Homeಅಂತರಾಷ್ಟ್ರೀಯಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ...!

ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!

- Advertisement -
- Advertisement -

ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗ ವಿಶ್ವದ 6 ನೇ ಅತಿದೊಡ್ಡ ತೈಲ ಕಂಪನಿಯಾಗಿ ಬೆಳೆದು ನಿಂತಿದೆ.

ಮಂಗಳವಾರದ ವಹಿವಾಟಿನ ಮುಕ್ತಾಯದ ವೇಳೆ, ಬ್ರಿಟಿಷ್ ಎನರ್ಜಿ ಜೈಂಟ್ಸ್‌ನದು 132 ಬಿಲಿಯನ್ ಡಾಲರ್‌ ಮೌಲ್ಯವಿದ್ದರೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮೌಲ್ಯ 138 ಬಿಲಿಯನ್ ಡಾಲರ್‌ಗೇರಿದೆ. ಈ ಮೂಲಕ ರಿಲಯನ್ಸ್‌ $138 ಬಿಲಿಯನ್ ತಲುಪಿದ ಮೊದಲ ಭಾರತೀಯ ಕಂಪನಿ ಆಗಿದೆ.

ರಿಲಯನ್ಸ್‌ ಷೇರುಗಳು ಬೆಲೆ 3 ಪಟ್ಟು ಹೆಚ್ಚಳಗೊಂಡಿವೆ. ಆಗಸ್ಟ್‌ನಲ್ಲಿ ರಿಲಯನ್ಸ್‌ ಮಾಲೀಕರು ಕಂಪನಿಯ ನಿವ್ವಳ ಸಾಲವನ್ನು 18 ತಿಂಗಳಲ್ಲಿ ಶೂನ್ಯಕ್ಕೆ ಇಳಿಸುವ ಯೋಜನೆ ಘೋಷಿಸಿದ್ದರು. ನಂತರದಲ್ಲಿ ರಿಲಯನ್ಸ್‌ ಷೇರುಗಳನ್ನು ತೈಲದಿಂದ ರಾಸಯನಿಕಕ್ಕೆ ಪರಿವರ್ತಿಸುವ ಸೌದಿಯ ಅರಾಮ್ಕೋಗೆ ಮಾರುವುದಾಗಿ ಹೇಳಿದ್ದರು. ಆನಂತರ ರಿಲೆಯನ್ಸ್‌ ಷೇರುಗಳ ಬೆಲೆ ಏರುತ್ತಲೇ ಇದೆ.

ಷೇರುಗಳ ಬೆಲೆ ಹೆಚ್ಚುತ್ತಿರುವುದು ಅಂಬಾನಿಗೆ 56 ಬಿಲಿಯನ್ ಡಾಲರ್‌ ನಿವ್ವಳ ಲಾಭ‍ ತಂದು ಕೊಟ್ಟಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಅಲಿಬಾಬಾ ಗ್ರೂಪ್‌ನ ಜ್ಯಾಕ್ ಮಾರನ್ನು ಮೀರಿಸಿ ಈಗ ಮುಖೇಶ್ ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಈಗ 10 ಟ್ರಿಲಿಯನ್ ರೂಪಾಯಿ ಮಾರುಕಟ್ಟೆ ತಲುಪಿದ ಮೊದಲ ಭಾರತೀಯ ಕಂಪನಿ ಎಂಬ ಹೆಗ್ಗಳಿಕೆಗೆ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಪಾತ್ರವಾಗಿದೆ.

