Homeಮುಖಪುಟರಿಲಯನ್ಸ್ ಜಿಯೋಗೆ 10 ವರ್ಷಗಳಿಂದ ಶುಲ್ಕ ವಿಧಿಸದ ಬಿಎಸ್‌ಎನ್‌ಎಲ್; ಸರ್ಕಾರಿ ಬೊಕ್ಕಸಕ್ಕೆ ₹2000 ಕೋಟಿ ನಷ್ಟ!

ರಿಲಯನ್ಸ್ ಜಿಯೋಗೆ 10 ವರ್ಷಗಳಿಂದ ಶುಲ್ಕ ವಿಧಿಸದ ಬಿಎಸ್‌ಎನ್‌ಎಲ್; ಸರ್ಕಾರಿ ಬೊಕ್ಕಸಕ್ಕೆ ₹2000 ಕೋಟಿ ನಷ್ಟ!

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಮುಕೇಶ್ ಅಂಬಾನಿ ಅವರ ರಿಲಾಯನ್ಸ್‌ ಜಿಯೋ ಕೇಂದ್ರ ಸರ್ಕಾರದ ಸ್ವಾಮ್ಯದ ಬಿಎಸ್‌ಎನ್‌ಎಲ್‌ನ ಮೂಲ ಸೌಕರ್ಯ ಬಳಸಿದ್ದಕ್ಕಾಗಿ 2014ರಿಂದ 10 ವರ್ಷಗಳ ಕಾಲ ಯಾವುದೇ ಶುಲ್ಕ ವಿಧಿಸದ ಕಾರಣ ಸರ್ಕಾರಕ್ಕೆ 1,757.56 ಕೋಟಿ ರೂಪಾಯಿಗಳು ನಷ್ಟ ಉಂಟಾಗಿದೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಮಂಗಳವಾರ ತಿಳಿಸಿದ್ದಾರೆ. ರಿಲಯನ್ಸ್ ಜಿಯೋಗೆ

ಟೆಲಿಕಾಂ ಮೂಲಸೌಕರ್ಯ ಪೂರೈಕೆದಾರರಿಗೆ (ಟಿಐಪಿ) ಪಾವತಿಸಿದ ಆದಾಯ ಪಾಲಿನಿಂದ ಪರವಾನಗಿ ಶುಲ್ಕದ ಪಾಲನ್ನು ಕಡಿತಗೊಳಿಸಲು ವಿಫಲವಾದ ಕಾರಣ ಬಿಎಸ್‌ಎನ್‌ಎಲ್ ₹38.36 ಕೋಟಿ ನಷ್ಟ ಅನುಭವಿಸಿದೆ ಎಂದು ಸಿಎಜಿ ಹೇಳಿಕೆಯಲ್ಲಿ ತಿಳಿಸಿದೆ. ರಿಲಯನ್ಸ್ ಜಿಯೋಗೆ

“ಬಿಎಸ್‌ಎನ್‌ಎಲ್ ಮೆಸರ್ಸ್. ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ (ಆರ್‌ಜೆಐಎಲ್) ಜೊತೆಗಿನ ಮಾಸ್ಟರ್ ಸರ್ವಿಸ್ ಒಪ್ಪಂದವನ್ನು (ಎಂಎಸ್‌ಎ) ಜಾರಿಗೊಳಿಸಲು ವಿಫಲವಾಗಿದೆ. ಜೊತೆಗೆ ಬಿಎಸ್‌ಎನ್‌ಎಲ್‌ನ ಹಂಚಿಕೆಯ ಮೂಲಸೌಕರ್ಯದಲ್ಲಿ ಬಳಸಲಾದ ಹೆಚ್ಚುವರಿ ತಂತ್ರಜ್ಞಾನಕ್ಕೆ ಬಿಲ್ ಮಾಡದ ಪರಿಣಾಮವಾಗಿ ಮೇ 2014 ರಿಂದ ಮಾರ್ಚ್ 2024 ರ ನಡುವೆ ಸರ್ಕಾರಿ ಖಜಾನೆಗೆ ₹1,757.76 ಕೋಟಿ ನಷ್ಟ ಮತ್ತು ದಂಡದ ಬಡ್ಡಿ ಉಂಟಾಗಿದೆ” ಎಂದು ಸಿಎಜಿ ತಿಳಿಸಿದೆ.

ಬಿಎಸ್‌ಎನ್‌ಎಲ್‌ನಿಂದ ನಿಷ್ಕ್ರಿಯ ಮೂಲಸೌಕರ್ಯ ಹಂಚಿಕೆ ಶುಲ್ಕದ ಬಿಲ್ಲಿಂಗ್‌ನಲ್ಲಿ ಕಡಿಮೆ ಮೊತ್ತವನ್ನು ಪಾವತಿಸಲಾಗಿದೆ ಎಂದು ಸಿಎಜಿ ಹೇಳಿದೆ.

“ಬಿಎಸ್‌ಎನ್‌ಎಲ್ ಮತ್ತು ರಿಲಯನ್ಸ್‌ ನಡುವಿನ ಒಪ್ಪಂದದಲ್ಲಿ ನಿಗದಿಪಡಿಸಿದ ನಿಯಮಗಳು ಮತ್ತು ಷರತ್ತುಗಳನ್ನು ಪಾಲಿಸದಿರುವುದು, ಎಸ್ಕಲೇಷನ್ ಷರತ್ತನ್ನು ಅನ್ವಯಿಸದ ಕಾರಣ ಮೂಲಸೌಕರ್ಯ ಹಂಚಿಕೆ ಶುಲ್ಕಗಳಿಗೆ ಸಂಬಂಧಿಸಿದಂತೆ 29 ಕೋಟಿ ರೂ.ಗಳ ಆದಾಯ ನಷ್ಟ (ಜಿಎಸ್‌ಟಿ ಸೇರಿದಂತೆ) ಉಂಟಾಗಿದೆ” ಎಂದು ಹೇಳಿಕೆ ತಿಳಿಸಿದೆ.

ಸಿಎಜಿಯ ಈ ಸಂಶೋಧನೆಗಳು ಬಿಎಸ್‌ಎನ್‌ಎಲ್‌ನ ಹಣಕಾಸು ನಿರ್ವಹಣೆ ಮತ್ತು ಒಪ್ಪಂದ ಜಾರಿಯಲ್ಲಿ ಗಂಭೀರ ಲೋಪಗಳನ್ನು ಬಹಿರಂಗವಾಗಿದೆ. ಜೊತೆಗೆ ಇದು ಸರ್ಕಾರಿ ಸ್ವಾಮ್ಯದ ಟೆಲಿಕಾಂ ವಲಯದಲ್ಲಿ ಆದಾಯ ಸೋರಿಕೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಅದಾಗ್ಯೂ, ಸಿಎಜಿಯ ಅವಲೋಕನಗಳಿಗೆ ಕೇಂದ್ರ ಸರ್ಕಾರ ಇನ್ನೂ ಪ್ರತಿಕ್ರಿಯಿಸಿಲ್ಲ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...