Homeಮುಖಪುಟ'ಆಪರೇಷನ್‌ ಸಿಂಧೂರ' ಟ್ರೇಡ್‌ ಮಾರ್ಕ್‌ಗಾಗಿ ರಿಲಯನ್ಸ್‌ ಇಂಡಸ್ಟ್ರೀಸ್ ಸೇರಿ ಹಲವರಿಂದ ಅರ್ಜಿ

‘ಆಪರೇಷನ್‌ ಸಿಂಧೂರ’ ಟ್ರೇಡ್‌ ಮಾರ್ಕ್‌ಗಾಗಿ ರಿಲಯನ್ಸ್‌ ಇಂಡಸ್ಟ್ರೀಸ್ ಸೇರಿ ಹಲವರಿಂದ ಅರ್ಜಿ

- Advertisement -
- Advertisement -

‘ಆಪರೇಷನ್‌ ಸಿಂಧೂರ’ ಹೆಸರಿನಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಕಾರ್ಯಾಚರಣೆ ನಡೆಸಿದ ಬೆನ್ನಲ್ಲೇ, ಆ ಹೆಸರಿನ ‘ಟ್ರೇಡ್‌ ಮಾರ್ಕ್‌’ ಹಕ್ಕಿಗಾಗಿ ಹಲವರು ಅರ್ಜಿ ಸಲ್ಲಿಸಿದ್ದಾರೆ.

ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಅರ್ಜಿ ಸಲ್ಲಿಸಿದ ಮೊದಲ ಸಂಸ್ಥೆಯಾಗಿದೆ. ರಿಲಯನ್ಸ್ ಬುಧವಾರ (ಮೇ.7) ಅರ್ಜಿ ಸಲ್ಲಿಸಿದ್ದು, ಆ ಬಳಿಕ 24 ಗಂಟೆಯೊಳಗೆ ಮೂವರು ವ್ಯಕ್ತಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಮುಂಬೈ ನಿವಾಸಿ ಮುಖೇಶ್ ಚೆತ್ರಮ್ ಅಗರವಾಲ್, ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಕಮಲ್ ಸಿಂಗ್ ಒಬೆರ್ಹ್ ಮತ್ತು ದೆಹಲಿ ಮೂಲದ ವಕೀಲ ಅಲೋಕ್ ಕೊಠಾರಿ ಅರ್ಜಿ ಸಲ್ಲಿಸಿದ ಇತರರು.

ಎಲ್ಲಾ ಸಂಸ್ಥೆ ಮತ್ತು ವ್ಯಕ್ತಿಗಳು ಶಿಕ್ಷಣ, ತರಬೇತಿ, ಮನರಂಜನೆ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಒಳಗೊಂಡಿರುವ ಟ್ರೇಡ್‌ ಮಾರ್ಕ್‌ ವರ್ಗ 41ರ ಅಡಿಯಲ್ಲಿ ‘ಸರಕು ಮತ್ತು ಸೇವೆಗಳಿಗೆ, ಅಂದರೆ ವಾಣಿಜ್ಯ ಉದ್ದೇಶಗಳಿಗೆ ‘ಆಪರೇಷನ್‌ ಸಿಂಧೂರ’ ಹೆಸರಿನ ಹಕ್ಕನ್ನು ಕೋರಿದ್ದಾರೆ.

ನಾಲ್ಕೂ ಅರ್ಜಿಗಳನ್ನು ಮೇ 7, 2025ರ ಬೆಳಿಗ್ಗೆ 10:42ರಿಂದ ಸಂಜೆ 6:27ರ ನಡುವೆ ಸಲ್ಲಿಸಲಾಗಿದೆ.
ಗಮನಾರ್ಹ ಸಂಗತಿಯೆಂದರೆ, ಮೇ 7ರ ತಡರಾತ್ರಿ 1:05ರಿಂದ 1:30ರ ನಡುವೆ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ನಡೆದಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಟ್ರೇಡ್ ಮಾರ್ಕ್‌ ವರ್ಗ 41ರ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳು ಶಿಕ್ಷಣ ಮತ್ತು ತರಬೇತಿ ಸೇವೆಗಳು, ಚಲನಚಿತ್ರ ಮತ್ತು ಮಾಧ್ಯಮ ನಿರ್ಮಾಣ, ನೇರ ಪ್ರದರ್ಶನಗಳು ಮತ್ತು ಕಾರ್ಯಕ್ರಮಗಳು, ಡಿಜಿಟಲ್ ವಿಷಯ ವಿತರಣೆ ಮತ್ತು ಪ್ರಕಟಣೆ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ‘ಆಪರೇಷನ್‌ ಸಿಂಧೂರ’ ಹೆಸರಿನ ಹಕ್ಕುಸ್ವಾಮ್ಯ ಕೋರಿದೆ.

