HomeಮುಖಪುಟCMDRF ಪ್ರಕರಣ: ಅರ್ಜಿ ವಜಾಗೊಳಿಸಿದ ಲೋಕಾಯುಕ್ತ ಪೀಠ; ಕೇರಳ ಸಿಎಂಗೆ ರಿಲೀಫ್

CMDRF ಪ್ರಕರಣ: ಅರ್ಜಿ ವಜಾಗೊಳಿಸಿದ ಲೋಕಾಯುಕ್ತ ಪೀಠ; ಕೇರಳ ಸಿಎಂಗೆ ರಿಲೀಫ್

- Advertisement -
- Advertisement -

ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿ (ಸಿಎಮ್‌ಡಿಆರ್‌ಎಫ್) ಅಡಿ ಹಣ ಬಿಡುಗಡೆ ಮಾಡುವಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ವಜನಪಕ್ಷಪಾತ ಮತ್ತು ಅವ್ಯವಹಾರ ಮಾಡಿದ್ದಾರೆ ಎನ್ನುವ ಆರೋಪಗಳ ಮೇಲೆ ಇತರ 18 ಜನರ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಲೋಕಾಯುಕ್ತದ ತ್ರಿಸದಸ್ಯ ಪೀಠ ಸೋಮವಾರ ವಜಾಗೊಳಿಸಿದೆ.

ಈ ಪ್ರಕರಣದಲ್ಲಿ ಸಿಎಂ ಮತ್ತು ಇತರರ ವಿರುದ್ಧದ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪಗಳಲ್ಲಿ ಯಾವುದೇ ಪುರಾವೆಗಳಿಲ್ಲ ಎಂದು ಲೋಕಾಯುಕ್ತ ಪೀಠವು ಹೇಳಿದೆ.

ಈ ಪ್ರಕರಣದ ಆದೇಶವನ್ನು ಒಂದು ವರ್ಷಕ್ಕೂ ಹೆಚ್ಚು ಅವಧಿಗೆ ಕಾಯ್ದಿರಿಸಿದ ನಂತರ ಇದೀಗ ಲೋಕಾಯುಕ್ತರ ನಿರ್ಧಾರ ಹೊರಬಿದ್ದಿದೆ. ಸಾಂವಿಧಾನಿಕ ಸಂಸ್ಥೆಯ ಇಬ್ಬರು ನ್ಯಾಯಮೂರ್ತಿಗಳ ನಡುವಿನ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಪ್ರಕರಣವನ್ನು ಈ ವರ್ಷದ ಮಾರ್ಚ್‌ನಲ್ಲಿ ಲೋಕಾಯುಕ್ತದ ಪೂರ್ಣ ಪೀಠಕ್ಕೆ ಉಲ್ಲೇಖಿಸಲಾಗಿತ್ತು.

ಲೋಕಾಯುಕ್ತ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್ ಮತ್ತು ಉಪ ಲೋಕಾಯುಕ್ತ ನ್ಯಾಯಮೂರ್ತಿ ಹರುನ್ ಅಲ್ ರಶೀದ್ ಮತ್ತು ನ್ಯಾಯಮೂರ್ತಿ ಬಾಬು ಮ್ಯಾಥ್ಯೂ ಪಿ ಜೋಸೆಫ್ ಅವರಿದ್ದ ಪೀಠ ಸೋಮವಾರ ತೀರ್ಪು ನೀಡಿದ್ದು, ಸಿಎಂಡಿಆರ್‌ಎಫ್‌ನಿಂದ ಹಣ ಬಿಡುಗಡೆ ಮಾಡುವ ಅಧಿಕಾರ ಮುಖ್ಯಮಂತ್ರಿಗೆ ಇದೆ ಎಂದು ಹೇಳಿದ್ದಾರೆ.

ಸಿಎಂಡಿಆರ್‌ಎಫ್‌ನಿಂದ ಹಣ ಬಿಡುಗಡೆ ಮಾಡುವಲ್ಲಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತ ಮಾಡಿದ್ದಾರೆ ಎಂದು 2018ರಲ್ಲಿ ಕೇರಳ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಆರ್‌ಎಸ್ ಶಶಿಕುಮಾರ್ ಅವರು ಮುಖ್ಯಮಂತ್ರಿ ಮತ್ತು ಹಿಂದಿನ ಎಲ್‌ಡಿಎಫ್ ಕ್ಯಾಬಿನೆಟ್‌ನ ಸದಸ್ಯರು ಸೇರಿದಂತೆ 18 ಇತರರ ವಿರುದ್ಧ ಆರೋಪ ಮಾಡಿದ್ದರು.

