Homeಮುಖಪುಟಟ್ರಂಪ್ ಬೆದರಿಕೆ ಬೆನ್ನಲ್ಲೇ ರಷ್ಯಾದಿಂದ ತೈಲ ಆಮದು ನಿಲ್ಲಿಸಿದ ರಿಲಯನ್ಸ್ ಇಂಡಸ್ಟ್ರೀಸ್

ಟ್ರಂಪ್ ಬೆದರಿಕೆ ಬೆನ್ನಲ್ಲೇ ರಷ್ಯಾದಿಂದ ತೈಲ ಆಮದು ನಿಲ್ಲಿಸಿದ ರಿಲಯನ್ಸ್ ಇಂಡಸ್ಟ್ರೀಸ್

- Advertisement -
- Advertisement -

ಗುಜರಾತ್‌ನ ಜಾಮ್‌ನಗರದಲ್ಲಿರುವ ತನ್ನ ಸಂಸ್ಕರಣಾಗಾರಕ್ಕೆ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ರಿಲಯನ್ಸ್ ಇಂಡಸ್ಟ್ರೀಸ್ ಗುರುವಾರದಿಂದ (ನವೆಂಬರ್ 20) ನಿಲ್ಲಿಸಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಕಂಪನಿಗಳ ಸಮೂಹವು, ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿರುವ ಹಿನ್ನೆಲೆ, ಪಾಶ್ಚಿಮಾತ್ಯ ದೇಶಗಳು ರಷ್ಯಾದ ಮೇಲೆ ಹೇರಿರುವ ನಿರ್ಬಂಧಗಳನ್ನು ಸಂಪೂರ್ಣವಾಗಿ ಪಾಲಿಸುತ್ತೇವೆ. ಆದರೆ, ಈಗಿರುವ ತೈಲ ಸರಬರಾಜುದಾರರೊಂದಿಗಿನ ಸಂಬಂಧವನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಹೇಳಿದೆ ಎಂದು ವರದಿ ತಿಳಿಸಿದೆ.

ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದ ಫೆಬ್ರವರಿ 2022ರಿಂದ ಯುನೈಟೆಡ್ ಸ್ಟೇಟ್ಸ್ ಮತ್ತು ಅದರ ಯುರೋಪಿಯನ್ ಮಿತ್ರರಾಷ್ಟ್ರಗಳು ರಷ್ಯಾದ ವ್ಯವಹಾರಗಳ ಮೇಲೆ, ವಿಶೇಷವಾಗಿ ತೈಲ ರಫ್ತುದಾರರ ಮೇಲೆ ಸರಣಿ ನಿರ್ಬಂಧಗಳನ್ನು ವಿಧಿಸಿವೆ. ಈ ನಿರ್ಬಂಧಗಳು ರಷ್ಯಾ ಸಂಘರ್ಷವನ್ನು ಕೊನೆಗೊಳಿಸಲು ಮತ್ತು ಉಕ್ರೇನ್ ಜೊತೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವಂತೆ ಒತ್ತಾಯಿಸುವ ಉದ್ದೇಶವನ್ನು ಹೊಂದಿವೆ ಎಂದು ಹೇಳಲಾಗ್ತಿದೆ.

ಕಳೆದ ಅಕ್ಟೋಬರ್‌ನಲ್ಲಿ, ಅಮೆರಿಕ ರಷ್ಯಾದ ಎರಡು ದೊಡ್ಡ ಇಂಧನ ಸಂಸ್ಥೆಗಳು ಮತ್ತು ತೈಲ ರಫ್ತುದಾರರಾದ ರೋಸ್‌ನೆಫ್ಟ್ ಮತ್ತು ಲುಕೋಯಿಲ್‌ಗಳನ್ನು ಗುರಿಯಾಗಿಸಿಕೊಂಡು ಹೊಸ ನಿರ್ಬಂಧಗಳನ್ನು ವಿಧಿಸಿತ್ತು.

ಭಾರತ ಸೇರಿದಂತೆ ವಿವಿಧ ದೇಶಗಳು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಮೂಲಕ ರಷ್ಯಾದ ಯುದ್ಧಕ್ಕೆ ಉತ್ತೇಜನ ನೀಡುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಆರೋಪಿಸುತ್ತಿದ್ದಾರೆ.

