Homeಎಕಾನಮಿಹತ್ತು ವರ್ಷಗಳ ಬಳಿಕ ದಿನವೊಂದರಲ್ಲೆ ಅತಿ ಹೆಚ್ಚು ಕುಸಿತ ಕಂಡ ರಿಲಯನ್ಸ್‌ ಷೇರುಗಳು..

ಹತ್ತು ವರ್ಷಗಳ ಬಳಿಕ ದಿನವೊಂದರಲ್ಲೆ ಅತಿ ಹೆಚ್ಚು ಕುಸಿತ ಕಂಡ ರಿಲಯನ್ಸ್‌ ಷೇರುಗಳು..

- Advertisement -
- Advertisement -

ರಿಲಯನ್ಸ್‌ ಷೇರುಗಳು ಹತ್ತು ವರ್ಷಗಳಲ್ಲೇ ಮೊದಲ ಬಾರಿಗೆ ದಿನವೊಂದರಲ್ಲೆ ಅತಿ ಹೆಚ್ಚು ಕುಸಿತ ಕಂಡುವೆ.
ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಶೇಕಡಾ 10 ರಷ್ಟು ಕುಸಿದಿವೆ.

ಸೌದಿ ಮತ್ತು ರಷ್ಯಾದ ನಡುವೆ ನಡೆಯುತ್ತಿರುವ ದರ ಸಮರದಿಂದಾಗಿ ಪೆಟ್ರೋಲ್‌ ಕಚ್ಚಾ ತೈಲಗಳ ಬೆಲೆಯು 30 ವರ್ಷಗಳಲ್ಲೇ ಅಧಿಕ ಮಟ್ಟದಲ್ಲಿ ಕುಸಿದಿದೆ. ಇದರ ಹೊಡೆತವು ಉಳಿದ ತೈಲ ಪೂರೈಕೆದಾರರ ಮೇಲೂ ಆಗಿದ್ದ ಪರಿಣಾಮ ಮುಖೇಶ್‌ ಅಂಬಾನಿ ನೇತೃತ್ವದ ರಿಲಯನ್ಸ್‌ ಷೇರುಗಳು ಕುಸಿದಿವೆ.

ಜಾಮ್‌ನಗರದಲ್ಲಿರುವ ವಿಶ್ವದ ಅತಿದೊಡ್ಡ ಕಚ್ಚಾ ತೈಲ ಸಂಸ್ಕರಣಾ ಘಟಕ ಮತ್ತು ಕೃಷ್ಣ ಗೋದಾವರಿ ಜಲಾನಯನ ಪ್ರದೇಶದ ಕೆಜಿ-ಡಿ 6 ಜಲಾನಯನ ಪ್ರದೇಶದ ಆಪರೇಟರ್ – ರಿಲಯನ್ಸ್ ಇಂಡಸ್ಟ್ರೀಸ್ ಶೇಕಡಾ 10 ರಷ್ಟು ಕುಸಿದಿದೆ. ಇಂದು ಅದು 1,143, ಬಿಎಸ್‌ಇಯ ದತ್ತಾಂಶಕ್ಕೆ ಇಳಿದಿದೆ.

ಕೇಂದ್ರದ ಒಡೆತನದ ಒಎನ್‌ಜಿಸಿ ಸಹ ಶೇಕಡಾ 13 ರಷ್ಟು ಕುಸಿದು ದಿನದ ದಿನದ ಕನಿಷ್ಠ 77.80 ರೂ.ಗೆ ತಲುಪಿದೆ.

ಕೊರೋನಾ ವೈರೆಸ್‌ ಭೀತಿ ಸಮಯದಲ್ಲಿ ರಷ್ಯಾದೊಂದಿಗೆ ದರಸಮರಕ್ಕೆ ಇಳಿದಿರುವ ಸೌದಿಯು ಬೆಲೆಗಳನ್ನು ಕಡಿತಗೊಳಿಸಿದ ನಂತರ 1991 ರ ನಂತರದ ಕಚ್ಚಾ ತೈಲಬೆಲೆಯಲ್ಲಿ ಅತಿದೊಡ್ಡ ಕುಸಿತ ಉಂಟಾಗಿದೆ.

ಬ್ರೆಂಟ್ ಕಚ್ಚಾ ತೈಲಬೆಲೆಯು ಬ್ಯಾರೆಲ್‌ ಒಂದಕ್ಕೆ $ 14.25 ಡಾಲರ್‌ (31.5%)ಕುಸಿದಿದ್ದು $ 31.02 ಡಾಲರ್‌ಗೆ ತಲುಪಿದೆ. ಇದು ಜನವರಿ 17, 1991 ರ ನಂತರ ಅತಿ ಹೆಚ್ಚಿನ ಇಳಿಕೆಯಾಗಿದೆ.

ವಿಶ್ವದ ಅತಿದೊಡ್ಡ ತೈಲ ರಫ್ತುದಾರರಾದ ಸೌದಿ ಅರೇಬಿಯಾ, ವಿಶ್ವದ ಎರಡನೇ ಅತಿದೊಡ್ಡ ಉತ್ಪಾದಕ ರಷ್ಯಾದ ವಿರುದ್ಧ ದರ ಸಮರಕ್ಕೆ ಮುಂದಾಗಿದೆ. ಆ ಮೂಲಕ ದರ ಕಡಿಮೆ ಮಾಡಿ ಹೆಚ್ಚಿನ ಗ್ರಾಹಕ ದೇಶಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವುದು ಇದರ ಉದ್ದೇಶವಾಗಿದೆ.

ಕರೋನವೈರಸ್ ಭೀತಿಯಿಂದ ಏಕಾಏಕಿ ಉಂಟಾದ ಆರ್ಥಿಕ ಕುಸಿತದಿಂದ ತೈಲ ಆಮದು ದಿನೇ ದಿನೇ ಕಡಿಮೆಯಾಗುತ್ತಿರುವುದು ಸಹ ದರ ಕಡಿಮೆಯಾಗಲು ಮತ್ತೊಂದು ಕಾರಣವಾಗಿದೆ.

ಈ ದರ ಇಳಿಕೆಯ ಪ್ರಯೋಜನ ಜನಸಾಮಾನ್ಯರಿಗೆ ದಕ್ಕುವುದೇ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...