Homeಎಕಾನಮಿಹತ್ತು ವರ್ಷಗಳ ಬಳಿಕ ದಿನವೊಂದರಲ್ಲೆ ಅತಿ ಹೆಚ್ಚು ಕುಸಿತ ಕಂಡ ರಿಲಯನ್ಸ್‌ ಷೇರುಗಳು..

ಹತ್ತು ವರ್ಷಗಳ ಬಳಿಕ ದಿನವೊಂದರಲ್ಲೆ ಅತಿ ಹೆಚ್ಚು ಕುಸಿತ ಕಂಡ ರಿಲಯನ್ಸ್‌ ಷೇರುಗಳು..

- Advertisement -
- Advertisement -

ರಿಲಯನ್ಸ್‌ ಷೇರುಗಳು ಹತ್ತು ವರ್ಷಗಳಲ್ಲೇ ಮೊದಲ ಬಾರಿಗೆ ದಿನವೊಂದರಲ್ಲೆ ಅತಿ ಹೆಚ್ಚು ಕುಸಿತ ಕಂಡುವೆ.
ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಶೇಕಡಾ 10 ರಷ್ಟು ಕುಸಿದಿವೆ.

ಸೌದಿ ಮತ್ತು ರಷ್ಯಾದ ನಡುವೆ ನಡೆಯುತ್ತಿರುವ ದರ ಸಮರದಿಂದಾಗಿ ಪೆಟ್ರೋಲ್‌ ಕಚ್ಚಾ ತೈಲಗಳ ಬೆಲೆಯು 30 ವರ್ಷಗಳಲ್ಲೇ ಅಧಿಕ ಮಟ್ಟದಲ್ಲಿ ಕುಸಿದಿದೆ. ಇದರ ಹೊಡೆತವು ಉಳಿದ ತೈಲ ಪೂರೈಕೆದಾರರ ಮೇಲೂ ಆಗಿದ್ದ ಪರಿಣಾಮ ಮುಖೇಶ್‌ ಅಂಬಾನಿ ನೇತೃತ್ವದ ರಿಲಯನ್ಸ್‌ ಷೇರುಗಳು ಕುಸಿದಿವೆ.

ಜಾಮ್‌ನಗರದಲ್ಲಿರುವ ವಿಶ್ವದ ಅತಿದೊಡ್ಡ ಕಚ್ಚಾ ತೈಲ ಸಂಸ್ಕರಣಾ ಘಟಕ ಮತ್ತು ಕೃಷ್ಣ ಗೋದಾವರಿ ಜಲಾನಯನ ಪ್ರದೇಶದ ಕೆಜಿ-ಡಿ 6 ಜಲಾನಯನ ಪ್ರದೇಶದ ಆಪರೇಟರ್ – ರಿಲಯನ್ಸ್ ಇಂಡಸ್ಟ್ರೀಸ್ ಶೇಕಡಾ 10 ರಷ್ಟು ಕುಸಿದಿದೆ. ಇಂದು ಅದು 1,143, ಬಿಎಸ್‌ಇಯ ದತ್ತಾಂಶಕ್ಕೆ ಇಳಿದಿದೆ.

ಕೇಂದ್ರದ ಒಡೆತನದ ಒಎನ್‌ಜಿಸಿ ಸಹ ಶೇಕಡಾ 13 ರಷ್ಟು ಕುಸಿದು ದಿನದ ದಿನದ ಕನಿಷ್ಠ 77.80 ರೂ.ಗೆ ತಲುಪಿದೆ.

ಕೊರೋನಾ ವೈರೆಸ್‌ ಭೀತಿ ಸಮಯದಲ್ಲಿ ರಷ್ಯಾದೊಂದಿಗೆ ದರಸಮರಕ್ಕೆ ಇಳಿದಿರುವ ಸೌದಿಯು ಬೆಲೆಗಳನ್ನು ಕಡಿತಗೊಳಿಸಿದ ನಂತರ 1991 ರ ನಂತರದ ಕಚ್ಚಾ ತೈಲಬೆಲೆಯಲ್ಲಿ ಅತಿದೊಡ್ಡ ಕುಸಿತ ಉಂಟಾಗಿದೆ.

ಬ್ರೆಂಟ್ ಕಚ್ಚಾ ತೈಲಬೆಲೆಯು ಬ್ಯಾರೆಲ್‌ ಒಂದಕ್ಕೆ $ 14.25 ಡಾಲರ್‌ (31.5%)ಕುಸಿದಿದ್ದು $ 31.02 ಡಾಲರ್‌ಗೆ ತಲುಪಿದೆ. ಇದು ಜನವರಿ 17, 1991 ರ ನಂತರ ಅತಿ ಹೆಚ್ಚಿನ ಇಳಿಕೆಯಾಗಿದೆ.

ವಿಶ್ವದ ಅತಿದೊಡ್ಡ ತೈಲ ರಫ್ತುದಾರರಾದ ಸೌದಿ ಅರೇಬಿಯಾ, ವಿಶ್ವದ ಎರಡನೇ ಅತಿದೊಡ್ಡ ಉತ್ಪಾದಕ ರಷ್ಯಾದ ವಿರುದ್ಧ ದರ ಸಮರಕ್ಕೆ ಮುಂದಾಗಿದೆ. ಆ ಮೂಲಕ ದರ ಕಡಿಮೆ ಮಾಡಿ ಹೆಚ್ಚಿನ ಗ್ರಾಹಕ ದೇಶಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವುದು ಇದರ ಉದ್ದೇಶವಾಗಿದೆ.

ಕರೋನವೈರಸ್ ಭೀತಿಯಿಂದ ಏಕಾಏಕಿ ಉಂಟಾದ ಆರ್ಥಿಕ ಕುಸಿತದಿಂದ ತೈಲ ಆಮದು ದಿನೇ ದಿನೇ ಕಡಿಮೆಯಾಗುತ್ತಿರುವುದು ಸಹ ದರ ಕಡಿಮೆಯಾಗಲು ಮತ್ತೊಂದು ಕಾರಣವಾಗಿದೆ.

ಈ ದರ ಇಳಿಕೆಯ ಪ್ರಯೋಜನ ಜನಸಾಮಾನ್ಯರಿಗೆ ದಕ್ಕುವುದೇ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...