Homeಮುಖಪುಟಟ್ರಂಪ್ ಬೆದರಿಕೆ ಬೆನ್ನಲ್ಲೇ ರಷ್ಯಾದಿಂದ ತೈಲ ಆಮದು ನಿಲ್ಲಿಸಿದ ರಿಲಯನ್ಸ್ ಇಂಡಸ್ಟ್ರೀಸ್

ಟ್ರಂಪ್ ಬೆದರಿಕೆ ಬೆನ್ನಲ್ಲೇ ರಷ್ಯಾದಿಂದ ತೈಲ ಆಮದು ನಿಲ್ಲಿಸಿದ ರಿಲಯನ್ಸ್ ಇಂಡಸ್ಟ್ರೀಸ್

- Advertisement -
- Advertisement -

ಗುಜರಾತ್‌ನ ಜಾಮ್‌ನಗರದಲ್ಲಿರುವ ತನ್ನ ಸಂಸ್ಕರಣಾಗಾರಕ್ಕೆ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ರಿಲಯನ್ಸ್ ಇಂಡಸ್ಟ್ರೀಸ್ ಗುರುವಾರದಿಂದ (ನವೆಂಬರ್ 20) ನಿಲ್ಲಿಸಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಕಂಪನಿಗಳ ಸಮೂಹವು, ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿರುವ ಹಿನ್ನೆಲೆ, ಪಾಶ್ಚಿಮಾತ್ಯ ದೇಶಗಳು ರಷ್ಯಾದ ಮೇಲೆ ಹೇರಿರುವ ನಿರ್ಬಂಧಗಳನ್ನು ಸಂಪೂರ್ಣವಾಗಿ ಪಾಲಿಸುತ್ತೇವೆ. ಆದರೆ, ಈಗಿರುವ ತೈಲ ಸರಬರಾಜುದಾರರೊಂದಿಗಿನ ಸಂಬಂಧವನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಹೇಳಿದೆ ಎಂದು ವರದಿ ತಿಳಿಸಿದೆ.

ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದ ಫೆಬ್ರವರಿ 2022ರಿಂದ ಯುನೈಟೆಡ್ ಸ್ಟೇಟ್ಸ್ ಮತ್ತು ಅದರ ಯುರೋಪಿಯನ್ ಮಿತ್ರರಾಷ್ಟ್ರಗಳು ರಷ್ಯಾದ ವ್ಯವಹಾರಗಳ ಮೇಲೆ, ವಿಶೇಷವಾಗಿ ತೈಲ ರಫ್ತುದಾರರ ಮೇಲೆ ಸರಣಿ ನಿರ್ಬಂಧಗಳನ್ನು ವಿಧಿಸಿವೆ. ಈ ನಿರ್ಬಂಧಗಳು ರಷ್ಯಾ ಸಂಘರ್ಷವನ್ನು ಕೊನೆಗೊಳಿಸಲು ಮತ್ತು ಉಕ್ರೇನ್ ಜೊತೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವಂತೆ ಒತ್ತಾಯಿಸುವ ಉದ್ದೇಶವನ್ನು ಹೊಂದಿವೆ ಎಂದು ಹೇಳಲಾಗ್ತಿದೆ.

ಕಳೆದ ಅಕ್ಟೋಬರ್‌ನಲ್ಲಿ, ಅಮೆರಿಕ ರಷ್ಯಾದ ಎರಡು ದೊಡ್ಡ ಇಂಧನ ಸಂಸ್ಥೆಗಳು ಮತ್ತು ತೈಲ ರಫ್ತುದಾರರಾದ ರೋಸ್‌ನೆಫ್ಟ್ ಮತ್ತು ಲುಕೋಯಿಲ್‌ಗಳನ್ನು ಗುರಿಯಾಗಿಸಿಕೊಂಡು ಹೊಸ ನಿರ್ಬಂಧಗಳನ್ನು ವಿಧಿಸಿತ್ತು.

ಭಾರತ ಸೇರಿದಂತೆ ವಿವಿಧ ದೇಶಗಳು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಮೂಲಕ ರಷ್ಯಾದ ಯುದ್ಧಕ್ಕೆ ಉತ್ತೇಜನ ನೀಡುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಆರೋಪಿಸುತ್ತಿದ್ದಾರೆ.

ಆಗಸ್ಟ್‌ನಲ್ಲಿ, ಟ್ರಂಪ್ ಆಡಳಿತವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುತ್ತಿರುವ ಕಾರಣಕ್ಕೆ ಭಾರತದ ಸರಕುಗಳ ಮೇಲೆ ಶೇಕಡ 50ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಟ್ರಂಪ್ ಆಡಳಿತ ಪರಸ್ಪರ ಸುಂಕ ಎಂಬ ನೀತಿಯ ಅಡಿಯಲ್ಲಿ ಭಾರತದ ಸರಕುಗಳ ಮೇಲೆ ಅಮೆರಿಕ ಈಗಾಗಲೇ ಶೇಕಡ 25ರಷ್ಟು ಸುಂಕ ವಿಧಿಸಿದೆ.

