Homeಮುಖಪುಟ'ಆಪರೇಷನ್‌ ಸಿಂಧೂರ' ಟ್ರೇಡ್‌ ಮಾರ್ಕ್‌ಗಾಗಿ ರಿಲಯನ್ಸ್‌ ಇಂಡಸ್ಟ್ರೀಸ್ ಸೇರಿ ಹಲವರಿಂದ ಅರ್ಜಿ

‘ಆಪರೇಷನ್‌ ಸಿಂಧೂರ’ ಟ್ರೇಡ್‌ ಮಾರ್ಕ್‌ಗಾಗಿ ರಿಲಯನ್ಸ್‌ ಇಂಡಸ್ಟ್ರೀಸ್ ಸೇರಿ ಹಲವರಿಂದ ಅರ್ಜಿ

- Advertisement -
- Advertisement -

‘ಆಪರೇಷನ್‌ ಸಿಂಧೂರ’ ಹೆಸರಿನಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಕಾರ್ಯಾಚರಣೆ ನಡೆಸಿದ ಬೆನ್ನಲ್ಲೇ, ಆ ಹೆಸರಿನ ‘ಟ್ರೇಡ್‌ ಮಾರ್ಕ್‌’ ಹಕ್ಕಿಗಾಗಿ ಹಲವರು ಅರ್ಜಿ ಸಲ್ಲಿಸಿದ್ದಾರೆ.

ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಅರ್ಜಿ ಸಲ್ಲಿಸಿದ ಮೊದಲ ಸಂಸ್ಥೆಯಾಗಿದೆ. ರಿಲಯನ್ಸ್ ಬುಧವಾರ (ಮೇ.7) ಅರ್ಜಿ ಸಲ್ಲಿಸಿದ್ದು, ಆ ಬಳಿಕ 24 ಗಂಟೆಯೊಳಗೆ ಮೂವರು ವ್ಯಕ್ತಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಮುಂಬೈ ನಿವಾಸಿ ಮುಖೇಶ್ ಚೆತ್ರಮ್ ಅಗರವಾಲ್, ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಕಮಲ್ ಸಿಂಗ್ ಒಬೆರ್ಹ್ ಮತ್ತು ದೆಹಲಿ ಮೂಲದ ವಕೀಲ ಅಲೋಕ್ ಕೊಠಾರಿ ಅರ್ಜಿ ಸಲ್ಲಿಸಿದ ಇತರರು.

ಎಲ್ಲಾ ಸಂಸ್ಥೆ ಮತ್ತು ವ್ಯಕ್ತಿಗಳು ಶಿಕ್ಷಣ, ತರಬೇತಿ, ಮನರಂಜನೆ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಒಳಗೊಂಡಿರುವ ಟ್ರೇಡ್‌ ಮಾರ್ಕ್‌ ವರ್ಗ 41ರ ಅಡಿಯಲ್ಲಿ ‘ಸರಕು ಮತ್ತು ಸೇವೆಗಳಿಗೆ, ಅಂದರೆ ವಾಣಿಜ್ಯ ಉದ್ದೇಶಗಳಿಗೆ ‘ಆಪರೇಷನ್‌ ಸಿಂಧೂರ’ ಹೆಸರಿನ ಹಕ್ಕನ್ನು ಕೋರಿದ್ದಾರೆ.

ನಾಲ್ಕೂ ಅರ್ಜಿಗಳನ್ನು ಮೇ 7, 2025ರ ಬೆಳಿಗ್ಗೆ 10:42ರಿಂದ ಸಂಜೆ 6:27ರ ನಡುವೆ ಸಲ್ಲಿಸಲಾಗಿದೆ.
ಗಮನಾರ್ಹ ಸಂಗತಿಯೆಂದರೆ, ಮೇ 7ರ ತಡರಾತ್ರಿ 1:05ರಿಂದ 1:30ರ ನಡುವೆ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ನಡೆದಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಟ್ರೇಡ್ ಮಾರ್ಕ್‌ ವರ್ಗ 41ರ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳು ಶಿಕ್ಷಣ ಮತ್ತು ತರಬೇತಿ ಸೇವೆಗಳು, ಚಲನಚಿತ್ರ ಮತ್ತು ಮಾಧ್ಯಮ ನಿರ್ಮಾಣ, ನೇರ ಪ್ರದರ್ಶನಗಳು ಮತ್ತು ಕಾರ್ಯಕ್ರಮಗಳು, ಡಿಜಿಟಲ್ ವಿಷಯ ವಿತರಣೆ ಮತ್ತು ಪ್ರಕಟಣೆ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ‘ಆಪರೇಷನ್‌ ಸಿಂಧೂರ’ ಹೆಸರಿನ ಹಕ್ಕುಸ್ವಾಮ್ಯ ಕೋರಿದೆ.

