Homeಅಂತರಾಷ್ಟ್ರೀಯಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ...!

ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!

- Advertisement -
- Advertisement -

ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗ ವಿಶ್ವದ 6 ನೇ ಅತಿದೊಡ್ಡ ತೈಲ ಕಂಪನಿಯಾಗಿ ಬೆಳೆದು ನಿಂತಿದೆ.

ಮಂಗಳವಾರದ ವಹಿವಾಟಿನ ಮುಕ್ತಾಯದ ವೇಳೆ, ಬ್ರಿಟಿಷ್ ಎನರ್ಜಿ ಜೈಂಟ್ಸ್‌ನದು 132 ಬಿಲಿಯನ್ ಡಾಲರ್‌ ಮೌಲ್ಯವಿದ್ದರೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮೌಲ್ಯ 138 ಬಿಲಿಯನ್ ಡಾಲರ್‌ಗೇರಿದೆ. ಈ ಮೂಲಕ ರಿಲಯನ್ಸ್‌ $138 ಬಿಲಿಯನ್ ತಲುಪಿದ ಮೊದಲ ಭಾರತೀಯ ಕಂಪನಿ ಆಗಿದೆ.

ರಿಲಯನ್ಸ್‌ ಷೇರುಗಳು ಬೆಲೆ 3 ಪಟ್ಟು ಹೆಚ್ಚಳಗೊಂಡಿವೆ. ಆಗಸ್ಟ್‌ನಲ್ಲಿ ರಿಲಯನ್ಸ್‌ ಮಾಲೀಕರು ಕಂಪನಿಯ ನಿವ್ವಳ ಸಾಲವನ್ನು 18 ತಿಂಗಳಲ್ಲಿ ಶೂನ್ಯಕ್ಕೆ ಇಳಿಸುವ ಯೋಜನೆ ಘೋಷಿಸಿದ್ದರು. ನಂತರದಲ್ಲಿ ರಿಲಯನ್ಸ್‌ ಷೇರುಗಳನ್ನು ತೈಲದಿಂದ ರಾಸಯನಿಕಕ್ಕೆ ಪರಿವರ್ತಿಸುವ ಸೌದಿಯ ಅರಾಮ್ಕೋಗೆ ಮಾರುವುದಾಗಿ ಹೇಳಿದ್ದರು. ಆನಂತರ ರಿಲೆಯನ್ಸ್‌ ಷೇರುಗಳ ಬೆಲೆ ಏರುತ್ತಲೇ ಇದೆ.

ಷೇರುಗಳ ಬೆಲೆ ಹೆಚ್ಚುತ್ತಿರುವುದು ಅಂಬಾನಿಗೆ 56 ಬಿಲಿಯನ್ ಡಾಲರ್‌ ನಿವ್ವಳ ಲಾಭ‍ ತಂದು ಕೊಟ್ಟಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಅಲಿಬಾಬಾ ಗ್ರೂಪ್‌ನ ಜ್ಯಾಕ್ ಮಾರನ್ನು ಮೀರಿಸಿ ಈಗ ಮುಖೇಶ್ ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಈಗ 10 ಟ್ರಿಲಿಯನ್ ರೂಪಾಯಿ ಮಾರುಕಟ್ಟೆ ತಲುಪಿದ ಮೊದಲ ಭಾರತೀಯ ಕಂಪನಿ ಎಂಬ ಹೆಗ್ಗಳಿಕೆಗೆ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಪಾತ್ರವಾಗಿದೆ.

