿಯೂರಬೇಕಾಗಬಹುದು. ಏಕೆಂದರೆ, ತಮ್ಮ ವಿರುದ್ಧ ಸುದ್ದಿ ಪ್ರಸರಣ ಮಾಡುವ ಇತರ ಮಾಧ್ಯಮಗಳ ಮೇಲೂ ಹಿಡಿತ ಹೊಂದುವ ಅಂಬಾನಿ, ಸರ್ಕಾರಕ್ಕೇ ಸವಾಲು ಹಾಕಬಹುದು. ಇವೆಲ್ಲದರ ಕುರಿತು ಟ್ರಾಯ್ 2008ರಲ್ಲೇ ಎಚ್ಚರಿಸಿತ್ತು. ಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮ ಮತ್ತು ಕೇಬಲ್ ನಿರ್ವಹಣೆಯಲ್ಲಿ ದೊಡ್ಡ ಕಾರ್ಪೋರೇಟ್ ಏಕಸ್ವಾಮ್ಯಕ್ಕೆ ದಾರಿ ಮಾಡಿಕೊಟ್ಟರೆ ಆಗುವ ದುಷ್ಟರಿಣಾಮಗಳು ಗಂಭೀರವಾಗಿರುತ್ತದೆ. ಜನರ ಮನೋಲೋಕವನ್ನು ಹಿಡಿದಿಡುವ, ನಿರ್ಬಂಧಿಸುವ ಕೆಲಸವನ್ನು ಈಗಾಗಲೇ ಮಾಡುತ್ತಿರುವ ದೃಶ್ಯ ಮಾಧ್ಯಮಗಳು ಈ ಚಾಲದ ಮಾಲೀಕರ ಹಿತಾಸಕ್ತಿಗೆ ತಕ್ಕಂತೆ ದುಡಿಯಲಾರಂಭಿಸುತ್ತದೆ.

ಏಕಸ್ವಾಮ್ಯ ಸಾಧಿಸಿದ ಮೇಲೆ ಜನರಿಗೆ ಉಚಿತವಾಗಿ ಚಾನೆಲ್ ನೀಡುವ ಅಗತ್ಯವಿಲ್ಲ. ಎಲ್ಲಕ್ಕೂ ಹಣ ನಿಗದಿ ಮಾಡಿ ಹೆಚ್ಚಿಸುತ್ತಾ ಹೋದರೆ ಸಾಕು. ಮನರಂಜನೆ ಮತ್ತು ಸುದ್ದಿಯೂ ಮಾರುವ ಸರಕಾಗಿರುವಾಗ ಇದೇನು ಮಹಾ ಅಲ್ಲವೇ? ಆ ಧೈರ್ಯದಿಂದಲೇ ಚುನಾವಣೆ 4-5 ತಿಂಗಳಿರುವಾಗಲೇ ಸರ್ಕಾರದ ಕುಮ್ಮಕ್ಕಿನೊಂದಿಗೆ ಕೇಬಲ್ ಚಾನೆಲ್‍ಗಳ ಬೆಲೆಯನ್ನು ವಿಪರೀತವಾಗಿ ಹೆಚ್ಚಿಸಲಾಯಿತು.
ಇದು ಪ್ರಜಾಪ್ರಭುತ್ವಕ್ಕೆ ಅತ್ಯಂತ ಅಪಾಯಕಾರಿಯಾದುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...