ಇದು ‘ಆಪರೇಷನ್‌ ಸಿಂಧೂರ’ ಹೆಸರು ಶೀಘ್ರದಲ್ಲೇ ಚಲನಚಿತ್ರ, ವೆಬ್ ಸರಣಿ ಅಥವಾ ಸಾಕ್ಷ್ಯಚಿತ್ರ ಬ್ರ್ಯಾಂಡ್ ಆಗಬಹುದು ಎಂಬುವುದನ್ನು ಸೂಚಿಸುತ್ತದೆ.

ಪ್ರತಿಯೊಂದು ಅರ್ಜಿಯಲ್ಲೂ ‘ಆಪರೇಷನ್‌ ಸಿಂಧೂರ’ ಹೆಸರನ್ನು ‘ಬಳಸಲು ಉದ್ದೇಶಿಸಲಾಗಿದೆ’ ಎಂದು ಹೇಳಲಾಗಿದೆ. ಅಂದರೆ, ಅರ್ಜಿದಾರರು ಇನ್ನೂ ವಾಣಿಜ್ಯಿಕವಾಗಿ ಬ್ರ್ಯಾಂಡ್ ಅನ್ನು ಪ್ರಾರಂಭಿಸಿಲ್ಲ. ಮುಂದಿನ ದಿನಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಿದ್ದಾರೆ ಎಂಬುವುದನ್ನು ಇದು ಸೂಚಿಸುತ್ತದೆ.

ಭಾರತದಲ್ಲಿ, ‘ಆಪರೇಷನ್‌ ಸಿಂಧೂರ’ ನಂತಹ ಮಿಲಿಟರಿ ಕಾರ್ಯಾಚರಣೆಯ ಹೆಸರುಗಳನ್ನು ಸರ್ಕಾರವು ಬೌದ್ಧಿಕ ಆಸ್ತಿಯಾಗಿ ರಕ್ಷಿಸುವುದಿಲ್ಲ. ರಕ್ಷಣಾ ಸಚಿವಾಲಯವು ಸಾಮಾನ್ಯವಾಗಿ ಈ ಹೆಸರುಗಳನ್ನು ನೋಂದಾಯಿಸುವುದಿಲ್ಲ ಅಥವಾ ವಾಣಿಜ್ಯೀಕರಣಗೊಳಿಸುವುದಿಲ್ಲ ಮತ್ತು ಅವುಗಳನ್ನು ಯಾವುದೇ ವಿಶೇಷ ಶಾಸನಬದ್ಧ ಐಪಿ ಚೌಕಟ್ಟಿನ ಅಡಿಯಲ್ಲಿ ಸುರಕ್ಷಿತಗೊಳಿಸಲಾಗುವುದಿಲ್ಲ. ಹಾಗಾಗಿ, ಸರ್ಕಾರ ಸ್ಪಷ್ಟವಾಗಿ ಮಧ್ಯಪ್ರವೇಶಿಸದ ಹೊರತು, ಅಂತಹ ಹೆಸರುಗಳು ಖಾಸಗಿ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ಟ್ರೇಡ್‌ಮಾರ್ಕ್ ಹಕ್ಕುಗಳಿಗೆ ಮುಕ್ತವಾಗಿರುತ್ತವೆ.

ಆದಾಗ್ಯೂ, 1999ರ ಟ್ರೇಡ್ ಮಾರ್ಕ್ಸ್ ಕಾಯ್ದೆಯು ಸಾರ್ವಜನಿಕ ನೀತಿಗೆ ವಿರುದ್ಧವಾದ, ತಪ್ಪುದಾರಿಗೆಳೆಯುವ ಅಥವಾ ಆಕ್ರಮಣಕಾರಿ ಟ್ರೇಡ್‌ಮಾರ್ಕ್‌ಗಳನ್ನು ತಿರಸ್ಕರಿಸಲು ನೋಂದಾವಣೆ ಸಂಸ್ಥೆಗೆ ಅಧಿಕಾರ ನೀಡಿದೆ.

ಸೆಕ್ಷನ್ 9(2) ಮತ್ತು ಸೆಕ್ಷನ್ 11 ರ ಅಡಿಯಲ್ಲಿ, ರಾಷ್ಟ್ರೀಯ ರಕ್ಷಣೆ ವ್ಯವಸ್ಥೆಯೊಂದಿಗೆ ತಪ್ಪು ಸಂಬಂಧವನ್ನು ಕಲ್ಪಿಸುವ ಅಥವಾ ಸಾರ್ವಜನಿಕರ ಭಾವನೆಗೆ ಧಕ್ಕೆ ತರಬಹುದಾದರೆ ಅಂತಹ ಹೆಸರುಗಳ ನೋಂದಣಿಯನ್ನು ನಿರಾಕರಿಸಬಹುದು. ಇದರ ಹೊರತಾಗಿ, ಸರ್ಕಾರ ಅಥವಾ ಇತರ ಪಕ್ಷಕಾರರು ಪ್ರಶ್ನಿಸದ ಹೊರತು ಯಾವುದೇ ಹೆಸರುಗಳ ಬಳಕೆಯ ಹಕ್ಕು ನೋಂದಣಿಗೆ ನಿರ್ಬಂಧವಿಲ್ಲ.

