Homeಮುಖಪುಟಮತ್ತೇ ಏಷ್ಯಾದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಅಧ್ಯಕ್ಷ ಮುಖೇಶ್‌ ಅಂಬಾನಿ

ಮತ್ತೇ ಏಷ್ಯಾದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಅಧ್ಯಕ್ಷ ಮುಖೇಶ್‌ ಅಂಬಾನಿ

ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಭಾರತದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 24 ನೇ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಅಮೆರಿಕಾ ಮತ್ತು ಚೀನಾ ನಂತರ ಭಾರತವು ವಿಶ್ವದಲ್ಲೇ ಮೂರನೇ ಅತಿ ಹೆಚ್ಚು ಕೋಟ್ಯಾಧಿಪತಿಗಳನ್ನು ಹೊಂದಿರುವ ದೇಶವಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಸ್ಥಾನವನ್ನು ಪುನಃ ಭದ್ರಪಡಿಸಿಕೊಂಡಿದ್ದಾರೆ ಎಂದು ಪ್ರತಿಷ್ಠಿತ ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ಹೊಸ ಪಟ್ಟಿಯು ತಿಳಿಸಿದೆ. ಒಂದು ವರ್ಷದ ಹಿಂದೆ ಚೀನಾ ಉದ್ಯಮಿ ಜ್ಯಾಕ್ ಮಾ ಅವರು ಈ ಸ್ಥಾನಕ್ಕೆ ಏರಿದ್ದರು.

ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಅಂಬಾನಿ ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದ್ದಾರೆ. 84.5 ಬಿಲಿಯನ್ ಅಮೆರಿಕನ್ ಡಾಲರ್ ಆಸ್ತಿಯನ್ನು ಹೊಂದಿರುವ ಏಷ್ಯಾದ ಶ್ರೀಮಂತ ವ್ಯಕ್ತಿ ಎಂಬ ತಮ್ಮ ಸ್ಥಾನವನ್ನು ಪುನಃ ಪಡೆದುಕೊಂಡಿದ್ದಾರೆ.

“ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದ್ದಾರೆ. ಅವರ ಆಸ್ತಿ ಅಂದಾಜು 84.5 ಬಿಲಿಯನ್ ಡಾಲರ್‌ಗಳಾಗಿದ್ದು, ಅವರು ವರ್ಷದ ಹಿಂದೆ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಚೀನಾದ ಜ್ಯಾಕ್ ಮಾ ಅವರನ್ನು ಹಿಂದಿಕ್ಕಿದ್ದಾರೆ” ಎಂದು ಫೋರ್ಬ್ಸ್ ಹೇಳಿದೆ.

ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಭಾರತದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 24 ನೇ ಸ್ಥಾನದಲ್ಲಿದ್ದಾರೆ.

ಫೋರ್ಬ್ಸ್‌ನ 35 ನೇ ವಾರ್ಷಿಕ ಪಟ್ಟಿಯಲ್ಲಿ ಅಮೆಜಾನ್ ಸಿಇಒ ಮತ್ತು ಸ್ಥಾಪಕ ಜೆಫ್ ಬೆಜೋಸ್ ಸತತ ನಾಲ್ಕನೇ ವರ್ಷವು ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅಮೆಜಾನ್ ತನ್ನ ಷೇರುಗಳನ್ನು ಹೆಚ್ಚಿಸಿದ ಪರಿಣಾಮವಾಗಿ ಅವರ ಆಸ್ತಿಯು 177 ಬಿಲಿಯನ್ ಅಮೇರಿಕನ್‌ ಡಾಲರ್ ಆಗಿದೆ. ಕಳೆದ ಒಂದು ವರ್ಷದಲ್ಲಿ ಅವರ ಆಸ್ತಿಯು 64 ಬಿಲಿಯನ್ ಅಮೆರಿಕನ್ ಡಾಲರ್‌‌ಷ್ಟು ಹೆಚ್ಚಾಗಿದೆ ಎಂದು ಫೋರ್ಬ್ಸ್ ಹೇಳಿದೆ.