ಇದು ‘ಆಪರೇಷನ್‌ ಸಿಂಧೂರ’ ಹೆಸರು ಶೀಘ್ರದಲ್ಲೇ ಚಲನಚಿತ್ರ, ವೆಬ್ ಸರಣಿ ಅಥವಾ ಸಾಕ್ಷ್ಯಚಿತ್ರ ಬ್ರ್ಯಾಂಡ್ ಆಗಬಹುದು ಎಂಬುವುದನ್ನು ಸೂಚಿಸುತ್ತದೆ.

ಪ್ರತಿಯೊಂದು ಅರ್ಜಿಯಲ್ಲೂ ‘ಆಪರೇಷನ್‌ ಸಿಂಧೂರ’ ಹೆಸರನ್ನು ‘ಬಳಸಲು ಉದ್ದೇಶಿಸಲಾಗಿದೆ’ ಎಂದು ಹೇಳಲಾಗಿದೆ. ಅಂದರೆ, ಅರ್ಜಿದಾರರು ಇನ್ನೂ ವಾಣಿಜ್ಯಿಕವಾಗಿ ಬ್ರ್ಯಾಂಡ್ ಅನ್ನು ಪ್ರಾರಂಭಿಸಿಲ್ಲ. ಮುಂದಿನ ದಿನಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಿದ್ದಾರೆ ಎಂಬುವುದನ್ನು ಇದು ಸೂಚಿಸುತ್ತದೆ.

ಭಾರತದಲ್ಲಿ, ‘ಆಪರೇಷನ್‌ ಸಿಂಧೂರ’ ನಂತಹ ಮಿಲಿಟರಿ ಕಾರ್ಯಾಚರಣೆಯ ಹೆಸರುಗಳನ್ನು ಸರ್ಕಾರವು ಬೌದ್ಧಿಕ ಆಸ್ತಿಯಾಗಿ ರಕ್ಷಿಸುವುದಿಲ್ಲ. ರಕ್ಷಣಾ ಸಚಿವಾಲಯವು ಸಾಮಾನ್ಯವಾಗಿ ಈ ಹೆಸರುಗಳನ್ನು ನೋಂದಾಯಿಸುವುದಿಲ್ಲ ಅಥವಾ ವಾಣಿಜ್ಯೀಕರಣಗೊಳಿಸುವುದಿಲ್ಲ ಮತ್ತು ಅವುಗಳನ್ನು ಯಾವುದೇ ವಿಶೇಷ ಶಾಸನಬದ್ಧ ಐಪಿ ಚೌಕಟ್ಟಿನ ಅಡಿಯಲ್ಲಿ ಸುರಕ್ಷಿತಗೊಳಿಸಲಾಗುವುದಿಲ್ಲ. ಹಾಗಾಗಿ, ಸರ್ಕಾರ ಸ್ಪಷ್ಟವಾಗಿ ಮಧ್ಯಪ್ರವೇಶಿಸದ ಹೊರತು, ಅಂತಹ ಹೆಸರುಗಳು ಖಾಸಗಿ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ಟ್ರೇಡ್‌ಮಾರ್ಕ್ ಹಕ್ಕುಗಳಿಗೆ ಮುಕ್ತವಾಗಿರುತ್ತವೆ.

ಆದಾಗ್ಯೂ, 1999ರ ಟ್ರೇಡ್ ಮಾರ್ಕ್ಸ್ ಕಾಯ್ದೆಯು ಸಾರ್ವಜನಿಕ ನೀತಿಗೆ ವಿರುದ್ಧವಾದ, ತಪ್ಪುದಾರಿಗೆಳೆಯುವ ಅಥವಾ ಆಕ್ರಮಣಕಾರಿ ಟ್ರೇಡ್‌ಮಾರ್ಕ್‌ಗಳನ್ನು ತಿರಸ್ಕರಿಸಲು ನೋಂದಾವಣೆ ಸಂಸ್ಥೆಗೆ ಅಧಿಕಾರ ನೀಡಿದೆ.

ಸೆಕ್ಷನ್ 9(2) ಮತ್ತು ಸೆಕ್ಷನ್ 11 ರ ಅಡಿಯಲ್ಲಿ, ರಾಷ್ಟ್ರೀಯ ರಕ್ಷಣೆ ವ್ಯವಸ್ಥೆಯೊಂದಿಗೆ ತಪ್ಪು ಸಂಬಂಧವನ್ನು ಕಲ್ಪಿಸುವ ಅಥವಾ ಸಾರ್ವಜನಿಕರ ಭಾವನೆಗೆ ಧಕ್ಕೆ ತರಬಹುದಾದರೆ ಅಂತಹ ಹೆಸರುಗಳ ನೋಂದಣಿಯನ್ನು ನಿರಾಕರಿಸಬಹುದು. ಇದರ ಹೊರತಾಗಿ, ಸರ್ಕಾರ ಅಥವಾ ಇತರ ಪಕ್ಷಕಾರರು ಪ್ರಶ್ನಿಸದ ಹೊರತು ಯಾವುದೇ ಹೆಸರುಗಳ ಬಳಕೆಯ ಹಕ್ಕು ನೋಂದಣಿಗೆ ನಿರ್ಬಂಧವಿಲ್ಲ.