ಆಗಸ್ಟ್‌ನಲ್ಲಿ, ಟ್ರಂಪ್ ಆಡಳಿತವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುತ್ತಿರುವ ಕಾರಣಕ್ಕೆ ಭಾರತದ ಸರಕುಗಳ ಮೇಲೆ ಶೇಕಡ 50ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಟ್ರಂಪ್ ಆಡಳಿತ ಪರಸ್ಪರ ಸುಂಕ ಎಂಬ ನೀತಿಯ ಅಡಿಯಲ್ಲಿ ಭಾರತದ ಸರಕುಗಳ ಮೇಲೆ ಅಮೆರಿಕ ಈಗಾಗಲೇ ಶೇಕಡ 25ರಷ್ಟು ಸುಂಕ ವಿಧಿಸಿದೆ.

ಅಮೆರಿಕದ ಹೆಚ್ಚುವರಿ ಸುಂಕಕ್ಕೆ ಪ್ರತಿಕ್ರಿಯಿಸಿದ್ದ ಭಾರತ, ಅಮೆರಿಕವು ಭಾರತದ ಮೇಲೆ ಹೆಚ್ಚುವರಿ ಸುಂಕ ಹೇರಲು ನಿರ್ಧರಿಸಿರುವುದು ಅತ್ಯಂತ ದುರದೃಷ್ಟಕರ. ಭಾರತ ಮಾಡುತ್ತಿರುವ ಕೆಲಸವನ್ನು ಬೇರೆ ಅನೇಕ ದೇಶಗಳು ಕೂಡ ತಮ್ಮ ಸ್ವಂತ ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಮಾಡುತ್ತಿವೆ. ಆದರೂ, ಕೇವಲ ಭಾರತವನ್ನು ಮಾತ್ರ ಗುರಿಯಾಗಿಟ್ಟುಕೊಂಡು ಶಿಕ್ಷಾ ಕ್ರಮ ತೆಗೆದುಕೊಂಡಿರುವುದು ಸರಿಯಲ್ಲ ಎಂದಿತ್ತು.

ರಷ್ಯಾದಿಂದ ತೈಲ ಆಮದಿನ ಮರುಮಾಪನ ಪ್ರಕ್ರಿಯೆ ಈಗಲೂ ಪ್ರಗತಿಯಲ್ಲಿದೆ. ನಾವು ಭಾರತ ಸರ್ಕಾರದ ಮಾರ್ಗಸೂಚಿಗಳಿಗೆ ಸಂಪೂರ್ಣವಾಗಿ ಬದ್ಧರಾಗಿರುತ್ತೇವೆ ಎಂದು ಅಕ್ಟೋಬರ್ 23ರಂದು ರಿಲಯನ್ಸ್ ಇಂಡಸ್ಟ್ರೀಸ್ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ಹೇಳಿತ್ತು.

ಡಿಸೆಂಬರ್ 1,2025ರಿಂದ ಜಾಮ್‌ನಗರ ರಿಫೈನರಿಯಲ್ಲಿ ರಷ್ಯಾದ ಕಚ್ಚಾ ತೈಲವನ್ನು ಬಳಸಿ ಯಾವುದೇ ಉತ್ಪನ್ನ ತಯಾರಿಸುವುದಿಲ್ಲ. ಅಲ್ಲಿಂದ ರಫ್ತು ಮಾಡುವ ಎಲ್ಲಾ ಪೆಟ್ರೋಲ್, ಡೀಸೆಲ್, ಇತ್ಯಾದಿ ಉತ್ಪನ್ನಗಳು ರಷ್ಯಾ-ಮುಕ್ತವಾಗಿರುತ್ತವೆ ಎಂದು ರಿಲಯನ್ಸ್ ಸಮೂಹದ ವಕ್ತಾರ ಗುರುವಾರ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಜನವರಿ 21, 2026ರಿಂದ ಪಾಶ್ಚಿಮಾತ್ಯ ದೇಶಗಳು ಹೊಸತಾಗಿ ಹೇರಲಿರುವ ಕಠಿಣ ನಿರ್ಬಂಧಗಳಿಗೆ ಸಂಪೂರ್ಣವಾಗಿ ಅನುಗುಣವಾಗಿರಲು ರಿಲಯನ್ಸ್ ರಷ್ಯಾದಿಂದ ತೈಲ ಆಮದು ನಿಲ್ಲಿಸಿದೆ. ಅಮೆರಿಕ ಸರ್ಕಾರ ರಷ್ಯಾದ ತೈಲ ವ್ಯವಹಾರಗಳನ್ನು ನಿಲ್ಲಿಸಲು ಕಂಪನಿಗಳಿಗೆ ಕೊನೆಯ ಗಡುವಾಗಿ ಈ ಶುಕ್ರವಾರವನ್ನು ನಿಗದಿಪಡಿಸಿದೆ. ಆದರೆ, ರಿಲಯನ್ಸ್ ಆ ಗಡುವಿಗಿಂತಲೂ ಮೊದಲೇ ರಷ್ಯಾದಿಂದ ತೈಲ ಆಮದನ್ನು ನಿಲ್ಲಿಸಿ ಹೊಸ ವ್ಯವಸ್ಥೆಗೆ ಬದಲಾಯಿಸಿಕೊಂಡಿದೆ ಎಂದು ವರದಿ ಹೇಳಿದೆ.

