Homeಅಂತರಾಷ್ಟ್ರೀಯಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ...!

ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!

- Advertisement -
- Advertisement -

ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗ ವಿಶ್ವದ 6 ನೇ ಅತಿದೊಡ್ಡ ತೈಲ ಕಂಪನಿಯಾಗಿ ಬೆಳೆದು ನಿಂತಿದೆ.

ಮಂಗಳವಾರದ ವಹಿವಾಟಿನ ಮುಕ್ತಾಯದ ವೇಳೆ, ಬ್ರಿಟಿಷ್ ಎನರ್ಜಿ ಜೈಂಟ್ಸ್‌ನದು 132 ಬಿಲಿಯನ್ ಡಾಲರ್‌ ಮೌಲ್ಯವಿದ್ದರೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮೌಲ್ಯ 138 ಬಿಲಿಯನ್ ಡಾಲರ್‌ಗೇರಿದೆ. ಈ ಮೂಲಕ ರಿಲಯನ್ಸ್‌ $138 ಬಿಲಿಯನ್ ತಲುಪಿದ ಮೊದಲ ಭಾರತೀಯ ಕಂಪನಿ ಆಗಿದೆ.

ರಿಲಯನ್ಸ್‌ ಷೇರುಗಳು ಬೆಲೆ 3 ಪಟ್ಟು ಹೆಚ್ಚಳಗೊಂಡಿವೆ. ಆಗಸ್ಟ್‌ನಲ್ಲಿ ರಿಲಯನ್ಸ್‌ ಮಾಲೀಕರು ಕಂಪನಿಯ ನಿವ್ವಳ ಸಾಲವನ್ನು 18 ತಿಂಗಳಲ್ಲಿ ಶೂನ್ಯಕ್ಕೆ ಇಳಿಸುವ ಯೋಜನೆ ಘೋಷಿಸಿದ್ದರು. ನಂತರದಲ್ಲಿ ರಿಲಯನ್ಸ್‌ ಷೇರುಗಳನ್ನು ತೈಲದಿಂದ ರಾಸಯನಿಕಕ್ಕೆ ಪರಿವರ್ತಿಸುವ ಸೌದಿಯ ಅರಾಮ್ಕೋಗೆ ಮಾರುವುದಾಗಿ ಹೇಳಿದ್ದರು. ಆನಂತರ ರಿಲೆಯನ್ಸ್‌ ಷೇರುಗಳ ಬೆಲೆ ಏರುತ್ತಲೇ ಇದೆ.

ಷೇರುಗಳ ಬೆಲೆ ಹೆಚ್ಚುತ್ತಿರುವುದು ಅಂಬಾನಿಗೆ 56 ಬಿಲಿಯನ್ ಡಾಲರ್‌ ನಿವ್ವಳ ಲಾಭ‍ ತಂದು ಕೊಟ್ಟಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಅಲಿಬಾಬಾ ಗ್ರೂಪ್‌ನ ಜ್ಯಾಕ್ ಮಾರನ್ನು ಮೀರಿಸಿ ಈಗ ಮುಖೇಶ್ ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಈಗ 10 ಟ್ರಿಲಿಯನ್ ರೂಪಾಯಿ ಮಾರುಕಟ್ಟೆ ತಲುಪಿದ ಮೊದಲ ಭಾರತೀಯ ಕಂಪನಿ ಎಂಬ ಹೆಗ್ಗಳಿಕೆಗೆ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಪಾತ್ರವಾಗಿದೆ.

