Homeಅಂತರಾಷ್ಟ್ರೀಯಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

- Advertisement -
- Advertisement -

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

‘ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ’ಯು ಟೆಕ್ಸಾಸ್‌ನ ಬ್ರೌನ್ಸ್‌ವಿಲ್ಲೆಯಲ್ಲಿ ಕಳೆದ 50 ವರ್ಷಗಳಲ್ಲೇ ಅಮೆರಿಕದ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ತೆರೆಯುತ್ತಿದೆ ಎಂದು ಘೋಷಿಸಲು ನಾನು ಹೆಮ್ಮೆಪಡುತ್ತೇನೆ” ಎಂದು ಟ್ರಂಪ್ ಮಂಗಳವಾರ (ಮಾ.10) ತಮ್ಮ ಟ್ರೂತ್ ಸೋಶಿಯಲ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇರಾನ್ ಜೊತೆಗಿನ ಯುದ್ಧದ ಕಾರಣದಿಂದಾಗಿ ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಆತಂಕಗಳನ್ನು ಶಮನಗೊಳಿಸಲು ಶ್ವೇತಭವನವು ಪ್ರಯತ್ನಿಸುತ್ತಿರುವ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ. ತೈಲ ಮತ್ತು ಗ್ಯಾಸೋಲಿನ್ ಬೆಲೆಗಳನ್ನು ಕಡಿಮೆ ಮಾಡಲು ಟ್ರಂಪ್ ಅವರು ತುರ್ತು ಮೀಸಲು ದಾಸ್ತಾನುಗಳಿಂದ ತೈಲವನ್ನು ಬಿಡುಗಡೆ ಮಾಡುವುದು ಹಾಗೂ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ತೈಲ ಟ್ಯಾಂಕರ್‌ಗಳಿಗೆ ಮಿಲಿಟರಿ ರಕ್ಷಣೆ ನೀಡುವುದು ಸೇರಿದಂತೆ ಹಲವಾರು ಆಯ್ಕೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಟೆಕ್ಸಾಸ್‌ನ ಹೊಸ ತೈಲ ಸಂಸ್ಕರಣಾಗಾರವು ಈ ಹಿಂದೆ ‘ಎಲಿಮೆಂಟ್ ಫ್ಯುಯೆಲ್ಸ್’ ಅಭಿವೃದ್ಧಿಪಡಿಸುತ್ತಿದ್ದ ಅದೇ ಯೋಜನೆಯಾಗಿದೆ. ಜೂನ್ 2024 ರಲ್ಲಿ ಎಲಿಮೆಂಟ್ ಫ್ಯುಯೆಲ್ಸ್ ಸಂಸ್ಥೆಯು ತನ್ನ ಸೈಟ್ ಸಿದ್ಧತೆಯನ್ನು ಪೂರ್ಣಗೊಳಿಸಿರುವುದಾಗಿ ಮತ್ತು ದಿನಕ್ಕೆ ಸುಮಾರು 1,60,000 ಬ್ಯಾರೆಲ್ ತೈಲವನ್ನು ಸಂಸ್ಕರಿಸುವ ಸಾಮರ್ಥ್ಯದ ಘಟಕವನ್ನು ನಿರ್ಮಿಸಲು ಅಗತ್ಯವಾದ ಪರವಾನಗಿಗಳನ್ನು ಪಡೆದಿರುವುದಾಗಿ ಘೋಷಿಸಿತ್ತು.

ಈಗ ಎಲಿಮೆಂಟ್ ಫ್ಯುಯೆಲ್ಸ್‌ನ ವೆಬ್ ವಿಳಾಸವು ‘ಅಮೆರಿಕ ಫಸ್ಟ್ ರಿಫೈನಿಂಗ್’ ವೆಬ್‌ಸೈಟ್‌ಗೆ ಮರುನಿರ್ದೇಶಿಸಲ್ಪಡುತ್ತಿದೆ; ಟ್ರಂಪ್ ಹೇಳಿದಂತೆ ಈ ಹೊಸ ಸಂಸ್ಕರಣಾಗಾರವನ್ನು ಇದೇ ಕಂಪನಿಯು ಪ್ರಾರಂಭಿಸಲಿದೆ.