ಭಾರತೀಯ ಟ್ರೇಡ್‌ಮಾರ್ಕ್ ಕಾನೂನು ಮೊದಲ ಅರ್ಜಿ ಸಲ್ಲಿಸಿದವರಿಗೆ ಟ್ರೇಡ್ ಮಾರ್ಕ್ ಹಕ್ಕು ನೀಡುತ್ತದೆ ಎಂದಿಲ್ಲ. ಮೊದಲು ಅರ್ಜಿ ಸಲ್ಲಿಸುವುದು ಮುಖ್ಯವಾದರೂ, ನೋಂದಣಿಗೆ ಇತರ ಅಂಶಗಳೂ ಮುಖ್ಯವಾಗುತ್ತದೆ.

ಗುರುತನ್ನು ಬಳಸುವ ನಿಜವಾದ ಉದ್ದೇಶ, ಈಗಾಗಲೇ ಅಸ್ತಿತ್ವದಲ್ಲಿರುವ ಅಥವಾ ಸ್ಪರ್ಧಾತ್ಮಕ ಗುರುತುಗಳೊಂದಿಗೆ ಗೊಂದಲದ ಸಾಧ್ಯತೆ, ಚಿಹ್ನೆಯ ಶಕ್ತಿ ಮತ್ತು ವಿಶಿಷ್ಟತೆ, ವಿರೋಧದ ಸಮಯದಲ್ಲಿ ಪ್ರಸ್ತುತಪಡಿಸಿದ ಪುರಾವೆಗಳು (ಯಾವುದಾದರೂ ಇದ್ದರೆ) ಈ ಎಲ್ಲವೂ ನೋಂದಣಿ ವೇಳೆ ಪರಿಗಣಿಸುವ ಅಂಶಗಳಾಗಿವೆ.

ಒಂದೇ ಸಮಯದಲ್ಲಿ ಎರಡು ಅಥವಾ ಹೆಚ್ಚಿನ ಒಂದೇ ರೀತಿಯ ಟ್ರೇಡ್‌ಮಾರ್ಕ್‌ಗಳ ಹಕ್ಕು ಕೋರಿ ಅರ್ಜಿ ಸಲ್ಲಿಸಿದರೆ, ನೋಂದಾವಣೆ ಅರ್ಜಿ ಪರಿಶೀಲನೆ ಅಥವಾ ಪ್ರಕಟಣೆಯನ್ನು ಸ್ಥಗಿತಗೊಳಿಸಬಹುದು. ಈ ವಿಷಯವು ವಿವಾದ ಸ್ವರೂಪ ಪಡೆಯಬಹುದು. ಕೆಲವು ಸಂದರ್ಭಗಳಲ್ಲಿ, ಎರಡೂ ಪಕ್ಷಗಳು ಪರಸ್ಪರ ಮಾತುಕತೆ ಮೂಲಕ ಒಂದು ತೀರ್ಮಾನಕ್ಕೆ ಬಂದು ಸಮಸ್ಯೆಯನ್ನು ಇತ್ಯರ್ಥಪಡಿಸಬಹುದು.

ಭಾರತದಲ್ಲಿ ಟ್ರೇಡ್‌ಮಾರ್ಕ್ ನೋಂದಾಯಿಸುವ ಪ್ರಮಾಣಿತ ಪ್ರಕ್ರಿಯೆಯು ಈ ಕೆಳಗಿನ ಅಂಶಗಳನ್ನು ಒಳಗೊಂಡಿದೆ:

  1. ಶುಲ್ಕ ಮತ್ತು ವರ್ಗೀಕರಣದೊಂದಿಗೆ ಅರ್ಜಿಯನ್ನು ಸಲ್ಲಿಸುವುದು
  2. ಟ್ರೇಡ್ ಮಾರ್ಕ್ಸ್ ರಿಜಿಸ್ಟ್ರಿಯಿಂದ ಅರ್ಜಿ ಪರಿಶೀಲನೆ
  3. ಟ್ರೇಡ್‌ಮಾರ್ಕ್‌ಗಳ ಜರ್ನಲ್‌ನಲ್ಲಿ 4 ತಿಂಗಳ ಕಾಲ ಪ್ರಕಟಣೆ
  4. ಮೂರನೇ ವ್ಯಕ್ತಿಗಳಿಂದ ವಿರೋಧ (ಯಾವುದಾದರೂ ಇದ್ದರೆ)
  5. ನೋಂದಣಿ, ಅವಿರೋಧವಾಗಿ ಆಯ್ಕೆಯಾದರೆ ಅಥವಾ ವಿರೋಧ ಪಕ್ಷವನ್ನು ಗೆದ್ದ ನಂತರ

‘ಆಪರೇಷನ್ ಸಿಂಧೂರ’ ಹಿನ್ನೆಲೆ | ಪಂಜಾಬ್‌ನ ಆರು ಗಡಿ ಜಿಲ್ಲೆಗಳ ಶಾಲೆಗಳು ಬಂದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...