Homeಅಂತರಾಷ್ಟ್ರೀಯಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ...!

ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!

- Advertisement -
- Advertisement -

ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗ ವಿಶ್ವದ 6 ನೇ ಅತಿದೊಡ್ಡ ತೈಲ ಕಂಪನಿಯಾಗಿ ಬೆಳೆದು ನಿಂತಿದೆ.

ಮಂಗಳವಾರದ ವಹಿವಾಟಿನ ಮುಕ್ತಾಯದ ವೇಳೆ, ಬ್ರಿಟಿಷ್ ಎನರ್ಜಿ ಜೈಂಟ್ಸ್‌ನದು 132 ಬಿಲಿಯನ್ ಡಾಲರ್‌ ಮೌಲ್ಯವಿದ್ದರೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮೌಲ್ಯ 138 ಬಿಲಿಯನ್ ಡಾಲರ್‌ಗೇರಿದೆ. ಈ ಮೂಲಕ ರಿಲಯನ್ಸ್‌ $138 ಬಿಲಿಯನ್ ತಲುಪಿದ ಮೊದಲ ಭಾರತೀಯ ಕಂಪನಿ ಆಗಿದೆ.

ರಿಲಯನ್ಸ್‌ ಷೇರುಗಳು ಬೆಲೆ 3 ಪಟ್ಟು ಹೆಚ್ಚಳಗೊಂಡಿವೆ. ಆಗಸ್ಟ್‌ನಲ್ಲಿ ರಿಲಯನ್ಸ್‌ ಮಾಲೀಕರು ಕಂಪನಿಯ ನಿವ್ವಳ ಸಾಲವನ್ನು 18 ತಿಂಗಳಲ್ಲಿ ಶೂನ್ಯಕ್ಕೆ ಇಳಿಸುವ ಯೋಜನೆ ಘೋಷಿಸಿದ್ದರು. ನಂತರದಲ್ಲಿ ರಿಲಯನ್ಸ್‌ ಷೇರುಗಳನ್ನು ತೈಲದಿಂದ ರಾಸಯನಿಕಕ್ಕೆ ಪರಿವರ್ತಿಸುವ ಸೌದಿಯ ಅರಾಮ್ಕೋಗೆ ಮಾರುವುದಾಗಿ ಹೇಳಿದ್ದರು. ಆನಂತರ ರಿಲೆಯನ್ಸ್‌ ಷೇರುಗಳ ಬೆಲೆ ಏರುತ್ತಲೇ ಇದೆ.

ಷೇರುಗಳ ಬೆಲೆ ಹೆಚ್ಚುತ್ತಿರುವುದು ಅಂಬಾನಿಗೆ 56 ಬಿಲಿಯನ್ ಡಾಲರ್‌ ನಿವ್ವಳ ಲಾಭ‍ ತಂದು ಕೊಟ್ಟಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಅಲಿಬಾಬಾ ಗ್ರೂಪ್‌ನ ಜ್ಯಾಕ್ ಮಾರನ್ನು ಮೀರಿಸಿ ಈಗ ಮುಖೇಶ್ ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಈಗ 10 ಟ್ರಿಲಿಯನ್ ರೂಪಾಯಿ ಮಾರುಕಟ್ಟೆ ತಲುಪಿದ ಮೊದಲ ಭಾರತೀಯ ಕಂಪನಿ ಎಂಬ ಹೆಗ್ಗಳಿಕೆಗೆ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಪಾತ್ರವಾಗಿದೆ.