ಬಿಪಿಯ ಶೇ. 1.2 ಲಾಭಕ್ಕೆ ಹೋಲಿಸಿದರೆ, ರಿಲಯನ್ಸ್ ಈ ವರ್ಷ ಶೇ. 40 ರಷ್ಟು ಹೆಚ್ಚಿದೆ. ಕಚ್ಚಾ ಬೆಲೆಯಲ್ಲಿನ ಬದಲಾವಣೆಗಳಿಂದಾಗಿ ಮತ್ತು ಭವಿಷ್ಯದ ಇಂಧನ ಬೇಡಿಕೆಯ ಮೇಲೆ ಅನಿಶ್ಚಿತತೆ ಮುಂದುವರಿದಿದ್ದರಿಂದ ಹಲವಾರು ತೈಲ ಕಂಪನಿಗಳು ಹೆಣಗಾಡುತ್ತಿವೆ. ಆದರೆ ರಿಲೆಯನ್ಸ್‌ ಮಾತ್ರ ಸತತವಾಗಿ ಲಾಭ ಗಳಿಸುತ್ತಿದೆ.

ಪಶ್ಚಿಮ ಭಾರತದಲ್ಲಿ ವಿಶ್ವದ ಅತಿದೊಡ್ಡ ತೈಲ-ಸಂಸ್ಕರಣಾ ಸಂಕೀರ್ಣವನ್ನು ರಿಲಯನ್ಸ್‌ ನಿರ್ವಹಿಸುತ್ತಿದೆ. ಇದರಲ್ಲಿ ಕಡಿಮೆ-ಗುಣಮಟ್ಟದ ಕಚ್ಚಾ ಪದಾರ್ಥಗಳ್ನು ಸಂಸ್ಕರಿಸಬಹುದು ಮತ್ತು ಸಂಸ್ಕರಿಸಿದ ಪದಾರ್ಥಗಳನ್ನು ಉನ್ನತ ದರ್ಜೆಯ ಇಂಧನವಾಗಿ ಪರಿವರ್ತಿಸಬಹುದು. ಇದು ಬೆಲೆಯಲ್ಲಿ ಆಗುವ ಏರಿಳಿತದಿಂದ ಕಂಪನಿಯನ್ನು ರಕ್ಷಿಸುತ್ತದೆ.

ಇನ್ನು ರಿಲಯನ್ಸ್‌ ತನ್ನ ಆದಾಯದ ಮೂರನೇ ಎರಡರಷ್ಟನ್ನು ಇಂಧನ ಉದ್ಯಮದಿಂದಲೇ ಪಡೆಯುತ್ತಿದೆ. ಜೊತೆಗೆ ವಿಶ್ವದ ಎರಡನೇ ಅತಿದೊಡ್ಡ ಉದ್ಯಮವಾದ ಟೆಲಿಕಾಂ ಮತ್ತು ಡಿಜಿಟಲ್‌ ಸೇವೆಯಲ್ಲಿಯೂ ಸಹ ಭಾರಿ ಪ್ರಮಾಣದ ಹೂಡಿಕೆಯನ್ನು ಮಾಡಿದೆ. ಮುಂದೆ ಅದು ಚಿಲ್ಲರೆ ವ್ಯಾಪಾರ ಕ್ಷೇತ್ರಕ್ಕೂ ಸಹ ವಿಸ್ತರಿಸಲಿದ್ದು ಅಮೆಜಾನ್.ಕಾಮ್ ಇಂಕ್. ಮತ್ತು ವಾಲ್ಮಾರ್ಟ್ ಇಂಕ್. ನೊಡನೆ ಪೈಪೋಟಿ ನಡೆಸಲು ಸಿದ್ದತೆ ನಡೆಸಿದೆ.

ಸದ್ಯ ಇಂಧನ ಉದ್ಯಮದಲ್ಲಿ ರಿಲೆಯನ್ಸ್‌ 6ನೇ ಸ್ಥಾನದಲ್ಲಿದೆ. ಎಕ್ಸಲಾ‌ ಮೊಬಿಲ್‌ ಕಾರ್ಪೋ ಮತ್ತು ಸೌದಿಯ ಆರಾಮ್ಕೋ ಮೊದಲೆರಡು ಸ್ಥಾನಗಳಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...