ಅಮೆರಿಕದ ಹೆಚ್ಚುವರಿ ಸುಂಕಕ್ಕೆ ಪ್ರತಿಕ್ರಿಯಿಸಿದ್ದ ಭಾರತ, ಅಮೆರಿಕವು ಭಾರತದ ಮೇಲೆ ಹೆಚ್ಚುವರಿ ಸುಂಕ ಹೇರಲು ನಿರ್ಧರಿಸಿರುವುದು ಅತ್ಯಂತ ದುರದೃಷ್ಟಕರ. ಭಾರತ ಮಾಡುತ್ತಿರುವ ಕೆಲಸವನ್ನು ಬೇರೆ ಅನೇಕ ದೇಶಗಳು ಕೂಡ ತಮ್ಮ ಸ್ವಂತ ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಮಾಡುತ್ತಿವೆ. ಆದರೂ, ಕೇವಲ ಭಾರತವನ್ನು ಮಾತ್ರ ಗುರಿಯಾಗಿಟ್ಟುಕೊಂಡು ಶಿಕ್ಷಾ ಕ್ರಮ ತೆಗೆದುಕೊಂಡಿರುವುದು ಸರಿಯಲ್ಲ ಎಂದಿತ್ತು.

ರಷ್ಯಾದಿಂದ ತೈಲ ಆಮದಿನ ಮರುಮಾಪನ ಪ್ರಕ್ರಿಯೆ ಈಗಲೂ ಪ್ರಗತಿಯಲ್ಲಿದೆ. ನಾವು ಭಾರತ ಸರ್ಕಾರದ ಮಾರ್ಗಸೂಚಿಗಳಿಗೆ ಸಂಪೂರ್ಣವಾಗಿ ಬದ್ಧರಾಗಿರುತ್ತೇವೆ ಎಂದು ಅಕ್ಟೋಬರ್ 23ರಂದು ರಿಲಯನ್ಸ್ ಇಂಡಸ್ಟ್ರೀಸ್ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ಹೇಳಿತ್ತು.

ಡಿಸೆಂಬರ್ 1,2025ರಿಂದ ಜಾಮ್‌ನಗರ ರಿಫೈನರಿಯಲ್ಲಿ ರಷ್ಯಾದ ಕಚ್ಚಾ ತೈಲವನ್ನು ಬಳಸಿ ಯಾವುದೇ ಉತ್ಪನ್ನ ತಯಾರಿಸುವುದಿಲ್ಲ. ಅಲ್ಲಿಂದ ರಫ್ತು ಮಾಡುವ ಎಲ್ಲಾ ಪೆಟ್ರೋಲ್, ಡೀಸೆಲ್, ಇತ್ಯಾದಿ ಉತ್ಪನ್ನಗಳು ರಷ್ಯಾ-ಮುಕ್ತವಾಗಿರುತ್ತವೆ ಎಂದು ರಿಲಯನ್ಸ್ ಸಮೂಹದ ವಕ್ತಾರ ಗುರುವಾರ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಜನವರಿ 21, 2026ರಿಂದ ಪಾಶ್ಚಿಮಾತ್ಯ ದೇಶಗಳು ಹೊಸತಾಗಿ ಹೇರಲಿರುವ ಕಠಿಣ ನಿರ್ಬಂಧಗಳಿಗೆ ಸಂಪೂರ್ಣವಾಗಿ ಅನುಗುಣವಾಗಿರಲು ರಿಲಯನ್ಸ್ ರಷ್ಯಾದಿಂದ ತೈಲ ಆಮದು ನಿಲ್ಲಿಸಿದೆ. ಅಮೆರಿಕ ಸರ್ಕಾರ ರಷ್ಯಾದ ತೈಲ ವ್ಯವಹಾರಗಳನ್ನು ನಿಲ್ಲಿಸಲು ಕಂಪನಿಗಳಿಗೆ ಕೊನೆಯ ಗಡುವಾಗಿ ಈ ಶುಕ್ರವಾರವನ್ನು ನಿಗದಿಪಡಿಸಿದೆ. ಆದರೆ, ರಿಲಯನ್ಸ್ ಆ ಗಡುವಿಗಿಂತಲೂ ಮೊದಲೇ ರಷ್ಯಾದಿಂದ ತೈಲ ಆಮದನ್ನು ನಿಲ್ಲಿಸಿ ಹೊಸ ವ್ಯವಸ್ಥೆಗೆ ಬದಲಾಯಿಸಿಕೊಂಡಿದೆ ಎಂದು ವರದಿ ಹೇಳಿದೆ.

ರಾಯಿಟರ್ಸ್ ಪ್ರಕಾರ, ರಿಲಯನ್ಸ್ ಇಂಡಸ್ಟ್ರೀಸ್ ರಷ್ಯಾದ ರೋಸ್‌ನೆಫ್ಟ್‌ ಕಂಪನಿಯಿಂದ ದಿನಕ್ಕೆ ಸುಮಾರು 500,000 ಬ್ಯಾರೆಲ್ ಕಚ್ಚಾ ತೈಲವನ್ನು ಖರೀದಿಸಲು ದೀರ್ಘಾವಧಿಯ ಒಪ್ಪಂದವನ್ನು ಮಾಡಿಕೊಂಡಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ರಿಲಯನ್ಸ್ ಇಂಡಸ್ಟ್ರೀಸ್ ಭಾರತದ ಅತಿದೊಡ್ಡ ಇಂಧನ ರಫ್ತುದಾರ ಮತ್ತು ರಷ್ಯಾ ತೈಲದ ಭಾರತದ ಅತಿದೊಡ್ಡ ಆಮದುದಾರ. ಭಾರತದ ಒಟ್ಟು ರಷ್ಯಾ ತೈಲ ಆಮದಿನ ಅರ್ಧದಷ್ಟು ರಿಲಯನ್ಸ್ ಮಾಡುತ್ತಿದೆ.

ರಾಯಿಟರ್ಸ್ ಪ್ರಕಾರ, ರಿಲಯನ್ಸ್‌ನ ತೈಲ ರಫ್ತಿನಲ್ಲಿ ಯುರೋಪ್ ಶೇ. 28 ರಷ್ಟು ಪಾಲನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...