ಭಾರತೀಯ ಟ್ರೇಡ್‌ಮಾರ್ಕ್ ಕಾನೂನು ಮೊದಲ ಅರ್ಜಿ ಸಲ್ಲಿಸಿದವರಿಗೆ ಟ್ರೇಡ್ ಮಾರ್ಕ್ ಹಕ್ಕು ನೀಡುತ್ತದೆ ಎಂದಿಲ್ಲ. ಮೊದಲು ಅರ್ಜಿ ಸಲ್ಲಿಸುವುದು ಮುಖ್ಯವಾದರೂ, ನೋಂದಣಿಗೆ ಇತರ ಅಂಶಗಳೂ ಮುಖ್ಯವಾಗುತ್ತದೆ.

ಗುರುತನ್ನು ಬಳಸುವ ನಿಜವಾದ ಉದ್ದೇಶ, ಈಗಾಗಲೇ ಅಸ್ತಿತ್ವದಲ್ಲಿರುವ ಅಥವಾ ಸ್ಪರ್ಧಾತ್ಮಕ ಗುರುತುಗಳೊಂದಿಗೆ ಗೊಂದಲದ ಸಾಧ್ಯತೆ, ಚಿಹ್ನೆಯ ಶಕ್ತಿ ಮತ್ತು ವಿಶಿಷ್ಟತೆ, ವಿರೋಧದ ಸಮಯದಲ್ಲಿ ಪ್ರಸ್ತುತಪಡಿಸಿದ ಪುರಾವೆಗಳು (ಯಾವುದಾದರೂ ಇದ್ದರೆ) ಈ ಎಲ್ಲವೂ ನೋಂದಣಿ ವೇಳೆ ಪರಿಗಣಿಸುವ ಅಂಶಗಳಾಗಿವೆ.

ಒಂದೇ ಸಮಯದಲ್ಲಿ ಎರಡು ಅಥವಾ ಹೆಚ್ಚಿನ ಒಂದೇ ರೀತಿಯ ಟ್ರೇಡ್‌ಮಾರ್ಕ್‌ಗಳ ಹಕ್ಕು ಕೋರಿ ಅರ್ಜಿ ಸಲ್ಲಿಸಿದರೆ, ನೋಂದಾವಣೆ ಅರ್ಜಿ ಪರಿಶೀಲನೆ ಅಥವಾ ಪ್ರಕಟಣೆಯನ್ನು ಸ್ಥಗಿತಗೊಳಿಸಬಹುದು. ಈ ವಿಷಯವು ವಿವಾದ ಸ್ವರೂಪ ಪಡೆಯಬಹುದು. ಕೆಲವು ಸಂದರ್ಭಗಳಲ್ಲಿ, ಎರಡೂ ಪಕ್ಷಗಳು ಪರಸ್ಪರ ಮಾತುಕತೆ ಮೂಲಕ ಒಂದು ತೀರ್ಮಾನಕ್ಕೆ ಬಂದು ಸಮಸ್ಯೆಯನ್ನು ಇತ್ಯರ್ಥಪಡಿಸಬಹುದು.

ಭಾರತದಲ್ಲಿ ಟ್ರೇಡ್‌ಮಾರ್ಕ್ ನೋಂದಾಯಿಸುವ ಪ್ರಮಾಣಿತ ಪ್ರಕ್ರಿಯೆಯು ಈ ಕೆಳಗಿನ ಅಂಶಗಳನ್ನು ಒಳಗೊಂಡಿದೆ:

  1. ಶುಲ್ಕ ಮತ್ತು ವರ್ಗೀಕರಣದೊಂದಿಗೆ ಅರ್ಜಿಯನ್ನು ಸಲ್ಲಿಸುವುದು
  2. ಟ್ರೇಡ್ ಮಾರ್ಕ್ಸ್ ರಿಜಿಸ್ಟ್ರಿಯಿಂದ ಅರ್ಜಿ ಪರಿಶೀಲನೆ
  3. ಟ್ರೇಡ್‌ಮಾರ್ಕ್‌ಗಳ ಜರ್ನಲ್‌ನಲ್ಲಿ 4 ತಿಂಗಳ ಕಾಲ ಪ್ರಕಟಣೆ
  4. ಮೂರನೇ ವ್ಯಕ್ತಿಗಳಿಂದ ವಿರೋಧ (ಯಾವುದಾದರೂ ಇದ್ದರೆ)
  5. ನೋಂದಣಿ, ಅವಿರೋಧವಾಗಿ ಆಯ್ಕೆಯಾದರೆ ಅಥವಾ ವಿರೋಧ ಪಕ್ಷವನ್ನು ಗೆದ್ದ ನಂತರ

‘ಆಪರೇಷನ್ ಸಿಂಧೂರ’ ಹಿನ್ನೆಲೆ | ಪಂಜಾಬ್‌ನ ಆರು ಗಡಿ ಜಿಲ್ಲೆಗಳ ಶಾಲೆಗಳು ಬಂದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...