ರಾಯಿಟರ್ಸ್ ಪ್ರಕಾರ, ರಿಲಯನ್ಸ್ ಇಂಡಸ್ಟ್ರೀಸ್ ರಷ್ಯಾದ ರೋಸ್‌ನೆಫ್ಟ್‌ ಕಂಪನಿಯಿಂದ ದಿನಕ್ಕೆ ಸುಮಾರು 500,000 ಬ್ಯಾರೆಲ್ ಕಚ್ಚಾ ತೈಲವನ್ನು ಖರೀದಿಸಲು ದೀರ್ಘಾವಧಿಯ ಒಪ್ಪಂದವನ್ನು ಮಾಡಿಕೊಂಡಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ರಿಲಯನ್ಸ್ ಇಂಡಸ್ಟ್ರೀಸ್ ಭಾರತದ ಅತಿದೊಡ್ಡ ಇಂಧನ ರಫ್ತುದಾರ ಮತ್ತು ರಷ್ಯಾ ತೈಲದ ಭಾರತದ ಅತಿದೊಡ್ಡ ಆಮದುದಾರ. ಭಾರತದ ಒಟ್ಟು ರಷ್ಯಾ ತೈಲ ಆಮದಿನ ಅರ್ಧದಷ್ಟು ರಿಲಯನ್ಸ್ ಮಾಡುತ್ತಿದೆ.

ರಾಯಿಟರ್ಸ್ ಪ್ರಕಾರ, ರಿಲಯನ್ಸ್‌ನ ತೈಲ ರಫ್ತಿನಲ್ಲಿ ಯುರೋಪ್ ಶೇ. 28 ರಷ್ಟು ಪಾಲನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ 40 ವರ್ಷದ ಶಿಕ್ಷಕ ಹಾಗೂ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅರವಿಂದ ಮುಲ್ಜಿ ವಾಧೇರ್ ಎಂಬವರು ತಮ್ಮ ಹುಟ್ಟೂರು ದೇವ್ಲಿ ಗ್ರಾಮದಲ್ಲಿ ಶುಕ್ರವಾರ (ನವೆಂಬರ್ 21) ಆತ್ಮಹತ್ಯೆ...

ಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

'ಉಳುವವರಿಗೆ ಭೂಮಿ' ನಿನಾದದೊಂದಿಗೆ ಸ್ವತಂತ್ರಗೊಂಡ ಭಾರತದಲ್ಲಿ 79 ವರ್ಷಗಳಾದರೂ ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವ ಕೋಟ್ಯಾಂತರ ಬಡ ಕುಟುಂಬಗಳಿಗೆ ತುಂಡು ಭೂಮಿ ಇಲ್ಲವಾಗಿದೆ. ಉಳುಮೆಗೆ ಮಾತ್ರವಲ್ಲ ನೆತ್ತಿಯ ಮೇಲೊಂದು ಸೂರೂ ಇಲ್ಲವಾಗಿದೆ. ಸತ್ತ...

ದುಬೈ ಏರ್‌ಶೋನಲ್ಲಿ ಭಾರತದ ತೇಜಸ್‌ ಯುದ್ಧವಿಮಾನ ಪತನ ; ಪೈಲಟ್‌ ಸಾವು

ದುಬೈ ಏರ್ ಶೋನಲ್ಲಿ ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಶುಕ್ರವಾರ (ನವೆಂಬರ್ 21) ಸ್ಥಳೀಯ ಸಮಯ ಮಧ್ಯಾಹ್ನ 2:10ರ ಸುಮಾರಿಗೆ ದುರ್ಘಟನೆ ನಡೆದಿದೆ. ದೊಡ್ಡ ಜನಸಮೂಹದ ಮುಂದೆ ವೈಮಾನಿಕ ಪ್ರದರ್ಶನ ನೀಡುತ್ತಿದ್ದಾಗ...

