Homeಅಂತರಾಷ್ಟ್ರೀಯಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ...!

ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!

- Advertisement -
- Advertisement -

ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗ ವಿಶ್ವದ 6 ನೇ ಅತಿದೊಡ್ಡ ತೈಲ ಕಂಪನಿಯಾಗಿ ಬೆಳೆದು ನಿಂತಿದೆ.

ಮಂಗಳವಾರದ ವಹಿವಾಟಿನ ಮುಕ್ತಾಯದ ವೇಳೆ, ಬ್ರಿಟಿಷ್ ಎನರ್ಜಿ ಜೈಂಟ್ಸ್‌ನದು 132 ಬಿಲಿಯನ್ ಡಾಲರ್‌ ಮೌಲ್ಯವಿದ್ದರೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮೌಲ್ಯ 138 ಬಿಲಿಯನ್ ಡಾಲರ್‌ಗೇರಿದೆ. ಈ ಮೂಲಕ ರಿಲಯನ್ಸ್‌ $138 ಬಿಲಿಯನ್ ತಲುಪಿದ ಮೊದಲ ಭಾರತೀಯ ಕಂಪನಿ ಆಗಿದೆ.

ರಿಲಯನ್ಸ್‌ ಷೇರುಗಳು ಬೆಲೆ 3 ಪಟ್ಟು ಹೆಚ್ಚಳಗೊಂಡಿವೆ. ಆಗಸ್ಟ್‌ನಲ್ಲಿ ರಿಲಯನ್ಸ್‌ ಮಾಲೀಕರು ಕಂಪನಿಯ ನಿವ್ವಳ ಸಾಲವನ್ನು 18 ತಿಂಗಳಲ್ಲಿ ಶೂನ್ಯಕ್ಕೆ ಇಳಿಸುವ ಯೋಜನೆ ಘೋಷಿಸಿದ್ದರು. ನಂತರದಲ್ಲಿ ರಿಲಯನ್ಸ್‌ ಷೇರುಗಳನ್ನು ತೈಲದಿಂದ ರಾಸಯನಿಕಕ್ಕೆ ಪರಿವರ್ತಿಸುವ ಸೌದಿಯ ಅರಾಮ್ಕೋಗೆ ಮಾರುವುದಾಗಿ ಹೇಳಿದ್ದರು. ಆನಂತರ ರಿಲೆಯನ್ಸ್‌ ಷೇರುಗಳ ಬೆಲೆ ಏರುತ್ತಲೇ ಇದೆ.

ಷೇರುಗಳ ಬೆಲೆ ಹೆಚ್ಚುತ್ತಿರುವುದು ಅಂಬಾನಿಗೆ 56 ಬಿಲಿಯನ್ ಡಾಲರ್‌ ನಿವ್ವಳ ಲಾಭ‍ ತಂದು ಕೊಟ್ಟಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಅಲಿಬಾಬಾ ಗ್ರೂಪ್‌ನ ಜ್ಯಾಕ್ ಮಾರನ್ನು ಮೀರಿಸಿ ಈಗ ಮುಖೇಶ್ ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಈಗ 10 ಟ್ರಿಲಿಯನ್ ರೂಪಾಯಿ ಮಾರುಕಟ್ಟೆ ತಲುಪಿದ ಮೊದಲ ಭಾರತೀಯ ಕಂಪನಿ ಎಂಬ ಹೆಗ್ಗಳಿಕೆಗೆ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಪಾತ್ರವಾಗಿದೆ.