ಅರ್ಜಿದಾರರು ಮುಖ್ಯವಾಗಿ 2017ರ ಕ್ಯಾಬಿನೆಟ್‌ನ ಕೆಲವು ನಿರ್ಧಾರಗಳನ್ನು ಪ್ರಶ್ನಿಸಿದ್ದಾರೆ, ಅಲ್ಲಿ ದಿವಂಗತ ಎನ್‌ಸಿಪಿ ರಾಜ್ಯಾಧ್ಯಕ್ಷ ಉಜವೂರ್ ವಿಜಯನ್ ಅವರ ಕುಟುಂಬದ ಚಿಕಿತ್ಸೆ ಮತ್ತು ಅವರ ಮಕ್ಕಳ ಶೈಕ್ಷಣಿಕ ವೆಚ್ಚಗಳಿಗಾಗಿ ಹಣಕಾಸಿನ ನೆರವು, ದಿವಂಗತ ಸಿಪಿಎಂ ಶಾಸಕ ಕೆಕೆ ರಾಮಚಂದ್ರನ್ ಅವರ ಕುಟುಂಬಕ್ಕೆ ನೀಡಿದ ಹಣ ಮತ್ತು ಅವರ ಮಗನಿಗೆ ಉದ್ಯೋಗ ಮತ್ತು ಆಗಿನ ರಾಜ್ಯ ಗೃಹ ಸಚಿವರಿಗೆ ಎಸ್ಕಾರ್ಟ್ ಡ್ಯೂಟಿ ಮಾಡುವಾಗ ಮೋಟಾರು ಅಪಘಾತದಲ್ಲಿ ಸಾವನ್ನಪ್ಪಿದ ಸಿವಿಲ್ ಪೊಲೀಸ್ ಅಧಿಕಾರಿಯ ಸಂಬಂಧಿಕರಿಗೆ ಆರ್ಥಿಕ ನೆರವು ನೀಡಲಾಯಿತು. ಈ ವಿಚಾರಗಳನ್ನು ಅರ್ಜಿದಾರರು ಪ್ರಸ್ತಾಪಿಸಿದ್ದಾರೆ.

ಸೋಮವಾರ ಅವರ ಅರ್ಜಿಯನ್ನು ವಜಾಗೊಳಿಸಿದ ನಂತರ, ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಶಶಿಕುಮಾರ್ ಹೇಳಿದ್ದಾರೆ.

”ಲೋಕಾಯುಕ್ತದ ಮೂವರೂ ನ್ಯಾಯಾಧೀಶರು (ರಾಜಕೀಯವಾಗಿ) ಪ್ರಭಾವಿತರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ನ್ಯಾಯಾಧೀಶರ ಕಡೆಯಿಂದ ಅಪ್ರಾಮಾಣಿಕತೆ ಕಂಡುಬಂದಿದೆ. ಇದು ಸತ್ಯವಾದ ತೀರ್ಪು ಅಲ್ಲ. ಸದ್ಯದಲ್ಲೇ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಿದ್ದು, ಅಲ್ಲಿಯೂ ನನಗೆ ನ್ಯಾಯ ಸಿಗದಿದ್ದರೆ ಸುಪ್ರೀಂ ಕೋರ್ಟ್‌ನ ಮೊರೆ ಹೋಗುತ್ತೇನೆ” ಎಂದು ಶಶಿಕುಮಾರ್ ಹೇಳಿದ್ದಾರೆ.

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಲೋಕಾಯುಕ್ತರ ಆದೇಶವನ್ನು ಸ್ವಾಗತಿಸಿದ್ದಾರೆ. ”ಲೋಕಾಯುಕ್ತರ ಮುಂದೆ ಅರ್ಜಿ ಸಲ್ಲಿಸಿದ ವ್ಯಕ್ತಿ (ಕೇರಳ) ವಿಶ್ವವಿದ್ಯಾಲಯದ ಕಾಂಗ್ರೆಸ್ ಸಂಘಟನೆಯ ನಾಯಕರಾಗಿದ್ದರು. ಅಂತಹ ಅರ್ಜಿಗಳು ಸತ್ಯದಿಂದ ದೂರವಿರುತ್ತವೆ ಮತ್ತು ರಾಜಕೀಯ ಪ್ರೇರಿತವಾಗಿವೆ. ಈ ಹಿಂದೆ ವಿಶ್ವವಿದ್ಯಾನಿಲಯಗಳಿಗೆ ಸಂಬಂಧಿಸಿದಂತೆ ಅವರು ಸಲ್ಲಿಸಿದ್ದ ಅರ್ಜಿಗಳು ಸಹ ಇದೇ ರೀತಿಯಾಗಿದ್ದು, ಅವುಗಳನ್ನು ವಜಾಗೊಳಿಸಲಾಗಿದೆ” ಎಂದು ಸಿಪಿಐ(ಎಂ) ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಮಧ್ಯಪ್ರದೇಶ ದೇಶದ ‘ಭ್ರಷ್ಟಾಚಾರದ ರಾಜಧಾನಿ’: ರಾಹುಲ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...