Homeಅಂತರಾಷ್ಟ್ರೀಯಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ...!

ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!

- Advertisement -
- Advertisement -

ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗ ವಿಶ್ವದ 6 ನೇ ಅತಿದೊಡ್ಡ ತೈಲ ಕಂಪನಿಯಾಗಿ ಬೆಳೆದು ನಿಂತಿದೆ.

ಮಂಗಳವಾರದ ವಹಿವಾಟಿನ ಮುಕ್ತಾಯದ ವೇಳೆ, ಬ್ರಿಟಿಷ್ ಎನರ್ಜಿ ಜೈಂಟ್ಸ್‌ನದು 132 ಬಿಲಿಯನ್ ಡಾಲರ್‌ ಮೌಲ್ಯವಿದ್ದರೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮೌಲ್ಯ 138 ಬಿಲಿಯನ್ ಡಾಲರ್‌ಗೇರಿದೆ. ಈ ಮೂಲಕ ರಿಲಯನ್ಸ್‌ $138 ಬಿಲಿಯನ್ ತಲುಪಿದ ಮೊದಲ ಭಾರತೀಯ ಕಂಪನಿ ಆಗಿದೆ.

ರಿಲಯನ್ಸ್‌ ಷೇರುಗಳು ಬೆಲೆ 3 ಪಟ್ಟು ಹೆಚ್ಚಳಗೊಂಡಿವೆ. ಆಗಸ್ಟ್‌ನಲ್ಲಿ ರಿಲಯನ್ಸ್‌ ಮಾಲೀಕರು ಕಂಪನಿಯ ನಿವ್ವಳ ಸಾಲವನ್ನು 18 ತಿಂಗಳಲ್ಲಿ ಶೂನ್ಯಕ್ಕೆ ಇಳಿಸುವ ಯೋಜನೆ ಘೋಷಿಸಿದ್ದರು. ನಂತರದಲ್ಲಿ ರಿಲಯನ್ಸ್‌ ಷೇರುಗಳನ್ನು ತೈಲದಿಂದ ರಾಸಯನಿಕಕ್ಕೆ ಪರಿವರ್ತಿಸುವ ಸೌದಿಯ ಅರಾಮ್ಕೋಗೆ ಮಾರುವುದಾಗಿ ಹೇಳಿದ್ದರು. ಆನಂತರ ರಿಲೆಯನ್ಸ್‌ ಷೇರುಗಳ ಬೆಲೆ ಏರುತ್ತಲೇ ಇದೆ.

ಷೇರುಗಳ ಬೆಲೆ ಹೆಚ್ಚುತ್ತಿರುವುದು ಅಂಬಾನಿಗೆ 56 ಬಿಲಿಯನ್ ಡಾಲರ್‌ ನಿವ್ವಳ ಲಾಭ‍ ತಂದು ಕೊಟ್ಟಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಅಲಿಬಾಬಾ ಗ್ರೂಪ್‌ನ ಜ್ಯಾಕ್ ಮಾರನ್ನು ಮೀರಿಸಿ ಈಗ ಮುಖೇಶ್ ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಈಗ 10 ಟ್ರಿಲಿಯನ್ ರೂಪಾಯಿ ಮಾರುಕಟ್ಟೆ ತಲುಪಿದ ಮೊದಲ ಭಾರತೀಯ ಕಂಪನಿ ಎಂಬ ಹೆಗ್ಗಳಿಕೆಗೆ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಪಾತ್ರವಾಗಿದೆ.

