Homeಮುಖಪುಟಮತ್ತೇ ಏಷ್ಯಾದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಅಧ್ಯಕ್ಷ ಮುಖೇಶ್‌ ಅಂಬಾನಿ

ಮತ್ತೇ ಏಷ್ಯಾದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಅಧ್ಯಕ್ಷ ಮುಖೇಶ್‌ ಅಂಬಾನಿ

ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಭಾರತದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 24 ನೇ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಅಮೆರಿಕಾ ಮತ್ತು ಚೀನಾ ನಂತರ ಭಾರತವು ವಿಶ್ವದಲ್ಲೇ ಮೂರನೇ ಅತಿ ಹೆಚ್ಚು ಕೋಟ್ಯಾಧಿಪತಿಗಳನ್ನು ಹೊಂದಿರುವ ದೇಶವಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಸ್ಥಾನವನ್ನು ಪುನಃ ಭದ್ರಪಡಿಸಿಕೊಂಡಿದ್ದಾರೆ ಎಂದು ಪ್ರತಿಷ್ಠಿತ ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ಹೊಸ ಪಟ್ಟಿಯು ತಿಳಿಸಿದೆ. ಒಂದು ವರ್ಷದ ಹಿಂದೆ ಚೀನಾ ಉದ್ಯಮಿ ಜ್ಯಾಕ್ ಮಾ ಅವರು ಈ ಸ್ಥಾನಕ್ಕೆ ಏರಿದ್ದರು.

ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಅಂಬಾನಿ ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದ್ದಾರೆ. 84.5 ಬಿಲಿಯನ್ ಅಮೆರಿಕನ್ ಡಾಲರ್ ಆಸ್ತಿಯನ್ನು ಹೊಂದಿರುವ ಏಷ್ಯಾದ ಶ್ರೀಮಂತ ವ್ಯಕ್ತಿ ಎಂಬ ತಮ್ಮ ಸ್ಥಾನವನ್ನು ಪುನಃ ಪಡೆದುಕೊಂಡಿದ್ದಾರೆ.

“ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದ್ದಾರೆ. ಅವರ ಆಸ್ತಿ ಅಂದಾಜು 84.5 ಬಿಲಿಯನ್ ಡಾಲರ್‌ಗಳಾಗಿದ್ದು, ಅವರು ವರ್ಷದ ಹಿಂದೆ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಚೀನಾದ ಜ್ಯಾಕ್ ಮಾ ಅವರನ್ನು ಹಿಂದಿಕ್ಕಿದ್ದಾರೆ” ಎಂದು ಫೋರ್ಬ್ಸ್ ಹೇಳಿದೆ.

ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಭಾರತದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ 24 ನೇ ಸ್ಥಾನದಲ್ಲಿದ್ದಾರೆ.

ಫೋರ್ಬ್ಸ್‌ನ 35 ನೇ ವಾರ್ಷಿಕ ಪಟ್ಟಿಯಲ್ಲಿ ಅಮೆಜಾನ್ ಸಿಇಒ ಮತ್ತು ಸ್ಥಾಪಕ ಜೆಫ್ ಬೆಜೋಸ್ ಸತತ ನಾಲ್ಕನೇ ವರ್ಷವು ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅಮೆಜಾನ್ ತನ್ನ ಷೇರುಗಳನ್ನು ಹೆಚ್ಚಿಸಿದ ಪರಿಣಾಮವಾಗಿ ಅವರ ಆಸ್ತಿಯು 177 ಬಿಲಿಯನ್ ಅಮೇರಿಕನ್‌ ಡಾಲರ್ ಆಗಿದೆ. ಕಳೆದ ಒಂದು ವರ್ಷದಲ್ಲಿ ಅವರ ಆಸ್ತಿಯು 64 ಬಿಲಿಯನ್ ಅಮೆರಿಕನ್ ಡಾಲರ್‌‌ಷ್ಟು ಹೆಚ್ಚಾಗಿದೆ ಎಂದು ಫೋರ್ಬ್ಸ್ ಹೇಳಿದೆ.

