Homeಮುಖಪುಟಡಿಸೆಂಬರ್‌ 1 ರಿಂದ ರಿಲಯನ್ಸ್ ಜಿಯೋ ಕರೆ, ಡೇಟಾ ಶುಲ್ಕ ಶೇ.21 ರಷ್ಟು ಹೆಚ್ಚಳ

ಡಿಸೆಂಬರ್‌ 1 ರಿಂದ ರಿಲಯನ್ಸ್ ಜಿಯೋ ಕರೆ, ಡೇಟಾ ಶುಲ್ಕ ಶೇ.21 ರಷ್ಟು ಹೆಚ್ಚಳ

- Advertisement -
- Advertisement -

ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ಇತ್ತಿಚೆಗೆ ಹೊಸ ದರವನ್ನು ನಿಗದಿಗೊಳಿಸಿದ ಬಳಿಕ, ಭಾರತದ ಅತಿದೊಡ್ಡ ಮೊಬೈಲ್ ಆಪರೇಟರ್ ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಕೂಡ ಮುಂದಿನ ತಿಂಗಳಿನಿಂದ ತನ್ನ ಪ್ರಿಪೇಯ್ಡ್ ದರಗಳಲ್ಲಿ ಶೇಕಡಾ 21 ರಷ್ಟು ಹೆಚ್ಚಳ ಮಾಡುವುದಾಗಿ ಘೋಷಿಸಿದೆ.

ಡಿಸೆಂಬರ್‌ 1 ರಿಂದ ಪರಿಷ್ಕೃತ ದರಗಳು ಜಾರಿಯಾಗಲಿವೆ. ಜಿಯೋ ಫೋನ್ ಯೋಜನೆ, ಅನಿಯಮಿತ ಯೋಜನೆಗಳು ಮತ್ತು ಡೇಟಾ ಯೋಜನೆಗಳನ್ನು ಶೇಕಡಾ 19.6 ರಿಂದ 21.3 ರ ವರೆಗೆ ಹೆಚ್ಚಿಸಲಾಗಿದೆ.

“ಸುಸ್ಥಿರ ಟೆಲಿಕಾಂ ಉದ್ಯಮವನ್ನು ಮತ್ತಷ್ಟು ಬಲಪಡಿಸುವ ಅದರ ಬದ್ಧತೆಗೆ ಅನುಗುಣವಾಗಿ, ಜಿಯೋ ಇಂದು ತನ್ನ ಹೊಸ ಅನಿಯಮಿತ ಯೋಜನೆಗಳನ್ನು ಪ್ರಕಟಿಸಿದೆ. ಈ ಹೊಸ ಯೋಜನೆಗಳು ಉದ್ಯಮದಲ್ಲಿ ಉತ್ತಮ ಮೌಲ್ಯವನ್ನು ಒದಗಿಸುತ್ತವೆ” ಎಂದು ರಿಲಯನ್ಸ್ ಜಿಯೋ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಹಸಿದಾಗ ತಿನ್ನುವುದು ರೊಟ್ಟಿಯನ್ನೇ ವಿನಃ ಜಿಯೋ ಸಿಮ್‌‌ನಲ್ಲ: ಸಿಮರ್ ಬಲ್ ಸಿಂಗ್

ಅನಿಯಮಿತ ಪ್ಲಾನ್ ವಿಭಾಗದಲ್ಲಿ, ಜಿಯೋ ತನ್ನ ಅಗ್ಗದ ಪ್ಲಾನ್‌ನ ಬೆಲೆಯನ್ನು 28 ದಿನಗಳ ಮಾನ್ಯತೆಯೊಂದಿಗೆ ರೂ.129 ರಿಂದ ರೂ. 155 ಕ್ಕೆ ಹೆಚ್ಚಿಸಿದೆ. 84 ದಿನಗಳ ವ್ಯಾಲಿಡಿಟಿಯ ಪ್ರಸ್ತುತ 329 ಇದ್ದು, ಅದು 395 ರೂಪಾಯಿಗೆ ಏರಿಕೆಯಾಗಲಿದೆ. 84 ದಿನಗಳ ವ್ಯಾಲಿಡಿಟಿಯೊಂದಿಗೆ ದೈನಂದಿನ 1.5 GB ದೈನಂದಿನ ಡೇಟಾ ಬಳಕೆಯನ್ನು ನೀಡುವ ಪ್ಲ್ಯಾನ್ 555 ಇದದ್ದು, 666 ರೂಪಾಯಿಗಳಿಗೆ ಏರಿಕೆಯಾಗಲಿದೆ.

ಇನ್ನೂ 28 ದಿನಗಳ ವ್ಯಾಲಿಡಿಟಿ ಯೋಜನೆಯು ಜಿಯೋಫೋನ್ ಬಳಕೆದಾರರಿಗೆ ರೂ 91ಗೆ ಏರಿಕೆಯಾಗಲಿದೆ. ದರಗಳ ಹೆಚ್ಚಳದ ಹೊರತಾಗಿಯೂ, ಜಿಯೋ ಪ್ಲಾನ್‌ಗಳ ಬೆಲೆಯನ್ನು ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾಗಳಿಗಿಂತ ಕಡಿಮೆ ಇರಿಸಿದ್ದು, ಉದ್ಯಮದಲ್ಲಿ ಬೆಲೆ ಸ್ಪರ್ಧೆಯನ್ನು ಮುಂದುವರೆಸುವ ನಿರೀಕ್ಷೆಯಿದೆ.

ವಿವಾದಿತ ಕೃಷಿ ಕಾನೂನುಗಳು ಜಾರಿಯಾದಾಗ ರಿಲಯನ್ಸ್ ಕಂಪನಿಗೆ ಕಾರ್ಪೋರೇಟ್ ಫಾರ್ಮಿಂಗ್ ಮತ್ತು ಕಂಟ್ರ್ಯಾಕ್ಟ್ ಫಾರ್ಮಿಂಗ್ ಮಾಡಲು ಅನುಕೂಲವಾಗುವ ರೀತಿಯಲ್ಲಿ ಹೊಸ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ರೈತ ಸಂಘಟನೆಗಳು ಆರೋಪ ಮಾಡಿದ್ದವು. ಇದರಿಂದ ಬಾಯ್ಕಾಟ್ ಜಿಯೋ ಅಭೀಯಾನ ಆರಂಭವಾಗಿತ್ತು. ಬಳಿಕ 2020 ರ ಡಿಸೆಂಬರ್‌ನಲ್ಲಿ ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋನ ವೈರ್‌ಲೆಸ್ ಚಂದಾದಾರರ ಸಂಖ್ಯೆ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಭಾರೀ ಕುಸಿತ ಕಂಡಿತ್ತು. ಇಂದಿಗೂ ಪಂಜಾಬಿನಲ್ಲ ರಿಲಯನ್ಸ್ ಕಂಪನಿಗೆ ಸೇರುವ ಯಾವುದೇ ಅಂಗಡಿ ಮುಂಗಟ್ಟು, ಪೆಟ್ರೋಲ್‌ ಬಂಕ್‌ ಪಂಜಾಬಿನಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಎಲ್ಲಾ ಕಡೆ ರೈತರು ಮುತ್ತಿಗೆ ಹಾಕಿದ್ದಾರೆ.


ಇದನ್ನೂ ಓದಿ: ರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...