ಎಲ್ಲ 140 ಮಂದಿ ಶಾಸಕರೂ ನನ್ನವರೇ, ಗುಂಪುಗಾರಿಕೆ ನನ್ನ ರಕ್ತದಲ್ಲಿಲ್ಲ: ಡಿ.ಕೆ. ಶಿವಕುಮಾರ್

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ಎಲ್ಲ 140 ಮಂದಿ ಶಾಸಕರೂ ನನ್ನವರೇ. ಗುಂಪುಗಾರಿಕೆ ಮಾಡುವುದು ನನ್ನ ರಕ್ತದಲ್ಲಿಯೇ ಇಲ್ಲ'...

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ : 6 ಸಾವು

ಶುಕ್ರವಾರ (ನವೆಂಬರ್ 21) ಬೆಳಿಗ್ಗೆ ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. 26 ಸೆಕೆಂಡುಗಳ ಕಾಲ ಕಂಪನ ಸಂಭವಿಸಿದ್ದು, ಪೂರ್ವ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲೂ...

ರಾಜ್ಯಪಾಲರು ಮಸೂದೆಗಳನ್ನು ಅಂಗೀಕರಿಸಲು ಸಮಯ ಮಿತಿ ನಿಗದಿ ಮಾಡುವವರೆಗೆ ವಿಶ್ರಾಂತಿ ಪಡೆಯುವುದಿಲ್ಲ: ಸ್ಟಾಲಿನ್ 

ರಾಜ್ಯ ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅಂಗೀಕರಿಸಲು ರಾಜ್ಯಪಾಲರಿಗೆ ಸಮಯ ಮಿತಿಯನ್ನು ನಿಗದಿಪಡಿಸಲು ಸಂವಿಧಾನದ 200ನೇ ವಿಧಿಗೆ ತಿದ್ದುಪಡಿ ತರಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ಆಗ್ರಹಿಸಿದ್ದಾರೆ.  ರಾಷ್ಟ್ರಪತಿಗಳ ಉಲ್ಲೇಖಕ್ಕೆ ಉತ್ತರಿಸುವಾಗ ಸುಪ್ರೀಂ ಕೋರ್ಟ್‌ನ...

ಕೊಲೆಯತ್ನ ಆರೋಪ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

ಕೊಲೆಯತ್ನ ಆರೋಪದ ಮೇಲೆ ಕಲಬುರಗಿಯ ಚಿತ್ತಾಪುರದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅನ್ನು ಅಫಜಲಪುರ ತಾಲೂಕಿನ ಶಿರವಾಳ ಸಮೀಪ ಗುರುವಾರ (ನವೆಂಬರ್ 20) ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ. ನಾಟಿ ಔಷಧಿ...

ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ; ವರದಿ

ಮುಂಬೈ ಉಪನಗರ ರೈಲಿನಲ್ಲಿ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಹ ಪ್ರಯಾಣಿಕರು ಹಲ್ಲೆ ನಡೆಸಿದ್ದು, ಇದರಿಂದ ಮನನೊಂದು ಕಲ್ಯಾಣ್ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಮುಳುಂದ್‌ನ ಕೇಳ್ಕರ್ ಕಾಲೇಜಿನ ವಿದ್ಯಾರ್ಥಿ...

‘ನಾನು ಬೌದ್ಧಧರ್ಮವನ್ನು ಅನುಸರಿಸುತ್ತೇನೆ, ಆದರೆ ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’: ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ

ನಾನು ಬೌದ್ಧಧರ್ಮವನ್ನು ಅನುಸರಿಸುತ್ತೇನೆ, ಆದರೆ ನಾನು ನಿಜವಾಗಿಯೂ ಜಾತ್ಯತೀತ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ತಮ್ಮ ವಿದಾಯ ಭಾಷಣದಲ್ಲಿ ಹೇಳಿದ್ದಾರೆ.  ಸುಪ್ರೀಂ ಕೋರ್ಟ್‌ನ ಕೋರ್ಟ್ ನಲ್ಲಿ,  ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್ ಆನ್...