ಬಿಪಿಯ ಶೇ. 1.2 ಲಾಭಕ್ಕೆ ಹೋಲಿಸಿದರೆ, ರಿಲಯನ್ಸ್ ಈ ವರ್ಷ ಶೇ. 40 ರಷ್ಟು ಹೆಚ್ಚಿದೆ. ಕಚ್ಚಾ ಬೆಲೆಯಲ್ಲಿನ ಬದಲಾವಣೆಗಳಿಂದಾಗಿ ಮತ್ತು ಭವಿಷ್ಯದ ಇಂಧನ ಬೇಡಿಕೆಯ ಮೇಲೆ ಅನಿಶ್ಚಿತತೆ ಮುಂದುವರಿದಿದ್ದರಿಂದ ಹಲವಾರು ತೈಲ ಕಂಪನಿಗಳು ಹೆಣಗಾಡುತ್ತಿವೆ. ಆದರೆ ರಿಲೆಯನ್ಸ್‌ ಮಾತ್ರ ಸತತವಾಗಿ ಲಾಭ ಗಳಿಸುತ್ತಿದೆ.

ಪಶ್ಚಿಮ ಭಾರತದಲ್ಲಿ ವಿಶ್ವದ ಅತಿದೊಡ್ಡ ತೈಲ-ಸಂಸ್ಕರಣಾ ಸಂಕೀರ್ಣವನ್ನು ರಿಲಯನ್ಸ್‌ ನಿರ್ವಹಿಸುತ್ತಿದೆ. ಇದರಲ್ಲಿ ಕಡಿಮೆ-ಗುಣಮಟ್ಟದ ಕಚ್ಚಾ ಪದಾರ್ಥಗಳ್ನು ಸಂಸ್ಕರಿಸಬಹುದು ಮತ್ತು ಸಂಸ್ಕರಿಸಿದ ಪದಾರ್ಥಗಳನ್ನು ಉನ್ನತ ದರ್ಜೆಯ ಇಂಧನವಾಗಿ ಪರಿವರ್ತಿಸಬಹುದು. ಇದು ಬೆಲೆಯಲ್ಲಿ ಆಗುವ ಏರಿಳಿತದಿಂದ ಕಂಪನಿಯನ್ನು ರಕ್ಷಿಸುತ್ತದೆ.

ಇನ್ನು ರಿಲಯನ್ಸ್‌ ತನ್ನ ಆದಾಯದ ಮೂರನೇ ಎರಡರಷ್ಟನ್ನು ಇಂಧನ ಉದ್ಯಮದಿಂದಲೇ ಪಡೆಯುತ್ತಿದೆ. ಜೊತೆಗೆ ವಿಶ್ವದ ಎರಡನೇ ಅತಿದೊಡ್ಡ ಉದ್ಯಮವಾದ ಟೆಲಿಕಾಂ ಮತ್ತು ಡಿಜಿಟಲ್‌ ಸೇವೆಯಲ್ಲಿಯೂ ಸಹ ಭಾರಿ ಪ್ರಮಾಣದ ಹೂಡಿಕೆಯನ್ನು ಮಾಡಿದೆ. ಮುಂದೆ ಅದು ಚಿಲ್ಲರೆ ವ್ಯಾಪಾರ ಕ್ಷೇತ್ರಕ್ಕೂ ಸಹ ವಿಸ್ತರಿಸಲಿದ್ದು ಅಮೆಜಾನ್.ಕಾಮ್ ಇಂಕ್. ಮತ್ತು ವಾಲ್ಮಾರ್ಟ್ ಇಂಕ್. ನೊಡನೆ ಪೈಪೋಟಿ ನಡೆಸಲು ಸಿದ್ದತೆ ನಡೆಸಿದೆ.

ಸದ್ಯ ಇಂಧನ ಉದ್ಯಮದಲ್ಲಿ ರಿಲೆಯನ್ಸ್‌ 6ನೇ ಸ್ಥಾನದಲ್ಲಿದೆ. ಎಕ್ಸಲಾ‌ ಮೊಬಿಲ್‌ ಕಾರ್ಪೋ ಮತ್ತು ಸೌದಿಯ ಆರಾಮ್ಕೋ ಮೊದಲೆರಡು ಸ್ಥಾನಗಳಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...