HomeಮುಖಪುಟCMDRF ಪ್ರಕರಣ: ಅರ್ಜಿ ವಜಾಗೊಳಿಸಿದ ಲೋಕಾಯುಕ್ತ ಪೀಠ; ಕೇರಳ ಸಿಎಂಗೆ ರಿಲೀಫ್

CMDRF ಪ್ರಕರಣ: ಅರ್ಜಿ ವಜಾಗೊಳಿಸಿದ ಲೋಕಾಯುಕ್ತ ಪೀಠ; ಕೇರಳ ಸಿಎಂಗೆ ರಿಲೀಫ್

- Advertisement -
- Advertisement -

ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿ (ಸಿಎಮ್‌ಡಿಆರ್‌ಎಫ್) ಅಡಿ ಹಣ ಬಿಡುಗಡೆ ಮಾಡುವಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ವಜನಪಕ್ಷಪಾತ ಮತ್ತು ಅವ್ಯವಹಾರ ಮಾಡಿದ್ದಾರೆ ಎನ್ನುವ ಆರೋಪಗಳ ಮೇಲೆ ಇತರ 18 ಜನರ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಲೋಕಾಯುಕ್ತದ ತ್ರಿಸದಸ್ಯ ಪೀಠ ಸೋಮವಾರ ವಜಾಗೊಳಿಸಿದೆ.

ಈ ಪ್ರಕರಣದಲ್ಲಿ ಸಿಎಂ ಮತ್ತು ಇತರರ ವಿರುದ್ಧದ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪಗಳಲ್ಲಿ ಯಾವುದೇ ಪುರಾವೆಗಳಿಲ್ಲ ಎಂದು ಲೋಕಾಯುಕ್ತ ಪೀಠವು ಹೇಳಿದೆ.

ಈ ಪ್ರಕರಣದ ಆದೇಶವನ್ನು ಒಂದು ವರ್ಷಕ್ಕೂ ಹೆಚ್ಚು ಅವಧಿಗೆ ಕಾಯ್ದಿರಿಸಿದ ನಂತರ ಇದೀಗ ಲೋಕಾಯುಕ್ತರ ನಿರ್ಧಾರ ಹೊರಬಿದ್ದಿದೆ. ಸಾಂವಿಧಾನಿಕ ಸಂಸ್ಥೆಯ ಇಬ್ಬರು ನ್ಯಾಯಮೂರ್ತಿಗಳ ನಡುವಿನ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಪ್ರಕರಣವನ್ನು ಈ ವರ್ಷದ ಮಾರ್ಚ್‌ನಲ್ಲಿ ಲೋಕಾಯುಕ್ತದ ಪೂರ್ಣ ಪೀಠಕ್ಕೆ ಉಲ್ಲೇಖಿಸಲಾಗಿತ್ತು.

ಲೋಕಾಯುಕ್ತ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್ ಮತ್ತು ಉಪ ಲೋಕಾಯುಕ್ತ ನ್ಯಾಯಮೂರ್ತಿ ಹರುನ್ ಅಲ್ ರಶೀದ್ ಮತ್ತು ನ್ಯಾಯಮೂರ್ತಿ ಬಾಬು ಮ್ಯಾಥ್ಯೂ ಪಿ ಜೋಸೆಫ್ ಅವರಿದ್ದ ಪೀಠ ಸೋಮವಾರ ತೀರ್ಪು ನೀಡಿದ್ದು, ಸಿಎಂಡಿಆರ್‌ಎಫ್‌ನಿಂದ ಹಣ ಬಿಡುಗಡೆ ಮಾಡುವ ಅಧಿಕಾರ ಮುಖ್ಯಮಂತ್ರಿಗೆ ಇದೆ ಎಂದು ಹೇಳಿದ್ದಾರೆ.

ಸಿಎಂಡಿಆರ್‌ಎಫ್‌ನಿಂದ ಹಣ ಬಿಡುಗಡೆ ಮಾಡುವಲ್ಲಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತ ಮಾಡಿದ್ದಾರೆ ಎಂದು 2018ರಲ್ಲಿ ಕೇರಳ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಆರ್‌ಎಸ್ ಶಶಿಕುಮಾರ್ ಅವರು ಮುಖ್ಯಮಂತ್ರಿ ಮತ್ತು ಹಿಂದಿನ ಎಲ್‌ಡಿಎಫ್ ಕ್ಯಾಬಿನೆಟ್‌ನ ಸದಸ್ಯರು ಸೇರಿದಂತೆ 18 ಇತರರ ವಿರುದ್ಧ ಆರೋಪ ಮಾಡಿದ್ದರು.

