Homeಮುಖಪುಟಮತ್ತೇ ಏಷ್ಯಾದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಅಧ್ಯಕ್ಷ ಮುಖೇಶ್‌ ಅಂಬಾನಿ

ಮತ್ತೇ ಏಷ್ಯಾದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಅಧ್ಯಕ್ಷ ಮುಖೇಶ್‌ ಅಂಬಾನಿ

ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಭಾರತದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 24 ನೇ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಅಮೆರಿಕಾ ಮತ್ತು ಚೀನಾ ನಂತರ ಭಾರತವು ವಿಶ್ವದಲ್ಲೇ ಮೂರನೇ ಅತಿ ಹೆಚ್ಚು ಕೋಟ್ಯಾಧಿಪತಿಗಳನ್ನು ಹೊಂದಿರುವ ದೇಶವಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಸ್ಥಾನವನ್ನು ಪುನಃ ಭದ್ರಪಡಿಸಿಕೊಂಡಿದ್ದಾರೆ ಎಂದು ಪ್ರತಿಷ್ಠಿತ ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ಹೊಸ ಪಟ್ಟಿಯು ತಿಳಿಸಿದೆ. ಒಂದು ವರ್ಷದ ಹಿಂದೆ ಚೀನಾ ಉದ್ಯಮಿ ಜ್ಯಾಕ್ ಮಾ ಅವರು ಈ ಸ್ಥಾನಕ್ಕೆ ಏರಿದ್ದರು.

ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಅಂಬಾನಿ ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದ್ದಾರೆ. 84.5 ಬಿಲಿಯನ್ ಅಮೆರಿಕನ್ ಡಾಲರ್ ಆಸ್ತಿಯನ್ನು ಹೊಂದಿರುವ ಏಷ್ಯಾದ ಶ್ರೀಮಂತ ವ್ಯಕ್ತಿ ಎಂಬ ತಮ್ಮ ಸ್ಥಾನವನ್ನು ಪುನಃ ಪಡೆದುಕೊಂಡಿದ್ದಾರೆ.

“ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದ್ದಾರೆ. ಅವರ ಆಸ್ತಿ ಅಂದಾಜು 84.5 ಬಿಲಿಯನ್ ಡಾಲರ್‌ಗಳಾಗಿದ್ದು, ಅವರು ವರ್ಷದ ಹಿಂದೆ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಚೀನಾದ ಜ್ಯಾಕ್ ಮಾ ಅವರನ್ನು ಹಿಂದಿಕ್ಕಿದ್ದಾರೆ” ಎಂದು ಫೋರ್ಬ್ಸ್ ಹೇಳಿದೆ.

ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಭಾರತದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 24 ನೇ ಸ್ಥಾನದಲ್ಲಿದ್ದಾರೆ.

ಫೋರ್ಬ್ಸ್‌ನ 35 ನೇ ವಾರ್ಷಿಕ ಪಟ್ಟಿಯಲ್ಲಿ ಅಮೆಜಾನ್ ಸಿಇಒ ಮತ್ತು ಸ್ಥಾಪಕ ಜೆಫ್ ಬೆಜೋಸ್ ಸತತ ನಾಲ್ಕನೇ ವರ್ಷವು ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅಮೆಜಾನ್ ತನ್ನ ಷೇರುಗಳನ್ನು ಹೆಚ್ಚಿಸಿದ ಪರಿಣಾಮವಾಗಿ ಅವರ ಆಸ್ತಿಯು 177 ಬಿಲಿಯನ್ ಅಮೇರಿಕನ್‌ ಡಾಲರ್ ಆಗಿದೆ. ಕಳೆದ ಒಂದು ವರ್ಷದಲ್ಲಿ ಅವರ ಆಸ್ತಿಯು 64 ಬಿಲಿಯನ್ ಅಮೆರಿಕನ್ ಡಾಲರ್‌‌ಷ್ಟು ಹೆಚ್ಚಾಗಿದೆ ಎಂದು ಫೋರ್ಬ್ಸ್ ಹೇಳಿದೆ.