ಎರಡನೇ ಸ್ಥಾನದಲ್ಲಿ ಸ್ಪೇಸ್‌ಎಕ್ಸ್ ಸಂಸ್ಥಾಪಕ ಎಲನ್ ಮಸ್ಕ್ ಅವರಿದ್ದು, ಅವರ ಆಸ್ತಿಯು 151 ಬಿಲಿಯನ್ ಡಾಲರ್‌ಗಳಿಗೆ ಏರಿದೆ. ಕಳೆದ ವರ್ಷದಿಂದ ಈ ವರ್ಷಕ್ಕೆ ಅವರ ಆಸ್ತಿಯು 126.4 ಬಿಲಿಯನ್ ಡಾಲರ್‌‌ಗಳಷ್ಟು ಹೆಚ್ಚಾಗಿದೆ. ಕಳೆದ ವರ್ಷ ಅವರು ಈ ಪಟ್ಟಿಯಲ್ಲಿ 31 ನೇ ಸ್ಥಾನದಲ್ಲಿದ್ದು, 24.6 ಬಿಲಿಯನ್ ಅಮೆರಿಕನ್ ಡಾಲರ್‌ ಆಸ್ತಿಯನ್ನು ಹೊಂದಿದ್ದರು.

ಇದನ್ನೂ ಓದಿ: ಕೊರೊನಾ: ಬೆಂಗಳೂರು ವಿವಿ 15 ದಿನ ರಜೆ; ಸಾರಿಗೆ ಮುಷ್ಕರ ಹಿನ್ನಲೆ ಪರೀಕ್ಷೆ ಮುಂದೂಡಿಕೆ

ತನ್ನ ಎಲೆಕ್ಟ್ರಿಕ್‌ ವಾಹನಗಳ ಕಂಪೆನಿಯಾದ ಟೆಸ್ಲಾ ಷೇರುಗಳಲ್ಲಿ 705% ರಷ್ಟು ಏರಿಕೆಯಾಗಿರುವುದೇ ಎಲನ್ ಮಸ್ಕ್ ಅವರ ಈ ರೀತಿಯ ಬೆಳವಣಿಗೆಗೆ ಮುಖ್ಯ ಕಾರಣ ಎಂದು ಫೋರ್ಬ್ಸ್‌ ಹೇಳಿದೆ.

ವಿಶ್ವದ ಅತಿದೊಡ್ಡ ಲಸಿಕೆ ತಯಾರಕರಾದ ಪೂನವಾಲ್ಲಾ ಸಮೂಹದ ಅಧ್ಯಕ್ಷ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಂಸ್ಥಾಪಕ ಸೈರಸ್ ಪೂನವಾಲ್ಲಾ ಅವರು ಫೋರ್ಬ್ಸ್ ಪಟ್ಟಿಯಲ್ಲಿ 169 ನೇ ಸ್ಥಾನದಲ್ಲಿದ್ದು, ಅವರ ಆಸ್ತಿಯು 12.7 ಬಿಲಿಯನ್ ಡಾಲರ್ ಆಗಿದೆ. ಭಾರತೀಯ ಕೋಟ್ಯಾಧಿಪತಿಗಳ ಪಟ್ಟಿಯಲ್ಲಿ ಪೂನವಾಲ್ಲಾ ಏಳನೇ ಸ್ಥಾನದಲ್ಲಿದ್ದಾರೆ.

ಎಚ್‌ಸಿಎಲ್ ಟೆಕ್ನಾಲಜೀಸ್ ಸಂಸ್ಥಾಪಕ ಶಿವ ನಾಡರ್, ಭಾರತದ ಮೂರನೇ ಶ್ರೀಮಂತ ವ್ಯಕ್ತಿಯಾಗಿದ್ದು, ಜಾಗತಿಕವಾಗಿ 71 ನೇ ಸ್ಥಾನದಲ್ಲಿದ್ದಾರೆ.

ಭಾರತದ ಅಗ್ರ 10 ಕೋಟ್ಯಾಧಿಪತಿಗಳಲ್ಲಿ ಡಿಮಾರ್ಟ್ ಸಂಸ್ಥಾಪಕ ರಾಧಾಕಿಶನ್ ದಮಾನಿ, ಕೊಟಕ್ ಮಹೀಂದ್ರಾ ಬ್ಯಾಂಕ್ ಸಿಇಒ ಉದಯ್ ಕೊಟಕ್, ಆರ್ಸೆಲರ್‌‌ಮಿತ್ತರ್‌ ಅಧ್ಯಕ್ಷ ಲಕ್ಷ್ಮಿ ಮಿತ್ತಲ್, ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ, ಸನ್ ಫಾರ್ಮಾಸ್ಯುಟಿಕಲ್ಸ್ ಸಂಸ್ಥಾಪಕ ದಿಲೀಪ್ ಶಂಘ್ವಿ ಮತ್ತು ಭಾರ್ತಿ ಸಂಸ್ಥಾಪಕ ಅಧ್ಯಕ್ಷ ಸುನಿಲ್ ಮಿತ್ತಲ್ ಸೇರಿದ್ದಾರೆ.


 

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ: ಪಟ್ಟು ಬಿಡದ ಸರ್ಕಾರ, ರೋಡಿಗಿಳಿದ ಖಾಸಗಿ ಬಸ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...