Homeಚಳವಳಿಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಮೂರು ಕೃಷಿ ಕಾನೂನುಗಳ ಹಿಂದೆ ರಿಲಾಯನ್ಸ್ ಕಂಪೆನಿಯಿದೆ ಎಂದು ಆಕ್ರೋಶಗೊಂಡಿದ್ದ ಪಂಜಾಬ್ ಮತ್ತು ಹರಿಯಾಣದ ರೈತರು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ್ದರು. ಇದೀಗ ಕಂಪೆನಿಯು ಗುತ್ತಿಗೆ ಕೃಷಿಯಲ್ಲಿ ತನಗೆ ಆಸಕ್ತಿಯಿಲ್ಲ, ಆದ್ದರಿಂದ ತನಗೂ ಈ ಕಾನೂನಿಗೂ ಸಂಬಂಧವಿಲ್ಲ. ಆದ್ದರಿಂದ ತನ್ನ ಆಸ್ತಿ ಮತ್ತು ಸೇವೆಗಳನ್ನು ಕಾಪಾಡಲು ಸರ್ಕಾರದ ಹಸ್ತಕ್ಷೇಪ ಮಾಡುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದೆ.

ಹರಿಯಾಣ ಮತ್ತು ಪಂಜಾಬ್‌ನ ರೈತರು ರಿಲಯನ್ಸ್ ಕಂಪೆನಿಗೆ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವುದು ಹಾಗೂ ಕಂಪೆನಿಯ ಜಿಯೋ ಟವರ್‌ಗಳ ಕೇಬಲ್‌ಗಳನ್ನು ಕತ್ತರಿಸುವುದು ಸೇರಿದಂತೆ ಕಂಪೆನಿಯ ಮೂಲಸೌಕರ್ಯಕ್ಕೆ ಹಾನಿ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಅಲ್ಲದೇ ಕಳೆದೆರಡು ತಿಂಗಳಿಂದ ಜಿಯೋ ಸಿಮ್‌ನಿಂದ ಹೊರಬರುವಂತೆ ನೀಡಿದ ರೈತರ ಕರೆಗೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು ಭಾರತದಲ್ಲಿ ಜಿಯೋ ಗಣನೀಯವಾಗಿ ಕುಸಿಸಿದೆ. ಈಗ ಭಾರತದ ಸಕ್ರಿಯ ಬಳಕೆದಾರರದಲ್ಲಿ ಏರ್‌ಟೆಲ್ ನಂಬರ್ ಒನ್ ಸ್ಥಾನದಲ್ಲಿದೆ.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

ರಿಲಯನ್ಸ್ ಕಂಪೆನಿಯು ಇಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಮೊರೆ ಹೋಗಿದ್ದು, ದುಷ್ಕರ್ಮಿಗಳು ನಡೆಸಿದ ಅಕ್ರಮ ವಿಧ್ವಂಸಕ ಕೃತ್ಯಗಳನ್ನು ತಡೆಯಲು ಸರ್ಕಾರದ ತುರ್ತು ಹಸ್ತಕ್ಷೇಪ ಮಾಡುವಂತೆ ಕೋರಿದೆ.

