Homeಅಂತರಾಷ್ಟ್ರೀಯಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ...!

ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!

- Advertisement -
- Advertisement -

ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗ ವಿಶ್ವದ 6 ನೇ ಅತಿದೊಡ್ಡ ತೈಲ ಕಂಪನಿಯಾಗಿ ಬೆಳೆದು ನಿಂತಿದೆ.

ಮಂಗಳವಾರದ ವಹಿವಾಟಿನ ಮುಕ್ತಾಯದ ವೇಳೆ, ಬ್ರಿಟಿಷ್ ಎನರ್ಜಿ ಜೈಂಟ್ಸ್‌ನದು 132 ಬಿಲಿಯನ್ ಡಾಲರ್‌ ಮೌಲ್ಯವಿದ್ದರೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮೌಲ್ಯ 138 ಬಿಲಿಯನ್ ಡಾಲರ್‌ಗೇರಿದೆ. ಈ ಮೂಲಕ ರಿಲಯನ್ಸ್‌ $138 ಬಿಲಿಯನ್ ತಲುಪಿದ ಮೊದಲ ಭಾರತೀಯ ಕಂಪನಿ ಆಗಿದೆ.

ರಿಲಯನ್ಸ್‌ ಷೇರುಗಳು ಬೆಲೆ 3 ಪಟ್ಟು ಹೆಚ್ಚಳಗೊಂಡಿವೆ. ಆಗಸ್ಟ್‌ನಲ್ಲಿ ರಿಲಯನ್ಸ್‌ ಮಾಲೀಕರು ಕಂಪನಿಯ ನಿವ್ವಳ ಸಾಲವನ್ನು 18 ತಿಂಗಳಲ್ಲಿ ಶೂನ್ಯಕ್ಕೆ ಇಳಿಸುವ ಯೋಜನೆ ಘೋಷಿಸಿದ್ದರು. ನಂತರದಲ್ಲಿ ರಿಲಯನ್ಸ್‌ ಷೇರುಗಳನ್ನು ತೈಲದಿಂದ ರಾಸಯನಿಕಕ್ಕೆ ಪರಿವರ್ತಿಸುವ ಸೌದಿಯ ಅರಾಮ್ಕೋಗೆ ಮಾರುವುದಾಗಿ ಹೇಳಿದ್ದರು. ಆನಂತರ ರಿಲೆಯನ್ಸ್‌ ಷೇರುಗಳ ಬೆಲೆ ಏರುತ್ತಲೇ ಇದೆ.

ಷೇರುಗಳ ಬೆಲೆ ಹೆಚ್ಚುತ್ತಿರುವುದು ಅಂಬಾನಿಗೆ 56 ಬಿಲಿಯನ್ ಡಾಲರ್‌ ನಿವ್ವಳ ಲಾಭ‍ ತಂದು ಕೊಟ್ಟಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಅಲಿಬಾಬಾ ಗ್ರೂಪ್‌ನ ಜ್ಯಾಕ್ ಮಾರನ್ನು ಮೀರಿಸಿ ಈಗ ಮುಖೇಶ್ ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಈಗ 10 ಟ್ರಿಲಿಯನ್ ರೂಪಾಯಿ ಮಾರುಕಟ್ಟೆ ತಲುಪಿದ ಮೊದಲ ಭಾರತೀಯ ಕಂಪನಿ ಎಂಬ ಹೆಗ್ಗಳಿಕೆಗೆ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಪಾತ್ರವಾಗಿದೆ.

