Homeಮುಖಪುಟಡಿಸೆಂಬರ್‌ 1 ರಿಂದ ರಿಲಯನ್ಸ್ ಜಿಯೋ ಕರೆ, ಡೇಟಾ ಶುಲ್ಕ ಶೇ.21 ರಷ್ಟು ಹೆಚ್ಚಳ

ಡಿಸೆಂಬರ್‌ 1 ರಿಂದ ರಿಲಯನ್ಸ್ ಜಿಯೋ ಕರೆ, ಡೇಟಾ ಶುಲ್ಕ ಶೇ.21 ರಷ್ಟು ಹೆಚ್ಚಳ

- Advertisement -
- Advertisement -

ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ಇತ್ತಿಚೆಗೆ ಹೊಸ ದರವನ್ನು ನಿಗದಿಗೊಳಿಸಿದ ಬಳಿಕ, ಭಾರತದ ಅತಿದೊಡ್ಡ ಮೊಬೈಲ್ ಆಪರೇಟರ್ ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಕೂಡ ಮುಂದಿನ ತಿಂಗಳಿನಿಂದ ತನ್ನ ಪ್ರಿಪೇಯ್ಡ್ ದರಗಳಲ್ಲಿ ಶೇಕಡಾ 21 ರಷ್ಟು ಹೆಚ್ಚಳ ಮಾಡುವುದಾಗಿ ಘೋಷಿಸಿದೆ.

ಡಿಸೆಂಬರ್‌ 1 ರಿಂದ ಪರಿಷ್ಕೃತ ದರಗಳು ಜಾರಿಯಾಗಲಿವೆ. ಜಿಯೋ ಫೋನ್ ಯೋಜನೆ, ಅನಿಯಮಿತ ಯೋಜನೆಗಳು ಮತ್ತು ಡೇಟಾ ಯೋಜನೆಗಳನ್ನು ಶೇಕಡಾ 19.6 ರಿಂದ 21.3 ರ ವರೆಗೆ ಹೆಚ್ಚಿಸಲಾಗಿದೆ.

“ಸುಸ್ಥಿರ ಟೆಲಿಕಾಂ ಉದ್ಯಮವನ್ನು ಮತ್ತಷ್ಟು ಬಲಪಡಿಸುವ ಅದರ ಬದ್ಧತೆಗೆ ಅನುಗುಣವಾಗಿ, ಜಿಯೋ ಇಂದು ತನ್ನ ಹೊಸ ಅನಿಯಮಿತ ಯೋಜನೆಗಳನ್ನು ಪ್ರಕಟಿಸಿದೆ. ಈ ಹೊಸ ಯೋಜನೆಗಳು ಉದ್ಯಮದಲ್ಲಿ ಉತ್ತಮ ಮೌಲ್ಯವನ್ನು ಒದಗಿಸುತ್ತವೆ” ಎಂದು ರಿಲಯನ್ಸ್ ಜಿಯೋ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಹಸಿದಾಗ ತಿನ್ನುವುದು ರೊಟ್ಟಿಯನ್ನೇ ವಿನಃ ಜಿಯೋ ಸಿಮ್‌‌ನಲ್ಲ: ಸಿಮರ್ ಬಲ್ ಸಿಂಗ್

ಅನಿಯಮಿತ ಪ್ಲಾನ್ ವಿಭಾಗದಲ್ಲಿ, ಜಿಯೋ ತನ್ನ ಅಗ್ಗದ ಪ್ಲಾನ್‌ನ ಬೆಲೆಯನ್ನು 28 ದಿನಗಳ ಮಾನ್ಯತೆಯೊಂದಿಗೆ ರೂ.129 ರಿಂದ ರೂ. 155 ಕ್ಕೆ ಹೆಚ್ಚಿಸಿದೆ. 84 ದಿನಗಳ ವ್ಯಾಲಿಡಿಟಿಯ ಪ್ರಸ್ತುತ 329 ಇದ್ದು, ಅದು 395 ರೂಪಾಯಿಗೆ ಏರಿಕೆಯಾಗಲಿದೆ. 84 ದಿನಗಳ ವ್ಯಾಲಿಡಿಟಿಯೊಂದಿಗೆ ದೈನಂದಿನ 1.5 GB ದೈನಂದಿನ ಡೇಟಾ ಬಳಕೆಯನ್ನು ನೀಡುವ ಪ್ಲ್ಯಾನ್ 555 ಇದದ್ದು, 666 ರೂಪಾಯಿಗಳಿಗೆ ಏರಿಕೆಯಾಗಲಿದೆ.

ಇನ್ನೂ 28 ದಿನಗಳ ವ್ಯಾಲಿಡಿಟಿ ಯೋಜನೆಯು ಜಿಯೋಫೋನ್ ಬಳಕೆದಾರರಿಗೆ ರೂ 91ಗೆ ಏರಿಕೆಯಾಗಲಿದೆ. ದರಗಳ ಹೆಚ್ಚಳದ ಹೊರತಾಗಿಯೂ, ಜಿಯೋ ಪ್ಲಾನ್‌ಗಳ ಬೆಲೆಯನ್ನು ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾಗಳಿಗಿಂತ ಕಡಿಮೆ ಇರಿಸಿದ್ದು, ಉದ್ಯಮದಲ್ಲಿ ಬೆಲೆ ಸ್ಪರ್ಧೆಯನ್ನು ಮುಂದುವರೆಸುವ ನಿರೀಕ್ಷೆಯಿದೆ.

ವಿವಾದಿತ ಕೃಷಿ ಕಾನೂನುಗಳು ಜಾರಿಯಾದಾಗ ರಿಲಯನ್ಸ್ ಕಂಪನಿಗೆ ಕಾರ್ಪೋರೇಟ್ ಫಾರ್ಮಿಂಗ್ ಮತ್ತು ಕಂಟ್ರ್ಯಾಕ್ಟ್ ಫಾರ್ಮಿಂಗ್ ಮಾಡಲು ಅನುಕೂಲವಾಗುವ ರೀತಿಯಲ್ಲಿ ಹೊಸ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ರೈತ ಸಂಘಟನೆಗಳು ಆರೋಪ ಮಾಡಿದ್ದವು. ಇದರಿಂದ ಬಾಯ್ಕಾಟ್ ಜಿಯೋ ಅಭೀಯಾನ ಆರಂಭವಾಗಿತ್ತು. ಬಳಿಕ 2020 ರ ಡಿಸೆಂಬರ್‌ನಲ್ಲಿ ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋನ ವೈರ್‌ಲೆಸ್ ಚಂದಾದಾರರ ಸಂಖ್ಯೆ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಭಾರೀ ಕುಸಿತ ಕಂಡಿತ್ತು. ಇಂದಿಗೂ ಪಂಜಾಬಿನಲ್ಲ ರಿಲಯನ್ಸ್ ಕಂಪನಿಗೆ ಸೇರುವ ಯಾವುದೇ ಅಂಗಡಿ ಮುಂಗಟ್ಟು, ಪೆಟ್ರೋಲ್‌ ಬಂಕ್‌ ಪಂಜಾಬಿನಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಎಲ್ಲಾ ಕಡೆ ರೈತರು ಮುತ್ತಿಗೆ ಹಾಕಿದ್ದಾರೆ.


ಇದನ್ನೂ ಓದಿ: ರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...