“ಈ ಹಿಂಸಾಚಾರವು ತನ್ನ ಸಾವಿರಾರು ಉದ್ಯೋಗಿಗಳ ಜೀವಕ್ಕೆ ಅಪಾಯ ಉಂಟುಮಾಡಿದೆ. ಎರಡು ರಾಜ್ಯಗಳಲ್ಲಿ ಅಂಗಸಂಸ್ಥೆಗಳ ಪ್ರಮುಖ ಸಂವಹನ ಮೂಲಸೌಕರ್ಯ, ಮಾರಾಟ ಮತ್ತು ಸೇವಾ ಮಳಿಗೆಗಳಿಗೆ ಹಾನಿ ಮತ್ತು ಅಡ್ಡಿಯುಂಟಾಗುತ್ತಿದೆ. ಈ ವಿಧ್ವಂಸಕ ಕೃತ್ಯದಲ್ಲಿ ಪಾಲ್ಗೊಳ್ಳುವ ದುಷ್ಕರ್ಮಿಗಳನ್ನು ಪಟ್ಟಭದ್ರ ಹಿತಾಸಕ್ತಿಗಳು ಮತ್ತು ನಮ್ಮ ವ್ಯಾಪಾರಿ ಪ್ರತಿಸ್ಪರ್ಧಿಗಳು ಪ್ರಚೋದಿಸಿದ್ದಾರೆ ಹಾಗೂ ಸಹಾಯ ಮಾಡಿದ್ದಾರೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಪಟ್ಟಭದ್ರ ಹಿತಾಸಕ್ತಿಗಳು ರಿಲಯನ್ಸ್ ವಿರುದ್ಧ ನಿರಂತರ, ದುರುದ್ದೇಶಪೂರಿತ ಅಭಿಯಾನವನ್ನು ನಡೆಸಿ ರೈತರ ಆಂದೋಲನದ ಲಾಭವನ್ನು ಪಡೆದುಕೊಳ್ಳುತ್ತಿದೆ. ಗುತ್ತಿಗೆ ಕೃಷಿಯಲ್ಲಿ ತನಗೆ ಆಸಕ್ತಿ ಇಲ್ಲದಿರುವುದರಿಂದ ಕೃಷಿ ಕಾನೂನುಗಳೊಂದಿಗೆ ತನಗೂ ಯಾವುದೇ ಸಂಬಂಧವಿಲ್ಲ ಎಂದು ಕಂಪೆನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ’ಜಿಯೋ ಸಿಮ್ ತಿರಸ್ಕರಿಸಿ, ಬಿಎಸ್‌ಎನ್‌ಎಲ್‌ ಸಿಮ್‌ ಪ್ರೋತ್ಸಾಹಿಸಿ’: ಮಂಡ್ಯದಲ್ಲಿ AILU ಪ್ರತಿಭಟನೆ

ಕಾನೂನುಗಳನ್ನು ಗಮನದಲ್ಲಿಟ್ಟುಕೊಂಡು ಪಂಜಾಬ್ ಅಥವಾ ಹರಿಯಾಣದಲ್ಲಿ ತಾನು ಭೂಮಿಯನ್ನು ಖರೀದಿಸುವುದಿಲ್ಲ ಎಂದು ಕಂಪೆನಿಯೂ ಹೇಳಿದ್ದು, “ಭಾರತೀಯರ ಅನ್ನದಾತರಾಗಿರುವ ರೈತರ ಬಗ್ಗೆ ರಿಲಯನ್ಸ್‌ಗೆ ಅಪಾರವಾದ ಗೌರವ ಮತ್ತ ಕೃತಜ್ಞತೆಯಿದೆ” ಎಂದು ಹೇಳಿದೆ.

ಒಕ್ಕೂಟ ಸರ್ಕಾರವು ಜಾರಿ ಮಾಡಿದ ಕಾನೂನುಗಳ ಹಿಂದೆ ಮುಖೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಇದೆ ಎಂದು ಹಲವಾರು ರೈತರು ಈಗಾಗಲೆ ಆರೋಪಿಸಿದ್ದರು. ಈ ಕಾನೂನುಗಳು ತಮ್ಮ ದೀರ್ಘಕಾಲೀನ ಹಿತಾಸಕ್ತಿಗಳಿಗೆ ಹಾನಿಕಾರಕವೆಂದು ಹೇಳುತ್ತಿರುವ ರೈತರು ಇದರ ವಿರುದ್ದ ಕಳೆದ 40 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪಂಜಾಬ್‌ ರಾಜ್ಯದಲ್ಲಿರುವ ಜಿಯೋ ರಿಲಯನ್ಸ್ ಜಿಯೋದ 9,000 ಟವರ್‌ಗಳಲ್ಲಿ 1,500 ಕ್ಕೂ ಹೆಚ್ಚು ಟವರ್‌ಗೆ ಹಾನಿ ಮಾಡಲಾಗಿದೆ ಎಂದು ಕಂಪೆನಿಯ ಪ್ರತಿನಿಧಿಯೊಬ್ಬರು ತಿಳಿಸಿದ್ದರು. ಘಟನೆಯ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂತಹ ವಿಧ್ವಂಸಕ ಕೃತ್ಯಗಳ ವಿರುದ್ಧ ಕಠಿಣ ಎಚ್ಚರಿಕೆ ನೀಡಿದ್ದು, ಇಂತಹ ಪ್ರಕರಣಗಳಲ್ಲಿ ಕಟ್ಟುನಿಟ್ಟಾಗಿ ವರ್ತಿಸುವಂತೆ ಪೊಲೀಸರಿಗೆ ಸೂಚಿಸಿದ್ದರು.

ಇದನ್ನೂ ಓದಿ: ಪಂಜಾಬ್: 1500 ಕ್ಕೂ ಹೆಚ್ಚು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ ರೈತ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...