ಬಿಪಿಯ ಶೇ. 1.2 ಲಾಭಕ್ಕೆ ಹೋಲಿಸಿದರೆ, ರಿಲಯನ್ಸ್ ಈ ವರ್ಷ ಶೇ. 40 ರಷ್ಟು ಹೆಚ್ಚಿದೆ. ಕಚ್ಚಾ ಬೆಲೆಯಲ್ಲಿನ ಬದಲಾವಣೆಗಳಿಂದಾಗಿ ಮತ್ತು ಭವಿಷ್ಯದ ಇಂಧನ ಬೇಡಿಕೆಯ ಮೇಲೆ ಅನಿಶ್ಚಿತತೆ ಮುಂದುವರಿದಿದ್ದರಿಂದ ಹಲವಾರು ತೈಲ ಕಂಪನಿಗಳು ಹೆಣಗಾಡುತ್ತಿವೆ. ಆದರೆ ರಿಲೆಯನ್ಸ್‌ ಮಾತ್ರ ಸತತವಾಗಿ ಲಾಭ ಗಳಿಸುತ್ತಿದೆ.

ಪಶ್ಚಿಮ ಭಾರತದಲ್ಲಿ ವಿಶ್ವದ ಅತಿದೊಡ್ಡ ತೈಲ-ಸಂಸ್ಕರಣಾ ಸಂಕೀರ್ಣವನ್ನು ರಿಲಯನ್ಸ್‌ ನಿರ್ವಹಿಸುತ್ತಿದೆ. ಇದರಲ್ಲಿ ಕಡಿಮೆ-ಗುಣಮಟ್ಟದ ಕಚ್ಚಾ ಪದಾರ್ಥಗಳ್ನು ಸಂಸ್ಕರಿಸಬಹುದು ಮತ್ತು ಸಂಸ್ಕರಿಸಿದ ಪದಾರ್ಥಗಳನ್ನು ಉನ್ನತ ದರ್ಜೆಯ ಇಂಧನವಾಗಿ ಪರಿವರ್ತಿಸಬಹುದು. ಇದು ಬೆಲೆಯಲ್ಲಿ ಆಗುವ ಏರಿಳಿತದಿಂದ ಕಂಪನಿಯನ್ನು ರಕ್ಷಿಸುತ್ತದೆ.

ಇನ್ನು ರಿಲಯನ್ಸ್‌ ತನ್ನ ಆದಾಯದ ಮೂರನೇ ಎರಡರಷ್ಟನ್ನು ಇಂಧನ ಉದ್ಯಮದಿಂದಲೇ ಪಡೆಯುತ್ತಿದೆ. ಜೊತೆಗೆ ವಿಶ್ವದ ಎರಡನೇ ಅತಿದೊಡ್ಡ ಉದ್ಯಮವಾದ ಟೆಲಿಕಾಂ ಮತ್ತು ಡಿಜಿಟಲ್‌ ಸೇವೆಯಲ್ಲಿಯೂ ಸಹ ಭಾರಿ ಪ್ರಮಾಣದ ಹೂಡಿಕೆಯನ್ನು ಮಾಡಿದೆ. ಮುಂದೆ ಅದು ಚಿಲ್ಲರೆ ವ್ಯಾಪಾರ ಕ್ಷೇತ್ರಕ್ಕೂ ಸಹ ವಿಸ್ತರಿಸಲಿದ್ದು ಅಮೆಜಾನ್.ಕಾಮ್ ಇಂಕ್. ಮತ್ತು ವಾಲ್ಮಾರ್ಟ್ ಇಂಕ್. ನೊಡನೆ ಪೈಪೋಟಿ ನಡೆಸಲು ಸಿದ್ದತೆ ನಡೆಸಿದೆ.

ಸದ್ಯ ಇಂಧನ ಉದ್ಯಮದಲ್ಲಿ ರಿಲೆಯನ್ಸ್‌ 6ನೇ ಸ್ಥಾನದಲ್ಲಿದೆ. ಎಕ್ಸಲಾ‌ ಮೊಬಿಲ್‌ ಕಾರ್ಪೋ ಮತ್ತು ಸೌದಿಯ ಆರಾಮ್ಕೋ ಮೊದಲೆರಡು ಸ್ಥಾನಗಳಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...