ಅರ್ಜಿದಾರರು ಮುಖ್ಯವಾಗಿ 2017ರ ಕ್ಯಾಬಿನೆಟ್‌ನ ಕೆಲವು ನಿರ್ಧಾರಗಳನ್ನು ಪ್ರಶ್ನಿಸಿದ್ದಾರೆ, ಅಲ್ಲಿ ದಿವಂಗತ ಎನ್‌ಸಿಪಿ ರಾಜ್ಯಾಧ್ಯಕ್ಷ ಉಜವೂರ್ ವಿಜಯನ್ ಅವರ ಕುಟುಂಬದ ಚಿಕಿತ್ಸೆ ಮತ್ತು ಅವರ ಮಕ್ಕಳ ಶೈಕ್ಷಣಿಕ ವೆಚ್ಚಗಳಿಗಾಗಿ ಹಣಕಾಸಿನ ನೆರವು, ದಿವಂಗತ ಸಿಪಿಎಂ ಶಾಸಕ ಕೆಕೆ ರಾಮಚಂದ್ರನ್ ಅವರ ಕುಟುಂಬಕ್ಕೆ ನೀಡಿದ ಹಣ ಮತ್ತು ಅವರ ಮಗನಿಗೆ ಉದ್ಯೋಗ ಮತ್ತು ಆಗಿನ ರಾಜ್ಯ ಗೃಹ ಸಚಿವರಿಗೆ ಎಸ್ಕಾರ್ಟ್ ಡ್ಯೂಟಿ ಮಾಡುವಾಗ ಮೋಟಾರು ಅಪಘಾತದಲ್ಲಿ ಸಾವನ್ನಪ್ಪಿದ ಸಿವಿಲ್ ಪೊಲೀಸ್ ಅಧಿಕಾರಿಯ ಸಂಬಂಧಿಕರಿಗೆ ಆರ್ಥಿಕ ನೆರವು ನೀಡಲಾಯಿತು. ಈ ವಿಚಾರಗಳನ್ನು ಅರ್ಜಿದಾರರು ಪ್ರಸ್ತಾಪಿಸಿದ್ದಾರೆ.

ಸೋಮವಾರ ಅವರ ಅರ್ಜಿಯನ್ನು ವಜಾಗೊಳಿಸಿದ ನಂತರ, ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಶಶಿಕುಮಾರ್ ಹೇಳಿದ್ದಾರೆ.

”ಲೋಕಾಯುಕ್ತದ ಮೂವರೂ ನ್ಯಾಯಾಧೀಶರು (ರಾಜಕೀಯವಾಗಿ) ಪ್ರಭಾವಿತರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ನ್ಯಾಯಾಧೀಶರ ಕಡೆಯಿಂದ ಅಪ್ರಾಮಾಣಿಕತೆ ಕಂಡುಬಂದಿದೆ. ಇದು ಸತ್ಯವಾದ ತೀರ್ಪು ಅಲ್ಲ. ಸದ್ಯದಲ್ಲೇ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಿದ್ದು, ಅಲ್ಲಿಯೂ ನನಗೆ ನ್ಯಾಯ ಸಿಗದಿದ್ದರೆ ಸುಪ್ರೀಂ ಕೋರ್ಟ್‌ನ ಮೊರೆ ಹೋಗುತ್ತೇನೆ” ಎಂದು ಶಶಿಕುಮಾರ್ ಹೇಳಿದ್ದಾರೆ.

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಲೋಕಾಯುಕ್ತರ ಆದೇಶವನ್ನು ಸ್ವಾಗತಿಸಿದ್ದಾರೆ. ”ಲೋಕಾಯುಕ್ತರ ಮುಂದೆ ಅರ್ಜಿ ಸಲ್ಲಿಸಿದ ವ್ಯಕ್ತಿ (ಕೇರಳ) ವಿಶ್ವವಿದ್ಯಾಲಯದ ಕಾಂಗ್ರೆಸ್ ಸಂಘಟನೆಯ ನಾಯಕರಾಗಿದ್ದರು. ಅಂತಹ ಅರ್ಜಿಗಳು ಸತ್ಯದಿಂದ ದೂರವಿರುತ್ತವೆ ಮತ್ತು ರಾಜಕೀಯ ಪ್ರೇರಿತವಾಗಿವೆ. ಈ ಹಿಂದೆ ವಿಶ್ವವಿದ್ಯಾನಿಲಯಗಳಿಗೆ ಸಂಬಂಧಿಸಿದಂತೆ ಅವರು ಸಲ್ಲಿಸಿದ್ದ ಅರ್ಜಿಗಳು ಸಹ ಇದೇ ರೀತಿಯಾಗಿದ್ದು, ಅವುಗಳನ್ನು ವಜಾಗೊಳಿಸಲಾಗಿದೆ” ಎಂದು ಸಿಪಿಐ(ಎಂ) ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಮಧ್ಯಪ್ರದೇಶ ದೇಶದ ‘ಭ್ರಷ್ಟಾಚಾರದ ರಾಜಧಾನಿ’: ರಾಹುಲ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...