ಬಿಪಿಯ ಶೇ. 1.2 ಲಾಭಕ್ಕೆ ಹೋಲಿಸಿದರೆ, ರಿಲಯನ್ಸ್ ಈ ವರ್ಷ ಶೇ. 40 ರಷ್ಟು ಹೆಚ್ಚಿದೆ. ಕಚ್ಚಾ ಬೆಲೆಯಲ್ಲಿನ ಬದಲಾವಣೆಗಳಿಂದಾಗಿ ಮತ್ತು ಭವಿಷ್ಯದ ಇಂಧನ ಬೇಡಿಕೆಯ ಮೇಲೆ ಅನಿಶ್ಚಿತತೆ ಮುಂದುವರಿದಿದ್ದರಿಂದ ಹಲವಾರು ತೈಲ ಕಂಪನಿಗಳು ಹೆಣಗಾಡುತ್ತಿವೆ. ಆದರೆ ರಿಲೆಯನ್ಸ್‌ ಮಾತ್ರ ಸತತವಾಗಿ ಲಾಭ ಗಳಿಸುತ್ತಿದೆ.

ಪಶ್ಚಿಮ ಭಾರತದಲ್ಲಿ ವಿಶ್ವದ ಅತಿದೊಡ್ಡ ತೈಲ-ಸಂಸ್ಕರಣಾ ಸಂಕೀರ್ಣವನ್ನು ರಿಲಯನ್ಸ್‌ ನಿರ್ವಹಿಸುತ್ತಿದೆ. ಇದರಲ್ಲಿ ಕಡಿಮೆ-ಗುಣಮಟ್ಟದ ಕಚ್ಚಾ ಪದಾರ್ಥಗಳ್ನು ಸಂಸ್ಕರಿಸಬಹುದು ಮತ್ತು ಸಂಸ್ಕರಿಸಿದ ಪದಾರ್ಥಗಳನ್ನು ಉನ್ನತ ದರ್ಜೆಯ ಇಂಧನವಾಗಿ ಪರಿವರ್ತಿಸಬಹುದು. ಇದು ಬೆಲೆಯಲ್ಲಿ ಆಗುವ ಏರಿಳಿತದಿಂದ ಕಂಪನಿಯನ್ನು ರಕ್ಷಿಸುತ್ತದೆ.

ಇನ್ನು ರಿಲಯನ್ಸ್‌ ತನ್ನ ಆದಾಯದ ಮೂರನೇ ಎರಡರಷ್ಟನ್ನು ಇಂಧನ ಉದ್ಯಮದಿಂದಲೇ ಪಡೆಯುತ್ತಿದೆ. ಜೊತೆಗೆ ವಿಶ್ವದ ಎರಡನೇ ಅತಿದೊಡ್ಡ ಉದ್ಯಮವಾದ ಟೆಲಿಕಾಂ ಮತ್ತು ಡಿಜಿಟಲ್‌ ಸೇವೆಯಲ್ಲಿಯೂ ಸಹ ಭಾರಿ ಪ್ರಮಾಣದ ಹೂಡಿಕೆಯನ್ನು ಮಾಡಿದೆ. ಮುಂದೆ ಅದು ಚಿಲ್ಲರೆ ವ್ಯಾಪಾರ ಕ್ಷೇತ್ರಕ್ಕೂ ಸಹ ವಿಸ್ತರಿಸಲಿದ್ದು ಅಮೆಜಾನ್.ಕಾಮ್ ಇಂಕ್. ಮತ್ತು ವಾಲ್ಮಾರ್ಟ್ ಇಂಕ್. ನೊಡನೆ ಪೈಪೋಟಿ ನಡೆಸಲು ಸಿದ್ದತೆ ನಡೆಸಿದೆ.

ಸದ್ಯ ಇಂಧನ ಉದ್ಯಮದಲ್ಲಿ ರಿಲೆಯನ್ಸ್‌ 6ನೇ ಸ್ಥಾನದಲ್ಲಿದೆ. ಎಕ್ಸಲಾ‌ ಮೊಬಿಲ್‌ ಕಾರ್ಪೋ ಮತ್ತು ಸೌದಿಯ ಆರಾಮ್ಕೋ ಮೊದಲೆರಡು ಸ್ಥಾನಗಳಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...