ಎರಡನೇ ಸ್ಥಾನದಲ್ಲಿ ಸ್ಪೇಸ್‌ಎಕ್ಸ್ ಸಂಸ್ಥಾಪಕ ಎಲನ್ ಮಸ್ಕ್ ಅವರಿದ್ದು, ಅವರ ಆಸ್ತಿಯು 151 ಬಿಲಿಯನ್ ಡಾಲರ್‌ಗಳಿಗೆ ಏರಿದೆ. ಕಳೆದ ವರ್ಷದಿಂದ ಈ ವರ್ಷಕ್ಕೆ ಅವರ ಆಸ್ತಿಯು 126.4 ಬಿಲಿಯನ್ ಡಾಲರ್‌‌ಗಳಷ್ಟು ಹೆಚ್ಚಾಗಿದೆ. ಕಳೆದ ವರ್ಷ ಅವರು ಈ ಪಟ್ಟಿಯಲ್ಲಿ 31 ನೇ ಸ್ಥಾನದಲ್ಲಿದ್ದು, 24.6 ಬಿಲಿಯನ್ ಅಮೆರಿಕನ್ ಡಾಲರ್‌ ಆಸ್ತಿಯನ್ನು ಹೊಂದಿದ್ದರು.

ಇದನ್ನೂ ಓದಿ: ಕೊರೊನಾ: ಬೆಂಗಳೂರು ವಿವಿ 15 ದಿನ ರಜೆ; ಸಾರಿಗೆ ಮುಷ್ಕರ ಹಿನ್ನಲೆ ಪರೀಕ್ಷೆ ಮುಂದೂಡಿಕೆ

ತನ್ನ ಎಲೆಕ್ಟ್ರಿಕ್‌ ವಾಹನಗಳ ಕಂಪೆನಿಯಾದ ಟೆಸ್ಲಾ ಷೇರುಗಳಲ್ಲಿ 705% ರಷ್ಟು ಏರಿಕೆಯಾಗಿರುವುದೇ ಎಲನ್ ಮಸ್ಕ್ ಅವರ ಈ ರೀತಿಯ ಬೆಳವಣಿಗೆಗೆ ಮುಖ್ಯ ಕಾರಣ ಎಂದು ಫೋರ್ಬ್ಸ್‌ ಹೇಳಿದೆ.

ವಿಶ್ವದ ಅತಿದೊಡ್ಡ ಲಸಿಕೆ ತಯಾರಕರಾದ ಪೂನವಾಲ್ಲಾ ಸಮೂಹದ ಅಧ್ಯಕ್ಷ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಂಸ್ಥಾಪಕ ಸೈರಸ್ ಪೂನವಾಲ್ಲಾ ಅವರು ಫೋರ್ಬ್ಸ್ ಪಟ್ಟಿಯಲ್ಲಿ 169 ನೇ ಸ್ಥಾನದಲ್ಲಿದ್ದು, ಅವರ ಆಸ್ತಿಯು 12.7 ಬಿಲಿಯನ್ ಡಾಲರ್ ಆಗಿದೆ. ಭಾರತೀಯ ಕೋಟ್ಯಾಧಿಪತಿಗಳ ಪಟ್ಟಿಯಲ್ಲಿ ಪೂನವಾಲ್ಲಾ ಏಳನೇ ಸ್ಥಾನದಲ್ಲಿದ್ದಾರೆ.

ಎಚ್‌ಸಿಎಲ್ ಟೆಕ್ನಾಲಜೀಸ್ ಸಂಸ್ಥಾಪಕ ಶಿವ ನಾಡರ್, ಭಾರತದ ಮೂರನೇ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕವಾಗಿ 71 ನೇ ಸ್ಥಾನದಲ್ಲಿದ್ದಾರೆ.

ಭಾರತದ ಅಗ್ರ 10 ಕೋಟ್ಯಾಧಿಪತಿಗಳಲ್ಲಿ ಡಿಮಾರ್ಟ್ ಸಂಸ್ಥಾಪಕ ರಾಧಾಕಿಶನ್ ದಮಾನಿ, ಕೊಟಕ್ ಮಹೀಂದ್ರಾ ಬ್ಯಾಂಕ್ ಸಿಇಒ ಉದಯ್ ಕೊಟಕ್, ಆರ್ಸೆಲರ್‌‌ಮಿತ್ತರ್‌ ಅಧ್ಯಕ್ಷ ಲಕ್ಷ್ಮಿ ಮಿತ್ತಲ್, ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ, ಸನ್ ಫಾರ್ಮಾಸ್ಯುಟಿಕಲ್ಸ್ ಸಂಸ್ಥಾಪಕ ದಿಲೀಪ್ ಶಂಘ್ವಿ ಮತ್ತು ಭಾರ್ತಿ ಸಂಸ್ಥಾಪಕ ಅಧ್ಯಕ್ಷ ಸುನಿಲ್ ಮಿತ್ತಲ್ ಸೇರಿದ್ದಾರೆ.


 

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ: ಪಟ್ಟು ಬಿಡದ ಸರ್ಕಾರ, ರೋಡಿಗಿಳಿದ ಖಾಸಗಿ ಬಸ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...