Homeಮುಖಪುಟಟ್ರಂಪ್ ಬೆದರಿಕೆ ಬೆನ್ನಲ್ಲೇ ರಷ್ಯಾದಿಂದ ತೈಲ ಆಮದು ನಿಲ್ಲಿಸಿದ ರಿಲಯನ್ಸ್ ಇಂಡಸ್ಟ್ರೀಸ್

ಟ್ರಂಪ್ ಬೆದರಿಕೆ ಬೆನ್ನಲ್ಲೇ ರಷ್ಯಾದಿಂದ ತೈಲ ಆಮದು ನಿಲ್ಲಿಸಿದ ರಿಲಯನ್ಸ್ ಇಂಡಸ್ಟ್ರೀಸ್

- Advertisement -
- Advertisement -

ಗುಜರಾತ್‌ನ ಜಾಮ್‌ನಗರದಲ್ಲಿರುವ ತನ್ನ ಸಂಸ್ಕರಣಾಗಾರಕ್ಕೆ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ರಿಲಯನ್ಸ್ ಇಂಡಸ್ಟ್ರೀಸ್ ಗುರುವಾರದಿಂದ (ನವೆಂಬರ್ 20) ನಿಲ್ಲಿಸಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಕಂಪನಿಗಳ ಸಮೂಹವು, ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿರುವ ಹಿನ್ನೆಲೆ, ಪಾಶ್ಚಿಮಾತ್ಯ ದೇಶಗಳು ರಷ್ಯಾದ ಮೇಲೆ ಹೇರಿರುವ ನಿರ್ಬಂಧಗಳನ್ನು ಸಂಪೂರ್ಣವಾಗಿ ಪಾಲಿಸುತ್ತೇವೆ. ಆದರೆ, ಈಗಿರುವ ತೈಲ ಸರಬರಾಜುದಾರರೊಂದಿಗಿನ ಸಂಬಂಧವನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಹೇಳಿದೆ ಎಂದು ವರದಿ ತಿಳಿಸಿದೆ.

ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದ ಫೆಬ್ರವರಿ 2022ರಿಂದ ಯುನೈಟೆಡ್ ಸ್ಟೇಟ್ಸ್ ಮತ್ತು ಅದರ ಯುರೋಪಿಯನ್ ಮಿತ್ರರಾಷ್ಟ್ರಗಳು ರಷ್ಯಾದ ವ್ಯವಹಾರಗಳ ಮೇಲೆ, ವಿಶೇಷವಾಗಿ ತೈಲ ರಫ್ತುದಾರರ ಮೇಲೆ ಸರಣಿ ನಿರ್ಬಂಧಗಳನ್ನು ವಿಧಿಸಿವೆ. ಈ ನಿರ್ಬಂಧಗಳು ರಷ್ಯಾ ಸಂಘರ್ಷವನ್ನು ಕೊನೆಗೊಳಿಸಲು ಮತ್ತು ಉಕ್ರೇನ್ ಜೊತೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವಂತೆ ಒತ್ತಾಯಿಸುವ ಉದ್ದೇಶವನ್ನು ಹೊಂದಿವೆ ಎಂದು ಹೇಳಲಾಗ್ತಿದೆ.

ಕಳೆದ ಅಕ್ಟೋಬರ್‌ನಲ್ಲಿ, ಅಮೆರಿಕ ರಷ್ಯಾದ ಎರಡು ದೊಡ್ಡ ಇಂಧನ ಸಂಸ್ಥೆಗಳು ಮತ್ತು ತೈಲ ರಫ್ತುದಾರರಾದ ರೋಸ್‌ನೆಫ್ಟ್ ಮತ್ತು ಲುಕೋಯಿಲ್‌ಗಳನ್ನು ಗುರಿಯಾಗಿಸಿಕೊಂಡು ಹೊಸ ನಿರ್ಬಂಧಗಳನ್ನು ವಿಧಿಸಿತ್ತು.

ಭಾರತ ಸೇರಿದಂತೆ ವಿವಿಧ ದೇಶಗಳು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಮೂಲಕ ರಷ್ಯಾದ ಯುದ್ಧಕ್ಕೆ ಉತ್ತೇಜನ ನೀಡುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಆರೋಪಿಸುತ್ತಿದ್ದಾರೆ.

ಆಗಸ್ಟ್‌ನಲ್ಲಿ, ಟ್ರಂಪ್ ಆಡಳಿತವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುತ್ತಿರುವ ಕಾರಣಕ್ಕೆ ಭಾರತದ ಸರಕುಗಳ ಮೇಲೆ ಶೇಕಡ 50ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಟ್ರಂಪ್ ಆಡಳಿತ ಪರಸ್ಪರ ಸುಂಕ ಎಂಬ ನೀತಿಯ ಅಡಿಯಲ್ಲಿ ಭಾರತದ ಸರಕುಗಳ ಮೇಲೆ ಅಮೆರಿಕ ಈಗಾಗಲೇ ಶೇಕಡ 25ರಷ್ಟು ಸುಂಕ ವಿಧಿಸಿದೆ.

