Homeಅಂತರಾಷ್ಟ್ರೀಯಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

- Advertisement -
- Advertisement -

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

‘ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ’ಯು ಟೆಕ್ಸಾಸ್‌ನ ಬ್ರೌನ್ಸ್‌ವಿಲ್ಲೆಯಲ್ಲಿ ಕಳೆದ 50 ವರ್ಷಗಳಲ್ಲೇ ಅಮೆರಿಕದ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ತೆರೆಯುತ್ತಿದೆ ಎಂದು ಘೋಷಿಸಲು ನಾನು ಹೆಮ್ಮೆಪಡುತ್ತೇನೆ” ಎಂದು ಟ್ರಂಪ್ ಮಂಗಳವಾರ (ಮಾ.10) ತಮ್ಮ ಟ್ರೂತ್ ಸೋಶಿಯಲ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇರಾನ್ ಜೊತೆಗಿನ ಯುದ್ಧದ ಕಾರಣದಿಂದಾಗಿ ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಆತಂಕಗಳನ್ನು ಶಮನಗೊಳಿಸಲು ಶ್ವೇತಭವನವು ಪ್ರಯತ್ನಿಸುತ್ತಿರುವ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ. ತೈಲ ಮತ್ತು ಗ್ಯಾಸೋಲಿನ್ ಬೆಲೆಗಳನ್ನು ಕಡಿಮೆ ಮಾಡಲು ಟ್ರಂಪ್ ಅವರು ತುರ್ತು ಮೀಸಲು ದಾಸ್ತಾನುಗಳಿಂದ ತೈಲವನ್ನು ಬಿಡುಗಡೆ ಮಾಡುವುದು ಹಾಗೂ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ತೈಲ ಟ್ಯಾಂಕರ್‌ಗಳಿಗೆ ಮಿಲಿಟರಿ ರಕ್ಷಣೆ ನೀಡುವುದು ಸೇರಿದಂತೆ ಹಲವಾರು ಆಯ್ಕೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಟೆಕ್ಸಾಸ್‌ನ ಹೊಸ ತೈಲ ಸಂಸ್ಕರಣಾಗಾರವು ಈ ಹಿಂದೆ ‘ಎಲಿಮೆಂಟ್ ಫ್ಯುಯೆಲ್ಸ್’ ಅಭಿವೃದ್ಧಿಪಡಿಸುತ್ತಿದ್ದ ಅದೇ ಯೋಜನೆಯಾಗಿದೆ. ಜೂನ್ 2024 ರಲ್ಲಿ ಎಲಿಮೆಂಟ್ ಫ್ಯುಯೆಲ್ಸ್ ಸಂಸ್ಥೆಯು ತನ್ನ ಸೈಟ್ ಸಿದ್ಧತೆಯನ್ನು ಪೂರ್ಣಗೊಳಿಸಿರುವುದಾಗಿ ಮತ್ತು ದಿನಕ್ಕೆ ಸುಮಾರು 1,60,000 ಬ್ಯಾರೆಲ್ ತೈಲವನ್ನು ಸಂಸ್ಕರಿಸುವ ಸಾಮರ್ಥ್ಯದ ಘಟಕವನ್ನು ನಿರ್ಮಿಸಲು ಅಗತ್ಯವಾದ ಪರವಾನಗಿಗಳನ್ನು ಪಡೆದಿರುವುದಾಗಿ ಘೋಷಿಸಿತ್ತು.

ಈಗ ಎಲಿಮೆಂಟ್ ಫ್ಯುಯೆಲ್ಸ್‌ನ ವೆಬ್ ವಿಳಾಸವು ‘ಅಮೆರಿಕ ಫಸ್ಟ್ ರಿಫೈನಿಂಗ್’ ವೆಬ್‌ಸೈಟ್‌ಗೆ ಮರುನಿರ್ದೇಶಿಸಲ್ಪಡುತ್ತಿದೆ; ಟ್ರಂಪ್ ಹೇಳಿದಂತೆ ಈ ಹೊಸ ಸಂಸ್ಕರಣಾಗಾರವನ್ನು ಇದೇ ಕಂಪನಿಯು ಪ್ರಾರಂಭಿಸಲಿದೆ.