ಬಿಪಿಯ ಶೇ. 1.2 ಲಾಭಕ್ಕೆ ಹೋಲಿಸಿದರೆ, ರಿಲಯನ್ಸ್ ಈ ವರ್ಷ ಶೇ. 40 ರಷ್ಟು ಹೆಚ್ಚಿದೆ. ಕಚ್ಚಾ ಬೆಲೆಯಲ್ಲಿನ ಬದಲಾವಣೆಗಳಿಂದಾಗಿ ಮತ್ತು ಭವಿಷ್ಯದ ಇಂಧನ ಬೇಡಿಕೆಯ ಮೇಲೆ ಅನಿಶ್ಚಿತತೆ ಮುಂದುವರಿದಿದ್ದರಿಂದ ಹಲವಾರು ತೈಲ ಕಂಪನಿಗಳು ಹೆಣಗಾಡುತ್ತಿವೆ. ಆದರೆ ರಿಲೆಯನ್ಸ್‌ ಮಾತ್ರ ಸತತವಾಗಿ ಲಾಭ ಗಳಿಸುತ್ತಿದೆ.

ಪಶ್ಚಿಮ ಭಾರತದಲ್ಲಿ ವಿಶ್ವದ ಅತಿದೊಡ್ಡ ತೈಲ-ಸಂಸ್ಕರಣಾ ಸಂಕೀರ್ಣವನ್ನು ರಿಲಯನ್ಸ್‌ ನಿರ್ವಹಿಸುತ್ತಿದೆ. ಇದರಲ್ಲಿ ಕಡಿಮೆ-ಗುಣಮಟ್ಟದ ಕಚ್ಚಾ ಪದಾರ್ಥಗಳ್ನು ಸಂಸ್ಕರಿಸಬಹುದು ಮತ್ತು ಸಂಸ್ಕರಿಸಿದ ಪದಾರ್ಥಗಳನ್ನು ಉನ್ನತ ದರ್ಜೆಯ ಇಂಧನವಾಗಿ ಪರಿವರ್ತಿಸಬಹುದು. ಇದು ಬೆಲೆಯಲ್ಲಿ ಆಗುವ ಏರಿಳಿತದಿಂದ ಕಂಪನಿಯನ್ನು ರಕ್ಷಿಸುತ್ತದೆ.

ಇನ್ನು ರಿಲಯನ್ಸ್‌ ತನ್ನ ಆದಾಯದ ಮೂರನೇ ಎರಡರಷ್ಟನ್ನು ಇಂಧನ ಉದ್ಯಮದಿಂದಲೇ ಪಡೆಯುತ್ತಿದೆ. ಜೊತೆಗೆ ವಿಶ್ವದ ಎರಡನೇ ಅತಿದೊಡ್ಡ ಉದ್ಯಮವಾದ ಟೆಲಿಕಾಂ ಮತ್ತು ಡಿಜಿಟಲ್‌ ಸೇವೆಯಲ್ಲಿಯೂ ಸಹ ಭಾರಿ ಪ್ರಮಾಣದ ಹೂಡಿಕೆಯನ್ನು ಮಾಡಿದೆ. ಮುಂದೆ ಅದು ಚಿಲ್ಲರೆ ವ್ಯಾಪಾರ ಕ್ಷೇತ್ರಕ್ಕೂ ಸಹ ವಿಸ್ತರಿಸಲಿದ್ದು ಅಮೆಜಾನ್.ಕಾಮ್ ಇಂಕ್. ಮತ್ತು ವಾಲ್ಮಾರ್ಟ್ ಇಂಕ್. ನೊಡನೆ ಪೈಪೋಟಿ ನಡೆಸಲು ಸಿದ್ದತೆ ನಡೆಸಿದೆ.

ಸದ್ಯ ಇಂಧನ ಉದ್ಯಮದಲ್ಲಿ ರಿಲೆಯನ್ಸ್‌ 6ನೇ ಸ್ಥಾನದಲ್ಲಿದೆ. ಎಕ್ಸಲಾ‌ ಮೊಬಿಲ್‌ ಕಾರ್ಪೋ ಮತ್ತು ಸೌದಿಯ ಆರಾಮ್ಕೋ ಮೊದಲೆರಡು ಸ್ಥಾನಗಳಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...