ಅಮೆರಿಕ ಫಸ್ಟ್ ರಿಫೈನಿಂಗ್ ಮಂಗಳವಾರ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಕಂಪನಿಯು ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಹೊಸ ತೈಲ ಸಂಸ್ಕರಣಾಗಾರದ ಕಾಮಗಾರಿ ಆರಂಭ ಮಾಡಲು ಯೋಜಿಸಿದೆ. ಅಲ್ಲದೆ, ತಾನು ಉತ್ಪಾದಿಸುವ ಇಂಧನಗಳನ್ನು ಮಾರಾಟ ಮಾಡಲು ಈಗಾಗಲೇ 20 ವರ್ಷಗಳ ಅವಧಿಯ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಮಾರಾಟದ ಒಪ್ಪಂದವನ್ನು ರಿಲಯನ್ಸ್ ಸಂಸ್ಥೆಯೊಂದಿಗೆ ಮಾಡಿಕೊಳ್ಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಲು ರಿಲಯನ್ಸ್ ಸಂಸ್ಥೆಯ ಪ್ರತಿನಿಧಿಗಳು ತಕ್ಷಣಕ್ಕೆ ಲಭ್ಯವಾಗಿಲ್ಲ. ಇಂಧನ ಇಲಾಖೆಯು ಈ ಕುರಿತಾದ ಪ್ರಶ್ನೆಗಳನ್ನು ಶ್ವೇತಭವನಕ್ಕೆ ವರ್ಗಾಯಿಸಿದ್ದು, ಶ್ವೇತಭವನವು ಹೆಚ್ಚಿನ ಮಾಹಿತಿಗಾಗಿ ಕೋರಿದ ಮನವಿಗೆ ತಕ್ಷಣವೇ ಸ್ಪಂದಿಸಿಲ್ಲ ಎಂದು theprint.in ವರದಿ ಹೇಳಿದೆ.

ಟ್ರಂಪ್ ಆಡಳಿತವು ಅಮೆರಿಕದ ಇಂಧನ ಪ್ರಾಬಲ್ಯದ ನೀತಿಯನ್ನು ಅನುಸರಿಸುತ್ತಿದೆ. ಇದು ತೈಲ, ನೈಸರ್ಗಿಕ ಅನಿಲ ಮತ್ತು ಕಲ್ಲಿದ್ದಲು ಉತ್ಪಾದನೆಯನ್ನು ಹೆಚ್ಚಿಸಲು ಉತ್ತೇಜನ ನೀಡುತ್ತದೆ. ಕಳೆದ ಒಂದೂವರೆ ದಶಕದಲ್ಲಿ ‘ಶೆಲ್ ಕ್ರಾಂತಿ’ಯಿಂದಾಗಿ ಅಮೆರಿಕದ ತೈಲ ಉತ್ಪಾದನೆಯು ಗಣನೀಯವಾಗಿ ಏರಿಕೆಯಾಗಿದ್ದರೂ ಸಹ, ದೇಶವು ಹಳೆಯದಾಗುತ್ತಿರುವ ಸಂಸ್ಕರಣಾಗಾರಗಳ ಮೇಲೆ ಅವಲಂಬಿತವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಹಲವಾರು ಸಂಸ್ಕರಣಾ ಘಟಕಗಳು ಮುಚ್ಚಲ್ಪಟ್ಟಿರುವುದು ತೈಲ ಸಂಸ್ಕರಣಾ ಸಾಮರ್ಥ್ಯದ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡಿದೆ ಎಂದು ವರದಿ ತಿಳಿಸಿದೆ.

ಬ್ರೌನ್ಸ್‌ವಿಲ್ಲೆ ಸಂಸ್ಕರಣಾಗಾರವನ್ನು ಸಂಪೂರ್ಣವಾಗಿ ಅಮೆರಿಕದ ಶೇಲ್ ತೈಲದ ಮೂಲಕ ಕಾರ್ಯನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗುವುದು ಎಂದು ಅಮೆರಿಕ ಫಸ್ಟ್ ಮಂಗಳವಾರ ತಿಳಿಸಿದೆ.

ಅಮೆರಿಕದಲ್ಲಿ ಹೊಸ ತೈಲ ಸಂಸ್ಕರಣಾಗಾರಗಳನ್ನು ನಿರ್ಮಿಸುವ ಹಿಂದಿನ ಪ್ರಯತ್ನಗಳು ಭಾರೀ ವೆಚ್ಚಗಳು, ಸಂಕೀರ್ಣವಾದ ಫೆಡರಲ್ ಮತ್ತು ರಾಜ್ಯ ಪರವಾನಗಿ ನಿಯಮಗಳು ಹಾಗೂ ಪರಿಸರವಾದಿಗಳ ವಿರೋಧದಿಂದಾಗಿ ವಿಫಲಗೊಂಡಿವೆ. 2000ರ ದಶಕದ ಮಧ್ಯಭಾಗದಲ್ಲಿ, ಫೀನಿಕ್ಸ್‌ನ ದಕ್ಷಿಣ ಭಾಗದಲ್ಲಿ ಮೆಕ್ಸಿಕನ್ ಅಥವಾ ಕೆನಡಿಯನ್ ಕಚ್ಚಾ ತೈಲವನ್ನು ಸಂಸ್ಕರಿಸುವ ‘ಅರಿಜೋನಾ ಕ್ಲೀನ್ ಫ್ಯುಯೆಲ್ಸ್ ಯೂಮಾ’ದ 2.5 ಬಿಲಿಯನ್ ಡಾಲರ್ ಮೊತ್ತದ ಯೋಜನೆಯು, ಹೂಡಿಕೆದಾರರಿಂದ ಸಾಕಷ್ಟು ಆರ್ಥಿಕ ಬೆಂಬಲ ಸಿಗದ ಕಾರಣ ಸ್ಥಗಿತಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...