ಅಮೆರಿಕ ಫಸ್ಟ್ ರಿಫೈನಿಂಗ್ ಮಂಗಳವಾರ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಕಂಪನಿಯು ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಹೊಸ ತೈಲ ಸಂಸ್ಕರಣಾಗಾರದ ಕಾಮಗಾರಿ ಆರಂಭ ಮಾಡಲು ಯೋಜಿಸಿದೆ. ಅಲ್ಲದೆ, ತಾನು ಉತ್ಪಾದಿಸುವ ಇಂಧನಗಳನ್ನು ಮಾರಾಟ ಮಾಡಲು ಈಗಾಗಲೇ 20 ವರ್ಷಗಳ ಅವಧಿಯ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಮಾರಾಟದ ಒಪ್ಪಂದವನ್ನು ರಿಲಯನ್ಸ್ ಸಂಸ್ಥೆಯೊಂದಿಗೆ ಮಾಡಿಕೊಳ್ಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಲು ರಿಲಯನ್ಸ್ ಸಂಸ್ಥೆಯ ಪ್ರತಿನಿಧಿಗಳು ತಕ್ಷಣಕ್ಕೆ ಲಭ್ಯವಾಗಿಲ್ಲ. ಇಂಧನ ಇಲಾಖೆಯು ಈ ಕುರಿತಾದ ಪ್ರಶ್ನೆಗಳನ್ನು ಶ್ವೇತಭವನಕ್ಕೆ ವರ್ಗಾಯಿಸಿದ್ದು, ಶ್ವೇತಭವನವು ಹೆಚ್ಚಿನ ಮಾಹಿತಿಗಾಗಿ ಕೋರಿದ ಮನವಿಗೆ ತಕ್ಷಣವೇ ಸ್ಪಂದಿಸಿಲ್ಲ ಎಂದು theprint.in ವರದಿ ಹೇಳಿದೆ.

ಟ್ರಂಪ್ ಆಡಳಿತವು ಅಮೆರಿಕದ ಇಂಧನ ಪ್ರಾಬಲ್ಯದ ನೀತಿಯನ್ನು ಅನುಸರಿಸುತ್ತಿದೆ. ಇದು ತೈಲ, ನೈಸರ್ಗಿಕ ಅನಿಲ ಮತ್ತು ಕಲ್ಲಿದ್ದಲು ಉತ್ಪಾದನೆಯನ್ನು ಹೆಚ್ಚಿಸಲು ಉತ್ತೇಜನ ನೀಡುತ್ತದೆ. ಕಳೆದ ಒಂದೂವರೆ ದಶಕದಲ್ಲಿ ‘ಶೆಲ್ ಕ್ರಾಂತಿ’ಯಿಂದಾಗಿ ಅಮೆರಿಕದ ತೈಲ ಉತ್ಪಾದನೆಯು ಗಣನೀಯವಾಗಿ ಏರಿಕೆಯಾಗಿದ್ದರೂ ಸಹ, ದೇಶವು ಹಳೆಯದಾಗುತ್ತಿರುವ ಸಂಸ್ಕರಣಾಗಾರಗಳ ಮೇಲೆ ಅವಲಂಬಿತವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಹಲವಾರು ಸಂಸ್ಕರಣಾ ಘಟಕಗಳು ಮುಚ್ಚಲ್ಪಟ್ಟಿರುವುದು ತೈಲ ಸಂಸ್ಕರಣಾ ಸಾಮರ್ಥ್ಯದ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡಿದೆ ಎಂದು ವರದಿ ತಿಳಿಸಿದೆ.

ಬ್ರೌನ್ಸ್‌ವಿಲ್ಲೆ ಸಂಸ್ಕರಣಾಗಾರವನ್ನು ಸಂಪೂರ್ಣವಾಗಿ ಅಮೆರಿಕದ ಶೇಲ್ ತೈಲದ ಮೂಲಕ ಕಾರ್ಯನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗುವುದು ಎಂದು ಅಮೆರಿಕ ಫಸ್ಟ್ ಮಂಗಳವಾರ ತಿಳಿಸಿದೆ.

ಅಮೆರಿಕದಲ್ಲಿ ಹೊಸ ತೈಲ ಸಂಸ್ಕರಣಾಗಾರಗಳನ್ನು ನಿರ್ಮಿಸುವ ಹಿಂದಿನ ಪ್ರಯತ್ನಗಳು ಭಾರೀ ವೆಚ್ಚಗಳು, ಸಂಕೀರ್ಣವಾದ ಫೆಡರಲ್ ಮತ್ತು ರಾಜ್ಯ ಪರವಾನಗಿ ನಿಯಮಗಳು ಹಾಗೂ ಪರಿಸರವಾದಿಗಳ ವಿರೋಧದಿಂದಾಗಿ ವಿಫಲಗೊಂಡಿವೆ. 2000ರ ದಶಕದ ಮಧ್ಯಭಾಗದಲ್ಲಿ, ಫೀನಿಕ್ಸ್‌ನ ದಕ್ಷಿಣ ಭಾಗದಲ್ಲಿ ಮೆಕ್ಸಿಕನ್ ಅಥವಾ ಕೆನಡಿಯನ್ ಕಚ್ಚಾ ತೈಲವನ್ನು ಸಂಸ್ಕರಿಸುವ ‘ಅರಿಜೋನಾ ಕ್ಲೀನ್ ಫ್ಯುಯೆಲ್ಸ್ ಯೂಮಾ’ದ 2.5 ಬಿಲಿಯನ್ ಡಾಲರ್ ಮೊತ್ತದ ಯೋಜನೆಯು, ಹೂಡಿಕೆದಾರರಿಂದ ಸಾಕಷ್ಟು ಆರ್ಥಿಕ ಬೆಂಬಲ ಸಿಗದ ಕಾರಣ ಸ್ಥಗಿತಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...