Homeಮುಖಪುಟಮೋದಿ ಪದವಿ ವಿವಾದ: ಕೇಜ್ರಿವಾಲ್, ಸಂಜಯ್ ಸಿಂಗ್‌ಗೆ ರಿಲೀಫ್‌ ನೀಡಿದ ಸುಪ್ರೀಂಕೋರ್ಟ್‌

ಮೋದಿ ಪದವಿ ವಿವಾದ: ಕೇಜ್ರಿವಾಲ್, ಸಂಜಯ್ ಸಿಂಗ್‌ಗೆ ರಿಲೀಫ್‌ ನೀಡಿದ ಸುಪ್ರೀಂಕೋರ್ಟ್‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಕುರಿತ ಹೇಳಿಕೆಗೆ ಸಂಬಂಧಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿ ಸಂಸದ ಸಂಜಯ್ ಸಿಂಗ್ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು, ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಸಮನ್ಸ್ ರದ್ದುಗೊಳಿಸುವಂತೆ ಎಎಪಿ ನಾಯಕರು ಸಲ್ಲಿಸಿರುವ ಅರ್ಜಿಯನ್ನು ನಾಲ್ಕು ವಾರಗಳೊಳಗಡೆ ವಿಲೇವಾರಿ ನಡೆಸುವಂತೆ ಗುಜರಾತ್ ಹೈಕೋರ್ಟ್‌ಗೆ ಸೂಚಿಸಿದೆ. ಗುಜರಾತ್ ಹೈಕೋರ್ಟ್ ತೀರ್ಪಿನವರೆಗೂ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸಂಜಯ್ ಸಿಂಗ್ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಗುಜರಾತ್ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಕೋರಿ ಸಲ್ಲಿಸಿದ ಮೇಲ್ಮನವಿಯು ಬಾಕಿ ಇರುವಾಗಲೂ ತನ್ನ ಕಕ್ಷಿದಾರನನ್ನು ಅಪರಾಧಿ ಎಂದು ಪರಿಗಣಿಸಿ ಅನರ್ಹಗೊಳಿಸುವ ಉದ್ದೇಶವಿದೆ ಎಂದು ಪೀಠಕ್ಕೆ ತಿಳಿಸಿದರು. ಹೈಕೋರ್ಟ್‌ನಲ್ಲಿ ವಿಷಯ ಬಾಕಿ ಇರುವಾಗಲೂ ವಿಚಾರಣಾ ನ್ಯಾಯಾಲಯವು ಪ್ರಕರಣವನ್ನು ಮುಂದುವರಿಸುತ್ತಿದೆ ಎಂದು ಸಿಂಘ್ವಿ ಪೀಠಕ್ಕೆ ತಿಳಿಸಿದ್ದಾರೆ.

ಪ್ರಕರಣದಲ್ಲಿ ದೂರುದಾರರಾಗಿರುವ ಗುಜರಾತ್ ವಿಶ್ವವಿದ್ಯಾಲಯದ ವಿರುದ್ಧ ನನ್ನ ಕಕ್ಷಿದಾರರು ಒಂದು ಮಾತನ್ನೂ ಆಡಿಲ್ಲ. ಅಲ್ಲದೆ ವಿಶ್ವವಿದ್ಯಾನಿಲಯವು ರಾಜ್ಯ ಸರ್ಕಾರದ ಅನುದಾನಿತ ಮತ್ತು ಒಟ್ಟಾರೆಯಾಗಿ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವುದರಿಂದ ವಿಚಾರಣೆಯನ್ನು ಗುಜರಾತ್‌ನಿಂದ ಹೊರಗೆ ವರ್ಗಾಯಿಸಬಹುದೇ ಎಂದು ನಾನು ಕೇಳುತ್ತಿದ್ದೇನೆ. ನನ್ನ ಅರ್ಜಿಯಲ್ಲಿ ನಾನು ಕೋಲ್ಕತ್ತಾಗೆ ವರ್ಗಾಯಿಸುವಂತೆ ಕೇಳಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಮೋದಿ ಅವರ ಪದವಿಗಳ ಕುರಿತು ಎಎಪಿ ನಾಯಕರು ಪತ್ರಿಕಾಗೋಷ್ಠಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಮಾನಹಾನಿಕರ ಮತ್ತು ವ್ಯಂಗ್ಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕೇಜ್ರಿವಾಲ್ ಮತ್ತು ಸಂಜಯ್‌ ಸಿಂಗ್ ವಿರುದ್ಧ ಗುಜರಾತ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪಿಯೂಷ್ ಪಟೇಲ್ ಅವರು ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