ಎರಡನೇ ಸ್ಥಾನದಲ್ಲಿ ಸ್ಪೇಸ್‌ಎಕ್ಸ್ ಸಂಸ್ಥಾಪಕ ಎಲನ್ ಮಸ್ಕ್ ಅವರಿದ್ದು, ಅವರ ಆಸ್ತಿಯು 151 ಬಿಲಿಯನ್ ಡಾಲರ್‌ಗಳಿಗೆ ಏರಿದೆ. ಕಳೆದ ವರ್ಷದಿಂದ ಈ ವರ್ಷಕ್ಕೆ ಅವರ ಆಸ್ತಿಯು 126.4 ಬಿಲಿಯನ್ ಡಾಲರ್‌‌ಗಳಷ್ಟು ಹೆಚ್ಚಾಗಿದೆ. ಕಳೆದ ವರ್ಷ ಅವರು ಈ ಪಟ್ಟಿಯಲ್ಲಿ 31 ನೇ ಸ್ಥಾನದಲ್ಲಿದ್ದು, 24.6 ಬಿಲಿಯನ್ ಅಮೆರಿಕನ್ ಡಾಲರ್‌ ಆಸ್ತಿಯನ್ನು ಹೊಂದಿದ್ದರು.

ಇದನ್ನೂ ಓದಿ: ಕೊರೊನಾ: ಬೆಂಗಳೂರು ವಿವಿ 15 ದಿನ ರಜೆ; ಸಾರಿಗೆ ಮುಷ್ಕರ ಹಿನ್ನಲೆ ಪರೀಕ್ಷೆ ಮುಂದೂಡಿಕೆ

ತನ್ನ ಎಲೆಕ್ಟ್ರಿಕ್‌ ವಾಹನಗಳ ಕಂಪೆನಿಯಾದ ಟೆಸ್ಲಾ ಷೇರುಗಳಲ್ಲಿ 705% ರಷ್ಟು ಏರಿಕೆಯಾಗಿರುವುದೇ ಎಲನ್ ಮಸ್ಕ್ ಅವರ ಈ ರೀತಿಯ ಬೆಳವಣಿಗೆಗೆ ಮುಖ್ಯ ಕಾರಣ ಎಂದು ಫೋರ್ಬ್ಸ್‌ ಹೇಳಿದೆ.

ವಿಶ್ವದ ಅತಿದೊಡ್ಡ ಲಸಿಕೆ ತಯಾರಕರಾದ ಪೂನವಾಲ್ಲಾ ಸಮೂಹದ ಅಧ್ಯಕ್ಷ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಂಸ್ಥಾಪಕ ಸೈರಸ್ ಪೂನವಾಲ್ಲಾ ಅವರು ಫೋರ್ಬ್ಸ್ ಪಟ್ಟಿಯಲ್ಲಿ 169 ನೇ ಸ್ಥಾನದಲ್ಲಿದ್ದು, ಅವರ ಆಸ್ತಿಯು 12.7 ಬಿಲಿಯನ್ ಡಾಲರ್ ಆಗಿದೆ. ಭಾರತೀಯ ಕೋಟ್ಯಾಧಿಪತಿಗಳ ಪಟ್ಟಿಯಲ್ಲಿ ಪೂನವಾಲ್ಲಾ ಏಳನೇ ಸ್ಥಾನದಲ್ಲಿದ್ದಾರೆ.

ಎಚ್‌ಸಿಎಲ್ ಟೆಕ್ನಾಲಜೀಸ್ ಸಂಸ್ಥಾಪಕ ಶಿವ ನಾಡರ್, ಭಾರತದ ಮೂರನೇ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕವಾಗಿ 71 ನೇ ಸ್ಥಾನದಲ್ಲಿದ್ದಾರೆ.

ಭಾರತದ ಅಗ್ರ 10 ಕೋಟ್ಯಾಧಿಪತಿಗಳಲ್ಲಿ ಡಿಮಾರ್ಟ್ ಸಂಸ್ಥಾಪಕ ರಾಧಾಕಿಶನ್ ದಮಾನಿ, ಕೊಟಕ್ ಮಹೀಂದ್ರಾ ಬ್ಯಾಂಕ್ ಸಿಇಒ ಉದಯ್ ಕೊಟಕ್, ಆರ್ಸೆಲರ್‌‌ಮಿತ್ತರ್‌ ಅಧ್ಯಕ್ಷ ಲಕ್ಷ್ಮಿ ಮಿತ್ತಲ್, ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ, ಸನ್ ಫಾರ್ಮಾಸ್ಯುಟಿಕಲ್ಸ್ ಸಂಸ್ಥಾಪಕ ದಿಲೀಪ್ ಶಂಘ್ವಿ ಮತ್ತು ಭಾರ್ತಿ ಸಂಸ್ಥಾಪಕ ಅಧ್ಯಕ್ಷ ಸುನಿಲ್ ಮಿತ್ತಲ್ ಸೇರಿದ್ದಾರೆ.


 

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ: ಪಟ್ಟು ಬಿಡದ ಸರ್ಕಾರ, ರೋಡಿಗಿಳಿದ ಖಾಸಗಿ ಬಸ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...