ಬಿಪಿಯ ಶೇ. 1.2 ಲಾಭಕ್ಕೆ ಹೋಲಿಸಿದರೆ, ರಿಲಯನ್ಸ್ ಈ ವರ್ಷ ಶೇ. 40 ರಷ್ಟು ಹೆಚ್ಚಿದೆ. ಕಚ್ಚಾ ಬೆಲೆಯಲ್ಲಿನ ಬದಲಾವಣೆಗಳಿಂದಾಗಿ ಮತ್ತು ಭವಿಷ್ಯದ ಇಂಧನ ಬೇಡಿಕೆಯ ಮೇಲೆ ಅನಿಶ್ಚಿತತೆ ಮುಂದುವರಿದಿದ್ದರಿಂದ ಹಲವಾರು ತೈಲ ಕಂಪನಿಗಳು ಹೆಣಗಾಡುತ್ತಿವೆ. ಆದರೆ ರಿಲೆಯನ್ಸ್‌ ಮಾತ್ರ ಸತತವಾಗಿ ಲಾಭ ಗಳಿಸುತ್ತಿದೆ.

ಪಶ್ಚಿಮ ಭಾರತದಲ್ಲಿ ವಿಶ್ವದ ಅತಿದೊಡ್ಡ ತೈಲ-ಸಂಸ್ಕರಣಾ ಸಂಕೀರ್ಣವನ್ನು ರಿಲಯನ್ಸ್‌ ನಿರ್ವಹಿಸುತ್ತಿದೆ. ಇದರಲ್ಲಿ ಕಡಿಮೆ-ಗುಣಮಟ್ಟದ ಕಚ್ಚಾ ಪದಾರ್ಥಗಳ್ನು ಸಂಸ್ಕರಿಸಬಹುದು ಮತ್ತು ಸಂಸ್ಕರಿಸಿದ ಪದಾರ್ಥಗಳನ್ನು ಉನ್ನತ ದರ್ಜೆಯ ಇಂಧನವಾಗಿ ಪರಿವರ್ತಿಸಬಹುದು. ಇದು ಬೆಲೆಯಲ್ಲಿ ಆಗುವ ಏರಿಳಿತದಿಂದ ಕಂಪನಿಯನ್ನು ರಕ್ಷಿಸುತ್ತದೆ.

ಇನ್ನು ರಿಲಯನ್ಸ್‌ ತನ್ನ ಆದಾಯದ ಮೂರನೇ ಎರಡರಷ್ಟನ್ನು ಇಂಧನ ಉದ್ಯಮದಿಂದಲೇ ಪಡೆಯುತ್ತಿದೆ. ಜೊತೆಗೆ ವಿಶ್ವದ ಎರಡನೇ ಅತಿದೊಡ್ಡ ಉದ್ಯಮವಾದ ಟೆಲಿಕಾಂ ಮತ್ತು ಡಿಜಿಟಲ್‌ ಸೇವೆಯಲ್ಲಿಯೂ ಸಹ ಭಾರಿ ಪ್ರಮಾಣದ ಹೂಡಿಕೆಯನ್ನು ಮಾಡಿದೆ. ಮುಂದೆ ಅದು ಚಿಲ್ಲರೆ ವ್ಯಾಪಾರ ಕ್ಷೇತ್ರಕ್ಕೂ ಸಹ ವಿಸ್ತರಿಸಲಿದ್ದು ಅಮೆಜಾನ್.ಕಾಮ್ ಇಂಕ್. ಮತ್ತು ವಾಲ್ಮಾರ್ಟ್ ಇಂಕ್. ನೊಡನೆ ಪೈಪೋಟಿ ನಡೆಸಲು ಸಿದ್ದತೆ ನಡೆಸಿದೆ.

ಸದ್ಯ ಇಂಧನ ಉದ್ಯಮದಲ್ಲಿ ರಿಲೆಯನ್ಸ್‌ 6ನೇ ಸ್ಥಾನದಲ್ಲಿದೆ. ಎಕ್ಸಲಾ‌ ಮೊಬಿಲ್‌ ಕಾರ್ಪೋ ಮತ್ತು ಸೌದಿಯ ಆರಾಮ್ಕೋ ಮೊದಲೆರಡು ಸ್ಥಾನಗಳಲ್ಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...