ಅಮೆರಿಕದ ಹೆಚ್ಚುವರಿ ಸುಂಕಕ್ಕೆ ಪ್ರತಿಕ್ರಿಯಿಸಿದ್ದ ಭಾರತ, ಅಮೆರಿಕವು ಭಾರತದ ಮೇಲೆ ಹೆಚ್ಚುವರಿ ಸುಂಕ ಹೇರಲು ನಿರ್ಧರಿಸಿರುವುದು ಅತ್ಯಂತ ದುರದೃಷ್ಟಕರ. ಭಾರತ ಮಾಡುತ್ತಿರುವ ಕೆಲಸವನ್ನು ಬೇರೆ ಅನೇಕ ದೇಶಗಳು ಕೂಡ ತಮ್ಮ ಸ್ವಂತ ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಮಾಡುತ್ತಿವೆ. ಆದರೂ, ಕೇವಲ ಭಾರತವನ್ನು ಮಾತ್ರ ಗುರಿಯಾಗಿಟ್ಟುಕೊಂಡು ಶಿಕ್ಷಾ ಕ್ರಮ ತೆಗೆದುಕೊಂಡಿರುವುದು ಸರಿಯಲ್ಲ ಎಂದಿತ್ತು.

ರಷ್ಯಾದಿಂದ ತೈಲ ಆಮದಿನ ಮರುಮಾಪನ ಪ್ರಕ್ರಿಯೆ ಈಗಲೂ ಪ್ರಗತಿಯಲ್ಲಿದೆ. ನಾವು ಭಾರತ ಸರ್ಕಾರದ ಮಾರ್ಗಸೂಚಿಗಳಿಗೆ ಸಂಪೂರ್ಣವಾಗಿ ಬದ್ಧರಾಗಿರುತ್ತೇವೆ ಎಂದು ಅಕ್ಟೋಬರ್ 23ರಂದು ರಿಲಯನ್ಸ್ ಇಂಡಸ್ಟ್ರೀಸ್ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ಹೇಳಿತ್ತು.

ಡಿಸೆಂಬರ್ 1,2025ರಿಂದ ಜಾಮ್‌ನಗರ ರಿಫೈನರಿಯಲ್ಲಿ ರಷ್ಯಾದ ಕಚ್ಚಾ ತೈಲವನ್ನು ಬಳಸಿ ಯಾವುದೇ ಉತ್ಪನ್ನ ತಯಾರಿಸುವುದಿಲ್ಲ. ಅಲ್ಲಿಂದ ರಫ್ತು ಮಾಡುವ ಎಲ್ಲಾ ಪೆಟ್ರೋಲ್, ಡೀಸೆಲ್, ಇತ್ಯಾದಿ ಉತ್ಪನ್ನಗಳು ರಷ್ಯಾ-ಮುಕ್ತವಾಗಿರುತ್ತವೆ ಎಂದು ರಿಲಯನ್ಸ್ ಸಮೂಹದ ವಕ್ತಾರ ಗುರುವಾರ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಜನವರಿ 21, 2026ರಿಂದ ಪಾಶ್ಚಿಮಾತ್ಯ ದೇಶಗಳು ಹೊಸತಾಗಿ ಹೇರಲಿರುವ ಕಠಿಣ ನಿರ್ಬಂಧಗಳಿಗೆ ಸಂಪೂರ್ಣವಾಗಿ ಅನುಗುಣವಾಗಿರಲು ರಿಲಯನ್ಸ್ ರಷ್ಯಾದಿಂದ ತೈಲ ಆಮದು ನಿಲ್ಲಿಸಿದೆ. ಅಮೆರಿಕ ಸರ್ಕಾರ ರಷ್ಯಾದ ತೈಲ ವ್ಯವಹಾರಗಳನ್ನು ನಿಲ್ಲಿಸಲು ಕಂಪನಿಗಳಿಗೆ ಕೊನೆಯ ಗಡುವಾಗಿ ಈ ಶುಕ್ರವಾರವನ್ನು ನಿಗದಿಪಡಿಸಿದೆ. ಆದರೆ, ರಿಲಯನ್ಸ್ ಆ ಗಡುವಿಗಿಂತಲೂ ಮೊದಲೇ ರಷ್ಯಾದಿಂದ ತೈಲ ಆಮದನ್ನು ನಿಲ್ಲಿಸಿ ಹೊಸ ವ್ಯವಸ್ಥೆಗೆ ಬದಲಾಯಿಸಿಕೊಂಡಿದೆ ಎಂದು ವರದಿ ಹೇಳಿದೆ.

ರಾಯಿಟರ್ಸ್ ಪ್ರಕಾರ, ರಿಲಯನ್ಸ್ ಇಂಡಸ್ಟ್ರೀಸ್ ರಷ್ಯಾದ ರೋಸ್‌ನೆಫ್ಟ್‌ ಕಂಪನಿಯಿಂದ ದಿನಕ್ಕೆ ಸುಮಾರು 500,000 ಬ್ಯಾರೆಲ್ ಕಚ್ಚಾ ತೈಲವನ್ನು ಖರೀದಿಸಲು ದೀರ್ಘಾವಧಿಯ ಒಪ್ಪಂದವನ್ನು ಮಾಡಿಕೊಂಡಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ರಿಲಯನ್ಸ್ ಇಂಡಸ್ಟ್ರೀಸ್ ಭಾರತದ ಅತಿದೊಡ್ಡ ಇಂಧನ ರಫ್ತುದಾರ ಮತ್ತು ರಷ್ಯಾ ತೈಲದ ಭಾರತದ ಅತಿದೊಡ್ಡ ಆಮದುದಾರ. ಭಾರತದ ಒಟ್ಟು ರಷ್ಯಾ ತೈಲ ಆಮದಿನ ಅರ್ಧದಷ್ಟು ರಿಲಯನ್ಸ್ ಮಾಡುತ್ತಿದೆ.

ರಾಯಿಟರ್ಸ್ ಪ್ರಕಾರ, ರಿಲಯನ್ಸ್‌ನ ತೈಲ ರಫ್ತಿನಲ್ಲಿ ಯುರೋಪ್ ಶೇ. 28 ರಷ್ಟು ಪಾಲನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...