ಬಿಪಿಯ ಶೇ. 1.2 ಲಾಭಕ್ಕೆ ಹೋಲಿಸಿದರೆ, ರಿಲಯನ್ಸ್ ಈ ವರ್ಷ ಶೇ. 40 ರಷ್ಟು ಹೆಚ್ಚಿದೆ. ಕಚ್ಚಾ ಬೆಲೆಯಲ್ಲಿನ ಬದಲಾವಣೆಗಳಿಂದಾಗಿ ಮತ್ತು ಭವಿಷ್ಯದ ಇಂಧನ ಬೇಡಿಕೆಯ ಮೇಲೆ ಅನಿಶ್ಚಿತತೆ ಮುಂದುವರಿದಿದ್ದರಿಂದ ಹಲವಾರು ತೈಲ ಕಂಪನಿಗಳು ಹೆಣಗಾಡುತ್ತಿವೆ. ಆದರೆ ರಿಲೆಯನ್ಸ್‌ ಮಾತ್ರ ಸತತವಾಗಿ ಲಾಭ ಗಳಿಸುತ್ತಿದೆ.

ಪಶ್ಚಿಮ ಭಾರತದಲ್ಲಿ ವಿಶ್ವದ ಅತಿದೊಡ್ಡ ತೈಲ-ಸಂಸ್ಕರಣಾ ಸಂಕೀರ್ಣವನ್ನು ರಿಲಯನ್ಸ್‌ ನಿರ್ವಹಿಸುತ್ತಿದೆ. ಇದರಲ್ಲಿ ಕಡಿಮೆ-ಗುಣಮಟ್ಟದ ಕಚ್ಚಾ ಪದಾರ್ಥಗಳ್ನು ಸಂಸ್ಕರಿಸಬಹುದು ಮತ್ತು ಸಂಸ್ಕರಿಸಿದ ಪದಾರ್ಥಗಳನ್ನು ಉನ್ನತ ದರ್ಜೆಯ ಇಂಧನವಾಗಿ ಪರಿವರ್ತಿಸಬಹುದು. ಇದು ಬೆಲೆಯಲ್ಲಿ ಆಗುವ ಏರಿಳಿತದಿಂದ ಕಂಪನಿಯನ್ನು ರಕ್ಷಿಸುತ್ತದೆ.

ಇನ್ನು ರಿಲಯನ್ಸ್‌ ತನ್ನ ಆದಾಯದ ಮೂರನೇ ಎರಡರಷ್ಟನ್ನು ಇಂಧನ ಉದ್ಯಮದಿಂದಲೇ ಪಡೆಯುತ್ತಿದೆ. ಜೊತೆಗೆ ವಿಶ್ವದ ಎರಡನೇ ಅತಿದೊಡ್ಡ ಉದ್ಯಮವಾದ ಟೆಲಿಕಾಂ ಮತ್ತು ಡಿಜಿಟಲ್‌ ಸೇವೆಯಲ್ಲಿಯೂ ಸಹ ಭಾರಿ ಪ್ರಮಾಣದ ಹೂಡಿಕೆಯನ್ನು ಮಾಡಿದೆ. ಮುಂದೆ ಅದು ಚಿಲ್ಲರೆ ವ್ಯಾಪಾರ ಕ್ಷೇತ್ರಕ್ಕೂ ಸಹ ವಿಸ್ತರಿಸಲಿದ್ದು ಅಮೆಜಾನ್.ಕಾಮ್ ಇಂಕ್. ಮತ್ತು ವಾಲ್ಮಾರ್ಟ್ ಇಂಕ್. ನೊಡನೆ ಪೈಪೋಟಿ ನಡೆಸಲು ಸಿದ್ದತೆ ನಡೆಸಿದೆ.

ಸದ್ಯ ಇಂಧನ ಉದ್ಯಮದಲ್ಲಿ ರಿಲೆಯನ್ಸ್‌ 6ನೇ ಸ್ಥಾನದಲ್ಲಿದೆ. ಎಕ್ಸಲಾ‌ ಮೊಬಿಲ್‌ ಕಾರ್ಪೋ ಮತ್ತು ಸೌದಿಯ ಆರಾಮ್ಕೋ ಮೊದಲೆರಡು ಸ್ಥಾನಗಳಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...