ಮೋದಿ ಅವರಿಗೆ 1978ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಕಲಾ ಪದವಿ ಮತ್ತು 1983ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯದಿಂದ ಮಾಸ್ಟರ್ ಆಫ್ ಆರ್ಟ್ಸ್ ಪದವಿಯನ್ನು ನೀಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಆದರೆ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು ಈ ಪದವಿಗಳನ್ನು ಕಪೋಲಕಲ್ಪಿತವಾಗಿದೆ ಎಂದು ಆರೋಪಿಸಿತ್ತು. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಪ್ರಧಾನಿ ಮೋದಿ ಅವರ ಪದವಿ ಪ್ರಮಾಣಪತ್ರದ ಮಾಹಿತಿ ಕೋರಿ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು.

ಕೇಜ್ರಿವಾಲ್‌ಗೆ ಮೋದಿಯ ಶೈಕ್ಷಣಿಕ ಪದವಿಗಳ ಮಾಹಿತಿಯನ್ನು ನೀಡುವಂತೆ ಗುಜರಾತ್ ವಿಶ್ವವಿದ್ಯಾಲಯಕ್ಕೆ  ಕೇಂದ್ರ ಮಾಹಿತಿ ಆಯೋಗ ಸೂಚಿಸಿತ್ತು.  ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಮೋದಿ ಅವರ ಶೈಕ್ಷಣಿಕ ಪದವಿಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ ಮುಖ್ಯ ಮಾಹಿತಿ ಆಯುಕ್ತರ (ಸಿಐಸಿ) ಆದೇಶವನ್ನು  ಗುಜರಾತ್ ಹೈಕೋರ್ಟ್ ರದ್ದುಗೊಳಿಸಿತ್ತು.

ಕೇಜ್ರಿವಾಲ್ ಅವರು ನೀಡಿದ ಒಂದು ಹೇಳಿಕೆಯನ್ನು ಪಟೇಲ್ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪ್ರಧಾನಿ ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯದಲ್ಲಿ ಓದಿದ್ದರೆ, ಗುಜರಾತ್ ವಿಶ್ವವಿದ್ಯಾಲಯವು ತಮ್ಮ ಹಳೆಯ ವಿದ್ಯಾರ್ಥಿ ಪ್ರಧಾನಿಯಾಗಿದ್ದಾನೆ ಎಂದು ಸಂಭ್ರಮಿಸಬೇಕು ಮತ್ತು ಅವರು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ ಮತ್ತು ಪದವಿಯನ್ನು ಬಹಿರಂಗಪಡಿಸುತ್ತಿಲ್ಲ ಎಂದು ಹೇಳಿದ್ದರು. ಗುಜರಾತ್ ವಿಶ್ವವಿದ್ಯಾನಿಲಯದ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಈ ಕೇಜ್ರಿವಾಲ್ ಹಾಗೂ ಸಂಜಯ್ ಸಿಂಗ್ ಅವರು ಈ ಪೋಸ್ಟ್‌ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇದನ್ನು ಓದಿ: ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಜಾಮೀನಿನ ಮೇಲಿರುವ ಆರೋಪಿಗೆ ನೊಟೀಸ್‌ ನೀಡಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...